Homeಮುಖಪುಟಸೆನ್ಸೋಡೈನ್‌‌ನ ತಪ್ಪು ದಾರಿಗೆಳೆಯುವ ಜಾಹೀರಾತು ನಿಷೇಧಿಸಿ 10 ಲಕ್ಷ ದಂಡವನ್ನು ವಿಧಿಸಿದ ಸರ್ಕಾರ

ಸೆನ್ಸೋಡೈನ್‌‌ನ ತಪ್ಪು ದಾರಿಗೆಳೆಯುವ ಜಾಹೀರಾತು ನಿಷೇಧಿಸಿ 10 ಲಕ್ಷ ದಂಡವನ್ನು ವಿಧಿಸಿದ ಸರ್ಕಾರ

- Advertisement -
- Advertisement -

ಟೂತ್‌ಪೇಸ್ಟ್‌ ಬ್ರಾಂಡ್‌ ಆಗಿರುವ ಸೆನ್ಸೋಡೈನ್‌‌ ತನ್ನ ತಪ್ಪು ದಾರಿಗೆಳೆಯುವ ಜಾಹೀರಾತುಗಳನ್ನು ಏಳು ದಿನಗಳಲ್ಲಿ ನಿಲ್ಲುಸುವಂತೆ ಕೇಂದ್ರ ಗ್ರಾಹಕ ಸಂರಕ್ಷಣಾ ಪ್ರಾಧಿಕಾರ (CCPA) ಆದೇಶಿಸಿದ್ದು, ಬ್ರಾಂಡ್‌ಗೆ 10 ಲಕ್ಷ ದಂಡ ವಿಧಿಸಿದೆ ಎಂದು ಒಕ್ಕೂಟ ಸರ್ಕಾರ ಮಂಗಳವಾರ ಹೇಳಿಕೆಯಲ್ಲಿ ತಿಳಿಸಿದೆ.

‘ವಿಶ್ವದಾದ್ಯಂತ ದಂತವೈದ್ಯರಿಂದ ಶಿಫಾರಸು ಮಾಡಲ್ಪಟ್ಟಿದೆ’ ಮತ್ತು ‘ವಿಶ್ವದ ನಂ.1 ಸೂಕ್ಷ್ಮತೆಯ ಟೂತ್‌ಪೇಸ್ಟ್’ ಎಂದು ಹೇಳಿಕೊಳ್ಳುವ ಸೆನ್ಸೋಡೈನ್ ಉತ್ಪನ್ನಗಳ ಜಾಹೀರಾತುಗಳನ್ನು ಏಳು ದಿನಗಳೊಳಗೆ ಸ್ಥಗಿತಗೊಳಿಸುವಂತೆ ಆದೇಶಿಸಲಾಗಿದೆ ಎಂದು ಮಂಗಳವಾರ ಅಧಿಕೃತ ಪ್ರಕಟಣೆ ತಿಳಿಸಿದೆ. ಜೊತೆಗೆ 10 ಲಕ್ಷ ರೂ. ದಂಡ ಪಾವತಿಸುವಂತೆಯೂ ಪ್ರಾಧಿಕಾರ ಸೂಚಿಸಿದೆ.

CCPA ಅಂಗೀಕರಿಸಿದ ಹಿಂದಿನ ಆದೇಶದ ಪ್ರಕಾರ ವಿದೇಶಿ ದಂತವೈದ್ಯರ ಅನುಮೋದನೆಗಳನ್ನು ತೋರಿಸುವ ಜಾಹೀರಾತುಗಳನ್ನು ನಿಲ್ಲಿಸಲು ಆದೇಶಿಸಲಾಗಿದೆ.

