Homeಮುಖಪುಟಪ್ರಧಾನಿ ಮೋದಿ ಕಾರ್ಯಕ್ರಮದ ವರದಿಗೆ ಬರುವ ಪತ್ರಕರ್ತರಿಗೆ ‘ನಡತೆ ಪ್ರಮಾಣಪತ್ರ’ ಕೇಳಿದ ಸರ್ಕಾರ

ಪ್ರಧಾನಿ ಮೋದಿ ಕಾರ್ಯಕ್ರಮದ ವರದಿಗೆ ಬರುವ ಪತ್ರಕರ್ತರಿಗೆ ‘ನಡತೆ ಪ್ರಮಾಣಪತ್ರ’ ಕೇಳಿದ ಸರ್ಕಾರ

- Advertisement -
- Advertisement -

ಪ್ರಧಾನಿ ಮೋದಿ ಬುಧವಾರದಂದು ಹಿಮಾಚಲ ಪ್ರದೇಶಕ್ಕೆ ಪ್ರವಾಸ ಮಾಡುತ್ತಿದ್ದು, ಅವರ ಭೇಟಿಯನ್ನು ವರದಿ ಮಾಡಲು ಬರುವ ಪತ್ರಕರ್ತರ ಪಾಸ್‌ಗಳಿಗಾಗಿ “ನಡತೆ ಪ್ರಮಾಣಪತ್ರ”ವನ್ನು ಹಾಜರುಪಡಿಸುವಂತೆ ಎಲ್ಲಾ ಪತ್ರಕರ್ತರಿಗೆ ತಿಳಿಸಲಾಗಿದೆ ಎಂದು ಇಂಡಿಯಾ ಟುಡೆ ವರದಿ ಮಾಡಿದೆ. ಕಳೆದ ತಿಂಗಳ 24ರಂದು ಹವಾಮಾನ ವೈಪರೀತ್ಯದ ಕಾರಣಕ್ಕೆ ಹಿಮಾಚಲ ಪ್ರದೇಶದ ಅವರ ಪ್ರವಾಸ ರದ್ದುಗೊಂಡಿತ್ತು.

ಖಾಸಗಿ ಒಡೆತನದ ಮುದ್ರಣ, ಡಿಜಿಟಲ್ ಮತ್ತು ಸುದ್ದಿ ದೂರದರ್ಶನ ಪತ್ರಕರ್ತರು ಮಾತ್ರವಲ್ಲದೆ, ಆಲ್ ಇಂಡಿಯಾ ರೇಡಿಯೋ (AIR) ಮತ್ತು ದೂರದರ್ಶನ ಸೇರಿದಂತೆ ಸರ್ಕಾರಿ ಮಾಧ್ಯಮದ ಪ್ರತಿನಿಧಿಗಳು ಕೂಡಾ “ನಡತೆ ಪ್ರಮಾಣಪತ್ರ”ಗಳನ್ನು ತರಲು ಕೇಳಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ವಿಷಯದ ಕುರಿತು ಸೆಪ್ಟೆಂಬರ್ 29, 2022 ರಂದು ಪೊಲೀಸರು ಅಧಿಕೃತ ಅಧಿಸೂಚನೆಯನ್ನು ಸಹ ಹೊರಡಿಸಿದ್ದಾರೆ.  ಪತ್ರಕರ್ತರಿಗೆ ನೀಡಲಾಗಿರುವ ವಿಚಿತ್ರ ಆದೇಶವು ಭಾರೀ ವಿವಾದಕ್ಕೆ ಎಡೆಮಾಡಿಕೊಟ್ಟಿದೆ.

