Homeಕರ್ನಾಟಕಸರ್ಕಾರದ ವೈಫಲ್ಯವನ್ನು ಹಿಜಾಬ್ ಮತ್ತು ಕೇಸರಿ ಶಾಲುಗಳ ಹಿಂದೆ ಬಚ್ಚಿಟ್ಟುಕೊಳ್ಳಲು ಸಾಧ್ಯವಿಲ್ಲ: ಕರ್ನಾಟಕ ಜನಶಕ್ತಿ

ಸರ್ಕಾರದ ವೈಫಲ್ಯವನ್ನು ಹಿಜಾಬ್ ಮತ್ತು ಕೇಸರಿ ಶಾಲುಗಳ ಹಿಂದೆ ಬಚ್ಚಿಟ್ಟುಕೊಳ್ಳಲು ಸಾಧ್ಯವಿಲ್ಲ: ಕರ್ನಾಟಕ ಜನಶಕ್ತಿ

- Advertisement -
- Advertisement -

ಸರ್ಕಾರದ ವೈಫಲ್ಯವನ್ನು ಹಿಜಾಬ್ ಮತ್ತು ಕೇಸರಿ ಶಾಲುಗಳ ಹಿಂದೆ ಬಚ್ಚಿಟ್ಟುಕೊಳ್ಳಲು ಸಾಧ್ಯವಿಲ್ಲ. ಏನೇ ಕಾರಣ ನೀಡಿದರೂ ವಿದ್ಯಾರ್ಥಿನಿಯರ ಕಲಿಯುವ ಹಕ್ಕನ್ನು ಕಸಿಯಲು ಸಾಧ್ಯವಿಲ್ಲ. ಅಮಾಯಕ ವಿದ್ಯಾರ್ಥಿಗಳನ್ನು ಕೋಮು ರಾಜಕಾರಣಕ್ಕೆ ದುರ್ಬಳಕೆ ಮಾಡುವುದನ್ನು ಬಿಜೆಪಿ ಸರ್ಕಾರ ಕೈಬಿಡಬೇಕು. ಕಠಿಣ ನಿರ್ದೇಶನಗಳನ್ನು ನೀಡಿ ಕೂಡಲೇ ಕಾಲೇಜುಗಳಲ್ಲಿ ಶಾಂತಿ-ಸುವ್ಯವಸ್ಥೆ ಮರುಸ್ಥಾಪನೆ ಮಾಡಬೇಕು ಎಂದು ಕರ್ನಾಟಕ ಜನಶಕ್ತಿ ಹೇಳಿದೆ.

ಶಿಕ್ಷಣ ಸಂಸ್ಥೆಗಳಲ್ಲಿ ನಡೆಯುತ್ತಿರುವ ಘಟನೆಗಳ ಹಿನ್ನಲೆಯಲ್ಲಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಕರ್ನಾಟಕ ಜನಶಕ್ತಿ, “ಕಳೆದ ಕೆಲವು ದಿನಗಳು ಕರ್ನಾಟಕದ ಪ್ರಜ್ಞಾವಂತರನ್ನು ತೀವ್ರವಾದ ಆತಂಕಕ್ಕೆ ದೂಡಿವೆ. ಕ್ಷುಲ್ಲಕ ನೆಪವೊಡ್ಡಿ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಶಿಕ್ಷಣದ ಗೇಟುಗಳನ್ನು ಮುಚ್ಚುತ್ತಿರುವುದು, ಶಾಲಾ-ಕಾಲೇಜುಗಳಲ್ಲಿ ಎಳೆವಯಸ್ಸಿನ ವಿದ್ಯಾರ್ಥಿಗಳನ್ನು ರಾಜಕಾರಣದ ಕೆಸರಿನೊಳಕ್ಕೆ ಎಳೆದು ತರುತ್ತಿರುವುದು ನಾಗರಿಕರನ್ನು ತಲೆ ತಗ್ಗಿಸುವಂತೆ ಮಾಡಿದೆ. ಇದು ಸಮವಸ್ತ್ರದ ಸುತ್ತಲಿನ ಸಮಸ್ಯೆಯೆಂಬಂತೆ ಬಿಂಬಿಸಲಾಗುತ್ತಿದ್ದರೂ, ಇದರ ಹಿಂದೆ ಸಂಘಪರಿವಾರದ ಕೋಮುವಾದಿ ರಾಜಕಾರಣ ಕೆಲಸ ಮಾಡುತ್ತಿರುವುದು ನಿಚ್ಚಳವಾಗಿ ಗೋಚರಿಸುತ್ತಿದೆ” ಎಂದು ಹೇಳಿದೆ.

