Homeಮುಖಪುಟಸೆನ್ಸೋಡೈನ್‌‌ನ ತಪ್ಪು ದಾರಿಗೆಳೆಯುವ ಜಾಹೀರಾತು ನಿಷೇಧಿಸಿ 10 ಲಕ್ಷ ದಂಡವನ್ನು ವಿಧಿಸಿದ ಸರ್ಕಾರ

ಸೆನ್ಸೋಡೈನ್‌‌ನ ತಪ್ಪು ದಾರಿಗೆಳೆಯುವ ಜಾಹೀರಾತು ನಿಷೇಧಿಸಿ 10 ಲಕ್ಷ ದಂಡವನ್ನು ವಿಧಿಸಿದ ಸರ್ಕಾರ

- Advertisement -
- Advertisement -

ಟೂತ್‌ಪೇಸ್ಟ್‌ ಬ್ರಾಂಡ್‌ ಆಗಿರುವ ಸೆನ್ಸೋಡೈನ್‌‌ ತನ್ನ ತಪ್ಪು ದಾರಿಗೆಳೆಯುವ ಜಾಹೀರಾತುಗಳನ್ನು ಏಳು ದಿನಗಳಲ್ಲಿ ನಿಲ್ಲುಸುವಂತೆ ಕೇಂದ್ರ ಗ್ರಾಹಕ ಸಂರಕ್ಷಣಾ ಪ್ರಾಧಿಕಾರ (CCPA) ಆದೇಶಿಸಿದ್ದು, ಬ್ರಾಂಡ್‌ಗೆ 10 ಲಕ್ಷ ದಂಡ ವಿಧಿಸಿದೆ ಎಂದು ಒಕ್ಕೂಟ ಸರ್ಕಾರ ಮಂಗಳವಾರ ಹೇಳಿಕೆಯಲ್ಲಿ ತಿಳಿಸಿದೆ.

‘ವಿಶ್ವದಾದ್ಯಂತ ದಂತವೈದ್ಯರಿಂದ ಶಿಫಾರಸು ಮಾಡಲ್ಪಟ್ಟಿದೆ’ ಮತ್ತು ‘ವಿಶ್ವದ ನಂ.1 ಸೂಕ್ಷ್ಮತೆಯ ಟೂತ್‌ಪೇಸ್ಟ್’ ಎಂದು ಹೇಳಿಕೊಳ್ಳುವ ಸೆನ್ಸೋಡೈನ್ ಉತ್ಪನ್ನಗಳ ಜಾಹೀರಾತುಗಳನ್ನು ಏಳು ದಿನಗಳೊಳಗೆ ಸ್ಥಗಿತಗೊಳಿಸುವಂತೆ ಆದೇಶಿಸಲಾಗಿದೆ ಎಂದು ಮಂಗಳವಾರ ಅಧಿಕೃತ ಪ್ರಕಟಣೆ ತಿಳಿಸಿದೆ. ಜೊತೆಗೆ 10 ಲಕ್ಷ ರೂ. ದಂಡ ಪಾವತಿಸುವಂತೆಯೂ ಪ್ರಾಧಿಕಾರ ಸೂಚಿಸಿದೆ.

CCPA ಅಂಗೀಕರಿಸಿದ ಹಿಂದಿನ ಆದೇಶದ ಪ್ರಕಾರ ವಿದೇಶಿ ದಂತವೈದ್ಯರ ಅನುಮೋದನೆಗಳನ್ನು ತೋರಿಸುವ ಜಾಹೀರಾತುಗಳನ್ನು ನಿಲ್ಲಿಸಲು ಆದೇಶಿಸಲಾಗಿದೆ.

ಇದನ್ನೂ ಓದಿ: ಮಂಗಳಸೂತ್ರ ಜಾಹಿರಾತು ವಾಪಾಸು ಪಡೆಯುವಂತೆ BJPಯಿಂದ ಬೆದರಿಕೆ

CCPA ಮುಖ್ಯಸ್ಥೆ ನಿಧಿ ಖರೆ ಅವರು, “ಇತ್ತೀಚೆಗೆ ಸೆನ್ಸೋಡೈನ್ ಉತ್ಪನ್ನಗಳ ತಪ್ಪುದಾರಿಗೆಳೆಯುವ ಜಾಹೀರಾತುಗಳ ವಿರುದ್ಧ ಆದೇಶವನ್ನು ಜಾರಿಗೊಳಿಸಿದೆ. ಇದು ‘ವಿಶ್ವದಾದ್ಯಂತ ದಂತವೈದ್ಯರಿಂದ ಶಿಫಾರಸು ಮಾಡಲಾಗಿದೆ’ ಮತ್ತು ‘ವಿಶ್ವದ ನಂ 1 ಸೂಕ್ಷ್ಮತೆಯ ಟೂತ್‌ಪೇಸ್ಟ್’ ಎಂದು ಹೇಳುತ್ತದೆ” ಎಂದು ಹೇಳಿದ್ದಾರೆ.

