Homeಮುಖಪುಟಕೊರೊನ ಸುರಕ್ಷಾ ಕಿಟ್ ಕೇಳಿದ ಆರೋಗ್ಯ ಇಲಾಖೆ ಗುತ್ತಿಗೆ ನೌಕರರನ್ನು ವಜಾಗೊಳಿಸಿದ ಯುಪಿ ಸರ್ಕಾರ

ಕೊರೊನ ಸುರಕ್ಷಾ ಕಿಟ್ ಕೇಳಿದ ಆರೋಗ್ಯ ಇಲಾಖೆ ಗುತ್ತಿಗೆ ನೌಕರರನ್ನು ವಜಾಗೊಳಿಸಿದ ಯುಪಿ ಸರ್ಕಾರ

- Advertisement -
- Advertisement -

ಕೊರೊನಾ ವಿರುದ್ಧದ ಹೋರಾಟದಲ್ಲಿ ಮೂಂಚೂಣಿಯಲ್ಲಿದ್ದು, ರಕ್ಷಣಾತ್ಮಕ ಸಾಧನಗಳನ್ನು ಕೋರಿದ ಗುತ್ತಿಗೆ ಆರೋಗ್ಯ ಕಾರ್ಯಕರ್ತರನ್ನು ಉತ್ತರ ಪ್ರದೇಶ ಸರ್ಕಾರ ವಜಾ ಮಾಡಿದೆ.

ಈ ಗುತ್ತಿಗೆ ಆರೋಗ್ಯ ಕಾರ್ಯಕರ್ತರು ಕೊರೊನಾ ವೈರಸ್ ಸೋಂಕಿತ ರೋಗಿಗಳ ಚಿಕಿತ್ಸೆ ನೀಡುತ್ತಿದ್ದರು. ತಮಗೆ ಕೊರೊನ ಸುರಕ್ಷತಾ ಕಿಟ್‌ಗಳನ್ನು ನೀಡುವಂತೆ ಒತ್ತಾಯಿಸಿ ಏಪ್ರಿಲ್ 2 ರಿಂದ ಮುಷ್ಕರದಲ್ಲಿದ್ದರು. ಎಪ್ರಿಲ್ 3ರಂದು 26 ಜನರನ್ನು ಕೆಲಸದಿಂದ ವಜಾ ಮಾಡಲಾಗಿದೆ.

ಉತ್ತರ ಪ್ರದೇಶ ವೈದ್ಯಕೀಯ ಮತ್ತು ಆರೋಗ್ಯ ಸೇವೆಗಳ ನಿರ್ದೇಶಕ ಅಗ್ಯತ್ ಗುಪ್ತಾ ಅವರು ಶುಕ್ರವಾರ ಸರ್ಕಾರಿ ವೈದ್ಯಕೀಯ ಕಾಲೇಜು ಪ್ರಾಂಶುಪಾಲರಿಗೆ ಪತ್ರ ಬರೆದು 26 ಆರೋಗ್ಯ ಕಾರ್ಯಕರ್ತರನ್ನು ಕೆಲಸದಿಂದ ವಜಾ ಮಾಡಿ ಎಂದು ತಿಳಿಸಿದ್ದಾರೆ.