ಇದನ್ನೂ ಓದಿ: ಹಿಜಾಬ್ ಕುರಿತು ಸಿಎಂ ಬಸವರಾಜ ಬೊಮ್ಮಾಯಿಗೆ ಮಹಿಳಾ ಸಂಘಟನೆಗಳ ಹಕ್ಕೋತ್ತಾಯ ಪತ್ರ

“ಇದ್ಯಾವುದೂ ಆಕಸ್ಮಿಕವಾಗಿ ಸಂಭವಿಸುತ್ತಿರುವುದೆಂದು ಅಥವಾ ವಿದ್ಯಾರ್ಥಿಗಳು ತಮ್ಮಂತೆ ತಾವೇ ಇಂತಹ ಗದ್ದಲಕ್ಕಿಳಿದಿದ್ದಾರೆಂದು ನಂಬಲು ಸಾಧ್ಯವಿಲ್ಲ. ನಿನ್ನೆ ಮೊನ್ನೆಯಯವರೆಗೆ ವಿದ್ಯಾರ್ಥಿನಿಯರು ಹಿಜಾಬ್ ಅಥವಾ ಬುರ್ಖಾ ಧರಿಸಿ ಬಂದಾಗ ಯಾವುದೇ ಅವಘಡಗಳೂ ನಡೆದಿರಲಿಲ್ಲ. ಧಿಡೀರನೆ ಕೆಲವು ದಿನಗಳೊಳಗಾಗಿ ವಿದ್ಯಾರ್ಥಿಗಳು ಆಕ್ರೋಶಗೊಳ್ಳುವುದು ಸಹಜವಾದ ಬೆಳವಣಿಗೆಯಲ್ಲ. ಇದರ ಹಿಂದೆ ಸರ್ಕಾರದ ಮತ್ತು ಸಂಘಪರಿವಾರದ ನೇರ ಕೈವಾಡ ಇದೆಯೆಂಬ ಬಗ್ಗೆ ಯಾವುದೇ ಅನುಮಾನಕ್ಕೆ ಆಸ್ಪದವಿಲ್ಲ” ಎಂದು ಕರ್ನಾಟಕ ಜನಶಕ್ತಿ ಹೇಳಿದೆ.

“ಇದು ಸರ್ಕಾರದ ವೈಫಲ್ಯಗಳನ್ನು ಮುಚ್ಚಿಟ್ಟುಕೊಳ್ಳುವ ಪ್ರಯತ್ನ ಮತ್ತು ಹಾಗೆಯೇ ಧರ್ಮಾಧಾರಿತವಾದ ದೃವೀಕರಣವನ್ನು ಉಂಟುಮಾಡಿ ಮುಂಬರುವ ಚುನಾವಣೆಗಳಲ್ಲಿ ಲಾಭ ಪಡೆದುಕೊಳ್ಳುವ ಕೀಳುಮಟ್ಟದ ತಂತ್ರಗಾರಿಕೆ. ಬಿಜೆಪಿಯ ವಿದ್ಯಾರ್ಥಿ ಸಂಘಟನೆಯಾದ ಎಬಿವಿಪಿ ಕಾಲೇಜುಗಳಲ್ಲಿ ಬೆಂಕಿ ಹೊತ್ತಿಸುತ್ತಿದೆ. ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರ ಅದಕ್ಕೆ ಎಣ್ಣೆ ಸುರಿಯುತ್ತಿದೆ. ‘ಶಾಲಾ ಕಾಲೇಜುಗಳ ಮೇಲುಸ್ತುವಾರಿ ಸಮಿತಿಗಳು ಹಾಗೂ ಪೋಷಕ-ಶಿಕ್ಷಕ ಸಮಿತಿಗಳು ನಿರ್ಧರಿಸಿದಲ್ಲಿ ಅದಕ್ಕೆ ತಕ್ಕಂತೆ ಸಮವಸ್ತ್ರವನ್ನು ವಿದ್ಯಾರ್ಥಿಗಳು ಧರಿಸಬೇಕಾಗಿರುತ್ತದೆ’ ಎಂಬಂತಹ ಸುತ್ತೋಲೆಯನ್ನು ಹೊರಡಿಸಿ, ಅದರಲ್ಲಿ ತನಗೇನೂ ಪಾತ್ರ ಇಲ್ಲ ಎಂಬಂತೆ ಸರ್ಕಾರ ನಡೆದುಕೊಳ್ಳುತ್ತಿದೆ.

