Homeಕರ್ನಾಟಕಸರ್ಕಾರ ಮರಾಠಿಗರ ಪ್ರಾಧಿಕಾರ ರಚಿಸಿ ಕನ್ನಡಿಗರನ್ನ ಕೆರಳಿಸಿದೆ - ಸಿದ್ದರಾಮಯ್ಯ ಸರಣಿ ಟ್ವೀಟ್!

ಸರ್ಕಾರ ಮರಾಠಿಗರ ಪ್ರಾಧಿಕಾರ ರಚಿಸಿ ಕನ್ನಡಿಗರನ್ನ ಕೆರಳಿಸಿದೆ – ಸಿದ್ದರಾಮಯ್ಯ ಸರಣಿ ಟ್ವೀಟ್!

ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ನೀಡುವ ಯೋಗ್ಯತೆ ಇಲ್ಲ. ವೃದ್ಧಾಪ್ಯ, ವಿಧವಾ, ಅಂಗವಿಕಲ ವೇತನಕ್ಕೆ ದುಡ್ಡಿಲ್ಲ, ಅತಿವೃಷ್ಟಿಯಿಂದ ಕಷ್ಟ-ನಷ್ಟಕ್ಕೀಡಾಗಿರುವ ಜನರಿಗೆ ನೀಡಲು ಸರ್ಕಾರದ ಬಳಿ ಹಣ ಇಲ್ಲ. ಆದರೆ ಜಾತಿ ನಿಗಮ-ಪ್ರಾಧಿಕಾರಕ್ಕೆ ನೂರಾರು ಕೋಟಿ ಎಲ್ಲಿಂದ ಬಂತು?

- Advertisement -
- Advertisement -

ಮರಾಠ ಅಭಿವೃದ್ಧಿ ಪ್ರಾಧಿಕಾರ ರಚಿಸಿರುವ ಯಡಿಯೂರಪ್ಪನವರ ನಿರ್ಧಾರದ ವಿರುದ್ಧ ರಾಜ್ಯದಾದ್ಯಂತ ಆಕ್ರೋಶ ಭುಗಿಲೆದ್ದಿದ್ದು, ಈ ಕುರಿತು ಸಿದ್ದರಾಮಯ್ಯ ಟ್ವೀಟ್ ಮಾಡಿ, “ಸರ್ಕಾರ ಮರಾಠಿಗರ ಪ್ರಾಧಿಕಾರ ರಚಿಸಿ ಕನ್ನಡಿಗರನ್ನ ಕೆರಳಿಸಿದೆ” ಎಂದು ಕಿಡಿಕಾರಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, “ಯಾವುದೇ ವೈಜ್ಞಾನಿಕ ಅಧ್ಯಯನಗಳಿಲ್ಲದೆ ಜಾತಿ ಆಧಾರಿತ ನಿಗಮ-ಪ್ರಾಧಿಕಾರ ಸ್ಥಾಪನೆ ಸಮಾಜ ವಿರೋಧಿ ಮಾತ್ರವಲ್ಲ, ಪ್ರಜಾಪ್ರಭುತ್ವ ವಿರೋಧಿ ತೀರ್ಮಾನ ಕೂಡ ಹೌದು. ಚುನಾವಣೆಗಳನ್ನು ಸಾಧನೆಯ ಬಲದಿಂದ ಗೆಲ್ಲಲಾಗದ ರಾಜ್ಯದ ಮತಿಹೀನ ಬಿಜೆಪಿ ಸರ್ಕಾರ ಇಂತಹ ಅಗ್ಗದ ತಂತ್ರ-ಕುತಂತ್ರಗಳನ್ನು ಮಾಡಿ ಸಮಾಜವನ್ನು ಒಡೆಯಲು ಹೊರಟಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: 30 ಸಾವಿರ ಮರಾಠ ಮತದಾರರ ಓಲೈಕೆಗೆ ಈ ಅಭಿವೃದ್ಧಿ ನಿಗಮ- ಸಿದ್ದರಾಮಯ್ಯ ಕಿಡಿ

