Homeಕರ್ನಾಟಕಸರ್ಕಾರ ಮರಾಠಿಗರ ಪ್ರಾಧಿಕಾರ ರಚಿಸಿ ಕನ್ನಡಿಗರನ್ನ ಕೆರಳಿಸಿದೆ - ಸಿದ್ದರಾಮಯ್ಯ ಸರಣಿ ಟ್ವೀಟ್!

ಸರ್ಕಾರ ಮರಾಠಿಗರ ಪ್ರಾಧಿಕಾರ ರಚಿಸಿ ಕನ್ನಡಿಗರನ್ನ ಕೆರಳಿಸಿದೆ – ಸಿದ್ದರಾಮಯ್ಯ ಸರಣಿ ಟ್ವೀಟ್!

ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ನೀಡುವ ಯೋಗ್ಯತೆ ಇಲ್ಲ. ವೃದ್ಧಾಪ್ಯ, ವಿಧವಾ, ಅಂಗವಿಕಲ ವೇತನಕ್ಕೆ ದುಡ್ಡಿಲ್ಲ, ಅತಿವೃಷ್ಟಿಯಿಂದ ಕಷ್ಟ-ನಷ್ಟಕ್ಕೀಡಾಗಿರುವ ಜನರಿಗೆ ನೀಡಲು ಸರ್ಕಾರದ ಬಳಿ ಹಣ ಇಲ್ಲ. ಆದರೆ ಜಾತಿ ನಿಗಮ-ಪ್ರಾಧಿಕಾರಕ್ಕೆ ನೂರಾರು ಕೋಟಿ ಎಲ್ಲಿಂದ ಬಂತು?

- Advertisement -
- Advertisement -

ಮರಾಠ ಅಭಿವೃದ್ಧಿ ಪ್ರಾಧಿಕಾರ ರಚಿಸಿರುವ ಯಡಿಯೂರಪ್ಪನವರ ನಿರ್ಧಾರದ ವಿರುದ್ಧ ರಾಜ್ಯದಾದ್ಯಂತ ಆಕ್ರೋಶ ಭುಗಿಲೆದ್ದಿದ್ದು, ಈ ಕುರಿತು ಸಿದ್ದರಾಮಯ್ಯ ಟ್ವೀಟ್ ಮಾಡಿ, “ಸರ್ಕಾರ ಮರಾಠಿಗರ ಪ್ರಾಧಿಕಾರ ರಚಿಸಿ ಕನ್ನಡಿಗರನ್ನ ಕೆರಳಿಸಿದೆ” ಎಂದು ಕಿಡಿಕಾರಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, “ಯಾವುದೇ ವೈಜ್ಞಾನಿಕ ಅಧ್ಯಯನಗಳಿಲ್ಲದೆ ಜಾತಿ ಆಧಾರಿತ ನಿಗಮ-ಪ್ರಾಧಿಕಾರ ಸ್ಥಾಪನೆ ಸಮಾಜ ವಿರೋಧಿ ಮಾತ್ರವಲ್ಲ, ಪ್ರಜಾಪ್ರಭುತ್ವ ವಿರೋಧಿ ತೀರ್ಮಾನ ಕೂಡ ಹೌದು. ಚುನಾವಣೆಗಳನ್ನು ಸಾಧನೆಯ ಬಲದಿಂದ ಗೆಲ್ಲಲಾಗದ ರಾಜ್ಯದ ಮತಿಹೀನ ಬಿಜೆಪಿ ಸರ್ಕಾರ ಇಂತಹ ಅಗ್ಗದ ತಂತ್ರ-ಕುತಂತ್ರಗಳನ್ನು ಮಾಡಿ ಸಮಾಜವನ್ನು ಒಡೆಯಲು ಹೊರಟಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: 30 ಸಾವಿರ ಮರಾಠ ಮತದಾರರ ಓಲೈಕೆಗೆ ಈ ಅಭಿವೃದ್ಧಿ ನಿಗಮ- ಸಿದ್ದರಾಮಯ್ಯ ಕಿಡಿ