ಸಂಘಪರಿವಾರದ ಕಾಲಾಳುಗಳನ್ನು ಮೇಲುಸ್ತುವಾರಿ ಸಮಿತಿಗಳಲ್ಲಿ ತೂರಿಸಿ, ಅವರುಗಳ ಮೂಲಕ ಅಲ್ಪಸಂಖ್ಯಾತ ವಿದ್ಯಾರ್ಥಿನಿಯರು ಹಿಜಾಬ್ ಧರಿಸದಂತೆ ಆದೇಶ ಮಾಡಿಸಿ, ಅದಕ್ಕೆ ಬರುವ ವಿರೋಧವನ್ನು ಬಳಸಿಕೊಂಡು ರಾಜ್ಯದಲ್ಲಿ ಅಶಾಂತಿಯನ್ನು ಸೃಷ್ಟಿಸುವ ಹಾಗೂ ಜನರ ಗಮನವನ್ನು ದಿಕ್ಕುತಪ್ಪಿಸುವ ನೀಚ ಷಡ್ಯಂತ್ರ ರಾಜ್ಯದಲ್ಲಿ ನಡೆಯುತ್ತಿದೆ” ಎಂದು ಕರ್ನಾಟಕ ಜನಶಕ್ತಿ ಆಕ್ರೋಶ ವ್ಯಕ್ತಪಡಿಸಿದೆ.

ಇದನ್ನೂ ಓದಿ: Hijab Live | ಹಿಜಾಬ್‌ ಲೈವ್‌ | ವಿಚಾರಣೆ ಸೋಮವಾರಕ್ಕೆ ಮುಂದೂಡಿದ ಹೈಕೋರ್ಟ್‌

“ಭಾರತದ ಸಂವಿಧಾನವು ಮೂಲಭೂತ ಹಕ್ಕುಗಳಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಹಕ್ಕನ್ನೂ ಸೇರಿಸಿದೆ ಮತ್ತು ಅದರ ಪ್ರಕಾರ ಅಲ್ಪಸಂಖ್ಯಾತ ಸಮುದಾಯಗಳಿಗೆ ತಮ್ಮ ಧಾರ್ಮಿಕ ಅಸ್ಮಿತೆಗಳೊಂದಿಗೆ ಗೌರವಯುತವಾಗಿ ಬದುಕಲು ಅವಕಾಶ ಕಲ್ಪಿಸಬೇಕಿರುವುದು ಸರ್ಕಾರದ ಜವಾಬ್ದಾರಿಯಾಗಿದೆ. ಇದರಲ್ಲಿ ಶಾಲಾ-ಕಾಲೇಜುಗಳ ಸಮವಸ್ತ್ರಗಳಿಗೆ ಸಂಬಂಧಿಸಿದ ನಿರ್ದಿಷ್ಟ ಸೂಚನೆಗಳಿರುವುದಿಲ್ಲವಾದ್ದರಿಂದ ಅದು ಆಯಾ ಸರ್ಕಾರಗಳ ಅಥವಾ ನ್ಯಾಯಾಲಯಗಳ ವಿವೇಚನೆಗೆ ತಕ್ಕಂತೆ ಬೇರೆ ಬೇರೆ ರೀತಿಗಳಲ್ಲಿ ವ್ಯಾಖ್ಯಾನಗೊಂಡಿದೆ. ಇಡೀ ಭಾರತದಲ್ಲಿ ಒಟ್ಟಾರೆಯಾಗಿ ನೋಡುವುದಾದರೆ, ವಿದ್ಯಾರ್ಥಿಗಳು ಸಮವಸ್ತ್ರದ ಜೊತೆಗೆ ತಮ್ಮ ಪಗಡಿ, ರುಮಾಲು, ತಲೆವಸ್ತ್ರ, ದುಪಟ್ಟಾ, ಕುಂಕುಮ, ಬೊಟ್ಟು, ಟೋಪಿ ಮುಂತಾದ ತಮ್ಮ ಸಾಂಸ್ಕೃತಿಕ-ಧಾರ್ಮಿಕ ಗುರುತುಗಳನ್ನು ಬಳಸುವುದು ಯಾವಾಗಿನಿಂದಲೂ ಚಾಲ್ತಿಯಲ್ಲಿದೆ.

