Homeಮುಖಪುಟಗಡಿಯಾರ ತಯಾರಕ ಕಂಪೆನಿಗೆ ಮೋರ್ಬಿ ಸೇತುವೆಯ ನಿರ್ವಹಣೆ ಗುತ್ತಿಗೆ ನೀಡಿದ್ದ ಸರ್ಕಾರ!

ಗಡಿಯಾರ ತಯಾರಕ ಕಂಪೆನಿಗೆ ಮೋರ್ಬಿ ಸೇತುವೆಯ ನಿರ್ವಹಣೆ ಗುತ್ತಿಗೆ ನೀಡಿದ್ದ ಸರ್ಕಾರ!

- Advertisement -
- Advertisement -

ಗುಜರಾತಿನ ಮೋರ್ಬಿ ಸೇತುತೆ ಕುಸಿದು 141 ಜನರು ಮೃತಪಟ್ಟಿದ್ದು ವಿಶ್ವದಾದ್ಯಂತ ಸಂತಾಪ ವ್ಯಕ್ತವಾಗಿದೆ. ಆದರೆ ಈ ನಡುವೆ ಅಘಾತಕಾರಿ ಸುದ್ದಿಯೊಂದು ಬಹಿರಂಗವಾಗಿದೆ. CFL ಬಲ್ಬ್‌ಗಳು, ಗೋಡೆ ಗಡಿಯಾರಗಳು ಮತ್ತು ಇ-ಬೈಕ್‌ಗಳಲ್ಲಿ ಪರಿಣತಿ ಹೊಂದಿರುವ ಒರೆವಾ ಗ್ರೂಪ್‌ಗೆ 100 ವರ್ಷ ಹಳೆಯ ಸೇತುವೆಯ ನಿರ್ವಹಣೆಯ ಗುತ್ತಿಗೆಯನ್ನು ಮೋರ್ಬಿ ಪುರಸಭೆಯಿಂದ ನೀಡಿದೆ ಎಂದು ವರದಿಯಾಗಿದೆ.

ಒರೆವಾ ಗ್ರೂಪ್‌ ಸುಮಾರು ಐದು ದಶಕಗಳ ಹಿಂದೆ ಓಧವ್‌ಜಿ ರಾಘವ್‌ಜಿ ಪಟೇಲ್ ಸ್ಥಾಪಿಸಿದ ಸಂಸ್ಥೆಯಾಗಿದ್ದು ಇದು ಜನಪ್ರಿಯ ಅಜಂತಾ ಮತ್ತು ಒರ್ಪಾಟ್ ಬ್ರಾಂಡ್‌ಗಳ ಅಡಿಯಲ್ಲಿ ಗೋಡೆ ಗಡಿಯಾರಗಳನ್ನು ತಯಾರಿಸುತ್ತದೆ. ಈ ತಿಂಗಳ ಆರಂಭದಲ್ಲಿ 88 ನೇ ವಯಸ್ಸಿನಲ್ಲಿ ನಿಧನರಾದ ಪಟೇಲ್ ಅವರು 1971 ರಲ್ಲಿ 45 ನೇ ವಯಸ್ಸಿನಲ್ಲಿ ಉದ್ಯಮಿಯಾಗುವ ಮೊದಲು ಶಾಲೆಯಲ್ಲಿ ವಿಜ್ಞಾನ ಶಿಕ್ಷಕರಾಗಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸುಮಾರು 800 ಕೋಟಿ ವಹಿವಾಟು ಹೊಂದಿರುವ ಅಜಂತಾ ಗ್ರೂಪ್ ಈಗ ಗೃಹ ಮತ್ತು ವಿದ್ಯುತ್ ಉಪಕರಣಗಳು, ವಿದ್ಯುತ್ ದೀಪಗಳು, ಕ್ಯಾಲ್ಕುಲೇಟರ್‌ಗಳು, ಸೆರಾಮಿಕ್ ಉತ್ಪನ್ನಗಳು ಮತ್ತು ಇ-ಬೈಕ್‌ಗಳನ್ನು ತಯಾರಿಸುತ್ತಿದೆ.

