Homeಮುಖಪುಟಪ್ರಧಾನಿ ಮೋದಿ ಕಾರ್ಯಕ್ರಮದ ವರದಿಗೆ ಬರುವ ಪತ್ರಕರ್ತರಿಗೆ ‘ನಡತೆ ಪ್ರಮಾಣಪತ್ರ’ ಕೇಳಿದ ಸರ್ಕಾರ

ಪ್ರಧಾನಿ ಮೋದಿ ಕಾರ್ಯಕ್ರಮದ ವರದಿಗೆ ಬರುವ ಪತ್ರಕರ್ತರಿಗೆ ‘ನಡತೆ ಪ್ರಮಾಣಪತ್ರ’ ಕೇಳಿದ ಸರ್ಕಾರ

- Advertisement -
- Advertisement -

ಪ್ರಧಾನಿ ಮೋದಿ ಬುಧವಾರದಂದು ಹಿಮಾಚಲ ಪ್ರದೇಶಕ್ಕೆ ಪ್ರವಾಸ ಮಾಡುತ್ತಿದ್ದು, ಅವರ ಭೇಟಿಯನ್ನು ವರದಿ ಮಾಡಲು ಬರುವ ಪತ್ರಕರ್ತರ ಪಾಸ್‌ಗಳಿಗಾಗಿ “ನಡತೆ ಪ್ರಮಾಣಪತ್ರ”ವನ್ನು ಹಾಜರುಪಡಿಸುವಂತೆ ಎಲ್ಲಾ ಪತ್ರಕರ್ತರಿಗೆ ತಿಳಿಸಲಾಗಿದೆ ಎಂದು ಇಂಡಿಯಾ ಟುಡೆ ವರದಿ ಮಾಡಿದೆ. ಕಳೆದ ತಿಂಗಳ 24ರಂದು ಹವಾಮಾನ ವೈಪರೀತ್ಯದ ಕಾರಣಕ್ಕೆ ಹಿಮಾಚಲ ಪ್ರದೇಶದ ಅವರ ಪ್ರವಾಸ ರದ್ದುಗೊಂಡಿತ್ತು.

ಖಾಸಗಿ ಒಡೆತನದ ಮುದ್ರಣ, ಡಿಜಿಟಲ್ ಮತ್ತು ಸುದ್ದಿ ದೂರದರ್ಶನ ಪತ್ರಕರ್ತರು ಮಾತ್ರವಲ್ಲದೆ, ಆಲ್ ಇಂಡಿಯಾ ರೇಡಿಯೋ (AIR) ಮತ್ತು ದೂರದರ್ಶನ ಸೇರಿದಂತೆ ಸರ್ಕಾರಿ ಮಾಧ್ಯಮದ ಪ್ರತಿನಿಧಿಗಳು ಕೂಡಾ “ನಡತೆ ಪ್ರಮಾಣಪತ್ರ”ಗಳನ್ನು ತರಲು ಕೇಳಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ವಿಷಯದ ಕುರಿತು ಸೆಪ್ಟೆಂಬರ್ 29, 2022 ರಂದು ಪೊಲೀಸರು ಅಧಿಕೃತ ಅಧಿಸೂಚನೆಯನ್ನು ಸಹ ಹೊರಡಿಸಿದ್ದಾರೆ.  ಪತ್ರಕರ್ತರಿಗೆ ನೀಡಲಾಗಿರುವ ವಿಚಿತ್ರ ಆದೇಶವು ಭಾರೀ ವಿವಾದಕ್ಕೆ ಎಡೆಮಾಡಿಕೊಟ್ಟಿದೆ.