“ದೇಶದಲ್ಲಿ ಕಠಿಣ ಪರಿಸ್ಥಿತಿಯ ಹೊರತಾಗಿಯೂ, ನೀವು ಅನಿಯಂತ್ರಿತ ಮುಷ್ಕರ ನಡೆಸುತ್ತಿದ್ದೀರಿ. ದೇಶವು ಎಸ್ಮಾ ಕಾನೂನಿನ ಅಡಿಯಲ್ಲಿದೆ. ನಿಮ್ಮ ಈ ಕೃತ್ಯದಿಂದಾಗಿ ಬಂಡಾದ ಸರ್ಕಾರಿ ವೈದ್ಯಕೀಯ ಕಾಲೇಜಿನ ಆರೋಗ್ಯ ಸೇವೆಗಳ ಮೇಲೆ ಪರಿಣಾಮ ಬೀರುತ್ತಿವೆ. ಆದ್ದರಿಂದ, ಒಪ್ಪಂದದ ಆಧಾರದ ಮೇಲೆ, ಎಲ್ಲರನ್ನು ಸೇವೆಯಿಂದ ವಜಾಗೊಳಿಸುವಂತೆ ತಕ್ಷಣದಿಂದ ಜಾರಿಗೆ ತರಲಾಗುವುದು ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಈ ರೀತಿಯ ಏಕಪಕ್ಷೀಯ ಕ್ರಮದಿಂದ ಆರೋಗ್ಯ ಕಾರ್ಯಕರ್ತರು ಆಕ್ರೋಶಗೊಂಡಿದ್ದಾರೆ. ಈ ಪರಿಸ್ಥಿತಿಯಲ್ಲಿ ನಮ್ಮನ್ನು ವಜಾಗೊಳಿಸಿದರೆ ನಮ್ಮ ಗತಿಯೇನು? ಇಷ್ಟು ವರ್ಷ ಮಾಡಿದ ಸೇವೆಗೆ ಬೆಲೆಯೇನು ಎಂದು ಪ್ರಶ್ನಿಸಿದ್ದಾರೆ. ಅಲ್ಲದೇ ಕಾಲೇಜು ಪ್ರಾಂಶುಪಾಲರ ಪಿತೂರಿಯಿಂದಾಗಿ ನಮ್ಮನ್ನು ವಜಾಗೊಳಿಸಿದ್ದು ಇದರು ವಿರುದ್ಧ ಎಲ್ಲ ಗುತ್ತಿಗೆ ಕಾರ್ಮಿಕರು ನ್ಯಾಯಾಲಯದಲ್ಲಿ ಪ್ರಶ್ನಿಸುತ್ತೇವೆ ಎಂದಿದ್ದಾರೆ.

ವಜಾಗೊಳಿಸಲ್ಪಟ್ಟ ಆರೋಗ್ಯ ಕಾರ್ಯಕರ್ತೆ, ಪ್ರೀತಿ ದ್ವಿವೇದಿಯವರು “ರಾಜ್ಯ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲರು ಯಾವುದೇ ಭದ್ರತಾ ಕಿಟ್‌ಗಳಿಲ್ಲದೆ ಕೊರೊನಾ ಐಸೊಲೇಷನ್ ವಾರ್ಡ್‌ಗಳಲ್ಲಿ ಹೊರಗುತ್ತಿಗೆ ನೌಕರರನ್ನು ಮಾತ್ರ ಕರ್ತವ್ಯಕ್ಕೆ ಸೇರಿಸಿದ್ದಾರೆ” ಎಂದು ಆರೋಪಿಸಿದ್ದಾರೆ.

ಕೊರೊನಾ ಸಂತ್ರಸ್ತರಿಗೆ ಚಿಕಿತ್ಸೆ ನೀಡುವ ವೈದ್ಯರು ಮತ್ತು ಆರೋಗ್ಯ ಕಾರ್ಯಕರ್ತರ ಸುರಕ್ಷತೆಯ ಬಗ್ಗೆ ಆರೋಗ್ಯ ತಜ್ಞರು ನಿರಂತರವಾಗಿ ಹೇಳುತ್ತಿದ್ದಾರೆ ಮತ್ತು ಸುರಕ್ಷತಾ ಕಿಟ್‌ಗಳನ್ನು ಒದಗಿಸುವಂತೆ ಸರ್ಕಾರವನ್ನು ಒತ್ತಾಯಿಸುತ್ತಿದ್ದಾರೆ ಎಂಬುದು ಗಮನಿಸಬೇಕಾದ ಸಂಗತಿ.

