Homeಕರ್ನಾಟಕಸರ್ಕಾರ ಮರಾಠಿಗರ ಪ್ರಾಧಿಕಾರ ರಚಿಸಿ ಕನ್ನಡಿಗರನ್ನ ಕೆರಳಿಸಿದೆ - ಸಿದ್ದರಾಮಯ್ಯ ಸರಣಿ ಟ್ವೀಟ್!

ಸರ್ಕಾರ ಮರಾಠಿಗರ ಪ್ರಾಧಿಕಾರ ರಚಿಸಿ ಕನ್ನಡಿಗರನ್ನ ಕೆರಳಿಸಿದೆ – ಸಿದ್ದರಾಮಯ್ಯ ಸರಣಿ ಟ್ವೀಟ್!

ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ನೀಡುವ ಯೋಗ್ಯತೆ ಇಲ್ಲ. ವೃದ್ಧಾಪ್ಯ, ವಿಧವಾ, ಅಂಗವಿಕಲ ವೇತನಕ್ಕೆ ದುಡ್ಡಿಲ್ಲ, ಅತಿವೃಷ್ಟಿಯಿಂದ ಕಷ್ಟ-ನಷ್ಟಕ್ಕೀಡಾಗಿರುವ ಜನರಿಗೆ ನೀಡಲು ಸರ್ಕಾರದ ಬಳಿ ಹಣ ಇಲ್ಲ. ಆದರೆ ಜಾತಿ ನಿಗಮ-ಪ್ರಾಧಿಕಾರಕ್ಕೆ ನೂರಾರು ಕೋಟಿ ಎಲ್ಲಿಂದ ಬಂತು?

- Advertisement -
- Advertisement -

ಮರಾಠ ಅಭಿವೃದ್ಧಿ ಪ್ರಾಧಿಕಾರ ರಚಿಸಿರುವ ಯಡಿಯೂರಪ್ಪನವರ ನಿರ್ಧಾರದ ವಿರುದ್ಧ ರಾಜ್ಯದಾದ್ಯಂತ ಆಕ್ರೋಶ ಭುಗಿಲೆದ್ದಿದ್ದು, ಈ ಕುರಿತು ಸಿದ್ದರಾಮಯ್ಯ ಟ್ವೀಟ್ ಮಾಡಿ, “ಸರ್ಕಾರ ಮರಾಠಿಗರ ಪ್ರಾಧಿಕಾರ ರಚಿಸಿ ಕನ್ನಡಿಗರನ್ನ ಕೆರಳಿಸಿದೆ” ಎಂದು ಕಿಡಿಕಾರಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, “ಯಾವುದೇ ವೈಜ್ಞಾನಿಕ ಅಧ್ಯಯನಗಳಿಲ್ಲದೆ ಜಾತಿ ಆಧಾರಿತ ನಿಗಮ-ಪ್ರಾಧಿಕಾರ ಸ್ಥಾಪನೆ ಸಮಾಜ ವಿರೋಧಿ ಮಾತ್ರವಲ್ಲ, ಪ್ರಜಾಪ್ರಭುತ್ವ ವಿರೋಧಿ ತೀರ್ಮಾನ ಕೂಡ ಹೌದು. ಚುನಾವಣೆಗಳನ್ನು ಸಾಧನೆಯ ಬಲದಿಂದ ಗೆಲ್ಲಲಾಗದ ರಾಜ್ಯದ ಮತಿಹೀನ ಬಿಜೆಪಿ ಸರ್ಕಾರ ಇಂತಹ ಅಗ್ಗದ ತಂತ್ರ-ಕುತಂತ್ರಗಳನ್ನು ಮಾಡಿ ಸಮಾಜವನ್ನು ಒಡೆಯಲು ಹೊರಟಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: 30 ಸಾವಿರ ಮರಾಠ ಮತದಾರರ ಓಲೈಕೆಗೆ ಈ ಅಭಿವೃದ್ಧಿ ನಿಗಮ- ಸಿದ್ದರಾಮಯ್ಯ ಕಿಡಿ

