Homeಮುಖಪುಟಸೆನ್ಸೋಡೈನ್‌‌ನ ತಪ್ಪು ದಾರಿಗೆಳೆಯುವ ಜಾಹೀರಾತು ನಿಷೇಧಿಸಿ 10 ಲಕ್ಷ ದಂಡವನ್ನು ವಿಧಿಸಿದ ಸರ್ಕಾರ

ಸೆನ್ಸೋಡೈನ್‌‌ನ ತಪ್ಪು ದಾರಿಗೆಳೆಯುವ ಜಾಹೀರಾತು ನಿಷೇಧಿಸಿ 10 ಲಕ್ಷ ದಂಡವನ್ನು ವಿಧಿಸಿದ ಸರ್ಕಾರ

- Advertisement -
- Advertisement -

ಟೂತ್‌ಪೇಸ್ಟ್‌ ಬ್ರಾಂಡ್‌ ಆಗಿರುವ ಸೆನ್ಸೋಡೈನ್‌‌ ತನ್ನ ತಪ್ಪು ದಾರಿಗೆಳೆಯುವ ಜಾಹೀರಾತುಗಳನ್ನು ಏಳು ದಿನಗಳಲ್ಲಿ ನಿಲ್ಲುಸುವಂತೆ ಕೇಂದ್ರ ಗ್ರಾಹಕ ಸಂರಕ್ಷಣಾ ಪ್ರಾಧಿಕಾರ (CCPA) ಆದೇಶಿಸಿದ್ದು, ಬ್ರಾಂಡ್‌ಗೆ 10 ಲಕ್ಷ ದಂಡ ವಿಧಿಸಿದೆ ಎಂದು ಒಕ್ಕೂಟ ಸರ್ಕಾರ ಮಂಗಳವಾರ ಹೇಳಿಕೆಯಲ್ಲಿ ತಿಳಿಸಿದೆ.

‘ವಿಶ್ವದಾದ್ಯಂತ ದಂತವೈದ್ಯರಿಂದ ಶಿಫಾರಸು ಮಾಡಲ್ಪಟ್ಟಿದೆ’ ಮತ್ತು ‘ವಿಶ್ವದ ನಂ.1 ಸೂಕ್ಷ್ಮತೆಯ ಟೂತ್‌ಪೇಸ್ಟ್’ ಎಂದು ಹೇಳಿಕೊಳ್ಳುವ ಸೆನ್ಸೋಡೈನ್ ಉತ್ಪನ್ನಗಳ ಜಾಹೀರಾತುಗಳನ್ನು ಏಳು ದಿನಗಳೊಳಗೆ ಸ್ಥಗಿತಗೊಳಿಸುವಂತೆ ಆದೇಶಿಸಲಾಗಿದೆ ಎಂದು ಮಂಗಳವಾರ ಅಧಿಕೃತ ಪ್ರಕಟಣೆ ತಿಳಿಸಿದೆ. ಜೊತೆಗೆ 10 ಲಕ್ಷ ರೂ. ದಂಡ ಪಾವತಿಸುವಂತೆಯೂ ಪ್ರಾಧಿಕಾರ ಸೂಚಿಸಿದೆ.

CCPA ಅಂಗೀಕರಿಸಿದ ಹಿಂದಿನ ಆದೇಶದ ಪ್ರಕಾರ ವಿದೇಶಿ ದಂತವೈದ್ಯರ ಅನುಮೋದನೆಗಳನ್ನು ತೋರಿಸುವ ಜಾಹೀರಾತುಗಳನ್ನು ನಿಲ್ಲಿಸಲು ಆದೇಶಿಸಲಾಗಿದೆ.

ಇದನ್ನೂ ಓದಿ: ಮಂಗಳಸೂತ್ರ ಜಾಹಿರಾತು ವಾಪಾಸು ಪಡೆಯುವಂತೆ BJPಯಿಂದ ಬೆದರಿಕೆ

CCPA ಮುಖ್ಯಸ್ಥೆ ನಿಧಿ ಖರೆ ಅವರು, “ಇತ್ತೀಚೆಗೆ ಸೆನ್ಸೋಡೈನ್ ಉತ್ಪನ್ನಗಳ ತಪ್ಪುದಾರಿಗೆಳೆಯುವ ಜಾಹೀರಾತುಗಳ ವಿರುದ್ಧ ಆದೇಶವನ್ನು ಜಾರಿಗೊಳಿಸಿದೆ. ಇದು ‘ವಿಶ್ವದಾದ್ಯಂತ ದಂತವೈದ್ಯರಿಂದ ಶಿಫಾರಸು ಮಾಡಲಾಗಿದೆ’ ಮತ್ತು ‘ವಿಶ್ವದ ನಂ 1 ಸೂಕ್ಷ್ಮತೆಯ ಟೂತ್‌ಪೇಸ್ಟ್’ ಎಂದು ಹೇಳುತ್ತದೆ” ಎಂದು ಹೇಳಿದ್ದಾರೆ.

