Homeಮುಖಪುಟಪ್ರಧಾನಿ ಮೋದಿ ಕಾರ್ಯಕ್ರಮದ ವರದಿಗೆ ಬರುವ ಪತ್ರಕರ್ತರಿಗೆ ‘ನಡತೆ ಪ್ರಮಾಣಪತ್ರ’ ಕೇಳಿದ ಸರ್ಕಾರ

ಪ್ರಧಾನಿ ಮೋದಿ ಕಾರ್ಯಕ್ರಮದ ವರದಿಗೆ ಬರುವ ಪತ್ರಕರ್ತರಿಗೆ ‘ನಡತೆ ಪ್ರಮಾಣಪತ್ರ’ ಕೇಳಿದ ಸರ್ಕಾರ

- Advertisement -
- Advertisement -

ಪ್ರಧಾನಿ ಮೋದಿ ಬುಧವಾರದಂದು ಹಿಮಾಚಲ ಪ್ರದೇಶಕ್ಕೆ ಪ್ರವಾಸ ಮಾಡುತ್ತಿದ್ದು, ಅವರ ಭೇಟಿಯನ್ನು ವರದಿ ಮಾಡಲು ಬರುವ ಪತ್ರಕರ್ತರ ಪಾಸ್‌ಗಳಿಗಾಗಿ “ನಡತೆ ಪ್ರಮಾಣಪತ್ರ”ವನ್ನು ಹಾಜರುಪಡಿಸುವಂತೆ ಎಲ್ಲಾ ಪತ್ರಕರ್ತರಿಗೆ ತಿಳಿಸಲಾಗಿದೆ ಎಂದು ಇಂಡಿಯಾ ಟುಡೆ ವರದಿ ಮಾಡಿದೆ. ಕಳೆದ ತಿಂಗಳ 24ರಂದು ಹವಾಮಾನ ವೈಪರೀತ್ಯದ ಕಾರಣಕ್ಕೆ ಹಿಮಾಚಲ ಪ್ರದೇಶದ ಅವರ ಪ್ರವಾಸ ರದ್ದುಗೊಂಡಿತ್ತು.

ಖಾಸಗಿ ಒಡೆತನದ ಮುದ್ರಣ, ಡಿಜಿಟಲ್ ಮತ್ತು ಸುದ್ದಿ ದೂರದರ್ಶನ ಪತ್ರಕರ್ತರು ಮಾತ್ರವಲ್ಲದೆ, ಆಲ್ ಇಂಡಿಯಾ ರೇಡಿಯೋ (AIR) ಮತ್ತು ದೂರದರ್ಶನ ಸೇರಿದಂತೆ ಸರ್ಕಾರಿ ಮಾಧ್ಯಮದ ಪ್ರತಿನಿಧಿಗಳು ಕೂಡಾ “ನಡತೆ ಪ್ರಮಾಣಪತ್ರ”ಗಳನ್ನು ತರಲು ಕೇಳಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ವಿಷಯದ ಕುರಿತು ಸೆಪ್ಟೆಂಬರ್ 29, 2022 ರಂದು ಪೊಲೀಸರು ಅಧಿಕೃತ ಅಧಿಸೂಚನೆಯನ್ನು ಸಹ ಹೊರಡಿಸಿದ್ದಾರೆ.  ಪತ್ರಕರ್ತರಿಗೆ ನೀಡಲಾಗಿರುವ ವಿಚಿತ್ರ ಆದೇಶವು ಭಾರೀ ವಿವಾದಕ್ಕೆ ಎಡೆಮಾಡಿಕೊಟ್ಟಿದೆ.