ಏಪ್ರಿಲ್ 5 ರ ರಾತ್ರಿ ದೀಪವನ್ನು ಬೆಳಗಿಸುವಂತೆ ಪ್ರಧಾನಿ ಮೋದಿಯವರ ಮನವಿಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್, ಕೊರೊನಾ ವಿರುದ್ಧ ಹೋರಾಡುವ ವೈದ್ಯಕೀಯ ಸಿಬ್ಬಂದಿಗೆ ವೈಯಕ್ತಿಕ ರಕ್ಷಣಾ ಸಾಧನಗಳ (ಪಿಪಿಇ) ಲಭ್ಯತೆಯ ವಿಷಯವನ್ನು ಎತ್ತಿದೆ. ‘ನೀವು ಚಪ್ಪಾಳೆ ತಟ್ಟಿದ ವೈದ್ಯಕೀಯ ಸಿಬ್ಬಂದಿಗೆ ವೈಯಕ್ತಿಕ ರಕ್ಷಣಾ ಸಾಧನಗಳು ಸಿಗುತ್ತಿಲ್ಲ, ಇದು ಯಾರ ಜವಾಬ್ದಾರಿ?’ ಎಂದು ಕಾಂಗ್ರೆಸ್ ಹೇಳಿದೆ.

ಈ ಹಿಂದೆ ಪ್ರಧಾನಿ ಮೋದಿ ಅವರು ಮಾರ್ಚ್ 22 ರಂದು ಜನತಾ ಕರ್ಫ್ಯೂ ಘೋಷಿಸಿ, ಕೊರೊನ ವೈರಸ್ ಸೋಂಕಿತರ ಚಿಕಿತ್ಸೆಯಲ್ಲಿ ತೊಡಗಿರುವ ವೈದ್ಯರು ಮತ್ತು ಆರೋಗ್ಯ ಕಾರ್ಯಕರ್ತರ ಗೌರವಾರ್ಥವಾಗಿ ಸಂಜೆ 5 ಗಂಟೆಗೆ  ಚಪ್ಪಾಳೆ ತಟ್ಟಿ ಎಂದು ದೇಶಕ್ಕೆ ಕರೆ ನೀಡಿದ್ದರು. ಆದರೆ ಕೊರೊನ ಸೋಂಕಿನ ಬೆದರಿಕೆಯ ಹೊರತಾಗಿಯೂ ದೇಶಾದ್ಯಂತ ಜನರು ಚಪ್ಪಾಳೆ ತಟ್ಟಿ, ತಟ್ಟೆಗಳಿಗೆ ಹೊಡೆದು, ಶಂಖವನ್ನು ಊದಿ ಬೀದಿಗಳಲ್ಲಿ ಮೆರವಣಿಗೆ ಮಾಡಿದ್ದರು.

ಆದರೆ ಈಗ ಆರೋಗ್ಯ ಕಾರ್ಯಕರ್ತರು ತಮ್ಮ ಜೀವ ರಕ್ಷಿಸಿಕೊಳ್ಳಲು ಸುರಕ್ಷಾ ಕಿಟ್‌ಗಳನ್ನು ಕೇಳಿದಾಗ, ಉತ್ತರ ಪ್ರದೇಶದ ಬಿಜೆಪಿ ಸರ್ಕಾರ ಅವರನ್ನು ಉದ್ಯೋಗದಿಂದ ವಜಾಗೊಳಿಸಿದೆ. ವೈದ್ಯರು ವೈದ್ಯಕೀಯ ಕಿಟ್‌ಗಳ ಕೊರತೆಯನ್ನು ಎದುರಿಸುತ್ತಿವುದು ಎದೊಂದೇ ಉದಾಹರಣೆಯಲ್ಲ. ಪಿಪಿಇ ಲಭ್ಯತೆ, ಪರೀಕ್ಷಾ ಕಿಟ್‌ಗಳು ಮತ್ತು ಸಂಪರ್ಕತಡೆ ಸೌಲಭ್ಯಗಳ ಬಗ್ಗೆ ಇರುವ ಸಮಸ್ಯೆಗಳನ್ನು ಉಲ್ಲೇಖಿಸಿ ಏಮ್ಸ್ ವೈದ್ಯರ ಸಂಘವು ಮೋದಿಗೆ ಪತ್ರ ಬರೆದಿತ್ತು.


ಇದನ್ನೂ ಓದಿ:  PPE ಕೇಳಿದ ವೈದ್ಯರನ್ನು ದೂಷಿಸುವುದು ಸರಿಯಲ್ಲ: ಪ್ರಧಾನಿಗೆ ಪತ್ರ ಬರೆದ ಏಮ್ಸ್ ವೈದ್ಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...