ಎಲ್ಲಾ ಪತ್ರಿಕಾ ವರದಿಗಾರರು, ಛಾಯಾಗ್ರಾಹಕರು, ವೀಡಿಯೋಗ್ರಾಫರ್‌ಗಳು ಮತ್ತು ದೂರದರ್ಶನ ಮತ್ತು AIR ತಂಡಗಳ ಪಟ್ಟಿಯನ್ನು “ಅವರ ನಡತೆ ಪರಿಶೀಲನೆಯ ಪ್ರಮಾಣಪತ್ರ” ದೊಂದಿಗೆ ಪೂರೈಸಲು ಅಧಿಸೂಚನೆಯು ಜಿಲ್ಲಾ ಸಾರ್ವಜನಿಕ ಸಂಪರ್ಕ ಅಧಿಕಾರಿ (DPRO) ಅವರನ್ನು ಕೇಳಿದೆ.

ಇದನ್ನೂ ಓದಿ: 2019ರಲ್ಲಿ ಉದ್ಘಾಟಿಸಿದ್ದ ‘ಅಹಮದಾಬಾದ್ ಮೆಟ್ರೋ ರೈಲು ಮೊದಲ ಹಂತ’ವನ್ನೇ ಮತ್ತೆ ಉದ್ಘಾಟಿಸಿದ ಮೋದಿ! ವಾಸ್ತವವೇನು?

“ನಡತೆ ಪರಿಶೀಲನೆಯ ಪ್ರಮಾಣಪತ್ರವನ್ನು ಅಕ್ಟೋಬರ್ 1, 2022 ರೊಳಗೆ ಉಪ ಪೊಲೀಸ್ ವರಿಷ್ಠಾಧಿಕಾರಿ, ಸಿಐಡಿ, ಬಿಲಾಸ್‌ಪುರ ಕಚೇರಿಗೆ ನೀಡಬೇಕು. ರ್‍ಯಾಲಿ ಅಥವಾ ಸಭೆಯೊಳಗೆ ಅವರ ಪ್ರವೇಶದ ಕಚೇರಿಯು ನಿರ್ಧರಿಸುತ್ತದೆ” ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಪೊಲೀಸ್‌‌‌‌‌‌ ಅಧಿಸೂಚನೆಗೆ ಪ್ರತಿಕ್ರಿಯಿಸಿದ ಆಮ್ ಆದ್ಮಿ ಪಾರ್ಟಿ ವಕ್ತಾರ ಪಂಕಜ್ ಪಂಡಿತ್, “ಪತ್ರಿಕೋದ್ಯಮದಲ್ಲಿ ತನ್ನ 22 ವರ್ಷಗಳ ವೃತ್ತಿಜೀವನದಲ್ಲಿ, ಇದೀಗ ಮೊದಲ ಬಾರಿಗೆ ಇಂತಹ ವಿಲಕ್ಷಣ ಬೇಡಿಕೆಗೆ ಸಾಕ್ಷಿಯಾಗಿದ್ದೇನೆ” ಎಂದು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.

“ಮೋದಿ ಅವರು ಮೊದಲ ಬಾರಿಗೆ ರಾಜ್ಯಕ್ಕೆ ಭೇಟಿ ನೀಡುತ್ತಿಲ್ಲ. ನಡತೆ ಪ್ರಮಾಣಪತ್ರವನ್ನು ನೀಡುವ ಬೇಡಿಕೆಯು ಅವಮಾನಕರ ಮತ್ತು ಮಾಧ್ಯಮದ ಚಟುವಟಿಕೆಗಳನ್ನು ತಡೆಯುವ ಪ್ರಯತ್ನವಾಗಿದೆ” ಎಂದು ಪಂಕಜ್‌ ಪಂಡಿತ್ ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿ: 3 ಗಂಟೆಗಳ ಮೋದಿ ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ 37 ಲಕ್ಷ ರೂ.ಗಳನ್ನು ಖರ್ಚು ಮಾಡಿದ್ದ ರಾಜ್ಯದ ಬೊಮ್ಮಾಯಿ ಸರ್ಕಾರ!