ಇದನ್ನೂ ಓದಿ: ಗುಜರಾತ್‌: ‘ಮೊರ್ಬಿ ಸೇತುವೆ ನವೀಕರಣದ ವೇಳೆ ಹಳೆಯ ತಂತಿ ಬದಲಿಸಿರಲಿಲ್ಲ’

ಮಚ್ಚು ನದಿಯ ಮೇಲಿನ ಬ್ರಿಟೀಷ್ ಕಾಲದ ತೂಗು ಸೇತುವೆಯನ್ನು ‘ಜೂಲ್ತಾ ಪುಲ್’ ಎಂದು ಜನಪ್ರಿಯವಾಗಿ ಕರೆಯಲಾಗುತ್ತಿದ್ದು, ಅದರ ದುರಸ್ತಿಗಾಗಿ ಏಳು ತಿಂಗಳ ಹಿಂದೆ ಮುಚ್ಚಲಾಗಿತ್ತು. ನಂತರ ಅಕ್ಟೋಬರ್ 26 ರಂದು ಗುಜರಾತಿ ಹೊಸ ವರ್ಷದ ದಿನದಂದು ಪುನಃ ತೆರೆಯಲಾಯಿತು.

ಈ ವರ್ಷದ ಮಾರ್ಚ್‌ನಲ್ಲಿ ಮೋರ್ಬಿ ಪುರಸಭೆಯಿಂದ ಒರೆವಾ ಗ್ರೂಪ್‌ಗೆ ನಿರ್ವಹಣೆ ಮತ್ತು ನಿರ್ವಹಣೆಯ ಗುತ್ತಿಗೆಯನ್ನು ನೀಡಲಾಗಿದೆ. ಈ ನಡುವೆ ಸೇತುವೆಯ ಫಿಟ್ನೆಸ್‌ನ ಪ್ರಮಾಣ ಪತ್ರ ನೀಡದೆ ಸೇತುವೆಯನ್ನು ತೆರೆಯಲಾಗಿದೆ ಎಂಬ ಆರೋಪ ಕೇಳಿಬಂದಿದೆ.

ಒವೆರಾ ಗ್ರೂಪ್ ತನ್ನ ವೆಬ್‌ಸೈಟ್‌ನಲ್ಲಿನ ತಾನು 6,000 ಕ್ಕೂ ಹೆಚ್ಚು ಜನರನ್ನು ಉದ್ಯೋಗಕ್ಕೆ ನೇಮಿಸಿಕೊಂಡಿರುವುದಾಗಿ ಹೇಳಿಕೊಂಡಿದೆ ಆದರೆ, ನಿರ್ಮಾಣ ವ್ಯವಹಾರದ ಬಗ್ಗೆ ಯಾವುದೇ ಉಲ್ಲೇಖವಿಲ್ಲ. ಇಷ್ಟೆ ಅಲ್ಲದೆ ಒರೆವಾ ಗ್ರೂಪ್, ಗುಜರಾತಿನ ಕಚ್ ಜಿಲ್ಲೆಯ ಸಮಖಿಯಲಿಯಲ್ಲಿ 200 ಎಕರೆ ಭೂಮಿಯಲ್ಲಿ ಹರಡಿರುವ ಭಾರತದ ಅತಿದೊಡ್ಡ ಉತ್ಪಾದನಾ ಘಟಕಗಳಲ್ಲಿ ಒಂದನ್ನು ನಿರ್ವಹಿಸುತ್ತದೆ.

ಇದನ್ನೂ ಓದಿ: ಮೊರ್ಬಿ ತೂಗುಸೇತುವೆ ದುರಂತ: ಶವ ರಾಜಕೀಯ ಮಾಡಬಾರದೆಂದ ರಾಹುಲ್ ಗಾಂಧಿ

ಈ ಮಧ್ಯೆ ಗುಜರಾತ್ ಪೊಲೀಸರು ಟಿಕೆಟ್‌ ಕೌಂಟರ್‌ನಲ್ಲಿದ್ದ ಇಬ್ಬರು ಗುಮಾಸ್ತರು ಸೇರಿದಂತೆ ಒರೆವಾ ಗ್ರೂಪಿನ ಒಂಬತ್ತು ಜನರನ್ನು ಬಂಧಿಸಿದೆ. ಒರೆವಾ ಗ್ರೂಪಿನ ಇಬ್ಬರು ಮ್ಯಾನೇಜರ್‌ಗಳು, ಇಬ್ಬರು ಗುತ್ತಿಗೆದಾರರು, ಮೂವರು ಭದ್ರತಾ ಸಿಬ್ಬಂದಿ ಮತ್ತು ಇಬ್ಬರು ಟಿಕೆಟ್ ಕೌಂಟರ್‌ನ ಗುಮಾಸ್ತರು ಈ ಬಂಧಿತರಲ್ಲಿ ಇದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...