ವಿದೇಶಿ ದಂತವೈದ್ಯರ ಅನುಮೋದನೆಯನ್ನು ತೋರಿಸುವ ಸೆನ್ಸೋಡೈನ್ ಉತ್ಪನ್ನಗಳ ಜಾಹೀರಾತನ್ನು ಸ್ಥಗಿತಗೊಳಿಸುವಂತೆ ನಿರ್ದೇಶಿಸುವ ಆದೇಶವನ್ನು CCPA ಫೆಬ್ರವರಿ 9ರಂದು ಅಂಗೀಕರಿಸಿತ್ತು.

ದೂರದರ್ಶನ, ಯೂಟ್ಯೂಬ್, ಫೇಸ್‌ಬುಕ್ ಮತ್ತು ಟ್ವಿಟರ್ ಸೇರಿದಂತೆ ವಿವಿಧ ಪ್ಲಾಟ್‌ಫಾರ್ಮ್‌ಗಳಲ್ಲಿ ಸೆನ್ಸೋಡೈನ್ ಉತ್ಪನ್ನಗಳ ಜಾಹೀರಾತಿನ ವಿರುದ್ಧ CCPA ಸ್ವಯಂ ಪ್ರೇರಿತ ಕ್ರಮವನ್ನು ಪ್ರಾರಂಭಿಸಿದೆ. ಭಾರತದ ಹೊರಗೆ (ಯುನೈಟೆಡ್ ಕಿಂಗ್‌ಡಮ್) ಕೆಲಸ ಮಾಡುತ್ತಿರುವ ದಂತವೈದ್ಯರು ಹಲ್ಲುಗಳ ಸೂಕ್ಷ್ಮತೆಯ ವಿರುದ್ಧ ರಕ್ಷಣೆಗಾಗಿ, ‘ಸೆನ್ಸೋಡೈನ್ ರಾಪಿಡ್ ರಿಲೀಫ್’ ಮತ್ತು ‘ಸೆನ್ಸೋಡೈನ್ ಫ್ರೆಶ್ ಜೆಲ್’ ಎಂಬ ಸೆನ್‌ಸೋಡೈನ್ ಉತ್ಪನ್ನಗಳ ಬಳಕೆಯನ್ನು ಅನುಮೋದಿಸುವುದನ್ನು ಜಾಹೀರಾತುಗಳು ತೋರಿಸುತ್ತವೆ.

ಈ ಜಾಹೀರಾತುಗಳು ಸೆನ್ಸೋಡೈನ್ ಅನ್ನು ‘ವಿಶ್ವದಾದ್ಯಂತ ದಂತವೈದ್ಯರು ಶಿಫಾರಸು ಮಾಡಿದ್ದಾರೆ’, ‘ವಿಶ್ವದ ನಂ. 1 ಸೂಕ್ಷ್ಮತೆಯ ಟೂತ್‌ಪೇಸ್ಟ್’ ಮತ್ತು ‘60 ಸೆಕೆಂಡುಗಳಲ್ಲಿ ಟೂತ್‌ಪೇಸ್ಟ್‌ ಕಾರ್ಯನಿರ್ವಹಿಸುತ್ತದೆ ಎಂದು ವೈದ್ಯಕೀಯವಾಗಿ ಸಾಬೀತಾಗಿದೆ’ ಎಂದು ತೋರಿಸುತ್ತದೆ.

ಇದನ್ನೂ ಓದಿ: ‘ಸುಪ್ರೀಂಕೋರ್ಟ್‌ ಇ-ಮೇಲ್‌‌ನಲ್ಲೂ ಮೋದಿ ಜಾಹಿರಾತು!’ – ತೆಗೆದುಹಾಕಿ ಎಂದ ಸುಪ್ರೀಂ