ವಿದೇಶಿ ದಂತವೈದ್ಯರ ಅನುಮೋದನೆಯನ್ನು ತೋರಿಸುವ ಸೆನ್ಸೋಡೈನ್ ಉತ್ಪನ್ನಗಳ ಜಾಹೀರಾತನ್ನು ಸ್ಥಗಿತಗೊಳಿಸುವಂತೆ ನಿರ್ದೇಶಿಸುವ ಆದೇಶವನ್ನು CCPA ಫೆಬ್ರವರಿ 9ರಂದು ಅಂಗೀಕರಿಸಿತ್ತು.

ದೂರದರ್ಶನ, ಯೂಟ್ಯೂಬ್, ಫೇಸ್‌ಬುಕ್ ಮತ್ತು ಟ್ವಿಟರ್ ಸೇರಿದಂತೆ ವಿವಿಧ ಪ್ಲಾಟ್‌ಫಾರ್ಮ್‌ಗಳಲ್ಲಿ ಸೆನ್ಸೋಡೈನ್ ಉತ್ಪನ್ನಗಳ ಜಾಹೀರಾತಿನ ವಿರುದ್ಧ CCPA ಸ್ವಯಂ ಪ್ರೇರಿತ ಕ್ರಮವನ್ನು ಪ್ರಾರಂಭಿಸಿದೆ. ಭಾರತದ ಹೊರಗೆ (ಯುನೈಟೆಡ್ ಕಿಂಗ್‌ಡಮ್) ಕೆಲಸ ಮಾಡುತ್ತಿರುವ ದಂತವೈದ್ಯರು ಹಲ್ಲುಗಳ ಸೂಕ್ಷ್ಮತೆಯ ವಿರುದ್ಧ ರಕ್ಷಣೆಗಾಗಿ, ‘ಸೆನ್ಸೋಡೈನ್ ರಾಪಿಡ್ ರಿಲೀಫ್’ ಮತ್ತು ‘ಸೆನ್ಸೋಡೈನ್ ಫ್ರೆಶ್ ಜೆಲ್’ ಎಂಬ ಸೆನ್‌ಸೋಡೈನ್ ಉತ್ಪನ್ನಗಳ ಬಳಕೆಯನ್ನು ಅನುಮೋದಿಸುವುದನ್ನು ಜಾಹೀರಾತುಗಳು ತೋರಿಸುತ್ತವೆ.

ಈ ಜಾಹೀರಾತುಗಳು ಸೆನ್ಸೋಡೈನ್ ಅನ್ನು ‘ವಿಶ್ವದಾದ್ಯಂತ ದಂತವೈದ್ಯರು ಶಿಫಾರಸು ಮಾಡಿದ್ದಾರೆ’, ‘ವಿಶ್ವದ ನಂ. 1 ಸೂಕ್ಷ್ಮತೆಯ ಟೂತ್‌ಪೇಸ್ಟ್’ ಮತ್ತು ‘60 ಸೆಕೆಂಡುಗಳಲ್ಲಿ ಟೂತ್‌ಪೇಸ್ಟ್‌ ಕಾರ್ಯನಿರ್ವಹಿಸುತ್ತದೆ ಎಂದು ವೈದ್ಯಕೀಯವಾಗಿ ಸಾಬೀತಾಗಿದೆ’ ಎಂದು ತೋರಿಸುತ್ತದೆ.

ಇದನ್ನೂ ಓದಿ: ‘ಸುಪ್ರೀಂಕೋರ್ಟ್‌ ಇ-ಮೇಲ್‌‌ನಲ್ಲೂ ಮೋದಿ ಜಾಹಿರಾತು!’ – ತೆಗೆದುಹಾಕಿ ಎಂದ ಸುಪ್ರೀಂ

