Homeಮುಖಪುಟಕೊರೊನ ಸುರಕ್ಷಾ ಕಿಟ್ ಕೇಳಿದ ಆರೋಗ್ಯ ಇಲಾಖೆ ಗುತ್ತಿಗೆ ನೌಕರರನ್ನು ವಜಾಗೊಳಿಸಿದ ಯುಪಿ ಸರ್ಕಾರ

ಕೊರೊನ ಸುರಕ್ಷಾ ಕಿಟ್ ಕೇಳಿದ ಆರೋಗ್ಯ ಇಲಾಖೆ ಗುತ್ತಿಗೆ ನೌಕರರನ್ನು ವಜಾಗೊಳಿಸಿದ ಯುಪಿ ಸರ್ಕಾರ

- Advertisement -
- Advertisement -

ಕೊರೊನಾ ವಿರುದ್ಧದ ಹೋರಾಟದಲ್ಲಿ ಮೂಂಚೂಣಿಯಲ್ಲಿದ್ದು, ರಕ್ಷಣಾತ್ಮಕ ಸಾಧನಗಳನ್ನು ಕೋರಿದ ಗುತ್ತಿಗೆ ಆರೋಗ್ಯ ಕಾರ್ಯಕರ್ತರನ್ನು ಉತ್ತರ ಪ್ರದೇಶ ಸರ್ಕಾರ ವಜಾ ಮಾಡಿದೆ.

ಈ ಗುತ್ತಿಗೆ ಆರೋಗ್ಯ ಕಾರ್ಯಕರ್ತರು ಕೊರೊನಾ ವೈರಸ್ ಸೋಂಕಿತ ರೋಗಿಗಳ ಚಿಕಿತ್ಸೆ ನೀಡುತ್ತಿದ್ದರು. ತಮಗೆ ಕೊರೊನ ಸುರಕ್ಷತಾ ಕಿಟ್‌ಗಳನ್ನು ನೀಡುವಂತೆ ಒತ್ತಾಯಿಸಿ ಏಪ್ರಿಲ್ 2 ರಿಂದ ಮುಷ್ಕರದಲ್ಲಿದ್ದರು. ಎಪ್ರಿಲ್ 3ರಂದು 26 ಜನರನ್ನು ಕೆಲಸದಿಂದ ವಜಾ ಮಾಡಲಾಗಿದೆ.

ಉತ್ತರ ಪ್ರದೇಶ ವೈದ್ಯಕೀಯ ಮತ್ತು ಆರೋಗ್ಯ ಸೇವೆಗಳ ನಿರ್ದೇಶಕ ಅಗ್ಯತ್ ಗುಪ್ತಾ ಅವರು ಶುಕ್ರವಾರ ಸರ್ಕಾರಿ ವೈದ್ಯಕೀಯ ಕಾಲೇಜು ಪ್ರಾಂಶುಪಾಲರಿಗೆ ಪತ್ರ ಬರೆದು 26 ಆರೋಗ್ಯ ಕಾರ್ಯಕರ್ತರನ್ನು ಕೆಲಸದಿಂದ ವಜಾ ಮಾಡಿ ಎಂದು ತಿಳಿಸಿದ್ದಾರೆ.