ಹಿಮಾಚಲ ಕಾಂಗ್ರೆಸ್ ಸಮಿತಿಯ ಮುಖ್ಯ ವಕ್ತಾರ ನರೇಶ್ ಚೌಹಾಣ್ ಕೂಡ ಸರ್ಕಾರದ ಬೇಡಿಕೆಯನ್ನು ಖಂಡಿಸಿದ್ದು, ಈ ನಡೆಯು ಮಾಧ್ಯಮ ಸ್ವಾತಂತ್ರ್ಯದ ವಿರುದ್ಧವಾಗಿದೆ ಎಂದು ಹೇಳಿದ್ದಾರೆ.

“ಭದ್ರತಾ ಪಾಸ್‌ ಬೇಕೆಂದರೆ ನಡತೆ ಪ್ರಮಾಣಪತ್ರವು ಕಡ್ಡಾಯವಾಗಿದೆ. ಪತ್ರಕರ್ತರ ಡಿಜಿಟಲ್ ಐಡಿ ಕಾರ್ಡ್‌ಗಳ ಮೇಲೆ ಅಧಿಕೃತ ಮುದ್ರೆ ಹಾಕಬೇಕಿದೆ. ಈ ಔಪಚಾರಿಕತೆಯು ಎಲ್ಲರಿಗೂ ಕಡ್ಡಾಯವಾಗಿದೆ. ಎಸ್ಪಿ ಮತ್ತು ಸಿಐಡಿ ಇಲಾಖೆಗಳು ನಡತೆ ಪರಿಶೀಲನೆಯ ಪ್ರಮಾಣಪತ್ರಗಳನ್ನು ಕೇಳುತ್ತಿವೆ” ಎಂದು ಬಿಲಾಸ್‌‌ಪುರ್‌ ಡಿಪಿಆರ್‌‌ಒ ಕುಲದೀಪ್ ಗುಲೇರಿಯಾ ಹೇಳಿದ್ದಾರೆ.

ಪತ್ರಕರ್ತರಿಗೆ ನಡತೆ ದೃಢೀಕರಣದ ಪ್ರಮಾಣಪತ್ರಗಳನ್ನು ನೀಡುವಂತೆ ಕೇಳಿರುವ ಸರ್ಕಾರವು, ರ್‍ಯಾಲಿಯಲ್ಲಿ ಭಾಗವಹಿಸಲು ಬರುವ ಸಾವಿರಾರು ಜನರಿಗೆ ಯಾವುದೇ ಗುರುತಿನ ಪುರಾವೆಗಳನ್ನು ಕೇಳುತ್ತಿಲ್ಲ ಎಂದು ಪರ್ತಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಸರ್ಕಾರದ ಪ್ರಕಾರ, ನಡತೆ ಪ್ರಮಾಣಪತ್ರ ಎಂದರೆ, ಆಡಳಿತ ಸರ್ಕಾರದ ಬೂಟು ನೆಕ್ಕುವುದಾಗಿದೆ’’ ಎಂದು ಹೇಳಿದ್ದಾರೆ.

ಇದನ್ನೂ ಓದಿ: ವನ್ಯಜೀವಿ ರಕ್ಷಣೆ ವಿಚಾರದಲ್ಲಿ ಮೋದಿ ಮಾಡುತ್ತಿರುವುದೇನು?- ಇದು ಚೀತಾ ಕಥೆಯಷ್ಟೇ ಅಲ್ಲ!

ಬುಧವಾರ ಪ್ರಧಾನಿ ಮೋದಿ ಇಡೀ ದಿನ ಹಿಮಾಚಲ ಪ್ರದೇಶದಲ್ಲಿ ಇರಲಿದ್ದಾರೆ. ಅವರು ರಾಜ್ಯದ ಬಿಲಾಸ್‌ಪುರದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ, ಜೊತೆಗೆ ಏಮ್ಸ್‌ನ ಕ್ಯಾಂಪಸ್ ಅನ್ನು ಉದ್ಘಾಟಿಸಲಿದ್ದಾರೆ ಹಾಗೂ ಕುಲು ದಸರಾ ಆಚರಣೆಯಲ್ಲೂ ಭಾಗವಹಿಸಲಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...