Homeಮುಖಪುಟಕೊರೊನ ಸುರಕ್ಷಾ ಕಿಟ್ ಕೇಳಿದ ಆರೋಗ್ಯ ಇಲಾಖೆ ಗುತ್ತಿಗೆ ನೌಕರರನ್ನು ವಜಾಗೊಳಿಸಿದ ಯುಪಿ ಸರ್ಕಾರ

ಕೊರೊನ ಸುರಕ್ಷಾ ಕಿಟ್ ಕೇಳಿದ ಆರೋಗ್ಯ ಇಲಾಖೆ ಗುತ್ತಿಗೆ ನೌಕರರನ್ನು ವಜಾಗೊಳಿಸಿದ ಯುಪಿ ಸರ್ಕಾರ

- Advertisement -
- Advertisement -

ಕೊರೊನಾ ವಿರುದ್ಧದ ಹೋರಾಟದಲ್ಲಿ ಮೂಂಚೂಣಿಯಲ್ಲಿದ್ದು, ರಕ್ಷಣಾತ್ಮಕ ಸಾಧನಗಳನ್ನು ಕೋರಿದ ಗುತ್ತಿಗೆ ಆರೋಗ್ಯ ಕಾರ್ಯಕರ್ತರನ್ನು ಉತ್ತರ ಪ್ರದೇಶ ಸರ್ಕಾರ ವಜಾ ಮಾಡಿದೆ.

ಈ ಗುತ್ತಿಗೆ ಆರೋಗ್ಯ ಕಾರ್ಯಕರ್ತರು ಕೊರೊನಾ ವೈರಸ್ ಸೋಂಕಿತ ರೋಗಿಗಳ ಚಿಕಿತ್ಸೆ ನೀಡುತ್ತಿದ್ದರು. ತಮಗೆ ಕೊರೊನ ಸುರಕ್ಷತಾ ಕಿಟ್‌ಗಳನ್ನು ನೀಡುವಂತೆ ಒತ್ತಾಯಿಸಿ ಏಪ್ರಿಲ್ 2 ರಿಂದ ಮುಷ್ಕರದಲ್ಲಿದ್ದರು. ಎಪ್ರಿಲ್ 3ರಂದು 26 ಜನರನ್ನು ಕೆಲಸದಿಂದ ವಜಾ ಮಾಡಲಾಗಿದೆ.

ಉತ್ತರ ಪ್ರದೇಶ ವೈದ್ಯಕೀಯ ಮತ್ತು ಆರೋಗ್ಯ ಸೇವೆಗಳ ನಿರ್ದೇಶಕ ಅಗ್ಯತ್ ಗುಪ್ತಾ ಅವರು ಶುಕ್ರವಾರ ಸರ್ಕಾರಿ ವೈದ್ಯಕೀಯ ಕಾಲೇಜು ಪ್ರಾಂಶುಪಾಲರಿಗೆ ಪತ್ರ ಬರೆದು 26 ಆರೋಗ್ಯ ಕಾರ್ಯಕರ್ತರನ್ನು ಕೆಲಸದಿಂದ ವಜಾ ಮಾಡಿ ಎಂದು ತಿಳಿಸಿದ್ದಾರೆ.