ಹಿಂದೂಗಳನ್ನೂ ಒಳಗೊಂಡಂತೆ ಎಲ್ಲಾ ಧರ್ಮದ ಕೆಲವು ವಿದ್ಯಾರ್ಥಿ-ವಿದ್ಯಾರ್ಥಿನಿಯರು ತಮ್ಮ ಧಾರ್ಮಿಕ ಅಸ್ಮಿತೆಯ ಭಾಗವಾಗಿ ಇದನ್ನು ಬಳಸುವುದಿದೆ. ಕಳೆದ ಕೆಲವು ವರ್ಷಗಳ ತನಕ ಈ ವಿಚಾರದಲ್ಲಿ ಎಲ್ಲೂ ಗೊಂದಲ, ಗಲಭೆ ಉಂಟಾದ ಉದಾಹರಣೆಗಳಿಲ್ಲ. ವಿದ್ಯಾರ್ಥಿಗಳ ನಡುವೆಯಂತೂ ಇದು ಎಂದೂ ವಿವಾದದ ವಿಚಾರವಾಗಿರಲಿಲ್ಲ. ಆದರೆ ಕೇಂದ್ರದಲ್ಲಿ ಮತ್ತು ದೇಶದ ವಿವಿಧ ರಾಜ್ಯಗಳಲ್ಲಿ ಬಿಜೆಪಿ ಸರ್ಕಾರಗಳು ಅಸ್ತಿತ್ವಕ್ಕೆ ಬಂದಂತೆಲ್ಲ ಇಂತಹ ಸೂಕ್ಷ್ಮ ವಿಚಾರಗಳು ಅಶಾಂತಿಯ ಕಾರಣಗಳಾಗುತ್ತಿವೆ” ಎಂದು ಕರ್ನಾಟಕ ಜನಶಕ್ತಿ ಹೇಳಿದೆ.

