Homeಮುಖಪುಟಸೆನ್ಸೋಡೈನ್‌‌ನ ತಪ್ಪು ದಾರಿಗೆಳೆಯುವ ಜಾಹೀರಾತು ನಿಷೇಧಿಸಿ 10 ಲಕ್ಷ ದಂಡವನ್ನು ವಿಧಿಸಿದ ಸರ್ಕಾರ

ಸೆನ್ಸೋಡೈನ್‌‌ನ ತಪ್ಪು ದಾರಿಗೆಳೆಯುವ ಜಾಹೀರಾತು ನಿಷೇಧಿಸಿ 10 ಲಕ್ಷ ದಂಡವನ್ನು ವಿಧಿಸಿದ ಸರ್ಕಾರ

- Advertisement -
- Advertisement -

ಟೂತ್‌ಪೇಸ್ಟ್‌ ಬ್ರಾಂಡ್‌ ಆಗಿರುವ ಸೆನ್ಸೋಡೈನ್‌‌ ತನ್ನ ತಪ್ಪು ದಾರಿಗೆಳೆಯುವ ಜಾಹೀರಾತುಗಳನ್ನು ಏಳು ದಿನಗಳಲ್ಲಿ ನಿಲ್ಲುಸುವಂತೆ ಕೇಂದ್ರ ಗ್ರಾಹಕ ಸಂರಕ್ಷಣಾ ಪ್ರಾಧಿಕಾರ (CCPA) ಆದೇಶಿಸಿದ್ದು, ಬ್ರಾಂಡ್‌ಗೆ 10 ಲಕ್ಷ ದಂಡ ವಿಧಿಸಿದೆ ಎಂದು ಒಕ್ಕೂಟ ಸರ್ಕಾರ ಮಂಗಳವಾರ ಹೇಳಿಕೆಯಲ್ಲಿ ತಿಳಿಸಿದೆ.

‘ವಿಶ್ವದಾದ್ಯಂತ ದಂತವೈದ್ಯರಿಂದ ಶಿಫಾರಸು ಮಾಡಲ್ಪಟ್ಟಿದೆ’ ಮತ್ತು ‘ವಿಶ್ವದ ನಂ.1 ಸೂಕ್ಷ್ಮತೆಯ ಟೂತ್‌ಪೇಸ್ಟ್’ ಎಂದು ಹೇಳಿಕೊಳ್ಳುವ ಸೆನ್ಸೋಡೈನ್ ಉತ್ಪನ್ನಗಳ ಜಾಹೀರಾತುಗಳನ್ನು ಏಳು ದಿನಗಳೊಳಗೆ ಸ್ಥಗಿತಗೊಳಿಸುವಂತೆ ಆದೇಶಿಸಲಾಗಿದೆ ಎಂದು ಮಂಗಳವಾರ ಅಧಿಕೃತ ಪ್ರಕಟಣೆ ತಿಳಿಸಿದೆ. ಜೊತೆಗೆ 10 ಲಕ್ಷ ರೂ. ದಂಡ ಪಾವತಿಸುವಂತೆಯೂ ಪ್ರಾಧಿಕಾರ ಸೂಚಿಸಿದೆ.

CCPA ಅಂಗೀಕರಿಸಿದ ಹಿಂದಿನ ಆದೇಶದ ಪ್ರಕಾರ ವಿದೇಶಿ ದಂತವೈದ್ಯರ ಅನುಮೋದನೆಗಳನ್ನು ತೋರಿಸುವ ಜಾಹೀರಾತುಗಳನ್ನು ನಿಲ್ಲಿಸಲು ಆದೇಶಿಸಲಾಗಿದೆ.

ಇದನ್ನೂ ಓದಿ: ಮಂಗಳಸೂತ್ರ ಜಾಹಿರಾತು ವಾಪಾಸು ಪಡೆಯುವಂತೆ BJPಯಿಂದ ಬೆದರಿಕೆ

CCPA ಮುಖ್ಯಸ್ಥೆ ನಿಧಿ ಖರೆ ಅವರು, “ಇತ್ತೀಚೆಗೆ ಸೆನ್ಸೋಡೈನ್ ಉತ್ಪನ್ನಗಳ ತಪ್ಪುದಾರಿಗೆಳೆಯುವ ಜಾಹೀರಾತುಗಳ ವಿರುದ್ಧ ಆದೇಶವನ್ನು ಜಾರಿಗೊಳಿಸಿದೆ. ಇದು ‘ವಿಶ್ವದಾದ್ಯಂತ ದಂತವೈದ್ಯರಿಂದ ಶಿಫಾರಸು ಮಾಡಲಾಗಿದೆ’ ಮತ್ತು ‘ವಿಶ್ವದ ನಂ 1 ಸೂಕ್ಷ್ಮತೆಯ ಟೂತ್‌ಪೇಸ್ಟ್’ ಎಂದು ಹೇಳುತ್ತದೆ” ಎಂದು ಹೇಳಿದ್ದಾರೆ.