“ದೇಶದಲ್ಲಿ ಕಠಿಣ ಪರಿಸ್ಥಿತಿಯ ಹೊರತಾಗಿಯೂ, ನೀವು ಅನಿಯಂತ್ರಿತ ಮುಷ್ಕರ ನಡೆಸುತ್ತಿದ್ದೀರಿ. ದೇಶವು ಎಸ್ಮಾ ಕಾನೂನಿನ ಅಡಿಯಲ್ಲಿದೆ. ನಿಮ್ಮ ಈ ಕೃತ್ಯದಿಂದಾಗಿ ಬಂಡಾದ ಸರ್ಕಾರಿ ವೈದ್ಯಕೀಯ ಕಾಲೇಜಿನ ಆರೋಗ್ಯ ಸೇವೆಗಳ ಮೇಲೆ ಪರಿಣಾಮ ಬೀರುತ್ತಿವೆ. ಆದ್ದರಿಂದ, ಒಪ್ಪಂದದ ಆಧಾರದ ಮೇಲೆ, ಎಲ್ಲರನ್ನು ಸೇವೆಯಿಂದ ವಜಾಗೊಳಿಸುವಂತೆ ತಕ್ಷಣದಿಂದ ಜಾರಿಗೆ ತರಲಾಗುವುದು ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಈ ರೀತಿಯ ಏಕಪಕ್ಷೀಯ ಕ್ರಮದಿಂದ ಆರೋಗ್ಯ ಕಾರ್ಯಕರ್ತರು ಆಕ್ರೋಶಗೊಂಡಿದ್ದಾರೆ. ಈ ಪರಿಸ್ಥಿತಿಯಲ್ಲಿ ನಮ್ಮನ್ನು ವಜಾಗೊಳಿಸಿದರೆ ನಮ್ಮ ಗತಿಯೇನು? ಇಷ್ಟು ವರ್ಷ ಮಾಡಿದ ಸೇವೆಗೆ ಬೆಲೆಯೇನು ಎಂದು ಪ್ರಶ್ನಿಸಿದ್ದಾರೆ. ಅಲ್ಲದೇ ಕಾಲೇಜು ಪ್ರಾಂಶುಪಾಲರ ಪಿತೂರಿಯಿಂದಾಗಿ ನಮ್ಮನ್ನು ವಜಾಗೊಳಿಸಿದ್ದು ಇದರು ವಿರುದ್ಧ ಎಲ್ಲ ಗುತ್ತಿಗೆ ಕಾರ್ಮಿಕರು ನ್ಯಾಯಾಲಯದಲ್ಲಿ ಪ್ರಶ್ನಿಸುತ್ತೇವೆ ಎಂದಿದ್ದಾರೆ.

ವಜಾಗೊಳಿಸಲ್ಪಟ್ಟ ಆರೋಗ್ಯ ಕಾರ್ಯಕರ್ತೆ, ಪ್ರೀತಿ ದ್ವಿವೇದಿಯವರು “ರಾಜ್ಯ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲರು ಯಾವುದೇ ಭದ್ರತಾ ಕಿಟ್‌ಗಳಿಲ್ಲದೆ ಕೊರೊನಾ ಐಸೊಲೇಷನ್ ವಾರ್ಡ್‌ಗಳಲ್ಲಿ ಹೊರಗುತ್ತಿಗೆ ನೌಕರರನ್ನು ಮಾತ್ರ ಕರ್ತವ್ಯಕ್ಕೆ ಸೇರಿಸಿದ್ದಾರೆ” ಎಂದು ಆರೋಪಿಸಿದ್ದಾರೆ.

ಕೊರೊನಾ ಸಂತ್ರಸ್ತರಿಗೆ ಚಿಕಿತ್ಸೆ ನೀಡುವ ವೈದ್ಯರು ಮತ್ತು ಆರೋಗ್ಯ ಕಾರ್ಯಕರ್ತರ ಸುರಕ್ಷತೆಯ ಬಗ್ಗೆ ಆರೋಗ್ಯ ತಜ್ಞರು ನಿರಂತರವಾಗಿ ಹೇಳುತ್ತಿದ್ದಾರೆ ಮತ್ತು ಸುರಕ್ಷತಾ ಕಿಟ್‌ಗಳನ್ನು ಒದಗಿಸುವಂತೆ ಸರ್ಕಾರವನ್ನು ಒತ್ತಾಯಿಸುತ್ತಿದ್ದಾರೆ ಎಂಬುದು ಗಮನಿಸಬೇಕಾದ ಸಂಗತಿ.

