Homeಮುಖಪುಟಸೆನ್ಸೋಡೈನ್‌‌ನ ತಪ್ಪು ದಾರಿಗೆಳೆಯುವ ಜಾಹೀರಾತು ನಿಷೇಧಿಸಿ 10 ಲಕ್ಷ ದಂಡವನ್ನು ವಿಧಿಸಿದ ಸರ್ಕಾರ

ಸೆನ್ಸೋಡೈನ್‌‌ನ ತಪ್ಪು ದಾರಿಗೆಳೆಯುವ ಜಾಹೀರಾತು ನಿಷೇಧಿಸಿ 10 ಲಕ್ಷ ದಂಡವನ್ನು ವಿಧಿಸಿದ ಸರ್ಕಾರ

- Advertisement -
- Advertisement -

ಟೂತ್‌ಪೇಸ್ಟ್‌ ಬ್ರಾಂಡ್‌ ಆಗಿರುವ ಸೆನ್ಸೋಡೈನ್‌‌ ತನ್ನ ತಪ್ಪು ದಾರಿಗೆಳೆಯುವ ಜಾಹೀರಾತುಗಳನ್ನು ಏಳು ದಿನಗಳಲ್ಲಿ ನಿಲ್ಲುಸುವಂತೆ ಕೇಂದ್ರ ಗ್ರಾಹಕ ಸಂರಕ್ಷಣಾ ಪ್ರಾಧಿಕಾರ (CCPA) ಆದೇಶಿಸಿದ್ದು, ಬ್ರಾಂಡ್‌ಗೆ 10 ಲಕ್ಷ ದಂಡ ವಿಧಿಸಿದೆ ಎಂದು ಒಕ್ಕೂಟ ಸರ್ಕಾರ ಮಂಗಳವಾರ ಹೇಳಿಕೆಯಲ್ಲಿ ತಿಳಿಸಿದೆ.

‘ವಿಶ್ವದಾದ್ಯಂತ ದಂತವೈದ್ಯರಿಂದ ಶಿಫಾರಸು ಮಾಡಲ್ಪಟ್ಟಿದೆ’ ಮತ್ತು ‘ವಿಶ್ವದ ನಂ.1 ಸೂಕ್ಷ್ಮತೆಯ ಟೂತ್‌ಪೇಸ್ಟ್’ ಎಂದು ಹೇಳಿಕೊಳ್ಳುವ ಸೆನ್ಸೋಡೈನ್ ಉತ್ಪನ್ನಗಳ ಜಾಹೀರಾತುಗಳನ್ನು ಏಳು ದಿನಗಳೊಳಗೆ ಸ್ಥಗಿತಗೊಳಿಸುವಂತೆ ಆದೇಶಿಸಲಾಗಿದೆ ಎಂದು ಮಂಗಳವಾರ ಅಧಿಕೃತ ಪ್ರಕಟಣೆ ತಿಳಿಸಿದೆ. ಜೊತೆಗೆ 10 ಲಕ್ಷ ರೂ. ದಂಡ ಪಾವತಿಸುವಂತೆಯೂ ಪ್ರಾಧಿಕಾರ ಸೂಚಿಸಿದೆ.

CCPA ಅಂಗೀಕರಿಸಿದ ಹಿಂದಿನ ಆದೇಶದ ಪ್ರಕಾರ ವಿದೇಶಿ ದಂತವೈದ್ಯರ ಅನುಮೋದನೆಗಳನ್ನು ತೋರಿಸುವ ಜಾಹೀರಾತುಗಳನ್ನು ನಿಲ್ಲಿಸಲು ಆದೇಶಿಸಲಾಗಿದೆ.

ಇದನ್ನೂ ಓದಿ: ಮಂಗಳಸೂತ್ರ ಜಾಹಿರಾತು ವಾಪಾಸು ಪಡೆಯುವಂತೆ BJPಯಿಂದ ಬೆದರಿಕೆ

CCPA ಮುಖ್ಯಸ್ಥೆ ನಿಧಿ ಖರೆ ಅವರು, “ಇತ್ತೀಚೆಗೆ ಸೆನ್ಸೋಡೈನ್ ಉತ್ಪನ್ನಗಳ ತಪ್ಪುದಾರಿಗೆಳೆಯುವ ಜಾಹೀರಾತುಗಳ ವಿರುದ್ಧ ಆದೇಶವನ್ನು ಜಾರಿಗೊಳಿಸಿದೆ. ಇದು ‘ವಿಶ್ವದಾದ್ಯಂತ ದಂತವೈದ್ಯರಿಂದ ಶಿಫಾರಸು ಮಾಡಲಾಗಿದೆ’ ಮತ್ತು ‘ವಿಶ್ವದ ನಂ 1 ಸೂಕ್ಷ್ಮತೆಯ ಟೂತ್‌ಪೇಸ್ಟ್’ ಎಂದು ಹೇಳುತ್ತದೆ” ಎಂದು ಹೇಳಿದ್ದಾರೆ.

