Homeಕರ್ನಾಟಕಸರ್ಕಾರ ಮರಾಠಿಗರ ಪ್ರಾಧಿಕಾರ ರಚಿಸಿ ಕನ್ನಡಿಗರನ್ನ ಕೆರಳಿಸಿದೆ - ಸಿದ್ದರಾಮಯ್ಯ ಸರಣಿ ಟ್ವೀಟ್!

ಸರ್ಕಾರ ಮರಾಠಿಗರ ಪ್ರಾಧಿಕಾರ ರಚಿಸಿ ಕನ್ನಡಿಗರನ್ನ ಕೆರಳಿಸಿದೆ – ಸಿದ್ದರಾಮಯ್ಯ ಸರಣಿ ಟ್ವೀಟ್!

ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ನೀಡುವ ಯೋಗ್ಯತೆ ಇಲ್ಲ. ವೃದ್ಧಾಪ್ಯ, ವಿಧವಾ, ಅಂಗವಿಕಲ ವೇತನಕ್ಕೆ ದುಡ್ಡಿಲ್ಲ, ಅತಿವೃಷ್ಟಿಯಿಂದ ಕಷ್ಟ-ನಷ್ಟಕ್ಕೀಡಾಗಿರುವ ಜನರಿಗೆ ನೀಡಲು ಸರ್ಕಾರದ ಬಳಿ ಹಣ ಇಲ್ಲ. ಆದರೆ ಜಾತಿ ನಿಗಮ-ಪ್ರಾಧಿಕಾರಕ್ಕೆ ನೂರಾರು ಕೋಟಿ ಎಲ್ಲಿಂದ ಬಂತು?

- Advertisement -
- Advertisement -

ಮರಾಠ ಅಭಿವೃದ್ಧಿ ಪ್ರಾಧಿಕಾರ ರಚಿಸಿರುವ ಯಡಿಯೂರಪ್ಪನವರ ನಿರ್ಧಾರದ ವಿರುದ್ಧ ರಾಜ್ಯದಾದ್ಯಂತ ಆಕ್ರೋಶ ಭುಗಿಲೆದ್ದಿದ್ದು, ಈ ಕುರಿತು ಸಿದ್ದರಾಮಯ್ಯ ಟ್ವೀಟ್ ಮಾಡಿ, “ಸರ್ಕಾರ ಮರಾಠಿಗರ ಪ್ರಾಧಿಕಾರ ರಚಿಸಿ ಕನ್ನಡಿಗರನ್ನ ಕೆರಳಿಸಿದೆ” ಎಂದು ಕಿಡಿಕಾರಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, “ಯಾವುದೇ ವೈಜ್ಞಾನಿಕ ಅಧ್ಯಯನಗಳಿಲ್ಲದೆ ಜಾತಿ ಆಧಾರಿತ ನಿಗಮ-ಪ್ರಾಧಿಕಾರ ಸ್ಥಾಪನೆ ಸಮಾಜ ವಿರೋಧಿ ಮಾತ್ರವಲ್ಲ, ಪ್ರಜಾಪ್ರಭುತ್ವ ವಿರೋಧಿ ತೀರ್ಮಾನ ಕೂಡ ಹೌದು. ಚುನಾವಣೆಗಳನ್ನು ಸಾಧನೆಯ ಬಲದಿಂದ ಗೆಲ್ಲಲಾಗದ ರಾಜ್ಯದ ಮತಿಹೀನ ಬಿಜೆಪಿ ಸರ್ಕಾರ ಇಂತಹ ಅಗ್ಗದ ತಂತ್ರ-ಕುತಂತ್ರಗಳನ್ನು ಮಾಡಿ ಸಮಾಜವನ್ನು ಒಡೆಯಲು ಹೊರಟಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: 30 ಸಾವಿರ ಮರಾಠ ಮತದಾರರ ಓಲೈಕೆಗೆ ಈ ಅಭಿವೃದ್ಧಿ ನಿಗಮ- ಸಿದ್ದರಾಮಯ್ಯ ಕಿಡಿ