“ಈ ಇಡೀ ಗದ್ದಲದಲ್ಲಿ ವಿದ್ಯಾರ್ಥಿಗಳ, ವಿಶೇಷವಾಗಿ ಮುಸ್ಲಿಂ ವಿದ್ಯಾರ್ಥಿನಿಯರ ಶಿಕ್ಷಣಕ್ಕೆ ದೊಡ್ಡ ಹೊಡೆತ ಬೀಳುತ್ತಿದೆಯೆಂಬುದನ್ನು ಗಮನಿಸಬೇಕು. ಒಂದೆಡೆ, ಸಾಚಾರ್ ವರದಿ ಸ್ಪಷ್ಟವಾಗಿ ಮುಸ್ಲಿಂ ಸಮುದಾಯದ ಶೈಕ್ಷಣಿಕ ಸ್ಥಿತಿಗತಿ ಎಷ್ಟು ಶೋಚನೀಯವಾಗಿದೆಯೆಂಬುದನ್ನು ಎತ್ತಿತೋರಿಸಿರುವಾಗ, ಆ ಸಮುದಾಯದ ಹೆಣ್ಣುಮಕ್ಕಳು ಹೇಗೋ ಮಾಡಿ ಕಾಲೇಜಿನ ಮೆಟ್ಟಿಲು ಹತ್ತುತ್ತಿರುವುದನ್ನು ಸ್ವಾಗತಿಸಬೇಕೇ ಹೊರತು ಅವರನ್ನು ಧಾರ್ಮಿಕ ಆಚರಣೆಗಳ ಕಾರಣ ಮುಂದಿಟ್ಟು ಕಾಲೇಜುಗಳ ಗೇಟುಗಳ ಹೊರಗೆ ನಿಲ್ಲಿಸುವುದಲ್ಲ. ಅದೇ ರೀತಿಯಿಂದ ಆ ಹೆಣ್ಣುಮಕ್ಕಳು ಮಾತ್ರವಲ್ಲದೆ ಇಡೀ ವಿದ್ಯಾರ್ಥಿ ಸಮುದಾಯದ ಮೇಲೆ ಅನಿಶ್ಚಿತತೆಯ ಕತ್ತಿ ತೂಗುತ್ತಿದೆ. ಶಾಲಾಕಾಲೇಜುಗಳ ಶೈಕ್ಷಣಿಕ ವಾತಾವರಣ ಕಲುಷಿತಗೊಳ್ಳುತ್ತಿದೆ. ಕೋವಿಡ್‌ನ ಕಾರಣದಿಂದ ಅಪಾರ ಏರುಪೇರುಗಳನ್ನು ಕಂಡಿದ್ದ ಶಿಕ್ಷಣ ವ್ಯವಸ್ಥೆಯು ನಿಧಾನವಾಗಿ ಒಂದಿಷ್ಟು ಚೇತರಿಸಿ ಕೊಳ್ಳುತ್ತಿರುವಂತೆಯೇ ಆರಂಭಿಸಲಾಗಿರುವ ಈ ಗದ್ದಲದಿಂದ ದೂರಗಾಮಿ ದುಷ್ಪರಿಣಾಮಗಳು ಉಂಟಾಗಲಿವೆ” ಎಂದು ಸಂಘಟನೆ ಹೇಳಿದೆ.

ಇದನ್ನೂ ಓದಿ: ಶಾಲೆ ತೆರೆಯಲು ಹೈಕೋರ್ಟ್ ಮೌಖಿಕ ಆದೇಶ; ಹಿಜಾಬ್‌‌, ಕೇಸರಿ ವಿಚಾರಣೆ ಮುಂದೂಡಿಕೆ

“ದುಬಾರಿ ಫೀಸು ಮತ್ತು ಡೋನೆಷನ್ ಹಾವಳಿ ಬಡ ವಿದ್ಯಾರ್ಥಿಗಳನ್ನು ಹಿಂಡುತ್ತಿದೆ ಮತ್ತು ಶಿಕ್ಷಣದಿಂದ ವಂಚಿತರನ್ನಾಗಿ ಮಾಡುತ್ತಿದೆ. ಹಾಗೆಯೇ ಕಾಲೇಜು ಶಿಕ್ಷಣ ಮುಗಿಸುವ ವಿದ್ಯಾರ್ಥಿಗಳಿಗೆ ತಕ್ಕನಾದ ಸಾಕಷ್ಟು ಉದ್ಯೋಗಾವಕಾಶಗಳಿಲ್ಲದೆ, ಅಭದ್ರ ಉದ್ಯೋಗಗಳಲ್ಲಿ ನಮ್ಮ ಯುವಜನರು ನಲುಗುತ್ತಿದ್ದಾರೆ. ವಸ್ತುಸ್ಥಿತಿ ಹೀಗಿರುವಾಗ, ಯುವಜನರ ಈ ಮೂಲ ಸಮಸ್ಯೆಗಳನ್ನು ಸರ್ಕಾರ ಹಿಜಾಬ್ ಹಿಂದೆ ಮರೆಮಾಚಲು ಹೊರಟಿದೆ” ಎಂದು ಕರ್ನಾಟಕ ಜನಶಕ್ತಿ ಹೇಳಿದೆ.