“ಬಡತನ ನಿರ್ಮೂಲನೆಯ ಕಾರ್ಯಕ್ರಮಗಳಿಗೆ ವೈಜ್ಞಾನಿಕವಾದ ಅಧ್ಯಯನ ಆಧಾರಿತವಾಗಬೇಕು. ಮುಖ್ಯಮಂತ್ರಿಗಳು ಬಡತನ ನಿರ್ಮೂಲನೆಯ ಪ್ರಾಮಾಣಿಕ ಕಾಳಜಿ ಹೊಂದಿದ್ದರೆ ಈಗಾಗಲೇ ಅವರ ಮುಂದಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಒಪ್ಪಿಕೊಂಡು ಕಾರ್ಯಕ್ರಮಗಳನ್ನು ರೂಪಿಸಲಿ” ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಉಪ ಚುನಾವಣೆ: ಇದು ಪ್ರಜಾಪ್ರಭುತ್ವದ ಸೋಲು – ಸಿದ್ದರಾಮಯ್ಯ

“ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆಗೆ ನಮ್ಮ ವಿರೋಧ ಇಲ್ಲ. ಜಾತಿ-ಧರ್ಮಗಳನ್ನು ಮೀರಿದ್ದು ಬಡತನ. ತಳಸಮುದಾಯಗಳಲ್ಲಿ ಮಾತ್ರವಲ್ಲ ಮೇಲ್ಜಾತಿಗಳಲ್ಲಿಯೂ ಬಡವರಿದ್ದಾರೆ. ಎಲ್ಲ ಜಾತಿ-ಧರ್ಮಗಳ ಬಡವರ ಕಲ್ಯಾಣ ಕಾರ್ಯಕ್ರಮಗಳಿಗೆ ನನ್ನ ಸ್ವಾಗತವಿದೆ. ಕೇವಲ ರಾಜಕೀಯ ಲಾಭಕ್ಕಾಗಿ ನಡೆಸುವ ಇಂತಹ ಕ್ಷುಲ್ಲಕ ಬುದ್ದಿಯ ಕಸರತ್ತುಗಳನ್ನು ಖಂಡಿಸುತ್ತೇನೆ” ಎಂದಿದ್ದಾರೆ.

 

ಇದನ್ನೂ ಓದಿ: ಸಿದ್ದರಾಮಯ್ಯ-ಡಿಕೆಶಿ ಜಗಳ ಶೀಘ್ರವೇ ಬೀದಿಗೆ – ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್

“ನಾನು ಮುಖ್ಯಮಂತ್ರಿಯಾಗಿ ಅನುಷ್ಠಾನಗೊಳಿಸಿರುವ ಅನ್ನಭಾಗ್ಯ, ಕ್ಷೀರಭಾಗ್ಯ, ಕ್ಷೀರಧಾರೆ, ಕೃಷಿಭಾಗ್ಯ, ಪಶುಭಾಗ್ಯ, ಇಂದಿರಾ ಕ್ಯಾಂಟೀನ್ ಮೊದಲಾದ ಕಾರ್ಯಕ್ರಮಗಳು ನಿರ್ದಿಷ್ಠ ಜಾತಿ-ಧರ್ಮಕ್ಕೆ ಸೀಮಿತವಾದುದಲ್ಲ. ಇವೆಲ್ಲವೂ ಸರ್ವಾಜನಾಂಗದ ಬಡವರ ಕಲ್ಯಾಣ ಕಾರ್ಯಕ್ರಮಗಳು. ನಾನು ಜಾತಿ-ಜಾತಿ ನಡುವೆ ವೈಷಮ್ಯ ಹುಟ್ಟಿಸುವ ಕೆಲಸ ಮಾಡಿಲ್ಲ” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಮಸ್ಕಿ: ಬಿಜೆಪಿ ಮುಖಂಡ ಕಾಂಗ್ರೆಸ್ ಸೇರ್ಪಡೆ; ಸಿದ್ದರಾಮಯ್ಯನವರನ್ನು ಭೇಟಿಯಾದ ಬಸವನಗೌಡ