“ಬಡತನ ನಿರ್ಮೂಲನೆಯ ಕಾರ್ಯಕ್ರಮಗಳಿಗೆ ವೈಜ್ಞಾನಿಕವಾದ ಅಧ್ಯಯನ ಆಧಾರಿತವಾಗಬೇಕು. ಮುಖ್ಯಮಂತ್ರಿಗಳು ಬಡತನ ನಿರ್ಮೂಲನೆಯ ಪ್ರಾಮಾಣಿಕ ಕಾಳಜಿ ಹೊಂದಿದ್ದರೆ ಈಗಾಗಲೇ ಅವರ ಮುಂದಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಒಪ್ಪಿಕೊಂಡು ಕಾರ್ಯಕ್ರಮಗಳನ್ನು ರೂಪಿಸಲಿ” ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಉಪ ಚುನಾವಣೆ: ಇದು ಪ್ರಜಾಪ್ರಭುತ್ವದ ಸೋಲು – ಸಿದ್ದರಾಮಯ್ಯ

“ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆಗೆ ನಮ್ಮ ವಿರೋಧ ಇಲ್ಲ. ಜಾತಿ-ಧರ್ಮಗಳನ್ನು ಮೀರಿದ್ದು ಬಡತನ. ತಳಸಮುದಾಯಗಳಲ್ಲಿ ಮಾತ್ರವಲ್ಲ ಮೇಲ್ಜಾತಿಗಳಲ್ಲಿಯೂ ಬಡವರಿದ್ದಾರೆ. ಎಲ್ಲ ಜಾತಿ-ಧರ್ಮಗಳ ಬಡವರ ಕಲ್ಯಾಣ ಕಾರ್ಯಕ್ರಮಗಳಿಗೆ ನನ್ನ ಸ್ವಾಗತವಿದೆ. ಕೇವಲ ರಾಜಕೀಯ ಲಾಭಕ್ಕಾಗಿ ನಡೆಸುವ ಇಂತಹ ಕ್ಷುಲ್ಲಕ ಬುದ್ದಿಯ ಕಸರತ್ತುಗಳನ್ನು ಖಂಡಿಸುತ್ತೇನೆ” ಎಂದಿದ್ದಾರೆ.

 

ಇದನ್ನೂ ಓದಿ: ಸಿದ್ದರಾಮಯ್ಯ-ಡಿಕೆಶಿ ಜಗಳ ಶೀಘ್ರವೇ ಬೀದಿಗೆ – ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್

“ನಾನು ಮುಖ್ಯಮಂತ್ರಿಯಾಗಿ ಅನುಷ್ಠಾನಗೊಳಿಸಿರುವ ಅನ್ನಭಾಗ್ಯ, ಕ್ಷೀರಭಾಗ್ಯ, ಕ್ಷೀರಧಾರೆ, ಕೃಷಿಭಾಗ್ಯ, ಪಶುಭಾಗ್ಯ, ಇಂದಿರಾ ಕ್ಯಾಂಟೀನ್ ಮೊದಲಾದ ಕಾರ್ಯಕ್ರಮಗಳು ನಿರ್ದಿಷ್ಠ ಜಾತಿ-ಧರ್ಮಕ್ಕೆ ಸೀಮಿತವಾದುದಲ್ಲ. ಇವೆಲ್ಲವೂ ಸರ್ವಾಜನಾಂಗದ ಬಡವರ ಕಲ್ಯಾಣ ಕಾರ್ಯಕ್ರಮಗಳು. ನಾನು ಜಾತಿ-ಜಾತಿ ನಡುವೆ ವೈಷಮ್ಯ ಹುಟ್ಟಿಸುವ ಕೆಲಸ ಮಾಡಿಲ್ಲ” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಮಸ್ಕಿ: ಬಿಜೆಪಿ ಮುಖಂಡ ಕಾಂಗ್ರೆಸ್ ಸೇರ್ಪಡೆ; ಸಿದ್ದರಾಮಯ್ಯನವರನ್ನು ಭೇಟಿಯಾದ ಬಸವನಗೌಡ