ಕಂಪನಿಯು ಸಲ್ಲಿಸಿದ ಪ್ರತಿಕ್ರಿಯೆಯನ್ನು ಪರಿಶೀಲಿಸಿದ ನಂತರ, ‘ವಿಶ್ವದಾದ್ಯಂತ ದಂತವೈದ್ಯರು ಶಿಫಾರಸು ಮಾಡಿದ್ದಾರೆ’ ಮತ್ತು ‘ವಿಶ್ವದ ನಂ.1 ಸಂವೇದನಾಶೀಲತೆಯ ಟೂತ್‌ಪೇಸ್ಟ್’ ಎಂಬ ತನ್ನ ಪ್ರತಿಪಾದನೆಯನ್ನು ಸಾಬೀತುಪಡಿಸಲು ಕಂಪೆನಿ ಸಲ್ಲಿಸಿದ ಎರಡು ಮಾರುಕಟ್ಟೆ ಸಮೀಕ್ಷೆಗಳನ್ನು CCPA ನೋಡಿದೆ. ಆದರೆ ಜಾಹಿರಾತನ್ನು ಭಾರತದ ದಂತ ವೈದ್ಯರೊಂದಿಗೆ ಮಾತ್ರ ನಡೆಸಲಾಗಿದೆ ಎಂದು CCPA ಹೇಳಿದೆ.

“ಜಾಹೀರಾತುಗಳಲ್ಲಿ ಮಾಡಲಾದ ಪ್ರತಿಪಾದನೆಗಳನ್ನು ದೃಢೀಕರಿಸಲು ಅಥವಾ ಸೆನ್ಸೋಡೈನ್ ಉತ್ಪನ್ನಗಳನ್ನು ವಿಶ್ವದಾದ್ಯಂತ ಪ್ರಾಮುಖ್ಯತೆ ಇದೆ ಎಂದು ಸೂಚಿಸುವ ಯಾವುದೆ ಆಧಾರಗಳನ್ನು ಕಂಪೆನಿಯು ನೀಡಿಲ್ಲ. ಹೀಗಾಗಿ, ಯಾವುದೇ ಅದರ ಪ್ರತಿಪಾದನೆಯು ಸರಿಯಿಲ್ಲ” ಎಂದು ಸಚಿವಾಲಯ ಹೇಳಿದೆ.

ಟೂತ್‌ಪೇಸ್ಟ್‌ನ ಬ್ರ್ಯಾಂಡಿಂಗ್‌ನಲ್ಲಿನ ಮತ್ತೊಂದು ಪ್ರತಿಪಾದನೆ, ‘60 ಸೆಕೆಂಡುಗಳಲ್ಲಿ ಕಾರ್ಯನಿರ್ವಹಿಸುತ್ತದೆ’ ಎಂಬುವುದು. ಇದನ್ನು ಸಹಾಯಕ ಔಷಧ ನಿಯಂತ್ರಕರು, ರಾಜ್ಯ ಪರವಾನಗಿ ಪ್ರಾಧಿಕಾರ, ದಾದ್ರಾ ಮತ್ತು ನಗರ ಹವೇಲಿಯ ಸಿಲ್ವಾಸ್ಸಾದಿಂದ ತನಿಖೆ ನಡೆಸಲಾಗುತ್ತಿದೆ. ಇವುಗಳು ಕಂಪೆನಿಯ ಪ್ರತಿಪಾದನೆಯನ್ನು ಮೌಲ್ಯಮಾಪನ ಮಾಡುವ ವೈಜ್ಞಾನಿಕ ಸಂಸ್ಥೆಯಾಗಿದೆ ಎಂದು CCPA ಆದೇಶವನ್ನು ಉಲ್ಲೇಖಿಸಿ ಗ್ರಾಹಕ ವ್ಯವಹಾರಗಳ ಸಚಿವಾಲಯ ಹೇಳಿದೆ.

ಸಹಾಯಕ ಔಷಧ ನಿಯಂತ್ರಕರು ಸಿಸಿಪಿಎಗೆ ಪತ್ರ ಬರೆದಿದ್ದು, ಕಂಪನಿಯು ಮಾಡಿರುವ ಪ್ರತಿಪಾದನೆಗಳು ತನಿಖೆಯಲ್ಲಿವೆ ಮತ್ತು ವಿಚಾರಣೆಯ ಪ್ರಕ್ರಿಯೆಯ ನಂತರ ಮುಂದಿನ ಕ್ರಮವನ್ನು ಪ್ರಾರಂಭಿಸಲಾಗುವುದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ರಾಮ ಮಂದಿರದ ಜಾಹಿರಾತು ಹಾಕದಂತೆ ಒತ್ತಡ ಹಾಕಿದ್ದು ಮುಸ್ಲಿಂ ಸಂಘಟನೆಗಳು ಮಾತ್ರವೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...