Homeಮುಖಪುಟಪ್ರಧಾನಿ ಮೋದಿ ಕಾರ್ಯಕ್ರಮದ ವರದಿಗೆ ಬರುವ ಪತ್ರಕರ್ತರಿಗೆ ‘ನಡತೆ ಪ್ರಮಾಣಪತ್ರ’ ಕೇಳಿದ ಸರ್ಕಾರ

ಪ್ರಧಾನಿ ಮೋದಿ ಕಾರ್ಯಕ್ರಮದ ವರದಿಗೆ ಬರುವ ಪತ್ರಕರ್ತರಿಗೆ ‘ನಡತೆ ಪ್ರಮಾಣಪತ್ರ’ ಕೇಳಿದ ಸರ್ಕಾರ

- Advertisement -
- Advertisement -

ಪ್ರಧಾನಿ ಮೋದಿ ಬುಧವಾರದಂದು ಹಿಮಾಚಲ ಪ್ರದೇಶಕ್ಕೆ ಪ್ರವಾಸ ಮಾಡುತ್ತಿದ್ದು, ಅವರ ಭೇಟಿಯನ್ನು ವರದಿ ಮಾಡಲು ಬರುವ ಪತ್ರಕರ್ತರ ಪಾಸ್‌ಗಳಿಗಾಗಿ “ನಡತೆ ಪ್ರಮಾಣಪತ್ರ”ವನ್ನು ಹಾಜರುಪಡಿಸುವಂತೆ ಎಲ್ಲಾ ಪತ್ರಕರ್ತರಿಗೆ ತಿಳಿಸಲಾಗಿದೆ ಎಂದು ಇಂಡಿಯಾ ಟುಡೆ ವರದಿ ಮಾಡಿದೆ. ಕಳೆದ ತಿಂಗಳ 24ರಂದು ಹವಾಮಾನ ವೈಪರೀತ್ಯದ ಕಾರಣಕ್ಕೆ ಹಿಮಾಚಲ ಪ್ರದೇಶದ ಅವರ ಪ್ರವಾಸ ರದ್ದುಗೊಂಡಿತ್ತು.

ಖಾಸಗಿ ಒಡೆತನದ ಮುದ್ರಣ, ಡಿಜಿಟಲ್ ಮತ್ತು ಸುದ್ದಿ ದೂರದರ್ಶನ ಪತ್ರಕರ್ತರು ಮಾತ್ರವಲ್ಲದೆ, ಆಲ್ ಇಂಡಿಯಾ ರೇಡಿಯೋ (AIR) ಮತ್ತು ದೂರದರ್ಶನ ಸೇರಿದಂತೆ ಸರ್ಕಾರಿ ಮಾಧ್ಯಮದ ಪ್ರತಿನಿಧಿಗಳು ಕೂಡಾ “ನಡತೆ ಪ್ರಮಾಣಪತ್ರ”ಗಳನ್ನು ತರಲು ಕೇಳಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ವಿಷಯದ ಕುರಿತು ಸೆಪ್ಟೆಂಬರ್ 29, 2022 ರಂದು ಪೊಲೀಸರು ಅಧಿಕೃತ ಅಧಿಸೂಚನೆಯನ್ನು ಸಹ ಹೊರಡಿಸಿದ್ದಾರೆ.  ಪತ್ರಕರ್ತರಿಗೆ ನೀಡಲಾಗಿರುವ ವಿಚಿತ್ರ ಆದೇಶವು ಭಾರೀ ವಿವಾದಕ್ಕೆ ಎಡೆಮಾಡಿಕೊಟ್ಟಿದೆ.