“ಪುರುಷಾಧಿಪತ್ಯದ ಪ್ರಶ್ನೆಯನ್ನು ಶಿಕ್ಷಣದ ಹಕ್ಕಿಗೆ ಎದರುಬದರು ನಿಲ್ಲಿಸಬಾರದು. ಎಲ್ಲಾ ಧರ್ಮಗಳಲ್ಲೂ ವಿವಿಧ ಬಗೆಯಲ್ಲಿ ಗಂಡು ಹೆಣ್ಣಿನ ತಾರತಮ್ಯ ಮತ್ತು ಮಹಿಳೆಯರ ಮೇಲಿನ ಕಟ್ಟುಪಾಡುಗಳು ಮುಂದುವರಿಯುತ್ತಿವೆ. ಆದರೆ ಅದರ ಚರ್ಚೆಯನ್ನು ಮಾಡುವ ಸಮಯ ಇದಲ್ಲ. ಹಿಜಾಬ್ ಹಾಕದೆ ಕಾಲೇಜಿಗೆ ಹೆಣ್ಣುಮಕ್ಕಳು ಹೋಗಬಾರದು ಎಂದು ಮೂಲಭೂತವಾದಿಗಳು ಫತ್ವಾ ಹೊರಡಿಸುವುದನ್ನು ನಾವು ಖಂಡಿಸುತ್ತೇವೆ. ಹಾಗೆಯೇ ಹಿಜಾಬ್ ಹಾಕಿದ ಕಾರಣಕ್ಕೆ ಕಾಲೇಜಿಗೆ ಬರಬಾರದು ಎಂದು ಕೋಮುವಾದಿಗಳು ಆಜ್ಞೆ ನೀಡಿದರೆ ಅದನ್ನೂ ನಾವು ತೀವ್ರವಾಗಿ ವಿರೋಧಿಸುತ್ತೇವೆ” ಎಂದು ಅದು ಹೇಳಿದೆ.

“ಈಗ ಇಲ್ಲಿ ನಡೆಯುತ್ತಿರುವುದು ಕೋಮುವಾದಿ ರಾಜಕಾರಣವಾಗಿರುವುದರಿಂದ ಅದನ್ನು ನಾಗರೀಕರೆಲ್ಲರೂ ಒಕ್ಕೊರಲಿನಿಂದ ಖಂಡಿಸಬೇಕು ಮತ್ತು ವಿದ್ಯಾರ್ಥಿನಿಯರ ಕಲಿಕೆಯ ಹಕ್ಕಿನ ಜೊತೆ ನಿಲ್ಲಬೇಕು. ತನ್ನ ಸೋಲುಗಳಿಂದ ಆಕ್ರೋಶಗೊಂಡಿರುವ ಜನಸಾಮಾನ್ಯರನ್ನು ದಿಕ್ಕುತಪ್ಪಿಸಲು ಕಾಲೇಜುಗಳಲ್ಲಿ ಬೆಂಕಿ ಹಚ್ಚುತ್ತಿರುವ ಬಿಜೆಪಿಯ ನೀಚ ತಂತ್ರಗಾರಿಕೆಯನ್ನು ಶಾಂತಿ-ಸಹಬಾಳ್ವೆಯ ತತ್ವದಲ್ಲಿ ನಂಬಿಕೆ ಇರುವ ಈ ನಾಡಿನ ಜನಸಾಮಾನ್ಯರು ಒಗ್ಗೂಡಿ ಸೋಲಿಸಬೇಕು” ಎಂದು ಕರ್ನಾಟಕ ಜನಶಕ್ತಿ ರಾಜ್ಯದ ಜನತೆಗೆ ಕರೆಕೊಟ್ಟಿದೆ.

ಇದನ್ನೂ ಓದಿ: ಹಿಜಾಬ್‌‌ಗಾಗಿ ದನಿಯೆತ್ತಿದ ವಿದ್ಯಾರ್ಥಿನಿಯರ ಫೋನ್‌‌ ನಂಬರ್‌, ವಿಳಾಸ ಲೀಕ್‌ ಮಾಡಿದ ಉಡುಪಿ ಕಾಲೇಜು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...