“ಬಡತನ ನಿರ್ಮೂಲನೆಯ ಕಾರ್ಯಕ್ರಮಗಳಿಗೆ ವೈಜ್ಞಾನಿಕವಾದ ಅಧ್ಯಯನ ಆಧಾರಿತವಾಗಬೇಕು. ಮುಖ್ಯಮಂತ್ರಿಗಳು ಬಡತನ ನಿರ್ಮೂಲನೆಯ ಪ್ರಾಮಾಣಿಕ ಕಾಳಜಿ ಹೊಂದಿದ್ದರೆ ಈಗಾಗಲೇ ಅವರ ಮುಂದಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಒಪ್ಪಿಕೊಂಡು ಕಾರ್ಯಕ್ರಮಗಳನ್ನು ರೂಪಿಸಲಿ” ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಉಪ ಚುನಾವಣೆ: ಇದು ಪ್ರಜಾಪ್ರಭುತ್ವದ ಸೋಲು – ಸಿದ್ದರಾಮಯ್ಯ

“ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆಗೆ ನಮ್ಮ ವಿರೋಧ ಇಲ್ಲ. ಜಾತಿ-ಧರ್ಮಗಳನ್ನು ಮೀರಿದ್ದು ಬಡತನ. ತಳಸಮುದಾಯಗಳಲ್ಲಿ ಮಾತ್ರವಲ್ಲ ಮೇಲ್ಜಾತಿಗಳಲ್ಲಿಯೂ ಬಡವರಿದ್ದಾರೆ. ಎಲ್ಲ ಜಾತಿ-ಧರ್ಮಗಳ ಬಡವರ ಕಲ್ಯಾಣ ಕಾರ್ಯಕ್ರಮಗಳಿಗೆ ನನ್ನ ಸ್ವಾಗತವಿದೆ. ಕೇವಲ ರಾಜಕೀಯ ಲಾಭಕ್ಕಾಗಿ ನಡೆಸುವ ಇಂತಹ ಕ್ಷುಲ್ಲಕ ಬುದ್ದಿಯ ಕಸರತ್ತುಗಳನ್ನು ಖಂಡಿಸುತ್ತೇನೆ” ಎಂದಿದ್ದಾರೆ.

 

ಇದನ್ನೂ ಓದಿ: ಸಿದ್ದರಾಮಯ್ಯ-ಡಿಕೆಶಿ ಜಗಳ ಶೀಘ್ರವೇ ಬೀದಿಗೆ – ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್

“ನಾನು ಮುಖ್ಯಮಂತ್ರಿಯಾಗಿ ಅನುಷ್ಠಾನಗೊಳಿಸಿರುವ ಅನ್ನಭಾಗ್ಯ, ಕ್ಷೀರಭಾಗ್ಯ, ಕ್ಷೀರಧಾರೆ, ಕೃಷಿಭಾಗ್ಯ, ಪಶುಭಾಗ್ಯ, ಇಂದಿರಾ ಕ್ಯಾಂಟೀನ್ ಮೊದಲಾದ ಕಾರ್ಯಕ್ರಮಗಳು ನಿರ್ದಿಷ್ಠ ಜಾತಿ-ಧರ್ಮಕ್ಕೆ ಸೀಮಿತವಾದುದಲ್ಲ. ಇವೆಲ್ಲವೂ ಸರ್ವಾಜನಾಂಗದ ಬಡವರ ಕಲ್ಯಾಣ ಕಾರ್ಯಕ್ರಮಗಳು. ನಾನು ಜಾತಿ-ಜಾತಿ ನಡುವೆ ವೈಷಮ್ಯ ಹುಟ್ಟಿಸುವ ಕೆಲಸ ಮಾಡಿಲ್ಲ” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಮಸ್ಕಿ: ಬಿಜೆಪಿ ಮುಖಂಡ ಕಾಂಗ್ರೆಸ್ ಸೇರ್ಪಡೆ; ಸಿದ್ದರಾಮಯ್ಯನವರನ್ನು ಭೇಟಿಯಾದ ಬಸವನಗೌಡ