ಇದನ್ನೂ ಓದಿ: ಮಂಗಳಸೂತ್ರ ಜಾಹಿರಾತು ವಾಪಾಸು ಪಡೆಯುವಂತೆ BJPಯಿಂದ ಬೆದರಿಕೆ

CCPA ಮುಖ್ಯಸ್ಥೆ ನಿಧಿ ಖರೆ ಅವರು, “ಇತ್ತೀಚೆಗೆ ಸೆನ್ಸೋಡೈನ್ ಉತ್ಪನ್ನಗಳ ತಪ್ಪುದಾರಿಗೆಳೆಯುವ ಜಾಹೀರಾತುಗಳ ವಿರುದ್ಧ ಆದೇಶವನ್ನು ಜಾರಿಗೊಳಿಸಿದೆ. ಇದು ‘ವಿಶ್ವದಾದ್ಯಂತ ದಂತವೈದ್ಯರಿಂದ ಶಿಫಾರಸು ಮಾಡಲಾಗಿದೆ’ ಮತ್ತು ‘ವಿಶ್ವದ ನಂ 1 ಸೂಕ್ಷ್ಮತೆಯ ಟೂತ್‌ಪೇಸ್ಟ್’ ಎಂದು ಹೇಳುತ್ತದೆ” ಎಂದು ಹೇಳಿದ್ದಾರೆ.

ವಿದೇಶಿ ದಂತವೈದ್ಯರ ಅನುಮೋದನೆಯನ್ನು ತೋರಿಸುವ ಸೆನ್ಸೋಡೈನ್ ಉತ್ಪನ್ನಗಳ ಜಾಹೀರಾತನ್ನು ಸ್ಥಗಿತಗೊಳಿಸುವಂತೆ ನಿರ್ದೇಶಿಸುವ ಆದೇಶವನ್ನು CCPA ಫೆಬ್ರವರಿ 9ರಂದು ಅಂಗೀಕರಿಸಿತ್ತು.

ದೂರದರ್ಶನ, ಯೂಟ್ಯೂಬ್, ಫೇಸ್‌ಬುಕ್ ಮತ್ತು ಟ್ವಿಟರ್ ಸೇರಿದಂತೆ ವಿವಿಧ ಪ್ಲಾಟ್‌ಫಾರ್ಮ್‌ಗಳಲ್ಲಿ ಸೆನ್ಸೋಡೈನ್ ಉತ್ಪನ್ನಗಳ ಜಾಹೀರಾತಿನ ವಿರುದ್ಧ CCPA ಸ್ವಯಂ ಪ್ರೇರಿತ ಕ್ರಮವನ್ನು ಪ್ರಾರಂಭಿಸಿದೆ. ಭಾರತದ ಹೊರಗೆ (ಯುನೈಟೆಡ್ ಕಿಂಗ್‌ಡಮ್) ಕೆಲಸ ಮಾಡುತ್ತಿರುವ ದಂತವೈದ್ಯರು ಹಲ್ಲುಗಳ ಸೂಕ್ಷ್ಮತೆಯ ವಿರುದ್ಧ ರಕ್ಷಣೆಗಾಗಿ, ‘ಸೆನ್ಸೋಡೈನ್ ರಾಪಿಡ್ ರಿಲೀಫ್’ ಮತ್ತು ‘ಸೆನ್ಸೋಡೈನ್ ಫ್ರೆಶ್ ಜೆಲ್’ ಎಂಬ ಸೆನ್‌ಸೋಡೈನ್ ಉತ್ಪನ್ನಗಳ ಬಳಕೆಯನ್ನು ಅನುಮೋದಿಸುವುದನ್ನು ಜಾಹೀರಾತುಗಳು ತೋರಿಸುತ್ತವೆ.

ಈ ಜಾಹೀರಾತುಗಳು ಸೆನ್ಸೋಡೈನ್ ಅನ್ನು ‘ವಿಶ್ವದಾದ್ಯಂತ ದಂತವೈದ್ಯರು ಶಿಫಾರಸು ಮಾಡಿದ್ದಾರೆ’, ‘ವಿಶ್ವದ ನಂ. 1 ಸೂಕ್ಷ್ಮತೆಯ ಟೂತ್‌ಪೇಸ್ಟ್’ ಮತ್ತು ‘60 ಸೆಕೆಂಡುಗಳಲ್ಲಿ ಟೂತ್‌ಪೇಸ್ಟ್‌ ಕಾರ್ಯನಿರ್ವಹಿಸುತ್ತದೆ ಎಂದು ವೈದ್ಯಕೀಯವಾಗಿ ಸಾಬೀತಾಗಿದೆ’ ಎಂದು ತೋರಿಸುತ್ತದೆ.