ವಿದೇಶಿ ದಂತವೈದ್ಯರ ಅನುಮೋದನೆಯನ್ನು ತೋರಿಸುವ ಸೆನ್ಸೋಡೈನ್ ಉತ್ಪನ್ನಗಳ ಜಾಹೀರಾತನ್ನು ಸ್ಥಗಿತಗೊಳಿಸುವಂತೆ ನಿರ್ದೇಶಿಸುವ ಆದೇಶವನ್ನು CCPA ಫೆಬ್ರವರಿ 9ರಂದು ಅಂಗೀಕರಿಸಿತ್ತು.

ದೂರದರ್ಶನ, ಯೂಟ್ಯೂಬ್, ಫೇಸ್‌ಬುಕ್ ಮತ್ತು ಟ್ವಿಟರ್ ಸೇರಿದಂತೆ ವಿವಿಧ ಪ್ಲಾಟ್‌ಫಾರ್ಮ್‌ಗಳಲ್ಲಿ ಸೆನ್ಸೋಡೈನ್ ಉತ್ಪನ್ನಗಳ ಜಾಹೀರಾತಿನ ವಿರುದ್ಧ CCPA ಸ್ವಯಂ ಪ್ರೇರಿತ ಕ್ರಮವನ್ನು ಪ್ರಾರಂಭಿಸಿದೆ. ಭಾರತದ ಹೊರಗೆ (ಯುನೈಟೆಡ್ ಕಿಂಗ್‌ಡಮ್) ಕೆಲಸ ಮಾಡುತ್ತಿರುವ ದಂತವೈದ್ಯರು ಹಲ್ಲುಗಳ ಸೂಕ್ಷ್ಮತೆಯ ವಿರುದ್ಧ ರಕ್ಷಣೆಗಾಗಿ, ‘ಸೆನ್ಸೋಡೈನ್ ರಾಪಿಡ್ ರಿಲೀಫ್’ ಮತ್ತು ‘ಸೆನ್ಸೋಡೈನ್ ಫ್ರೆಶ್ ಜೆಲ್’ ಎಂಬ ಸೆನ್‌ಸೋಡೈನ್ ಉತ್ಪನ್ನಗಳ ಬಳಕೆಯನ್ನು ಅನುಮೋದಿಸುವುದನ್ನು ಜಾಹೀರಾತುಗಳು ತೋರಿಸುತ್ತವೆ.

ಈ ಜಾಹೀರಾತುಗಳು ಸೆನ್ಸೋಡೈನ್ ಅನ್ನು ‘ವಿಶ್ವದಾದ್ಯಂತ ದಂತವೈದ್ಯರು ಶಿಫಾರಸು ಮಾಡಿದ್ದಾರೆ’, ‘ವಿಶ್ವದ ನಂ. 1 ಸೂಕ್ಷ್ಮತೆಯ ಟೂತ್‌ಪೇಸ್ಟ್’ ಮತ್ತು ‘60 ಸೆಕೆಂಡುಗಳಲ್ಲಿ ಟೂತ್‌ಪೇಸ್ಟ್‌ ಕಾರ್ಯನಿರ್ವಹಿಸುತ್ತದೆ ಎಂದು ವೈದ್ಯಕೀಯವಾಗಿ ಸಾಬೀತಾಗಿದೆ’ ಎಂದು ತೋರಿಸುತ್ತದೆ.

ಇದನ್ನೂ ಓದಿ: ‘ಸುಪ್ರೀಂಕೋರ್ಟ್‌ ಇ-ಮೇಲ್‌‌ನಲ್ಲೂ ಮೋದಿ ಜಾಹಿರಾತು!’ – ತೆಗೆದುಹಾಕಿ ಎಂದ ಸುಪ್ರೀಂ

