Homeಕರ್ನಾಟಕಸರ್ಕಾರ ಮರಾಠಿಗರ ಪ್ರಾಧಿಕಾರ ರಚಿಸಿ ಕನ್ನಡಿಗರನ್ನ ಕೆರಳಿಸಿದೆ - ಸಿದ್ದರಾಮಯ್ಯ ಸರಣಿ ಟ್ವೀಟ್!

ಸರ್ಕಾರ ಮರಾಠಿಗರ ಪ್ರಾಧಿಕಾರ ರಚಿಸಿ ಕನ್ನಡಿಗರನ್ನ ಕೆರಳಿಸಿದೆ – ಸಿದ್ದರಾಮಯ್ಯ ಸರಣಿ ಟ್ವೀಟ್!

ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ನೀಡುವ ಯೋಗ್ಯತೆ ಇಲ್ಲ. ವೃದ್ಧಾಪ್ಯ, ವಿಧವಾ, ಅಂಗವಿಕಲ ವೇತನಕ್ಕೆ ದುಡ್ಡಿಲ್ಲ, ಅತಿವೃಷ್ಟಿಯಿಂದ ಕಷ್ಟ-ನಷ್ಟಕ್ಕೀಡಾಗಿರುವ ಜನರಿಗೆ ನೀಡಲು ಸರ್ಕಾರದ ಬಳಿ ಹಣ ಇಲ್ಲ. ಆದರೆ ಜಾತಿ ನಿಗಮ-ಪ್ರಾಧಿಕಾರಕ್ಕೆ ನೂರಾರು ಕೋಟಿ ಎಲ್ಲಿಂದ ಬಂತು?

- Advertisement -
- Advertisement -

ಮರಾಠ ಅಭಿವೃದ್ಧಿ ಪ್ರಾಧಿಕಾರ ರಚಿಸಿರುವ ಯಡಿಯೂರಪ್ಪನವರ ನಿರ್ಧಾರದ ವಿರುದ್ಧ ರಾಜ್ಯದಾದ್ಯಂತ ಆಕ್ರೋಶ ಭುಗಿಲೆದ್ದಿದ್ದು, ಈ ಕುರಿತು ಸಿದ್ದರಾಮಯ್ಯ ಟ್ವೀಟ್ ಮಾಡಿ, “ಸರ್ಕಾರ ಮರಾಠಿಗರ ಪ್ರಾಧಿಕಾರ ರಚಿಸಿ ಕನ್ನಡಿಗರನ್ನ ಕೆರಳಿಸಿದೆ” ಎಂದು ಕಿಡಿಕಾರಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, “ಯಾವುದೇ ವೈಜ್ಞಾನಿಕ ಅಧ್ಯಯನಗಳಿಲ್ಲದೆ ಜಾತಿ ಆಧಾರಿತ ನಿಗಮ-ಪ್ರಾಧಿಕಾರ ಸ್ಥಾಪನೆ ಸಮಾಜ ವಿರೋಧಿ ಮಾತ್ರವಲ್ಲ, ಪ್ರಜಾಪ್ರಭುತ್ವ ವಿರೋಧಿ ತೀರ್ಮಾನ ಕೂಡ ಹೌದು. ಚುನಾವಣೆಗಳನ್ನು ಸಾಧನೆಯ ಬಲದಿಂದ ಗೆಲ್ಲಲಾಗದ ರಾಜ್ಯದ ಮತಿಹೀನ ಬಿಜೆಪಿ ಸರ್ಕಾರ ಇಂತಹ ಅಗ್ಗದ ತಂತ್ರ-ಕುತಂತ್ರಗಳನ್ನು ಮಾಡಿ ಸಮಾಜವನ್ನು ಒಡೆಯಲು ಹೊರಟಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: 30 ಸಾವಿರ ಮರಾಠ ಮತದಾರರ ಓಲೈಕೆಗೆ ಈ ಅಭಿವೃದ್ಧಿ ನಿಗಮ- ಸಿದ್ದರಾಮಯ್ಯ ಕಿಡಿ