ಎಲ್ಲಾ ಪತ್ರಿಕಾ ವರದಿಗಾರರು, ಛಾಯಾಗ್ರಾಹಕರು, ವೀಡಿಯೋಗ್ರಾಫರ್‌ಗಳು ಮತ್ತು ದೂರದರ್ಶನ ಮತ್ತು AIR ತಂಡಗಳ ಪಟ್ಟಿಯನ್ನು “ಅವರ ನಡತೆ ಪರಿಶೀಲನೆಯ ಪ್ರಮಾಣಪತ್ರ” ದೊಂದಿಗೆ ಪೂರೈಸಲು ಅಧಿಸೂಚನೆಯು ಜಿಲ್ಲಾ ಸಾರ್ವಜನಿಕ ಸಂಪರ್ಕ ಅಧಿಕಾರಿ (DPRO) ಅವರನ್ನು ಕೇಳಿದೆ.

ಇದನ್ನೂ ಓದಿ: 2019ರಲ್ಲಿ ಉದ್ಘಾಟಿಸಿದ್ದ ‘ಅಹಮದಾಬಾದ್ ಮೆಟ್ರೋ ರೈಲು ಮೊದಲ ಹಂತ’ವನ್ನೇ ಮತ್ತೆ ಉದ್ಘಾಟಿಸಿದ ಮೋದಿ! ವಾಸ್ತವವೇನು?

“ನಡತೆ ಪರಿಶೀಲನೆಯ ಪ್ರಮಾಣಪತ್ರವನ್ನು ಅಕ್ಟೋಬರ್ 1, 2022 ರೊಳಗೆ ಉಪ ಪೊಲೀಸ್ ವರಿಷ್ಠಾಧಿಕಾರಿ, ಸಿಐಡಿ, ಬಿಲಾಸ್‌ಪುರ ಕಚೇರಿಗೆ ನೀಡಬೇಕು. ರ್‍ಯಾಲಿ ಅಥವಾ ಸಭೆಯೊಳಗೆ ಅವರ ಪ್ರವೇಶದ ಕಚೇರಿಯು ನಿರ್ಧರಿಸುತ್ತದೆ” ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಪೊಲೀಸ್‌‌‌‌‌‌ ಅಧಿಸೂಚನೆಗೆ ಪ್ರತಿಕ್ರಿಯಿಸಿದ ಆಮ್ ಆದ್ಮಿ ಪಾರ್ಟಿ ವಕ್ತಾರ ಪಂಕಜ್ ಪಂಡಿತ್, “ಪತ್ರಿಕೋದ್ಯಮದಲ್ಲಿ ತನ್ನ 22 ವರ್ಷಗಳ ವೃತ್ತಿಜೀವನದಲ್ಲಿ, ಇದೀಗ ಮೊದಲ ಬಾರಿಗೆ ಇಂತಹ ವಿಲಕ್ಷಣ ಬೇಡಿಕೆಗೆ ಸಾಕ್ಷಿಯಾಗಿದ್ದೇನೆ” ಎಂದು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.

“ಮೋದಿ ಅವರು ಮೊದಲ ಬಾರಿಗೆ ರಾಜ್ಯಕ್ಕೆ ಭೇಟಿ ನೀಡುತ್ತಿಲ್ಲ. ನಡತೆ ಪ್ರಮಾಣಪತ್ರವನ್ನು ನೀಡುವ ಬೇಡಿಕೆಯು ಅವಮಾನಕರ ಮತ್ತು ಮಾಧ್ಯಮದ ಚಟುವಟಿಕೆಗಳನ್ನು ತಡೆಯುವ ಪ್ರಯತ್ನವಾಗಿದೆ” ಎಂದು ಪಂಕಜ್‌ ಪಂಡಿತ್ ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿ: 3 ಗಂಟೆಗಳ ಮೋದಿ ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ 37 ಲಕ್ಷ ರೂ.ಗಳನ್ನು ಖರ್ಚು ಮಾಡಿದ್ದ ರಾಜ್ಯದ ಬೊಮ್ಮಾಯಿ ಸರ್ಕಾರ!