“ಬಡತನ ನಿರ್ಮೂಲನೆಯ ಕಾರ್ಯಕ್ರಮಗಳಿಗೆ ವೈಜ್ಞಾನಿಕವಾದ ಅಧ್ಯಯನ ಆಧಾರಿತವಾಗಬೇಕು. ಮುಖ್ಯಮಂತ್ರಿಗಳು ಬಡತನ ನಿರ್ಮೂಲನೆಯ ಪ್ರಾಮಾಣಿಕ ಕಾಳಜಿ ಹೊಂದಿದ್ದರೆ ಈಗಾಗಲೇ ಅವರ ಮುಂದಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಒಪ್ಪಿಕೊಂಡು ಕಾರ್ಯಕ್ರಮಗಳನ್ನು ರೂಪಿಸಲಿ” ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಉಪ ಚುನಾವಣೆ: ಇದು ಪ್ರಜಾಪ್ರಭುತ್ವದ ಸೋಲು – ಸಿದ್ದರಾಮಯ್ಯ

“ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆಗೆ ನಮ್ಮ ವಿರೋಧ ಇಲ್ಲ. ಜಾತಿ-ಧರ್ಮಗಳನ್ನು ಮೀರಿದ್ದು ಬಡತನ. ತಳಸಮುದಾಯಗಳಲ್ಲಿ ಮಾತ್ರವಲ್ಲ ಮೇಲ್ಜಾತಿಗಳಲ್ಲಿಯೂ ಬಡವರಿದ್ದಾರೆ. ಎಲ್ಲ ಜಾತಿ-ಧರ್ಮಗಳ ಬಡವರ ಕಲ್ಯಾಣ ಕಾರ್ಯಕ್ರಮಗಳಿಗೆ ನನ್ನ ಸ್ವಾಗತವಿದೆ. ಕೇವಲ ರಾಜಕೀಯ ಲಾಭಕ್ಕಾಗಿ ನಡೆಸುವ ಇಂತಹ ಕ್ಷುಲ್ಲಕ ಬುದ್ದಿಯ ಕಸರತ್ತುಗಳನ್ನು ಖಂಡಿಸುತ್ತೇನೆ” ಎಂದಿದ್ದಾರೆ.

 

ಇದನ್ನೂ ಓದಿ: ಸಿದ್ದರಾಮಯ್ಯ-ಡಿಕೆಶಿ ಜಗಳ ಶೀಘ್ರವೇ ಬೀದಿಗೆ – ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್

“ನಾನು ಮುಖ್ಯಮಂತ್ರಿಯಾಗಿ ಅನುಷ್ಠಾನಗೊಳಿಸಿರುವ ಅನ್ನಭಾಗ್ಯ, ಕ್ಷೀರಭಾಗ್ಯ, ಕ್ಷೀರಧಾರೆ, ಕೃಷಿಭಾಗ್ಯ, ಪಶುಭಾಗ್ಯ, ಇಂದಿರಾ ಕ್ಯಾಂಟೀನ್ ಮೊದಲಾದ ಕಾರ್ಯಕ್ರಮಗಳು ನಿರ್ದಿಷ್ಠ ಜಾತಿ-ಧರ್ಮಕ್ಕೆ ಸೀಮಿತವಾದುದಲ್ಲ. ಇವೆಲ್ಲವೂ ಸರ್ವಾಜನಾಂಗದ ಬಡವರ ಕಲ್ಯಾಣ ಕಾರ್ಯಕ್ರಮಗಳು. ನಾನು ಜಾತಿ-ಜಾತಿ ನಡುವೆ ವೈಷಮ್ಯ ಹುಟ್ಟಿಸುವ ಕೆಲಸ ಮಾಡಿಲ್ಲ” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಮಸ್ಕಿ: ಬಿಜೆಪಿ ಮುಖಂಡ ಕಾಂಗ್ರೆಸ್ ಸೇರ್ಪಡೆ; ಸಿದ್ದರಾಮಯ್ಯನವರನ್ನು ಭೇಟಿಯಾದ ಬಸವನಗೌಡ