“ಮೀಸಲಾತಿ, ಸಾಮಾಜಿಕ ನ್ಯಾಯದ ಬಗ್ಗೆ ನಾವು ಮಾತನಾಡಿದಾಗ ನಮ್ಮನ್ನು ಜಾತಿವಾದಿಗಳೆಂದು ಟೀಕಿಸುವ, ಹಂಗಿಸುವ ಬಿಜೆಪಿ ಈಗ ಮಾಡುತ್ತಿರುವುದೇನು? ಜಾತಿ-ಜಾತಿ ನಡುವೆ ಮಾತ್ರವಲ್ಲ ಭಾಷೆ-ಭಾಷೆ ನಡುವೆ ಕೂಡಾ ಜಗಳ ಹುಟ್ಟುಹಾಕುತ್ತಿದೆ. ಇಂತಹ ತುಘಲಕ್ ನಿರ್ಧಾರದಿಂದ ರಾಜ್ಯದಲ್ಲಿ ಅರಾಜಕತೆ ಸೃಷ್ಟಿಯಾಗಿದೆ” ಎಂದು ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ: ‘ರಾಜ್ಯದಲ್ಲಿ ಲವ್ ಜಿಹಾದ್ ಕಾನೂನು ತರಲು ಸಾಧ್ಯವಿಲ್ಲ’- ಸಿದ್ದರಾಮಯ್ಯ

“ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ನೀಡುವ ಯೋಗ್ಯತೆ ಇಲ್ಲ. ವೃದ್ಧಾಪ್ಯವೇತನ, ವಿಧವಾ ವೇತನ, ಅಂಗವಿಕಲ ವೇತನಕ್ಕೆ ದುಡ್ಡಿಲ್ಲ, ಅತಿವೃಷ್ಟಿಯಿಂದ ಕಷ್ಟ-ನಷ್ಟಕ್ಕೀಡಾಗಿರುವ ಜನ ಬೀದಿಯಲ್ಲಿದ್ದಾರೆ, ಕೋರೊನಾ ಸೋಂಕಿನಿಂದ ಜನ ಸಾಯುತ್ತಿದ್ದಾರೆ. ಇವೆಲ್ಲಕ್ಕೂ ಸರ್ಕಾರದ ಬಳಿ ಹಣ ಇಲ್ಲ, ಜಾತಿ ನಿಗಮ-ಪ್ರಾಧಿಕಾರಕ್ಕೆ ನೂರಾರು ಕೋಟಿ ಎಲ್ಲಿಂದ ಬಂತು?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಕನ್ನಡ ಧ್ವಜ ಹಾರಿಸದಂತೆ ಈ ಬಾರಿ ಯಾರ ಕುಮ್ಮಕ್ಕಿದೆ? – ಸಿದ್ದರಾಮಯ್ಯ ಪ್ರಶ್ನೆ

“ಗಡಿಭಾಗದಲ್ಲಿ ಕನ್ನಡ ಮತ್ತು ಮರಾಠಿಗರ ನಡುವೆ ಆಗಾಗ ಸಂಘರ್ಷ ನಡೆದರೂ, ರಾಜ್ಯಾದ್ಯಂತ ಎರಡೂ ಸಮುದಾಯಗಳು ಸೌಹಾರ್ದತೆಯಿಂದ ಬದುಕುತ್ತಿವೆ. ಸರ್ಕಾರ ಮರಾಠ ಅಭಿವೃದ್ದಿ ಪ್ರಾಧಿಕಾರ ಘೋಷಿಸಿ ಅನಗತ್ಯವಾಗಿ ಕನ್ನಡಿಗರನ್ನು ಕೆರಳಿಸುವ ಮೂರ್ಖತನ ತೋರಿದೆ. ಇದರಿಂದಾಗಿ ರಾಜ್ಯದ ಶಾಂತಿ-ಸುವ್ಯವಸ್ಥೆಗೆ ಭಂಗ ಉಂಟಾದಲ್ಲಿ ಅದಕ್ಕೆ ಮುಖ್ಯಮಂತ್ರಿಗಳೇ ಹೊಣೆ” ಎಂದು ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ಕೇಂದ್ರದಿಂದ ರಾಜ್ಯಕ್ಕಾಗುತ್ತಿರುವ ಅನ್ಯಾಯಗಳ ಪಟ್ಟಿ: ರಾಜ್ಯೋತ್ಸವದಂದು ಸಿದ್ದರಾಮಯ್ಯ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...