“ಬಡತನ ನಿರ್ಮೂಲನೆಯ ಕಾರ್ಯಕ್ರಮಗಳಿಗೆ ವೈಜ್ಞಾನಿಕವಾದ ಅಧ್ಯಯನ ಆಧಾರಿತವಾಗಬೇಕು. ಮುಖ್ಯಮಂತ್ರಿಗಳು ಬಡತನ ನಿರ್ಮೂಲನೆಯ ಪ್ರಾಮಾಣಿಕ ಕಾಳಜಿ ಹೊಂದಿದ್ದರೆ ಈಗಾಗಲೇ ಅವರ ಮುಂದಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಒಪ್ಪಿಕೊಂಡು ಕಾರ್ಯಕ್ರಮಗಳನ್ನು ರೂಪಿಸಲಿ” ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಉಪ ಚುನಾವಣೆ: ಇದು ಪ್ರಜಾಪ್ರಭುತ್ವದ ಸೋಲು – ಸಿದ್ದರಾಮಯ್ಯ

“ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆಗೆ ನಮ್ಮ ವಿರೋಧ ಇಲ್ಲ. ಜಾತಿ-ಧರ್ಮಗಳನ್ನು ಮೀರಿದ್ದು ಬಡತನ. ತಳಸಮುದಾಯಗಳಲ್ಲಿ ಮಾತ್ರವಲ್ಲ ಮೇಲ್ಜಾತಿಗಳಲ್ಲಿಯೂ ಬಡವರಿದ್ದಾರೆ. ಎಲ್ಲ ಜಾತಿ-ಧರ್ಮಗಳ ಬಡವರ ಕಲ್ಯಾಣ ಕಾರ್ಯಕ್ರಮಗಳಿಗೆ ನನ್ನ ಸ್ವಾಗತವಿದೆ. ಕೇವಲ ರಾಜಕೀಯ ಲಾಭಕ್ಕಾಗಿ ನಡೆಸುವ ಇಂತಹ ಕ್ಷುಲ್ಲಕ ಬುದ್ದಿಯ ಕಸರತ್ತುಗಳನ್ನು ಖಂಡಿಸುತ್ತೇನೆ” ಎಂದಿದ್ದಾರೆ.

 

ಇದನ್ನೂ ಓದಿ: ಸಿದ್ದರಾಮಯ್ಯ-ಡಿಕೆಶಿ ಜಗಳ ಶೀಘ್ರವೇ ಬೀದಿಗೆ – ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್

“ನಾನು ಮುಖ್ಯಮಂತ್ರಿಯಾಗಿ ಅನುಷ್ಠಾನಗೊಳಿಸಿರುವ ಅನ್ನಭಾಗ್ಯ, ಕ್ಷೀರಭಾಗ್ಯ, ಕ್ಷೀರಧಾರೆ, ಕೃಷಿಭಾಗ್ಯ, ಪಶುಭಾಗ್ಯ, ಇಂದಿರಾ ಕ್ಯಾಂಟೀನ್ ಮೊದಲಾದ ಕಾರ್ಯಕ್ರಮಗಳು ನಿರ್ದಿಷ್ಠ ಜಾತಿ-ಧರ್ಮಕ್ಕೆ ಸೀಮಿತವಾದುದಲ್ಲ. ಇವೆಲ್ಲವೂ ಸರ್ವಾಜನಾಂಗದ ಬಡವರ ಕಲ್ಯಾಣ ಕಾರ್ಯಕ್ರಮಗಳು. ನಾನು ಜಾತಿ-ಜಾತಿ ನಡುವೆ ವೈಷಮ್ಯ ಹುಟ್ಟಿಸುವ ಕೆಲಸ ಮಾಡಿಲ್ಲ” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಮಸ್ಕಿ: ಬಿಜೆಪಿ ಮುಖಂಡ ಕಾಂಗ್ರೆಸ್ ಸೇರ್ಪಡೆ; ಸಿದ್ದರಾಮಯ್ಯನವರನ್ನು ಭೇಟಿಯಾದ ಬಸವನಗೌಡ

