Homeಮುಖಪುಟಸೆನ್ಸೋಡೈನ್‌‌ನ ತಪ್ಪು ದಾರಿಗೆಳೆಯುವ ಜಾಹೀರಾತು ನಿಷೇಧಿಸಿ 10 ಲಕ್ಷ ದಂಡವನ್ನು ವಿಧಿಸಿದ ಸರ್ಕಾರ

ಸೆನ್ಸೋಡೈನ್‌‌ನ ತಪ್ಪು ದಾರಿಗೆಳೆಯುವ ಜಾಹೀರಾತು ನಿಷೇಧಿಸಿ 10 ಲಕ್ಷ ದಂಡವನ್ನು ವಿಧಿಸಿದ ಸರ್ಕಾರ

- Advertisement -
- Advertisement -

ಟೂತ್‌ಪೇಸ್ಟ್‌ ಬ್ರಾಂಡ್‌ ಆಗಿರುವ ಸೆನ್ಸೋಡೈನ್‌‌ ತನ್ನ ತಪ್ಪು ದಾರಿಗೆಳೆಯುವ ಜಾಹೀರಾತುಗಳನ್ನು ಏಳು ದಿನಗಳಲ್ಲಿ ನಿಲ್ಲುಸುವಂತೆ ಕೇಂದ್ರ ಗ್ರಾಹಕ ಸಂರಕ್ಷಣಾ ಪ್ರಾಧಿಕಾರ (CCPA) ಆದೇಶಿಸಿದ್ದು, ಬ್ರಾಂಡ್‌ಗೆ 10 ಲಕ್ಷ ದಂಡ ವಿಧಿಸಿದೆ ಎಂದು ಒಕ್ಕೂಟ ಸರ್ಕಾರ ಮಂಗಳವಾರ ಹೇಳಿಕೆಯಲ್ಲಿ ತಿಳಿಸಿದೆ.

‘ವಿಶ್ವದಾದ್ಯಂತ ದಂತವೈದ್ಯರಿಂದ ಶಿಫಾರಸು ಮಾಡಲ್ಪಟ್ಟಿದೆ’ ಮತ್ತು ‘ವಿಶ್ವದ ನಂ.1 ಸೂಕ್ಷ್ಮತೆಯ ಟೂತ್‌ಪೇಸ್ಟ್’ ಎಂದು ಹೇಳಿಕೊಳ್ಳುವ ಸೆನ್ಸೋಡೈನ್ ಉತ್ಪನ್ನಗಳ ಜಾಹೀರಾತುಗಳನ್ನು ಏಳು ದಿನಗಳೊಳಗೆ ಸ್ಥಗಿತಗೊಳಿಸುವಂತೆ ಆದೇಶಿಸಲಾಗಿದೆ ಎಂದು ಮಂಗಳವಾರ ಅಧಿಕೃತ ಪ್ರಕಟಣೆ ತಿಳಿಸಿದೆ. ಜೊತೆಗೆ 10 ಲಕ್ಷ ರೂ. ದಂಡ ಪಾವತಿಸುವಂತೆಯೂ ಪ್ರಾಧಿಕಾರ ಸೂಚಿಸಿದೆ.

CCPA ಅಂಗೀಕರಿಸಿದ ಹಿಂದಿನ ಆದೇಶದ ಪ್ರಕಾರ ವಿದೇಶಿ ದಂತವೈದ್ಯರ ಅನುಮೋದನೆಗಳನ್ನು ತೋರಿಸುವ ಜಾಹೀರಾತುಗಳನ್ನು ನಿಲ್ಲಿಸಲು ಆದೇಶಿಸಲಾಗಿದೆ.

ಇದನ್ನೂ ಓದಿ: ಮಂಗಳಸೂತ್ರ ಜಾಹಿರಾತು ವಾಪಾಸು ಪಡೆಯುವಂತೆ BJPಯಿಂದ ಬೆದರಿಕೆ

CCPA ಮುಖ್ಯಸ್ಥೆ ನಿಧಿ ಖರೆ ಅವರು, “ಇತ್ತೀಚೆಗೆ ಸೆನ್ಸೋಡೈನ್ ಉತ್ಪನ್ನಗಳ ತಪ್ಪುದಾರಿಗೆಳೆಯುವ ಜಾಹೀರಾತುಗಳ ವಿರುದ್ಧ ಆದೇಶವನ್ನು ಜಾರಿಗೊಳಿಸಿದೆ. ಇದು ‘ವಿಶ್ವದಾದ್ಯಂತ ದಂತವೈದ್ಯರಿಂದ ಶಿಫಾರಸು ಮಾಡಲಾಗಿದೆ’ ಮತ್ತು ‘ವಿಶ್ವದ ನಂ 1 ಸೂಕ್ಷ್ಮತೆಯ ಟೂತ್‌ಪೇಸ್ಟ್’ ಎಂದು ಹೇಳುತ್ತದೆ” ಎಂದು ಹೇಳಿದ್ದಾರೆ.