“ಮೀಸಲಾತಿ, ಸಾಮಾಜಿಕ ನ್ಯಾಯದ ಬಗ್ಗೆ ನಾವು ಮಾತನಾಡಿದಾಗ ನಮ್ಮನ್ನು ಜಾತಿವಾದಿಗಳೆಂದು ಟೀಕಿಸುವ, ಹಂಗಿಸುವ ಬಿಜೆಪಿ ಈಗ ಮಾಡುತ್ತಿರುವುದೇನು? ಜಾತಿ-ಜಾತಿ ನಡುವೆ ಮಾತ್ರವಲ್ಲ ಭಾಷೆ-ಭಾಷೆ ನಡುವೆ ಕೂಡಾ ಜಗಳ ಹುಟ್ಟುಹಾಕುತ್ತಿದೆ. ಇಂತಹ ತುಘಲಕ್ ನಿರ್ಧಾರದಿಂದ ರಾಜ್ಯದಲ್ಲಿ ಅರಾಜಕತೆ ಸೃಷ್ಟಿಯಾಗಿದೆ” ಎಂದು ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ: ‘ರಾಜ್ಯದಲ್ಲಿ ಲವ್ ಜಿಹಾದ್ ಕಾನೂನು ತರಲು ಸಾಧ್ಯವಿಲ್ಲ’- ಸಿದ್ದರಾಮಯ್ಯ

“ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ನೀಡುವ ಯೋಗ್ಯತೆ ಇಲ್ಲ. ವೃದ್ಧಾಪ್ಯವೇತನ, ವಿಧವಾ ವೇತನ, ಅಂಗವಿಕಲ ವೇತನಕ್ಕೆ ದುಡ್ಡಿಲ್ಲ, ಅತಿವೃಷ್ಟಿಯಿಂದ ಕಷ್ಟ-ನಷ್ಟಕ್ಕೀಡಾಗಿರುವ ಜನ ಬೀದಿಯಲ್ಲಿದ್ದಾರೆ, ಕೋರೊನಾ ಸೋಂಕಿನಿಂದ ಜನ ಸಾಯುತ್ತಿದ್ದಾರೆ. ಇವೆಲ್ಲಕ್ಕೂ ಸರ್ಕಾರದ ಬಳಿ ಹಣ ಇಲ್ಲ, ಜಾತಿ ನಿಗಮ-ಪ್ರಾಧಿಕಾರಕ್ಕೆ ನೂರಾರು ಕೋಟಿ ಎಲ್ಲಿಂದ ಬಂತು?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಕನ್ನಡ ಧ್ವಜ ಹಾರಿಸದಂತೆ ಈ ಬಾರಿ ಯಾರ ಕುಮ್ಮಕ್ಕಿದೆ? – ಸಿದ್ದರಾಮಯ್ಯ ಪ್ರಶ್ನೆ

“ಗಡಿಭಾಗದಲ್ಲಿ ಕನ್ನಡ ಮತ್ತು ಮರಾಠಿಗರ ನಡುವೆ ಆಗಾಗ ಸಂಘರ್ಷ ನಡೆದರೂ, ರಾಜ್ಯಾದ್ಯಂತ ಎರಡೂ ಸಮುದಾಯಗಳು ಸೌಹಾರ್ದತೆಯಿಂದ ಬದುಕುತ್ತಿವೆ. ಸರ್ಕಾರ ಮರಾಠ ಅಭಿವೃದ್ದಿ ಪ್ರಾಧಿಕಾರ ಘೋಷಿಸಿ ಅನಗತ್ಯವಾಗಿ ಕನ್ನಡಿಗರನ್ನು ಕೆರಳಿಸುವ ಮೂರ್ಖತನ ತೋರಿದೆ. ಇದರಿಂದಾಗಿ ರಾಜ್ಯದ ಶಾಂತಿ-ಸುವ್ಯವಸ್ಥೆಗೆ ಭಂಗ ಉಂಟಾದಲ್ಲಿ ಅದಕ್ಕೆ ಮುಖ್ಯಮಂತ್ರಿಗಳೇ ಹೊಣೆ” ಎಂದು ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ಕೇಂದ್ರದಿಂದ ರಾಜ್ಯಕ್ಕಾಗುತ್ತಿರುವ ಅನ್ಯಾಯಗಳ ಪಟ್ಟಿ: ರಾಜ್ಯೋತ್ಸವದಂದು ಸಿದ್ದರಾಮಯ್ಯ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...