Homeಮುಖಪುಟಪ್ರಧಾನಿ ಮೋದಿ ಕಾರ್ಯಕ್ರಮದ ವರದಿಗೆ ಬರುವ ಪತ್ರಕರ್ತರಿಗೆ ‘ನಡತೆ ಪ್ರಮಾಣಪತ್ರ’ ಕೇಳಿದ ಸರ್ಕಾರ

ಪ್ರಧಾನಿ ಮೋದಿ ಕಾರ್ಯಕ್ರಮದ ವರದಿಗೆ ಬರುವ ಪತ್ರಕರ್ತರಿಗೆ ‘ನಡತೆ ಪ್ರಮಾಣಪತ್ರ’ ಕೇಳಿದ ಸರ್ಕಾರ

- Advertisement -
- Advertisement -

ಪ್ರಧಾನಿ ಮೋದಿ ಬುಧವಾರದಂದು ಹಿಮಾಚಲ ಪ್ರದೇಶಕ್ಕೆ ಪ್ರವಾಸ ಮಾಡುತ್ತಿದ್ದು, ಅವರ ಭೇಟಿಯನ್ನು ವರದಿ ಮಾಡಲು ಬರುವ ಪತ್ರಕರ್ತರ ಪಾಸ್‌ಗಳಿಗಾಗಿ “ನಡತೆ ಪ್ರಮಾಣಪತ್ರ”ವನ್ನು ಹಾಜರುಪಡಿಸುವಂತೆ ಎಲ್ಲಾ ಪತ್ರಕರ್ತರಿಗೆ ತಿಳಿಸಲಾಗಿದೆ ಎಂದು ಇಂಡಿಯಾ ಟುಡೆ ವರದಿ ಮಾಡಿದೆ. ಕಳೆದ ತಿಂಗಳ 24ರಂದು ಹವಾಮಾನ ವೈಪರೀತ್ಯದ ಕಾರಣಕ್ಕೆ ಹಿಮಾಚಲ ಪ್ರದೇಶದ ಅವರ ಪ್ರವಾಸ ರದ್ದುಗೊಂಡಿತ್ತು.

ಖಾಸಗಿ ಒಡೆತನದ ಮುದ್ರಣ, ಡಿಜಿಟಲ್ ಮತ್ತು ಸುದ್ದಿ ದೂರದರ್ಶನ ಪತ್ರಕರ್ತರು ಮಾತ್ರವಲ್ಲದೆ, ಆಲ್ ಇಂಡಿಯಾ ರೇಡಿಯೋ (AIR) ಮತ್ತು ದೂರದರ್ಶನ ಸೇರಿದಂತೆ ಸರ್ಕಾರಿ ಮಾಧ್ಯಮದ ಪ್ರತಿನಿಧಿಗಳು ಕೂಡಾ “ನಡತೆ ಪ್ರಮಾಣಪತ್ರ”ಗಳನ್ನು ತರಲು ಕೇಳಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ವಿಷಯದ ಕುರಿತು ಸೆಪ್ಟೆಂಬರ್ 29, 2022 ರಂದು ಪೊಲೀಸರು ಅಧಿಕೃತ ಅಧಿಸೂಚನೆಯನ್ನು ಸಹ ಹೊರಡಿಸಿದ್ದಾರೆ.  ಪತ್ರಕರ್ತರಿಗೆ ನೀಡಲಾಗಿರುವ ವಿಚಿತ್ರ ಆದೇಶವು ಭಾರೀ ವಿವಾದಕ್ಕೆ ಎಡೆಮಾಡಿಕೊಟ್ಟಿದೆ.