ವಿದೇಶಿ ದಂತವೈದ್ಯರ ಅನುಮೋದನೆಯನ್ನು ತೋರಿಸುವ ಸೆನ್ಸೋಡೈನ್ ಉತ್ಪನ್ನಗಳ ಜಾಹೀರಾತನ್ನು ಸ್ಥಗಿತಗೊಳಿಸುವಂತೆ ನಿರ್ದೇಶಿಸುವ ಆದೇಶವನ್ನು CCPA ಫೆಬ್ರವರಿ 9ರಂದು ಅಂಗೀಕರಿಸಿತ್ತು.

ದೂರದರ್ಶನ, ಯೂಟ್ಯೂಬ್, ಫೇಸ್‌ಬುಕ್ ಮತ್ತು ಟ್ವಿಟರ್ ಸೇರಿದಂತೆ ವಿವಿಧ ಪ್ಲಾಟ್‌ಫಾರ್ಮ್‌ಗಳಲ್ಲಿ ಸೆನ್ಸೋಡೈನ್ ಉತ್ಪನ್ನಗಳ ಜಾಹೀರಾತಿನ ವಿರುದ್ಧ CCPA ಸ್ವಯಂ ಪ್ರೇರಿತ ಕ್ರಮವನ್ನು ಪ್ರಾರಂಭಿಸಿದೆ. ಭಾರತದ ಹೊರಗೆ (ಯುನೈಟೆಡ್ ಕಿಂಗ್‌ಡಮ್) ಕೆಲಸ ಮಾಡುತ್ತಿರುವ ದಂತವೈದ್ಯರು ಹಲ್ಲುಗಳ ಸೂಕ್ಷ್ಮತೆಯ ವಿರುದ್ಧ ರಕ್ಷಣೆಗಾಗಿ, ‘ಸೆನ್ಸೋಡೈನ್ ರಾಪಿಡ್ ರಿಲೀಫ್’ ಮತ್ತು ‘ಸೆನ್ಸೋಡೈನ್ ಫ್ರೆಶ್ ಜೆಲ್’ ಎಂಬ ಸೆನ್‌ಸೋಡೈನ್ ಉತ್ಪನ್ನಗಳ ಬಳಕೆಯನ್ನು ಅನುಮೋದಿಸುವುದನ್ನು ಜಾಹೀರಾತುಗಳು ತೋರಿಸುತ್ತವೆ.

ಈ ಜಾಹೀರಾತುಗಳು ಸೆನ್ಸೋಡೈನ್ ಅನ್ನು ‘ವಿಶ್ವದಾದ್ಯಂತ ದಂತವೈದ್ಯರು ಶಿಫಾರಸು ಮಾಡಿದ್ದಾರೆ’, ‘ವಿಶ್ವದ ನಂ. 1 ಸೂಕ್ಷ್ಮತೆಯ ಟೂತ್‌ಪೇಸ್ಟ್’ ಮತ್ತು ‘60 ಸೆಕೆಂಡುಗಳಲ್ಲಿ ಟೂತ್‌ಪೇಸ್ಟ್‌ ಕಾರ್ಯನಿರ್ವಹಿಸುತ್ತದೆ ಎಂದು ವೈದ್ಯಕೀಯವಾಗಿ ಸಾಬೀತಾಗಿದೆ’ ಎಂದು ತೋರಿಸುತ್ತದೆ.

ಇದನ್ನೂ ಓದಿ: ‘ಸುಪ್ರೀಂಕೋರ್ಟ್‌ ಇ-ಮೇಲ್‌‌ನಲ್ಲೂ ಮೋದಿ ಜಾಹಿರಾತು!’ – ತೆಗೆದುಹಾಕಿ ಎಂದ ಸುಪ್ರೀಂ