ಕಂಪನಿಯು ಸಲ್ಲಿಸಿದ ಪ್ರತಿಕ್ರಿಯೆಯನ್ನು ಪರಿಶೀಲಿಸಿದ ನಂತರ, ‘ವಿಶ್ವದಾದ್ಯಂತ ದಂತವೈದ್ಯರು ಶಿಫಾರಸು ಮಾಡಿದ್ದಾರೆ’ ಮತ್ತು ‘ವಿಶ್ವದ ನಂ.1 ಸಂವೇದನಾಶೀಲತೆಯ ಟೂತ್‌ಪೇಸ್ಟ್’ ಎಂಬ ತನ್ನ ಪ್ರತಿಪಾದನೆಯನ್ನು ಸಾಬೀತುಪಡಿಸಲು ಕಂಪೆನಿ ಸಲ್ಲಿಸಿದ ಎರಡು ಮಾರುಕಟ್ಟೆ ಸಮೀಕ್ಷೆಗಳನ್ನು CCPA ನೋಡಿದೆ. ಆದರೆ ಜಾಹಿರಾತನ್ನು ಭಾರತದ ದಂತ ವೈದ್ಯರೊಂದಿಗೆ ಮಾತ್ರ ನಡೆಸಲಾಗಿದೆ ಎಂದು CCPA ಹೇಳಿದೆ.

“ಜಾಹೀರಾತುಗಳಲ್ಲಿ ಮಾಡಲಾದ ಪ್ರತಿಪಾದನೆಗಳನ್ನು ದೃಢೀಕರಿಸಲು ಅಥವಾ ಸೆನ್ಸೋಡೈನ್ ಉತ್ಪನ್ನಗಳನ್ನು ವಿಶ್ವದಾದ್ಯಂತ ಪ್ರಾಮುಖ್ಯತೆ ಇದೆ ಎಂದು ಸೂಚಿಸುವ ಯಾವುದೆ ಆಧಾರಗಳನ್ನು ಕಂಪೆನಿಯು ನೀಡಿಲ್ಲ. ಹೀಗಾಗಿ, ಯಾವುದೇ ಅದರ ಪ್ರತಿಪಾದನೆಯು ಸರಿಯಿಲ್ಲ” ಎಂದು ಸಚಿವಾಲಯ ಹೇಳಿದೆ.

ಟೂತ್‌ಪೇಸ್ಟ್‌ನ ಬ್ರ್ಯಾಂಡಿಂಗ್‌ನಲ್ಲಿನ ಮತ್ತೊಂದು ಪ್ರತಿಪಾದನೆ, ‘60 ಸೆಕೆಂಡುಗಳಲ್ಲಿ ಕಾರ್ಯನಿರ್ವಹಿಸುತ್ತದೆ’ ಎಂಬುವುದು. ಇದನ್ನು ಸಹಾಯಕ ಔಷಧ ನಿಯಂತ್ರಕರು, ರಾಜ್ಯ ಪರವಾನಗಿ ಪ್ರಾಧಿಕಾರ, ದಾದ್ರಾ ಮತ್ತು ನಗರ ಹವೇಲಿಯ ಸಿಲ್ವಾಸ್ಸಾದಿಂದ ತನಿಖೆ ನಡೆಸಲಾಗುತ್ತಿದೆ. ಇವುಗಳು ಕಂಪೆನಿಯ ಪ್ರತಿಪಾದನೆಯನ್ನು ಮೌಲ್ಯಮಾಪನ ಮಾಡುವ ವೈಜ್ಞಾನಿಕ ಸಂಸ್ಥೆಯಾಗಿದೆ ಎಂದು CCPA ಆದೇಶವನ್ನು ಉಲ್ಲೇಖಿಸಿ ಗ್ರಾಹಕ ವ್ಯವಹಾರಗಳ ಸಚಿವಾಲಯ ಹೇಳಿದೆ.

ಸಹಾಯಕ ಔಷಧ ನಿಯಂತ್ರಕರು ಸಿಸಿಪಿಎಗೆ ಪತ್ರ ಬರೆದಿದ್ದು, ಕಂಪನಿಯು ಮಾಡಿರುವ ಪ್ರತಿಪಾದನೆಗಳು ತನಿಖೆಯಲ್ಲಿವೆ ಮತ್ತು ವಿಚಾರಣೆಯ ಪ್ರಕ್ರಿಯೆಯ ನಂತರ ಮುಂದಿನ ಕ್ರಮವನ್ನು ಪ್ರಾರಂಭಿಸಲಾಗುವುದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ರಾಮ ಮಂದಿರದ ಜಾಹಿರಾತು ಹಾಕದಂತೆ ಒತ್ತಡ ಹಾಕಿದ್ದು ಮುಸ್ಲಿಂ ಸಂಘಟನೆಗಳು ಮಾತ್ರವೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...