ಎಲ್ಲಾ ಪತ್ರಿಕಾ ವರದಿಗಾರರು, ಛಾಯಾಗ್ರಾಹಕರು, ವೀಡಿಯೋಗ್ರಾಫರ್‌ಗಳು ಮತ್ತು ದೂರದರ್ಶನ ಮತ್ತು AIR ತಂಡಗಳ ಪಟ್ಟಿಯನ್ನು “ಅವರ ನಡತೆ ಪರಿಶೀಲನೆಯ ಪ್ರಮಾಣಪತ್ರ” ದೊಂದಿಗೆ ಪೂರೈಸಲು ಅಧಿಸೂಚನೆಯು ಜಿಲ್ಲಾ ಸಾರ್ವಜನಿಕ ಸಂಪರ್ಕ ಅಧಿಕಾರಿ (DPRO) ಅವರನ್ನು ಕೇಳಿದೆ.

ಇದನ್ನೂ ಓದಿ: 2019ರಲ್ಲಿ ಉದ್ಘಾಟಿಸಿದ್ದ ‘ಅಹಮದಾಬಾದ್ ಮೆಟ್ರೋ ರೈಲು ಮೊದಲ ಹಂತ’ವನ್ನೇ ಮತ್ತೆ ಉದ್ಘಾಟಿಸಿದ ಮೋದಿ! ವಾಸ್ತವವೇನು?

“ನಡತೆ ಪರಿಶೀಲನೆಯ ಪ್ರಮಾಣಪತ್ರವನ್ನು ಅಕ್ಟೋಬರ್ 1, 2022 ರೊಳಗೆ ಉಪ ಪೊಲೀಸ್ ವರಿಷ್ಠಾಧಿಕಾರಿ, ಸಿಐಡಿ, ಬಿಲಾಸ್‌ಪುರ ಕಚೇರಿಗೆ ನೀಡಬೇಕು. ರ್‍ಯಾಲಿ ಅಥವಾ ಸಭೆಯೊಳಗೆ ಅವರ ಪ್ರವೇಶದ ಕಚೇರಿಯು ನಿರ್ಧರಿಸುತ್ತದೆ” ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಪೊಲೀಸ್‌‌‌‌‌‌ ಅಧಿಸೂಚನೆಗೆ ಪ್ರತಿಕ್ರಿಯಿಸಿದ ಆಮ್ ಆದ್ಮಿ ಪಾರ್ಟಿ ವಕ್ತಾರ ಪಂಕಜ್ ಪಂಡಿತ್, “ಪತ್ರಿಕೋದ್ಯಮದಲ್ಲಿ ತನ್ನ 22 ವರ್ಷಗಳ ವೃತ್ತಿಜೀವನದಲ್ಲಿ, ಇದೀಗ ಮೊದಲ ಬಾರಿಗೆ ಇಂತಹ ವಿಲಕ್ಷಣ ಬೇಡಿಕೆಗೆ ಸಾಕ್ಷಿಯಾಗಿದ್ದೇನೆ” ಎಂದು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.

“ಮೋದಿ ಅವರು ಮೊದಲ ಬಾರಿಗೆ ರಾಜ್ಯಕ್ಕೆ ಭೇಟಿ ನೀಡುತ್ತಿಲ್ಲ. ನಡತೆ ಪ್ರಮಾಣಪತ್ರವನ್ನು ನೀಡುವ ಬೇಡಿಕೆಯು ಅವಮಾನಕರ ಮತ್ತು ಮಾಧ್ಯಮದ ಚಟುವಟಿಕೆಗಳನ್ನು ತಡೆಯುವ ಪ್ರಯತ್ನವಾಗಿದೆ” ಎಂದು ಪಂಕಜ್‌ ಪಂಡಿತ್ ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿ: 3 ಗಂಟೆಗಳ ಮೋದಿ ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ 37 ಲಕ್ಷ ರೂ.ಗಳನ್ನು ಖರ್ಚು ಮಾಡಿದ್ದ ರಾಜ್ಯದ ಬೊಮ್ಮಾಯಿ ಸರ್ಕಾರ!