“ಮೀಸಲಾತಿ, ಸಾಮಾಜಿಕ ನ್ಯಾಯದ ಬಗ್ಗೆ ನಾವು ಮಾತನಾಡಿದಾಗ ನಮ್ಮನ್ನು ಜಾತಿವಾದಿಗಳೆಂದು ಟೀಕಿಸುವ, ಹಂಗಿಸುವ ಬಿಜೆಪಿ ಈಗ ಮಾಡುತ್ತಿರುವುದೇನು? ಜಾತಿ-ಜಾತಿ ನಡುವೆ ಮಾತ್ರವಲ್ಲ ಭಾಷೆ-ಭಾಷೆ ನಡುವೆ ಕೂಡಾ ಜಗಳ ಹುಟ್ಟುಹಾಕುತ್ತಿದೆ. ಇಂತಹ ತುಘಲಕ್ ನಿರ್ಧಾರದಿಂದ ರಾಜ್ಯದಲ್ಲಿ ಅರಾಜಕತೆ ಸೃಷ್ಟಿಯಾಗಿದೆ” ಎಂದು ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ: ‘ರಾಜ್ಯದಲ್ಲಿ ಲವ್ ಜಿಹಾದ್ ಕಾನೂನು ತರಲು ಸಾಧ್ಯವಿಲ್ಲ’- ಸಿದ್ದರಾಮಯ್ಯ

“ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ನೀಡುವ ಯೋಗ್ಯತೆ ಇಲ್ಲ. ವೃದ್ಧಾಪ್ಯವೇತನ, ವಿಧವಾ ವೇತನ, ಅಂಗವಿಕಲ ವೇತನಕ್ಕೆ ದುಡ್ಡಿಲ್ಲ, ಅತಿವೃಷ್ಟಿಯಿಂದ ಕಷ್ಟ-ನಷ್ಟಕ್ಕೀಡಾಗಿರುವ ಜನ ಬೀದಿಯಲ್ಲಿದ್ದಾರೆ, ಕೋರೊನಾ ಸೋಂಕಿನಿಂದ ಜನ ಸಾಯುತ್ತಿದ್ದಾರೆ. ಇವೆಲ್ಲಕ್ಕೂ ಸರ್ಕಾರದ ಬಳಿ ಹಣ ಇಲ್ಲ, ಜಾತಿ ನಿಗಮ-ಪ್ರಾಧಿಕಾರಕ್ಕೆ ನೂರಾರು ಕೋಟಿ ಎಲ್ಲಿಂದ ಬಂತು?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಕನ್ನಡ ಧ್ವಜ ಹಾರಿಸದಂತೆ ಈ ಬಾರಿ ಯಾರ ಕುಮ್ಮಕ್ಕಿದೆ? – ಸಿದ್ದರಾಮಯ್ಯ ಪ್ರಶ್ನೆ

“ಗಡಿಭಾಗದಲ್ಲಿ ಕನ್ನಡ ಮತ್ತು ಮರಾಠಿಗರ ನಡುವೆ ಆಗಾಗ ಸಂಘರ್ಷ ನಡೆದರೂ, ರಾಜ್ಯಾದ್ಯಂತ ಎರಡೂ ಸಮುದಾಯಗಳು ಸೌಹಾರ್ದತೆಯಿಂದ ಬದುಕುತ್ತಿವೆ. ಸರ್ಕಾರ ಮರಾಠ ಅಭಿವೃದ್ದಿ ಪ್ರಾಧಿಕಾರ ಘೋಷಿಸಿ ಅನಗತ್ಯವಾಗಿ ಕನ್ನಡಿಗರನ್ನು ಕೆರಳಿಸುವ ಮೂರ್ಖತನ ತೋರಿದೆ. ಇದರಿಂದಾಗಿ ರಾಜ್ಯದ ಶಾಂತಿ-ಸುವ್ಯವಸ್ಥೆಗೆ ಭಂಗ ಉಂಟಾದಲ್ಲಿ ಅದಕ್ಕೆ ಮುಖ್ಯಮಂತ್ರಿಗಳೇ ಹೊಣೆ” ಎಂದು ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ಕೇಂದ್ರದಿಂದ ರಾಜ್ಯಕ್ಕಾಗುತ್ತಿರುವ ಅನ್ಯಾಯಗಳ ಪಟ್ಟಿ: ರಾಜ್ಯೋತ್ಸವದಂದು ಸಿದ್ದರಾಮಯ್ಯ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...