Homeಮುಖಪುಟಗಡಿಯಾರ ತಯಾರಕ ಕಂಪೆನಿಗೆ ಮೋರ್ಬಿ ಸೇತುವೆಯ ನಿರ್ವಹಣೆ ಗುತ್ತಿಗೆ ನೀಡಿದ್ದ ಸರ್ಕಾರ!

ಗಡಿಯಾರ ತಯಾರಕ ಕಂಪೆನಿಗೆ ಮೋರ್ಬಿ ಸೇತುವೆಯ ನಿರ್ವಹಣೆ ಗುತ್ತಿಗೆ ನೀಡಿದ್ದ ಸರ್ಕಾರ!

- Advertisement -
- Advertisement -

ಗುಜರಾತಿನ ಮೋರ್ಬಿ ಸೇತುತೆ ಕುಸಿದು 141 ಜನರು ಮೃತಪಟ್ಟಿದ್ದು ವಿಶ್ವದಾದ್ಯಂತ ಸಂತಾಪ ವ್ಯಕ್ತವಾಗಿದೆ. ಆದರೆ ಈ ನಡುವೆ ಅಘಾತಕಾರಿ ಸುದ್ದಿಯೊಂದು ಬಹಿರಂಗವಾಗಿದೆ. CFL ಬಲ್ಬ್‌ಗಳು, ಗೋಡೆ ಗಡಿಯಾರಗಳು ಮತ್ತು ಇ-ಬೈಕ್‌ಗಳಲ್ಲಿ ಪರಿಣತಿ ಹೊಂದಿರುವ ಒರೆವಾ ಗ್ರೂಪ್‌ಗೆ 100 ವರ್ಷ ಹಳೆಯ ಸೇತುವೆಯ ನಿರ್ವಹಣೆಯ ಗುತ್ತಿಗೆಯನ್ನು ಮೋರ್ಬಿ ಪುರಸಭೆಯಿಂದ ನೀಡಿದೆ ಎಂದು ವರದಿಯಾಗಿದೆ.

ಒರೆವಾ ಗ್ರೂಪ್‌ ಸುಮಾರು ಐದು ದಶಕಗಳ ಹಿಂದೆ ಓಧವ್‌ಜಿ ರಾಘವ್‌ಜಿ ಪಟೇಲ್ ಸ್ಥಾಪಿಸಿದ ಸಂಸ್ಥೆಯಾಗಿದ್ದು ಇದು ಜನಪ್ರಿಯ ಅಜಂತಾ ಮತ್ತು ಒರ್ಪಾಟ್ ಬ್ರಾಂಡ್‌ಗಳ ಅಡಿಯಲ್ಲಿ ಗೋಡೆ ಗಡಿಯಾರಗಳನ್ನು ತಯಾರಿಸುತ್ತದೆ. ಈ ತಿಂಗಳ ಆರಂಭದಲ್ಲಿ 88 ನೇ ವಯಸ್ಸಿನಲ್ಲಿ ನಿಧನರಾದ ಪಟೇಲ್ ಅವರು 1971 ರಲ್ಲಿ 45 ನೇ ವಯಸ್ಸಿನಲ್ಲಿ ಉದ್ಯಮಿಯಾಗುವ ಮೊದಲು ಶಾಲೆಯಲ್ಲಿ ವಿಜ್ಞಾನ ಶಿಕ್ಷಕರಾಗಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸುಮಾರು 800 ಕೋಟಿ ವಹಿವಾಟು ಹೊಂದಿರುವ ಅಜಂತಾ ಗ್ರೂಪ್ ಈಗ ಗೃಹ ಮತ್ತು ವಿದ್ಯುತ್ ಉಪಕರಣಗಳು, ವಿದ್ಯುತ್ ದೀಪಗಳು, ಕ್ಯಾಲ್ಕುಲೇಟರ್‌ಗಳು, ಸೆರಾಮಿಕ್ ಉತ್ಪನ್ನಗಳು ಮತ್ತು ಇ-ಬೈಕ್‌ಗಳನ್ನು ತಯಾರಿಸುತ್ತಿದೆ.