ಎಲ್ಲಾ ಪತ್ರಿಕಾ ವರದಿಗಾರರು, ಛಾಯಾಗ್ರಾಹಕರು, ವೀಡಿಯೋಗ್ರಾಫರ್‌ಗಳು ಮತ್ತು ದೂರದರ್ಶನ ಮತ್ತು AIR ತಂಡಗಳ ಪಟ್ಟಿಯನ್ನು “ಅವರ ನಡತೆ ಪರಿಶೀಲನೆಯ ಪ್ರಮಾಣಪತ್ರ” ದೊಂದಿಗೆ ಪೂರೈಸಲು ಅಧಿಸೂಚನೆಯು ಜಿಲ್ಲಾ ಸಾರ್ವಜನಿಕ ಸಂಪರ್ಕ ಅಧಿಕಾರಿ (DPRO) ಅವರನ್ನು ಕೇಳಿದೆ.

ಇದನ್ನೂ ಓದಿ: 2019ರಲ್ಲಿ ಉದ್ಘಾಟಿಸಿದ್ದ ‘ಅಹಮದಾಬಾದ್ ಮೆಟ್ರೋ ರೈಲು ಮೊದಲ ಹಂತ’ವನ್ನೇ ಮತ್ತೆ ಉದ್ಘಾಟಿಸಿದ ಮೋದಿ! ವಾಸ್ತವವೇನು?

“ನಡತೆ ಪರಿಶೀಲನೆಯ ಪ್ರಮಾಣಪತ್ರವನ್ನು ಅಕ್ಟೋಬರ್ 1, 2022 ರೊಳಗೆ ಉಪ ಪೊಲೀಸ್ ವರಿಷ್ಠಾಧಿಕಾರಿ, ಸಿಐಡಿ, ಬಿಲಾಸ್‌ಪುರ ಕಚೇರಿಗೆ ನೀಡಬೇಕು. ರ್‍ಯಾಲಿ ಅಥವಾ ಸಭೆಯೊಳಗೆ ಅವರ ಪ್ರವೇಶದ ಕಚೇರಿಯು ನಿರ್ಧರಿಸುತ್ತದೆ” ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಪೊಲೀಸ್‌‌‌‌‌‌ ಅಧಿಸೂಚನೆಗೆ ಪ್ರತಿಕ್ರಿಯಿಸಿದ ಆಮ್ ಆದ್ಮಿ ಪಾರ್ಟಿ ವಕ್ತಾರ ಪಂಕಜ್ ಪಂಡಿತ್, “ಪತ್ರಿಕೋದ್ಯಮದಲ್ಲಿ ತನ್ನ 22 ವರ್ಷಗಳ ವೃತ್ತಿಜೀವನದಲ್ಲಿ, ಇದೀಗ ಮೊದಲ ಬಾರಿಗೆ ಇಂತಹ ವಿಲಕ್ಷಣ ಬೇಡಿಕೆಗೆ ಸಾಕ್ಷಿಯಾಗಿದ್ದೇನೆ” ಎಂದು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.

“ಮೋದಿ ಅವರು ಮೊದಲ ಬಾರಿಗೆ ರಾಜ್ಯಕ್ಕೆ ಭೇಟಿ ನೀಡುತ್ತಿಲ್ಲ. ನಡತೆ ಪ್ರಮಾಣಪತ್ರವನ್ನು ನೀಡುವ ಬೇಡಿಕೆಯು ಅವಮಾನಕರ ಮತ್ತು ಮಾಧ್ಯಮದ ಚಟುವಟಿಕೆಗಳನ್ನು ತಡೆಯುವ ಪ್ರಯತ್ನವಾಗಿದೆ” ಎಂದು ಪಂಕಜ್‌ ಪಂಡಿತ್ ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿ: 3 ಗಂಟೆಗಳ ಮೋದಿ ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ 37 ಲಕ್ಷ ರೂ.ಗಳನ್ನು ಖರ್ಚು ಮಾಡಿದ್ದ ರಾಜ್ಯದ ಬೊಮ್ಮಾಯಿ ಸರ್ಕಾರ!