ಎಲ್ಲಾ ಪತ್ರಿಕಾ ವರದಿಗಾರರು, ಛಾಯಾಗ್ರಾಹಕರು, ವೀಡಿಯೋಗ್ರಾಫರ್‌ಗಳು ಮತ್ತು ದೂರದರ್ಶನ ಮತ್ತು AIR ತಂಡಗಳ ಪಟ್ಟಿಯನ್ನು “ಅವರ ನಡತೆ ಪರಿಶೀಲನೆಯ ಪ್ರಮಾಣಪತ್ರ” ದೊಂದಿಗೆ ಪೂರೈಸಲು ಅಧಿಸೂಚನೆಯು ಜಿಲ್ಲಾ ಸಾರ್ವಜನಿಕ ಸಂಪರ್ಕ ಅಧಿಕಾರಿ (DPRO) ಅವರನ್ನು ಕೇಳಿದೆ.

ಇದನ್ನೂ ಓದಿ: 2019ರಲ್ಲಿ ಉದ್ಘಾಟಿಸಿದ್ದ ‘ಅಹಮದಾಬಾದ್ ಮೆಟ್ರೋ ರೈಲು ಮೊದಲ ಹಂತ’ವನ್ನೇ ಮತ್ತೆ ಉದ್ಘಾಟಿಸಿದ ಮೋದಿ! ವಾಸ್ತವವೇನು?

“ನಡತೆ ಪರಿಶೀಲನೆಯ ಪ್ರಮಾಣಪತ್ರವನ್ನು ಅಕ್ಟೋಬರ್ 1, 2022 ರೊಳಗೆ ಉಪ ಪೊಲೀಸ್ ವರಿಷ್ಠಾಧಿಕಾರಿ, ಸಿಐಡಿ, ಬಿಲಾಸ್‌ಪುರ ಕಚೇರಿಗೆ ನೀಡಬೇಕು. ರ್‍ಯಾಲಿ ಅಥವಾ ಸಭೆಯೊಳಗೆ ಅವರ ಪ್ರವೇಶದ ಕಚೇರಿಯು ನಿರ್ಧರಿಸುತ್ತದೆ” ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಪೊಲೀಸ್‌‌‌‌‌‌ ಅಧಿಸೂಚನೆಗೆ ಪ್ರತಿಕ್ರಿಯಿಸಿದ ಆಮ್ ಆದ್ಮಿ ಪಾರ್ಟಿ ವಕ್ತಾರ ಪಂಕಜ್ ಪಂಡಿತ್, “ಪತ್ರಿಕೋದ್ಯಮದಲ್ಲಿ ತನ್ನ 22 ವರ್ಷಗಳ ವೃತ್ತಿಜೀವನದಲ್ಲಿ, ಇದೀಗ ಮೊದಲ ಬಾರಿಗೆ ಇಂತಹ ವಿಲಕ್ಷಣ ಬೇಡಿಕೆಗೆ ಸಾಕ್ಷಿಯಾಗಿದ್ದೇನೆ” ಎಂದು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.

“ಮೋದಿ ಅವರು ಮೊದಲ ಬಾರಿಗೆ ರಾಜ್ಯಕ್ಕೆ ಭೇಟಿ ನೀಡುತ್ತಿಲ್ಲ. ನಡತೆ ಪ್ರಮಾಣಪತ್ರವನ್ನು ನೀಡುವ ಬೇಡಿಕೆಯು ಅವಮಾನಕರ ಮತ್ತು ಮಾಧ್ಯಮದ ಚಟುವಟಿಕೆಗಳನ್ನು ತಡೆಯುವ ಪ್ರಯತ್ನವಾಗಿದೆ” ಎಂದು ಪಂಕಜ್‌ ಪಂಡಿತ್ ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿ: 3 ಗಂಟೆಗಳ ಮೋದಿ ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ 37 ಲಕ್ಷ ರೂ.ಗಳನ್ನು ಖರ್ಚು ಮಾಡಿದ್ದ ರಾಜ್ಯದ ಬೊಮ್ಮಾಯಿ ಸರ್ಕಾರ!