ಕಂಪನಿಯು ಸಲ್ಲಿಸಿದ ಪ್ರತಿಕ್ರಿಯೆಯನ್ನು ಪರಿಶೀಲಿಸಿದ ನಂತರ, ‘ವಿಶ್ವದಾದ್ಯಂತ ದಂತವೈದ್ಯರು ಶಿಫಾರಸು ಮಾಡಿದ್ದಾರೆ’ ಮತ್ತು ‘ವಿಶ್ವದ ನಂ.1 ಸಂವೇದನಾಶೀಲತೆಯ ಟೂತ್‌ಪೇಸ್ಟ್’ ಎಂಬ ತನ್ನ ಪ್ರತಿಪಾದನೆಯನ್ನು ಸಾಬೀತುಪಡಿಸಲು ಕಂಪೆನಿ ಸಲ್ಲಿಸಿದ ಎರಡು ಮಾರುಕಟ್ಟೆ ಸಮೀಕ್ಷೆಗಳನ್ನು CCPA ನೋಡಿದೆ. ಆದರೆ ಜಾಹಿರಾತನ್ನು ಭಾರತದ ದಂತ ವೈದ್ಯರೊಂದಿಗೆ ಮಾತ್ರ ನಡೆಸಲಾಗಿದೆ ಎಂದು CCPA ಹೇಳಿದೆ.

“ಜಾಹೀರಾತುಗಳಲ್ಲಿ ಮಾಡಲಾದ ಪ್ರತಿಪಾದನೆಗಳನ್ನು ದೃಢೀಕರಿಸಲು ಅಥವಾ ಸೆನ್ಸೋಡೈನ್ ಉತ್ಪನ್ನಗಳನ್ನು ವಿಶ್ವದಾದ್ಯಂತ ಪ್ರಾಮುಖ್ಯತೆ ಇದೆ ಎಂದು ಸೂಚಿಸುವ ಯಾವುದೆ ಆಧಾರಗಳನ್ನು ಕಂಪೆನಿಯು ನೀಡಿಲ್ಲ. ಹೀಗಾಗಿ, ಯಾವುದೇ ಅದರ ಪ್ರತಿಪಾದನೆಯು ಸರಿಯಿಲ್ಲ” ಎಂದು ಸಚಿವಾಲಯ ಹೇಳಿದೆ.

ಟೂತ್‌ಪೇಸ್ಟ್‌ನ ಬ್ರ್ಯಾಂಡಿಂಗ್‌ನಲ್ಲಿನ ಮತ್ತೊಂದು ಪ್ರತಿಪಾದನೆ, ‘60 ಸೆಕೆಂಡುಗಳಲ್ಲಿ ಕಾರ್ಯನಿರ್ವಹಿಸುತ್ತದೆ’ ಎಂಬುವುದು. ಇದನ್ನು ಸಹಾಯಕ ಔಷಧ ನಿಯಂತ್ರಕರು, ರಾಜ್ಯ ಪರವಾನಗಿ ಪ್ರಾಧಿಕಾರ, ದಾದ್ರಾ ಮತ್ತು ನಗರ ಹವೇಲಿಯ ಸಿಲ್ವಾಸ್ಸಾದಿಂದ ತನಿಖೆ ನಡೆಸಲಾಗುತ್ತಿದೆ. ಇವುಗಳು ಕಂಪೆನಿಯ ಪ್ರತಿಪಾದನೆಯನ್ನು ಮೌಲ್ಯಮಾಪನ ಮಾಡುವ ವೈಜ್ಞಾನಿಕ ಸಂಸ್ಥೆಯಾಗಿದೆ ಎಂದು CCPA ಆದೇಶವನ್ನು ಉಲ್ಲೇಖಿಸಿ ಗ್ರಾಹಕ ವ್ಯವಹಾರಗಳ ಸಚಿವಾಲಯ ಹೇಳಿದೆ.

ಸಹಾಯಕ ಔಷಧ ನಿಯಂತ್ರಕರು ಸಿಸಿಪಿಎಗೆ ಪತ್ರ ಬರೆದಿದ್ದು, ಕಂಪನಿಯು ಮಾಡಿರುವ ಪ್ರತಿಪಾದನೆಗಳು ತನಿಖೆಯಲ್ಲಿವೆ ಮತ್ತು ವಿಚಾರಣೆಯ ಪ್ರಕ್ರಿಯೆಯ ನಂತರ ಮುಂದಿನ ಕ್ರಮವನ್ನು ಪ್ರಾರಂಭಿಸಲಾಗುವುದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ರಾಮ ಮಂದಿರದ ಜಾಹಿರಾತು ಹಾಕದಂತೆ ಒತ್ತಡ ಹಾಕಿದ್ದು ಮುಸ್ಲಿಂ ಸಂಘಟನೆಗಳು ಮಾತ್ರವೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...