ಹಿಮಾಚಲ ಕಾಂಗ್ರೆಸ್ ಸಮಿತಿಯ ಮುಖ್ಯ ವಕ್ತಾರ ನರೇಶ್ ಚೌಹಾಣ್ ಕೂಡ ಸರ್ಕಾರದ ಬೇಡಿಕೆಯನ್ನು ಖಂಡಿಸಿದ್ದು, ಈ ನಡೆಯು ಮಾಧ್ಯಮ ಸ್ವಾತಂತ್ರ್ಯದ ವಿರುದ್ಧವಾಗಿದೆ ಎಂದು ಹೇಳಿದ್ದಾರೆ.

“ಭದ್ರತಾ ಪಾಸ್‌ ಬೇಕೆಂದರೆ ನಡತೆ ಪ್ರಮಾಣಪತ್ರವು ಕಡ್ಡಾಯವಾಗಿದೆ. ಪತ್ರಕರ್ತರ ಡಿಜಿಟಲ್ ಐಡಿ ಕಾರ್ಡ್‌ಗಳ ಮೇಲೆ ಅಧಿಕೃತ ಮುದ್ರೆ ಹಾಕಬೇಕಿದೆ. ಈ ಔಪಚಾರಿಕತೆಯು ಎಲ್ಲರಿಗೂ ಕಡ್ಡಾಯವಾಗಿದೆ. ಎಸ್ಪಿ ಮತ್ತು ಸಿಐಡಿ ಇಲಾಖೆಗಳು ನಡತೆ ಪರಿಶೀಲನೆಯ ಪ್ರಮಾಣಪತ್ರಗಳನ್ನು ಕೇಳುತ್ತಿವೆ” ಎಂದು ಬಿಲಾಸ್‌‌ಪುರ್‌ ಡಿಪಿಆರ್‌‌ಒ ಕುಲದೀಪ್ ಗುಲೇರಿಯಾ ಹೇಳಿದ್ದಾರೆ.

ಪತ್ರಕರ್ತರಿಗೆ ನಡತೆ ದೃಢೀಕರಣದ ಪ್ರಮಾಣಪತ್ರಗಳನ್ನು ನೀಡುವಂತೆ ಕೇಳಿರುವ ಸರ್ಕಾರವು, ರ್‍ಯಾಲಿಯಲ್ಲಿ ಭಾಗವಹಿಸಲು ಬರುವ ಸಾವಿರಾರು ಜನರಿಗೆ ಯಾವುದೇ ಗುರುತಿನ ಪುರಾವೆಗಳನ್ನು ಕೇಳುತ್ತಿಲ್ಲ ಎಂದು ಪರ್ತಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಸರ್ಕಾರದ ಪ್ರಕಾರ, ನಡತೆ ಪ್ರಮಾಣಪತ್ರ ಎಂದರೆ, ಆಡಳಿತ ಸರ್ಕಾರದ ಬೂಟು ನೆಕ್ಕುವುದಾಗಿದೆ’’ ಎಂದು ಹೇಳಿದ್ದಾರೆ.

ಇದನ್ನೂ ಓದಿ: ವನ್ಯಜೀವಿ ರಕ್ಷಣೆ ವಿಚಾರದಲ್ಲಿ ಮೋದಿ ಮಾಡುತ್ತಿರುವುದೇನು?- ಇದು ಚೀತಾ ಕಥೆಯಷ್ಟೇ ಅಲ್ಲ!

ಬುಧವಾರ ಪ್ರಧಾನಿ ಮೋದಿ ಇಡೀ ದಿನ ಹಿಮಾಚಲ ಪ್ರದೇಶದಲ್ಲಿ ಇರಲಿದ್ದಾರೆ. ಅವರು ರಾಜ್ಯದ ಬಿಲಾಸ್‌ಪುರದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ, ಜೊತೆಗೆ ಏಮ್ಸ್‌ನ ಕ್ಯಾಂಪಸ್ ಅನ್ನು ಉದ್ಘಾಟಿಸಲಿದ್ದಾರೆ ಹಾಗೂ ಕುಲು ದಸರಾ ಆಚರಣೆಯಲ್ಲೂ ಭಾಗವಹಿಸಲಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...