ಹಿಮಾಚಲ ಕಾಂಗ್ರೆಸ್ ಸಮಿತಿಯ ಮುಖ್ಯ ವಕ್ತಾರ ನರೇಶ್ ಚೌಹಾಣ್ ಕೂಡ ಸರ್ಕಾರದ ಬೇಡಿಕೆಯನ್ನು ಖಂಡಿಸಿದ್ದು, ಈ ನಡೆಯು ಮಾಧ್ಯಮ ಸ್ವಾತಂತ್ರ್ಯದ ವಿರುದ್ಧವಾಗಿದೆ ಎಂದು ಹೇಳಿದ್ದಾರೆ.

“ಭದ್ರತಾ ಪಾಸ್‌ ಬೇಕೆಂದರೆ ನಡತೆ ಪ್ರಮಾಣಪತ್ರವು ಕಡ್ಡಾಯವಾಗಿದೆ. ಪತ್ರಕರ್ತರ ಡಿಜಿಟಲ್ ಐಡಿ ಕಾರ್ಡ್‌ಗಳ ಮೇಲೆ ಅಧಿಕೃತ ಮುದ್ರೆ ಹಾಕಬೇಕಿದೆ. ಈ ಔಪಚಾರಿಕತೆಯು ಎಲ್ಲರಿಗೂ ಕಡ್ಡಾಯವಾಗಿದೆ. ಎಸ್ಪಿ ಮತ್ತು ಸಿಐಡಿ ಇಲಾಖೆಗಳು ನಡತೆ ಪರಿಶೀಲನೆಯ ಪ್ರಮಾಣಪತ್ರಗಳನ್ನು ಕೇಳುತ್ತಿವೆ” ಎಂದು ಬಿಲಾಸ್‌‌ಪುರ್‌ ಡಿಪಿಆರ್‌‌ಒ ಕುಲದೀಪ್ ಗುಲೇರಿಯಾ ಹೇಳಿದ್ದಾರೆ.

ಪತ್ರಕರ್ತರಿಗೆ ನಡತೆ ದೃಢೀಕರಣದ ಪ್ರಮಾಣಪತ್ರಗಳನ್ನು ನೀಡುವಂತೆ ಕೇಳಿರುವ ಸರ್ಕಾರವು, ರ್‍ಯಾಲಿಯಲ್ಲಿ ಭಾಗವಹಿಸಲು ಬರುವ ಸಾವಿರಾರು ಜನರಿಗೆ ಯಾವುದೇ ಗುರುತಿನ ಪುರಾವೆಗಳನ್ನು ಕೇಳುತ್ತಿಲ್ಲ ಎಂದು ಪರ್ತಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಸರ್ಕಾರದ ಪ್ರಕಾರ, ನಡತೆ ಪ್ರಮಾಣಪತ್ರ ಎಂದರೆ, ಆಡಳಿತ ಸರ್ಕಾರದ ಬೂಟು ನೆಕ್ಕುವುದಾಗಿದೆ’’ ಎಂದು ಹೇಳಿದ್ದಾರೆ.

ಇದನ್ನೂ ಓದಿ: ವನ್ಯಜೀವಿ ರಕ್ಷಣೆ ವಿಚಾರದಲ್ಲಿ ಮೋದಿ ಮಾಡುತ್ತಿರುವುದೇನು?- ಇದು ಚೀತಾ ಕಥೆಯಷ್ಟೇ ಅಲ್ಲ!

ಬುಧವಾರ ಪ್ರಧಾನಿ ಮೋದಿ ಇಡೀ ದಿನ ಹಿಮಾಚಲ ಪ್ರದೇಶದಲ್ಲಿ ಇರಲಿದ್ದಾರೆ. ಅವರು ರಾಜ್ಯದ ಬಿಲಾಸ್‌ಪುರದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ, ಜೊತೆಗೆ ಏಮ್ಸ್‌ನ ಕ್ಯಾಂಪಸ್ ಅನ್ನು ಉದ್ಘಾಟಿಸಲಿದ್ದಾರೆ ಹಾಗೂ ಕುಲು ದಸರಾ ಆಚರಣೆಯಲ್ಲೂ ಭಾಗವಹಿಸಲಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...