ಹಿಮಾಚಲ ಕಾಂಗ್ರೆಸ್ ಸಮಿತಿಯ ಮುಖ್ಯ ವಕ್ತಾರ ನರೇಶ್ ಚೌಹಾಣ್ ಕೂಡ ಸರ್ಕಾರದ ಬೇಡಿಕೆಯನ್ನು ಖಂಡಿಸಿದ್ದು, ಈ ನಡೆಯು ಮಾಧ್ಯಮ ಸ್ವಾತಂತ್ರ್ಯದ ವಿರುದ್ಧವಾಗಿದೆ ಎಂದು ಹೇಳಿದ್ದಾರೆ.

“ಭದ್ರತಾ ಪಾಸ್‌ ಬೇಕೆಂದರೆ ನಡತೆ ಪ್ರಮಾಣಪತ್ರವು ಕಡ್ಡಾಯವಾಗಿದೆ. ಪತ್ರಕರ್ತರ ಡಿಜಿಟಲ್ ಐಡಿ ಕಾರ್ಡ್‌ಗಳ ಮೇಲೆ ಅಧಿಕೃತ ಮುದ್ರೆ ಹಾಕಬೇಕಿದೆ. ಈ ಔಪಚಾರಿಕತೆಯು ಎಲ್ಲರಿಗೂ ಕಡ್ಡಾಯವಾಗಿದೆ. ಎಸ್ಪಿ ಮತ್ತು ಸಿಐಡಿ ಇಲಾಖೆಗಳು ನಡತೆ ಪರಿಶೀಲನೆಯ ಪ್ರಮಾಣಪತ್ರಗಳನ್ನು ಕೇಳುತ್ತಿವೆ” ಎಂದು ಬಿಲಾಸ್‌‌ಪುರ್‌ ಡಿಪಿಆರ್‌‌ಒ ಕುಲದೀಪ್ ಗುಲೇರಿಯಾ ಹೇಳಿದ್ದಾರೆ.

ಪತ್ರಕರ್ತರಿಗೆ ನಡತೆ ದೃಢೀಕರಣದ ಪ್ರಮಾಣಪತ್ರಗಳನ್ನು ನೀಡುವಂತೆ ಕೇಳಿರುವ ಸರ್ಕಾರವು, ರ್‍ಯಾಲಿಯಲ್ಲಿ ಭಾಗವಹಿಸಲು ಬರುವ ಸಾವಿರಾರು ಜನರಿಗೆ ಯಾವುದೇ ಗುರುತಿನ ಪುರಾವೆಗಳನ್ನು ಕೇಳುತ್ತಿಲ್ಲ ಎಂದು ಪರ್ತಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಸರ್ಕಾರದ ಪ್ರಕಾರ, ನಡತೆ ಪ್ರಮಾಣಪತ್ರ ಎಂದರೆ, ಆಡಳಿತ ಸರ್ಕಾರದ ಬೂಟು ನೆಕ್ಕುವುದಾಗಿದೆ’’ ಎಂದು ಹೇಳಿದ್ದಾರೆ.

ಇದನ್ನೂ ಓದಿ: ವನ್ಯಜೀವಿ ರಕ್ಷಣೆ ವಿಚಾರದಲ್ಲಿ ಮೋದಿ ಮಾಡುತ್ತಿರುವುದೇನು?- ಇದು ಚೀತಾ ಕಥೆಯಷ್ಟೇ ಅಲ್ಲ!

ಬುಧವಾರ ಪ್ರಧಾನಿ ಮೋದಿ ಇಡೀ ದಿನ ಹಿಮಾಚಲ ಪ್ರದೇಶದಲ್ಲಿ ಇರಲಿದ್ದಾರೆ. ಅವರು ರಾಜ್ಯದ ಬಿಲಾಸ್‌ಪುರದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ, ಜೊತೆಗೆ ಏಮ್ಸ್‌ನ ಕ್ಯಾಂಪಸ್ ಅನ್ನು ಉದ್ಘಾಟಿಸಲಿದ್ದಾರೆ ಹಾಗೂ ಕುಲು ದಸರಾ ಆಚರಣೆಯಲ್ಲೂ ಭಾಗವಹಿಸಲಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....