ಏಪ್ರಿಲ್ 5 ರ ರಾತ್ರಿ ದೀಪವನ್ನು ಬೆಳಗಿಸುವಂತೆ ಪ್ರಧಾನಿ ಮೋದಿಯವರ ಮನವಿಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್, ಕೊರೊನಾ ವಿರುದ್ಧ ಹೋರಾಡುವ ವೈದ್ಯಕೀಯ ಸಿಬ್ಬಂದಿಗೆ ವೈಯಕ್ತಿಕ ರಕ್ಷಣಾ ಸಾಧನಗಳ (ಪಿಪಿಇ) ಲಭ್ಯತೆಯ ವಿಷಯವನ್ನು ಎತ್ತಿದೆ. ‘ನೀವು ಚಪ್ಪಾಳೆ ತಟ್ಟಿದ ವೈದ್ಯಕೀಯ ಸಿಬ್ಬಂದಿಗೆ ವೈಯಕ್ತಿಕ ರಕ್ಷಣಾ ಸಾಧನಗಳು ಸಿಗುತ್ತಿಲ್ಲ, ಇದು ಯಾರ ಜವಾಬ್ದಾರಿ?’ ಎಂದು ಕಾಂಗ್ರೆಸ್ ಹೇಳಿದೆ.

ಈ ಹಿಂದೆ ಪ್ರಧಾನಿ ಮೋದಿ ಅವರು ಮಾರ್ಚ್ 22 ರಂದು ಜನತಾ ಕರ್ಫ್ಯೂ ಘೋಷಿಸಿ, ಕೊರೊನ ವೈರಸ್ ಸೋಂಕಿತರ ಚಿಕಿತ್ಸೆಯಲ್ಲಿ ತೊಡಗಿರುವ ವೈದ್ಯರು ಮತ್ತು ಆರೋಗ್ಯ ಕಾರ್ಯಕರ್ತರ ಗೌರವಾರ್ಥವಾಗಿ ಸಂಜೆ 5 ಗಂಟೆಗೆ  ಚಪ್ಪಾಳೆ ತಟ್ಟಿ ಎಂದು ದೇಶಕ್ಕೆ ಕರೆ ನೀಡಿದ್ದರು. ಆದರೆ ಕೊರೊನ ಸೋಂಕಿನ ಬೆದರಿಕೆಯ ಹೊರತಾಗಿಯೂ ದೇಶಾದ್ಯಂತ ಜನರು ಚಪ್ಪಾಳೆ ತಟ್ಟಿ, ತಟ್ಟೆಗಳಿಗೆ ಹೊಡೆದು, ಶಂಖವನ್ನು ಊದಿ ಬೀದಿಗಳಲ್ಲಿ ಮೆರವಣಿಗೆ ಮಾಡಿದ್ದರು.

ಆದರೆ ಈಗ ಆರೋಗ್ಯ ಕಾರ್ಯಕರ್ತರು ತಮ್ಮ ಜೀವ ರಕ್ಷಿಸಿಕೊಳ್ಳಲು ಸುರಕ್ಷಾ ಕಿಟ್‌ಗಳನ್ನು ಕೇಳಿದಾಗ, ಉತ್ತರ ಪ್ರದೇಶದ ಬಿಜೆಪಿ ಸರ್ಕಾರ ಅವರನ್ನು ಉದ್ಯೋಗದಿಂದ ವಜಾಗೊಳಿಸಿದೆ. ವೈದ್ಯರು ವೈದ್ಯಕೀಯ ಕಿಟ್‌ಗಳ ಕೊರತೆಯನ್ನು ಎದುರಿಸುತ್ತಿವುದು ಎದೊಂದೇ ಉದಾಹರಣೆಯಲ್ಲ. ಪಿಪಿಇ ಲಭ್ಯತೆ, ಪರೀಕ್ಷಾ ಕಿಟ್‌ಗಳು ಮತ್ತು ಸಂಪರ್ಕತಡೆ ಸೌಲಭ್ಯಗಳ ಬಗ್ಗೆ ಇರುವ ಸಮಸ್ಯೆಗಳನ್ನು ಉಲ್ಲೇಖಿಸಿ ಏಮ್ಸ್ ವೈದ್ಯರ ಸಂಘವು ಮೋದಿಗೆ ಪತ್ರ ಬರೆದಿತ್ತು.


ಇದನ್ನೂ ಓದಿ:  PPE ಕೇಳಿದ ವೈದ್ಯರನ್ನು ದೂಷಿಸುವುದು ಸರಿಯಲ್ಲ: ಪ್ರಧಾನಿಗೆ ಪತ್ರ ಬರೆದ ಏಮ್ಸ್ ವೈದ್ಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...