“ಮೀಸಲಾತಿ, ಸಾಮಾಜಿಕ ನ್ಯಾಯದ ಬಗ್ಗೆ ನಾವು ಮಾತನಾಡಿದಾಗ ನಮ್ಮನ್ನು ಜಾತಿವಾದಿಗಳೆಂದು ಟೀಕಿಸುವ, ಹಂಗಿಸುವ ಬಿಜೆಪಿ ಈಗ ಮಾಡುತ್ತಿರುವುದೇನು? ಜಾತಿ-ಜಾತಿ ನಡುವೆ ಮಾತ್ರವಲ್ಲ ಭಾಷೆ-ಭಾಷೆ ನಡುವೆ ಕೂಡಾ ಜಗಳ ಹುಟ್ಟುಹಾಕುತ್ತಿದೆ. ಇಂತಹ ತುಘಲಕ್ ನಿರ್ಧಾರದಿಂದ ರಾಜ್ಯದಲ್ಲಿ ಅರಾಜಕತೆ ಸೃಷ್ಟಿಯಾಗಿದೆ” ಎಂದು ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ: ‘ರಾಜ್ಯದಲ್ಲಿ ಲವ್ ಜಿಹಾದ್ ಕಾನೂನು ತರಲು ಸಾಧ್ಯವಿಲ್ಲ’- ಸಿದ್ದರಾಮಯ್ಯ

“ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ನೀಡುವ ಯೋಗ್ಯತೆ ಇಲ್ಲ. ವೃದ್ಧಾಪ್ಯವೇತನ, ವಿಧವಾ ವೇತನ, ಅಂಗವಿಕಲ ವೇತನಕ್ಕೆ ದುಡ್ಡಿಲ್ಲ, ಅತಿವೃಷ್ಟಿಯಿಂದ ಕಷ್ಟ-ನಷ್ಟಕ್ಕೀಡಾಗಿರುವ ಜನ ಬೀದಿಯಲ್ಲಿದ್ದಾರೆ, ಕೋರೊನಾ ಸೋಂಕಿನಿಂದ ಜನ ಸಾಯುತ್ತಿದ್ದಾರೆ. ಇವೆಲ್ಲಕ್ಕೂ ಸರ್ಕಾರದ ಬಳಿ ಹಣ ಇಲ್ಲ, ಜಾತಿ ನಿಗಮ-ಪ್ರಾಧಿಕಾರಕ್ಕೆ ನೂರಾರು ಕೋಟಿ ಎಲ್ಲಿಂದ ಬಂತು?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಕನ್ನಡ ಧ್ವಜ ಹಾರಿಸದಂತೆ ಈ ಬಾರಿ ಯಾರ ಕುಮ್ಮಕ್ಕಿದೆ? – ಸಿದ್ದರಾಮಯ್ಯ ಪ್ರಶ್ನೆ

“ಗಡಿಭಾಗದಲ್ಲಿ ಕನ್ನಡ ಮತ್ತು ಮರಾಠಿಗರ ನಡುವೆ ಆಗಾಗ ಸಂಘರ್ಷ ನಡೆದರೂ, ರಾಜ್ಯಾದ್ಯಂತ ಎರಡೂ ಸಮುದಾಯಗಳು ಸೌಹಾರ್ದತೆಯಿಂದ ಬದುಕುತ್ತಿವೆ. ಸರ್ಕಾರ ಮರಾಠ ಅಭಿವೃದ್ದಿ ಪ್ರಾಧಿಕಾರ ಘೋಷಿಸಿ ಅನಗತ್ಯವಾಗಿ ಕನ್ನಡಿಗರನ್ನು ಕೆರಳಿಸುವ ಮೂರ್ಖತನ ತೋರಿದೆ. ಇದರಿಂದಾಗಿ ರಾಜ್ಯದ ಶಾಂತಿ-ಸುವ್ಯವಸ್ಥೆಗೆ ಭಂಗ ಉಂಟಾದಲ್ಲಿ ಅದಕ್ಕೆ ಮುಖ್ಯಮಂತ್ರಿಗಳೇ ಹೊಣೆ” ಎಂದು ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ಕೇಂದ್ರದಿಂದ ರಾಜ್ಯಕ್ಕಾಗುತ್ತಿರುವ ಅನ್ಯಾಯಗಳ ಪಟ್ಟಿ: ರಾಜ್ಯೋತ್ಸವದಂದು ಸಿದ್ದರಾಮಯ್ಯ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...