ಹಿಮಾಚಲ ಕಾಂಗ್ರೆಸ್ ಸಮಿತಿಯ ಮುಖ್ಯ ವಕ್ತಾರ ನರೇಶ್ ಚೌಹಾಣ್ ಕೂಡ ಸರ್ಕಾರದ ಬೇಡಿಕೆಯನ್ನು ಖಂಡಿಸಿದ್ದು, ಈ ನಡೆಯು ಮಾಧ್ಯಮ ಸ್ವಾತಂತ್ರ್ಯದ ವಿರುದ್ಧವಾಗಿದೆ ಎಂದು ಹೇಳಿದ್ದಾರೆ.

“ಭದ್ರತಾ ಪಾಸ್‌ ಬೇಕೆಂದರೆ ನಡತೆ ಪ್ರಮಾಣಪತ್ರವು ಕಡ್ಡಾಯವಾಗಿದೆ. ಪತ್ರಕರ್ತರ ಡಿಜಿಟಲ್ ಐಡಿ ಕಾರ್ಡ್‌ಗಳ ಮೇಲೆ ಅಧಿಕೃತ ಮುದ್ರೆ ಹಾಕಬೇಕಿದೆ. ಈ ಔಪಚಾರಿಕತೆಯು ಎಲ್ಲರಿಗೂ ಕಡ್ಡಾಯವಾಗಿದೆ. ಎಸ್ಪಿ ಮತ್ತು ಸಿಐಡಿ ಇಲಾಖೆಗಳು ನಡತೆ ಪರಿಶೀಲನೆಯ ಪ್ರಮಾಣಪತ್ರಗಳನ್ನು ಕೇಳುತ್ತಿವೆ” ಎಂದು ಬಿಲಾಸ್‌‌ಪುರ್‌ ಡಿಪಿಆರ್‌‌ಒ ಕುಲದೀಪ್ ಗುಲೇರಿಯಾ ಹೇಳಿದ್ದಾರೆ.

ಪತ್ರಕರ್ತರಿಗೆ ನಡತೆ ದೃಢೀಕರಣದ ಪ್ರಮಾಣಪತ್ರಗಳನ್ನು ನೀಡುವಂತೆ ಕೇಳಿರುವ ಸರ್ಕಾರವು, ರ್‍ಯಾಲಿಯಲ್ಲಿ ಭಾಗವಹಿಸಲು ಬರುವ ಸಾವಿರಾರು ಜನರಿಗೆ ಯಾವುದೇ ಗುರುತಿನ ಪುರಾವೆಗಳನ್ನು ಕೇಳುತ್ತಿಲ್ಲ ಎಂದು ಪರ್ತಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಸರ್ಕಾರದ ಪ್ರಕಾರ, ನಡತೆ ಪ್ರಮಾಣಪತ್ರ ಎಂದರೆ, ಆಡಳಿತ ಸರ್ಕಾರದ ಬೂಟು ನೆಕ್ಕುವುದಾಗಿದೆ’’ ಎಂದು ಹೇಳಿದ್ದಾರೆ.

ಇದನ್ನೂ ಓದಿ: ವನ್ಯಜೀವಿ ರಕ್ಷಣೆ ವಿಚಾರದಲ್ಲಿ ಮೋದಿ ಮಾಡುತ್ತಿರುವುದೇನು?- ಇದು ಚೀತಾ ಕಥೆಯಷ್ಟೇ ಅಲ್ಲ!

ಬುಧವಾರ ಪ್ರಧಾನಿ ಮೋದಿ ಇಡೀ ದಿನ ಹಿಮಾಚಲ ಪ್ರದೇಶದಲ್ಲಿ ಇರಲಿದ್ದಾರೆ. ಅವರು ರಾಜ್ಯದ ಬಿಲಾಸ್‌ಪುರದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ, ಜೊತೆಗೆ ಏಮ್ಸ್‌ನ ಕ್ಯಾಂಪಸ್ ಅನ್ನು ಉದ್ಘಾಟಿಸಲಿದ್ದಾರೆ ಹಾಗೂ ಕುಲು ದಸರಾ ಆಚರಣೆಯಲ್ಲೂ ಭಾಗವಹಿಸಲಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...