ವಿದೇಶಿ ದಂತವೈದ್ಯರ ಅನುಮೋದನೆಯನ್ನು ತೋರಿಸುವ ಸೆನ್ಸೋಡೈನ್ ಉತ್ಪನ್ನಗಳ ಜಾಹೀರಾತನ್ನು ಸ್ಥಗಿತಗೊಳಿಸುವಂತೆ ನಿರ್ದೇಶಿಸುವ ಆದೇಶವನ್ನು CCPA ಫೆಬ್ರವರಿ 9ರಂದು ಅಂಗೀಕರಿಸಿತ್ತು.

ದೂರದರ್ಶನ, ಯೂಟ್ಯೂಬ್, ಫೇಸ್‌ಬುಕ್ ಮತ್ತು ಟ್ವಿಟರ್ ಸೇರಿದಂತೆ ವಿವಿಧ ಪ್ಲಾಟ್‌ಫಾರ್ಮ್‌ಗಳಲ್ಲಿ ಸೆನ್ಸೋಡೈನ್ ಉತ್ಪನ್ನಗಳ ಜಾಹೀರಾತಿನ ವಿರುದ್ಧ CCPA ಸ್ವಯಂ ಪ್ರೇರಿತ ಕ್ರಮವನ್ನು ಪ್ರಾರಂಭಿಸಿದೆ. ಭಾರತದ ಹೊರಗೆ (ಯುನೈಟೆಡ್ ಕಿಂಗ್‌ಡಮ್) ಕೆಲಸ ಮಾಡುತ್ತಿರುವ ದಂತವೈದ್ಯರು ಹಲ್ಲುಗಳ ಸೂಕ್ಷ್ಮತೆಯ ವಿರುದ್ಧ ರಕ್ಷಣೆಗಾಗಿ, ‘ಸೆನ್ಸೋಡೈನ್ ರಾಪಿಡ್ ರಿಲೀಫ್’ ಮತ್ತು ‘ಸೆನ್ಸೋಡೈನ್ ಫ್ರೆಶ್ ಜೆಲ್’ ಎಂಬ ಸೆನ್‌ಸೋಡೈನ್ ಉತ್ಪನ್ನಗಳ ಬಳಕೆಯನ್ನು ಅನುಮೋದಿಸುವುದನ್ನು ಜಾಹೀರಾತುಗಳು ತೋರಿಸುತ್ತವೆ.

ಈ ಜಾಹೀರಾತುಗಳು ಸೆನ್ಸೋಡೈನ್ ಅನ್ನು ‘ವಿಶ್ವದಾದ್ಯಂತ ದಂತವೈದ್ಯರು ಶಿಫಾರಸು ಮಾಡಿದ್ದಾರೆ’, ‘ವಿಶ್ವದ ನಂ. 1 ಸೂಕ್ಷ್ಮತೆಯ ಟೂತ್‌ಪೇಸ್ಟ್’ ಮತ್ತು ‘60 ಸೆಕೆಂಡುಗಳಲ್ಲಿ ಟೂತ್‌ಪೇಸ್ಟ್‌ ಕಾರ್ಯನಿರ್ವಹಿಸುತ್ತದೆ ಎಂದು ವೈದ್ಯಕೀಯವಾಗಿ ಸಾಬೀತಾಗಿದೆ’ ಎಂದು ತೋರಿಸುತ್ತದೆ.

ಇದನ್ನೂ ಓದಿ: ‘ಸುಪ್ರೀಂಕೋರ್ಟ್‌ ಇ-ಮೇಲ್‌‌ನಲ್ಲೂ ಮೋದಿ ಜಾಹಿರಾತು!’ – ತೆಗೆದುಹಾಕಿ ಎಂದ ಸುಪ್ರೀಂ