“ದೇಶದಲ್ಲಿ ಕಠಿಣ ಪರಿಸ್ಥಿತಿಯ ಹೊರತಾಗಿಯೂ, ನೀವು ಅನಿಯಂತ್ರಿತ ಮುಷ್ಕರ ನಡೆಸುತ್ತಿದ್ದೀರಿ. ದೇಶವು ಎಸ್ಮಾ ಕಾನೂನಿನ ಅಡಿಯಲ್ಲಿದೆ. ನಿಮ್ಮ ಈ ಕೃತ್ಯದಿಂದಾಗಿ ಬಂಡಾದ ಸರ್ಕಾರಿ ವೈದ್ಯಕೀಯ ಕಾಲೇಜಿನ ಆರೋಗ್ಯ ಸೇವೆಗಳ ಮೇಲೆ ಪರಿಣಾಮ ಬೀರುತ್ತಿವೆ. ಆದ್ದರಿಂದ, ಒಪ್ಪಂದದ ಆಧಾರದ ಮೇಲೆ, ಎಲ್ಲರನ್ನು ಸೇವೆಯಿಂದ ವಜಾಗೊಳಿಸುವಂತೆ ತಕ್ಷಣದಿಂದ ಜಾರಿಗೆ ತರಲಾಗುವುದು ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಈ ರೀತಿಯ ಏಕಪಕ್ಷೀಯ ಕ್ರಮದಿಂದ ಆರೋಗ್ಯ ಕಾರ್ಯಕರ್ತರು ಆಕ್ರೋಶಗೊಂಡಿದ್ದಾರೆ. ಈ ಪರಿಸ್ಥಿತಿಯಲ್ಲಿ ನಮ್ಮನ್ನು ವಜಾಗೊಳಿಸಿದರೆ ನಮ್ಮ ಗತಿಯೇನು? ಇಷ್ಟು ವರ್ಷ ಮಾಡಿದ ಸೇವೆಗೆ ಬೆಲೆಯೇನು ಎಂದು ಪ್ರಶ್ನಿಸಿದ್ದಾರೆ. ಅಲ್ಲದೇ ಕಾಲೇಜು ಪ್ರಾಂಶುಪಾಲರ ಪಿತೂರಿಯಿಂದಾಗಿ ನಮ್ಮನ್ನು ವಜಾಗೊಳಿಸಿದ್ದು ಇದರು ವಿರುದ್ಧ ಎಲ್ಲ ಗುತ್ತಿಗೆ ಕಾರ್ಮಿಕರು ನ್ಯಾಯಾಲಯದಲ್ಲಿ ಪ್ರಶ್ನಿಸುತ್ತೇವೆ ಎಂದಿದ್ದಾರೆ.

ವಜಾಗೊಳಿಸಲ್ಪಟ್ಟ ಆರೋಗ್ಯ ಕಾರ್ಯಕರ್ತೆ, ಪ್ರೀತಿ ದ್ವಿವೇದಿಯವರು “ರಾಜ್ಯ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲರು ಯಾವುದೇ ಭದ್ರತಾ ಕಿಟ್‌ಗಳಿಲ್ಲದೆ ಕೊರೊನಾ ಐಸೊಲೇಷನ್ ವಾರ್ಡ್‌ಗಳಲ್ಲಿ ಹೊರಗುತ್ತಿಗೆ ನೌಕರರನ್ನು ಮಾತ್ರ ಕರ್ತವ್ಯಕ್ಕೆ ಸೇರಿಸಿದ್ದಾರೆ” ಎಂದು ಆರೋಪಿಸಿದ್ದಾರೆ.

ಕೊರೊನಾ ಸಂತ್ರಸ್ತರಿಗೆ ಚಿಕಿತ್ಸೆ ನೀಡುವ ವೈದ್ಯರು ಮತ್ತು ಆರೋಗ್ಯ ಕಾರ್ಯಕರ್ತರ ಸುರಕ್ಷತೆಯ ಬಗ್ಗೆ ಆರೋಗ್ಯ ತಜ್ಞರು ನಿರಂತರವಾಗಿ ಹೇಳುತ್ತಿದ್ದಾರೆ ಮತ್ತು ಸುರಕ್ಷತಾ ಕಿಟ್‌ಗಳನ್ನು ಒದಗಿಸುವಂತೆ ಸರ್ಕಾರವನ್ನು ಒತ್ತಾಯಿಸುತ್ತಿದ್ದಾರೆ ಎಂಬುದು ಗಮನಿಸಬೇಕಾದ ಸಂಗತಿ.