ಇದನ್ನೂ ಓದಿ: ಗುಜರಾತ್‌: ‘ಮೊರ್ಬಿ ಸೇತುವೆ ನವೀಕರಣದ ವೇಳೆ ಹಳೆಯ ತಂತಿ ಬದಲಿಸಿರಲಿಲ್ಲ’

ಮಚ್ಚು ನದಿಯ ಮೇಲಿನ ಬ್ರಿಟೀಷ್ ಕಾಲದ ತೂಗು ಸೇತುವೆಯನ್ನು ‘ಜೂಲ್ತಾ ಪುಲ್’ ಎಂದು ಜನಪ್ರಿಯವಾಗಿ ಕರೆಯಲಾಗುತ್ತಿದ್ದು, ಅದರ ದುರಸ್ತಿಗಾಗಿ ಏಳು ತಿಂಗಳ ಹಿಂದೆ ಮುಚ್ಚಲಾಗಿತ್ತು. ನಂತರ ಅಕ್ಟೋಬರ್ 26 ರಂದು ಗುಜರಾತಿ ಹೊಸ ವರ್ಷದ ದಿನದಂದು ಪುನಃ ತೆರೆಯಲಾಯಿತು.

ಈ ವರ್ಷದ ಮಾರ್ಚ್‌ನಲ್ಲಿ ಮೋರ್ಬಿ ಪುರಸಭೆಯಿಂದ ಒರೆವಾ ಗ್ರೂಪ್‌ಗೆ ನಿರ್ವಹಣೆ ಮತ್ತು ನಿರ್ವಹಣೆಯ ಗುತ್ತಿಗೆಯನ್ನು ನೀಡಲಾಗಿದೆ. ಈ ನಡುವೆ ಸೇತುವೆಯ ಫಿಟ್ನೆಸ್‌ನ ಪ್ರಮಾಣ ಪತ್ರ ನೀಡದೆ ಸೇತುವೆಯನ್ನು ತೆರೆಯಲಾಗಿದೆ ಎಂಬ ಆರೋಪ ಕೇಳಿಬಂದಿದೆ.

ಒವೆರಾ ಗ್ರೂಪ್ ತನ್ನ ವೆಬ್‌ಸೈಟ್‌ನಲ್ಲಿನ ತಾನು 6,000 ಕ್ಕೂ ಹೆಚ್ಚು ಜನರನ್ನು ಉದ್ಯೋಗಕ್ಕೆ ನೇಮಿಸಿಕೊಂಡಿರುವುದಾಗಿ ಹೇಳಿಕೊಂಡಿದೆ ಆದರೆ, ನಿರ್ಮಾಣ ವ್ಯವಹಾರದ ಬಗ್ಗೆ ಯಾವುದೇ ಉಲ್ಲೇಖವಿಲ್ಲ. ಇಷ್ಟೆ ಅಲ್ಲದೆ ಒರೆವಾ ಗ್ರೂಪ್, ಗುಜರಾತಿನ ಕಚ್ ಜಿಲ್ಲೆಯ ಸಮಖಿಯಲಿಯಲ್ಲಿ 200 ಎಕರೆ ಭೂಮಿಯಲ್ಲಿ ಹರಡಿರುವ ಭಾರತದ ಅತಿದೊಡ್ಡ ಉತ್ಪಾದನಾ ಘಟಕಗಳಲ್ಲಿ ಒಂದನ್ನು ನಿರ್ವಹಿಸುತ್ತದೆ.

ಇದನ್ನೂ ಓದಿ: ಮೊರ್ಬಿ ತೂಗುಸೇತುವೆ ದುರಂತ: ಶವ ರಾಜಕೀಯ ಮಾಡಬಾರದೆಂದ ರಾಹುಲ್ ಗಾಂಧಿ

ಈ ಮಧ್ಯೆ ಗುಜರಾತ್ ಪೊಲೀಸರು ಟಿಕೆಟ್‌ ಕೌಂಟರ್‌ನಲ್ಲಿದ್ದ ಇಬ್ಬರು ಗುಮಾಸ್ತರು ಸೇರಿದಂತೆ ಒರೆವಾ ಗ್ರೂಪಿನ ಒಂಬತ್ತು ಜನರನ್ನು ಬಂಧಿಸಿದೆ. ಒರೆವಾ ಗ್ರೂಪಿನ ಇಬ್ಬರು ಮ್ಯಾನೇಜರ್‌ಗಳು, ಇಬ್ಬರು ಗುತ್ತಿಗೆದಾರರು, ಮೂವರು ಭದ್ರತಾ ಸಿಬ್ಬಂದಿ ಮತ್ತು ಇಬ್ಬರು ಟಿಕೆಟ್ ಕೌಂಟರ್‌ನ ಗುಮಾಸ್ತರು ಈ ಬಂಧಿತರಲ್ಲಿ ಇದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...