ಕಂಪನಿಯು ಸಲ್ಲಿಸಿದ ಪ್ರತಿಕ್ರಿಯೆಯನ್ನು ಪರಿಶೀಲಿಸಿದ ನಂತರ, ‘ವಿಶ್ವದಾದ್ಯಂತ ದಂತವೈದ್ಯರು ಶಿಫಾರಸು ಮಾಡಿದ್ದಾರೆ’ ಮತ್ತು ‘ವಿಶ್ವದ ನಂ.1 ಸಂವೇದನಾಶೀಲತೆಯ ಟೂತ್‌ಪೇಸ್ಟ್’ ಎಂಬ ತನ್ನ ಪ್ರತಿಪಾದನೆಯನ್ನು ಸಾಬೀತುಪಡಿಸಲು ಕಂಪೆನಿ ಸಲ್ಲಿಸಿದ ಎರಡು ಮಾರುಕಟ್ಟೆ ಸಮೀಕ್ಷೆಗಳನ್ನು CCPA ನೋಡಿದೆ. ಆದರೆ ಜಾಹಿರಾತನ್ನು ಭಾರತದ ದಂತ ವೈದ್ಯರೊಂದಿಗೆ ಮಾತ್ರ ನಡೆಸಲಾಗಿದೆ ಎಂದು CCPA ಹೇಳಿದೆ.

“ಜಾಹೀರಾತುಗಳಲ್ಲಿ ಮಾಡಲಾದ ಪ್ರತಿಪಾದನೆಗಳನ್ನು ದೃಢೀಕರಿಸಲು ಅಥವಾ ಸೆನ್ಸೋಡೈನ್ ಉತ್ಪನ್ನಗಳನ್ನು ವಿಶ್ವದಾದ್ಯಂತ ಪ್ರಾಮುಖ್ಯತೆ ಇದೆ ಎಂದು ಸೂಚಿಸುವ ಯಾವುದೆ ಆಧಾರಗಳನ್ನು ಕಂಪೆನಿಯು ನೀಡಿಲ್ಲ. ಹೀಗಾಗಿ, ಯಾವುದೇ ಅದರ ಪ್ರತಿಪಾದನೆಯು ಸರಿಯಿಲ್ಲ” ಎಂದು ಸಚಿವಾಲಯ ಹೇಳಿದೆ.

ಟೂತ್‌ಪೇಸ್ಟ್‌ನ ಬ್ರ್ಯಾಂಡಿಂಗ್‌ನಲ್ಲಿನ ಮತ್ತೊಂದು ಪ್ರತಿಪಾದನೆ, ‘60 ಸೆಕೆಂಡುಗಳಲ್ಲಿ ಕಾರ್ಯನಿರ್ವಹಿಸುತ್ತದೆ’ ಎಂಬುವುದು. ಇದನ್ನು ಸಹಾಯಕ ಔಷಧ ನಿಯಂತ್ರಕರು, ರಾಜ್ಯ ಪರವಾನಗಿ ಪ್ರಾಧಿಕಾರ, ದಾದ್ರಾ ಮತ್ತು ನಗರ ಹವೇಲಿಯ ಸಿಲ್ವಾಸ್ಸಾದಿಂದ ತನಿಖೆ ನಡೆಸಲಾಗುತ್ತಿದೆ. ಇವುಗಳು ಕಂಪೆನಿಯ ಪ್ರತಿಪಾದನೆಯನ್ನು ಮೌಲ್ಯಮಾಪನ ಮಾಡುವ ವೈಜ್ಞಾನಿಕ ಸಂಸ್ಥೆಯಾಗಿದೆ ಎಂದು CCPA ಆದೇಶವನ್ನು ಉಲ್ಲೇಖಿಸಿ ಗ್ರಾಹಕ ವ್ಯವಹಾರಗಳ ಸಚಿವಾಲಯ ಹೇಳಿದೆ.

ಸಹಾಯಕ ಔಷಧ ನಿಯಂತ್ರಕರು ಸಿಸಿಪಿಎಗೆ ಪತ್ರ ಬರೆದಿದ್ದು, ಕಂಪನಿಯು ಮಾಡಿರುವ ಪ್ರತಿಪಾದನೆಗಳು ತನಿಖೆಯಲ್ಲಿವೆ ಮತ್ತು ವಿಚಾರಣೆಯ ಪ್ರಕ್ರಿಯೆಯ ನಂತರ ಮುಂದಿನ ಕ್ರಮವನ್ನು ಪ್ರಾರಂಭಿಸಲಾಗುವುದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ರಾಮ ಮಂದಿರದ ಜಾಹಿರಾತು ಹಾಕದಂತೆ ಒತ್ತಡ ಹಾಕಿದ್ದು ಮುಸ್ಲಿಂ ಸಂಘಟನೆಗಳು ಮಾತ್ರವೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...