ಕಂಪನಿಯು ಸಲ್ಲಿಸಿದ ಪ್ರತಿಕ್ರಿಯೆಯನ್ನು ಪರಿಶೀಲಿಸಿದ ನಂತರ, ‘ವಿಶ್ವದಾದ್ಯಂತ ದಂತವೈದ್ಯರು ಶಿಫಾರಸು ಮಾಡಿದ್ದಾರೆ’ ಮತ್ತು ‘ವಿಶ್ವದ ನಂ.1 ಸಂವೇದನಾಶೀಲತೆಯ ಟೂತ್‌ಪೇಸ್ಟ್’ ಎಂಬ ತನ್ನ ಪ್ರತಿಪಾದನೆಯನ್ನು ಸಾಬೀತುಪಡಿಸಲು ಕಂಪೆನಿ ಸಲ್ಲಿಸಿದ ಎರಡು ಮಾರುಕಟ್ಟೆ ಸಮೀಕ್ಷೆಗಳನ್ನು CCPA ನೋಡಿದೆ. ಆದರೆ ಜಾಹಿರಾತನ್ನು ಭಾರತದ ದಂತ ವೈದ್ಯರೊಂದಿಗೆ ಮಾತ್ರ ನಡೆಸಲಾಗಿದೆ ಎಂದು CCPA ಹೇಳಿದೆ.

“ಜಾಹೀರಾತುಗಳಲ್ಲಿ ಮಾಡಲಾದ ಪ್ರತಿಪಾದನೆಗಳನ್ನು ದೃಢೀಕರಿಸಲು ಅಥವಾ ಸೆನ್ಸೋಡೈನ್ ಉತ್ಪನ್ನಗಳನ್ನು ವಿಶ್ವದಾದ್ಯಂತ ಪ್ರಾಮುಖ್ಯತೆ ಇದೆ ಎಂದು ಸೂಚಿಸುವ ಯಾವುದೆ ಆಧಾರಗಳನ್ನು ಕಂಪೆನಿಯು ನೀಡಿಲ್ಲ. ಹೀಗಾಗಿ, ಯಾವುದೇ ಅದರ ಪ್ರತಿಪಾದನೆಯು ಸರಿಯಿಲ್ಲ” ಎಂದು ಸಚಿವಾಲಯ ಹೇಳಿದೆ.

ಟೂತ್‌ಪೇಸ್ಟ್‌ನ ಬ್ರ್ಯಾಂಡಿಂಗ್‌ನಲ್ಲಿನ ಮತ್ತೊಂದು ಪ್ರತಿಪಾದನೆ, ‘60 ಸೆಕೆಂಡುಗಳಲ್ಲಿ ಕಾರ್ಯನಿರ್ವಹಿಸುತ್ತದೆ’ ಎಂಬುವುದು. ಇದನ್ನು ಸಹಾಯಕ ಔಷಧ ನಿಯಂತ್ರಕರು, ರಾಜ್ಯ ಪರವಾನಗಿ ಪ್ರಾಧಿಕಾರ, ದಾದ್ರಾ ಮತ್ತು ನಗರ ಹವೇಲಿಯ ಸಿಲ್ವಾಸ್ಸಾದಿಂದ ತನಿಖೆ ನಡೆಸಲಾಗುತ್ತಿದೆ. ಇವುಗಳು ಕಂಪೆನಿಯ ಪ್ರತಿಪಾದನೆಯನ್ನು ಮೌಲ್ಯಮಾಪನ ಮಾಡುವ ವೈಜ್ಞಾನಿಕ ಸಂಸ್ಥೆಯಾಗಿದೆ ಎಂದು CCPA ಆದೇಶವನ್ನು ಉಲ್ಲೇಖಿಸಿ ಗ್ರಾಹಕ ವ್ಯವಹಾರಗಳ ಸಚಿವಾಲಯ ಹೇಳಿದೆ.

ಸಹಾಯಕ ಔಷಧ ನಿಯಂತ್ರಕರು ಸಿಸಿಪಿಎಗೆ ಪತ್ರ ಬರೆದಿದ್ದು, ಕಂಪನಿಯು ಮಾಡಿರುವ ಪ್ರತಿಪಾದನೆಗಳು ತನಿಖೆಯಲ್ಲಿವೆ ಮತ್ತು ವಿಚಾರಣೆಯ ಪ್ರಕ್ರಿಯೆಯ ನಂತರ ಮುಂದಿನ ಕ್ರಮವನ್ನು ಪ್ರಾರಂಭಿಸಲಾಗುವುದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ರಾಮ ಮಂದಿರದ ಜಾಹಿರಾತು ಹಾಕದಂತೆ ಒತ್ತಡ ಹಾಕಿದ್ದು ಮುಸ್ಲಿಂ ಸಂಘಟನೆಗಳು ಮಾತ್ರವೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...