“ಮೀಸಲಾತಿ, ಸಾಮಾಜಿಕ ನ್ಯಾಯದ ಬಗ್ಗೆ ನಾವು ಮಾತನಾಡಿದಾಗ ನಮ್ಮನ್ನು ಜಾತಿವಾದಿಗಳೆಂದು ಟೀಕಿಸುವ, ಹಂಗಿಸುವ ಬಿಜೆಪಿ ಈಗ ಮಾಡುತ್ತಿರುವುದೇನು? ಜಾತಿ-ಜಾತಿ ನಡುವೆ ಮಾತ್ರವಲ್ಲ ಭಾಷೆ-ಭಾಷೆ ನಡುವೆ ಕೂಡಾ ಜಗಳ ಹುಟ್ಟುಹಾಕುತ್ತಿದೆ. ಇಂತಹ ತುಘಲಕ್ ನಿರ್ಧಾರದಿಂದ ರಾಜ್ಯದಲ್ಲಿ ಅರಾಜಕತೆ ಸೃಷ್ಟಿಯಾಗಿದೆ” ಎಂದು ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ: ‘ರಾಜ್ಯದಲ್ಲಿ ಲವ್ ಜಿಹಾದ್ ಕಾನೂನು ತರಲು ಸಾಧ್ಯವಿಲ್ಲ’- ಸಿದ್ದರಾಮಯ್ಯ

“ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ನೀಡುವ ಯೋಗ್ಯತೆ ಇಲ್ಲ. ವೃದ್ಧಾಪ್ಯವೇತನ, ವಿಧವಾ ವೇತನ, ಅಂಗವಿಕಲ ವೇತನಕ್ಕೆ ದುಡ್ಡಿಲ್ಲ, ಅತಿವೃಷ್ಟಿಯಿಂದ ಕಷ್ಟ-ನಷ್ಟಕ್ಕೀಡಾಗಿರುವ ಜನ ಬೀದಿಯಲ್ಲಿದ್ದಾರೆ, ಕೋರೊನಾ ಸೋಂಕಿನಿಂದ ಜನ ಸಾಯುತ್ತಿದ್ದಾರೆ. ಇವೆಲ್ಲಕ್ಕೂ ಸರ್ಕಾರದ ಬಳಿ ಹಣ ಇಲ್ಲ, ಜಾತಿ ನಿಗಮ-ಪ್ರಾಧಿಕಾರಕ್ಕೆ ನೂರಾರು ಕೋಟಿ ಎಲ್ಲಿಂದ ಬಂತು?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಕನ್ನಡ ಧ್ವಜ ಹಾರಿಸದಂತೆ ಈ ಬಾರಿ ಯಾರ ಕುಮ್ಮಕ್ಕಿದೆ? – ಸಿದ್ದರಾಮಯ್ಯ ಪ್ರಶ್ನೆ

“ಗಡಿಭಾಗದಲ್ಲಿ ಕನ್ನಡ ಮತ್ತು ಮರಾಠಿಗರ ನಡುವೆ ಆಗಾಗ ಸಂಘರ್ಷ ನಡೆದರೂ, ರಾಜ್ಯಾದ್ಯಂತ ಎರಡೂ ಸಮುದಾಯಗಳು ಸೌಹಾರ್ದತೆಯಿಂದ ಬದುಕುತ್ತಿವೆ. ಸರ್ಕಾರ ಮರಾಠ ಅಭಿವೃದ್ದಿ ಪ್ರಾಧಿಕಾರ ಘೋಷಿಸಿ ಅನಗತ್ಯವಾಗಿ ಕನ್ನಡಿಗರನ್ನು ಕೆರಳಿಸುವ ಮೂರ್ಖತನ ತೋರಿದೆ. ಇದರಿಂದಾಗಿ ರಾಜ್ಯದ ಶಾಂತಿ-ಸುವ್ಯವಸ್ಥೆಗೆ ಭಂಗ ಉಂಟಾದಲ್ಲಿ ಅದಕ್ಕೆ ಮುಖ್ಯಮಂತ್ರಿಗಳೇ ಹೊಣೆ” ಎಂದು ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ಕೇಂದ್ರದಿಂದ ರಾಜ್ಯಕ್ಕಾಗುತ್ತಿರುವ ಅನ್ಯಾಯಗಳ ಪಟ್ಟಿ: ರಾಜ್ಯೋತ್ಸವದಂದು ಸಿದ್ದರಾಮಯ್ಯ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...