ಏಪ್ರಿಲ್ 5 ರ ರಾತ್ರಿ ದೀಪವನ್ನು ಬೆಳಗಿಸುವಂತೆ ಪ್ರಧಾನಿ ಮೋದಿಯವರ ಮನವಿಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್, ಕೊರೊನಾ ವಿರುದ್ಧ ಹೋರಾಡುವ ವೈದ್ಯಕೀಯ ಸಿಬ್ಬಂದಿಗೆ ವೈಯಕ್ತಿಕ ರಕ್ಷಣಾ ಸಾಧನಗಳ (ಪಿಪಿಇ) ಲಭ್ಯತೆಯ ವಿಷಯವನ್ನು ಎತ್ತಿದೆ. ‘ನೀವು ಚಪ್ಪಾಳೆ ತಟ್ಟಿದ ವೈದ್ಯಕೀಯ ಸಿಬ್ಬಂದಿಗೆ ವೈಯಕ್ತಿಕ ರಕ್ಷಣಾ ಸಾಧನಗಳು ಸಿಗುತ್ತಿಲ್ಲ, ಇದು ಯಾರ ಜವಾಬ್ದಾರಿ?’ ಎಂದು ಕಾಂಗ್ರೆಸ್ ಹೇಳಿದೆ.

ಈ ಹಿಂದೆ ಪ್ರಧಾನಿ ಮೋದಿ ಅವರು ಮಾರ್ಚ್ 22 ರಂದು ಜನತಾ ಕರ್ಫ್ಯೂ ಘೋಷಿಸಿ, ಕೊರೊನ ವೈರಸ್ ಸೋಂಕಿತರ ಚಿಕಿತ್ಸೆಯಲ್ಲಿ ತೊಡಗಿರುವ ವೈದ್ಯರು ಮತ್ತು ಆರೋಗ್ಯ ಕಾರ್ಯಕರ್ತರ ಗೌರವಾರ್ಥವಾಗಿ ಸಂಜೆ 5 ಗಂಟೆಗೆ  ಚಪ್ಪಾಳೆ ತಟ್ಟಿ ಎಂದು ದೇಶಕ್ಕೆ ಕರೆ ನೀಡಿದ್ದರು. ಆದರೆ ಕೊರೊನ ಸೋಂಕಿನ ಬೆದರಿಕೆಯ ಹೊರತಾಗಿಯೂ ದೇಶಾದ್ಯಂತ ಜನರು ಚಪ್ಪಾಳೆ ತಟ್ಟಿ, ತಟ್ಟೆಗಳಿಗೆ ಹೊಡೆದು, ಶಂಖವನ್ನು ಊದಿ ಬೀದಿಗಳಲ್ಲಿ ಮೆರವಣಿಗೆ ಮಾಡಿದ್ದರು.

ಆದರೆ ಈಗ ಆರೋಗ್ಯ ಕಾರ್ಯಕರ್ತರು ತಮ್ಮ ಜೀವ ರಕ್ಷಿಸಿಕೊಳ್ಳಲು ಸುರಕ್ಷಾ ಕಿಟ್‌ಗಳನ್ನು ಕೇಳಿದಾಗ, ಉತ್ತರ ಪ್ರದೇಶದ ಬಿಜೆಪಿ ಸರ್ಕಾರ ಅವರನ್ನು ಉದ್ಯೋಗದಿಂದ ವಜಾಗೊಳಿಸಿದೆ. ವೈದ್ಯರು ವೈದ್ಯಕೀಯ ಕಿಟ್‌ಗಳ ಕೊರತೆಯನ್ನು ಎದುರಿಸುತ್ತಿವುದು ಎದೊಂದೇ ಉದಾಹರಣೆಯಲ್ಲ. ಪಿಪಿಇ ಲಭ್ಯತೆ, ಪರೀಕ್ಷಾ ಕಿಟ್‌ಗಳು ಮತ್ತು ಸಂಪರ್ಕತಡೆ ಸೌಲಭ್ಯಗಳ ಬಗ್ಗೆ ಇರುವ ಸಮಸ್ಯೆಗಳನ್ನು ಉಲ್ಲೇಖಿಸಿ ಏಮ್ಸ್ ವೈದ್ಯರ ಸಂಘವು ಮೋದಿಗೆ ಪತ್ರ ಬರೆದಿತ್ತು.


ಇದನ್ನೂ ಓದಿ:  PPE ಕೇಳಿದ ವೈದ್ಯರನ್ನು ದೂಷಿಸುವುದು ಸರಿಯಲ್ಲ: ಪ್ರಧಾನಿಗೆ ಪತ್ರ ಬರೆದ ಏಮ್ಸ್ ವೈದ್ಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...