ಇದನ್ನೂ ಓದಿ: ‘ಸುಪ್ರೀಂಕೋರ್ಟ್‌ ಇ-ಮೇಲ್‌‌ನಲ್ಲೂ ಮೋದಿ ಜಾಹಿರಾತು!’ – ತೆಗೆದುಹಾಕಿ ಎಂದ ಸುಪ್ರೀಂ

ಕಂಪನಿಯು ಸಲ್ಲಿಸಿದ ಪ್ರತಿಕ್ರಿಯೆಯನ್ನು ಪರಿಶೀಲಿಸಿದ ನಂತರ, ‘ವಿಶ್ವದಾದ್ಯಂತ ದಂತವೈದ್ಯರು ಶಿಫಾರಸು ಮಾಡಿದ್ದಾರೆ’ ಮತ್ತು ‘ವಿಶ್ವದ ನಂ.1 ಸಂವೇದನಾಶೀಲತೆಯ ಟೂತ್‌ಪೇಸ್ಟ್’ ಎಂಬ ತನ್ನ ಪ್ರತಿಪಾದನೆಯನ್ನು ಸಾಬೀತುಪಡಿಸಲು ಕಂಪೆನಿ ಸಲ್ಲಿಸಿದ ಎರಡು ಮಾರುಕಟ್ಟೆ ಸಮೀಕ್ಷೆಗಳನ್ನು CCPA ನೋಡಿದೆ. ಆದರೆ ಜಾಹಿರಾತನ್ನು ಭಾರತದ ದಂತ ವೈದ್ಯರೊಂದಿಗೆ ಮಾತ್ರ ನಡೆಸಲಾಗಿದೆ ಎಂದು CCPA ಹೇಳಿದೆ.

“ಜಾಹೀರಾತುಗಳಲ್ಲಿ ಮಾಡಲಾದ ಪ್ರತಿಪಾದನೆಗಳನ್ನು ದೃಢೀಕರಿಸಲು ಅಥವಾ ಸೆನ್ಸೋಡೈನ್ ಉತ್ಪನ್ನಗಳನ್ನು ವಿಶ್ವದಾದ್ಯಂತ ಪ್ರಾಮುಖ್ಯತೆ ಇದೆ ಎಂದು ಸೂಚಿಸುವ ಯಾವುದೆ ಆಧಾರಗಳನ್ನು ಕಂಪೆನಿಯು ನೀಡಿಲ್ಲ. ಹೀಗಾಗಿ, ಯಾವುದೇ ಅದರ ಪ್ರತಿಪಾದನೆಯು ಸರಿಯಿಲ್ಲ” ಎಂದು ಸಚಿವಾಲಯ ಹೇಳಿದೆ.

ಟೂತ್‌ಪೇಸ್ಟ್‌ನ ಬ್ರ್ಯಾಂಡಿಂಗ್‌ನಲ್ಲಿನ ಮತ್ತೊಂದು ಪ್ರತಿಪಾದನೆ, ‘60 ಸೆಕೆಂಡುಗಳಲ್ಲಿ ಕಾರ್ಯನಿರ್ವಹಿಸುತ್ತದೆ’ ಎಂಬುವುದು. ಇದನ್ನು ಸಹಾಯಕ ಔಷಧ ನಿಯಂತ್ರಕರು, ರಾಜ್ಯ ಪರವಾನಗಿ ಪ್ರಾಧಿಕಾರ, ದಾದ್ರಾ ಮತ್ತು ನಗರ ಹವೇಲಿಯ ಸಿಲ್ವಾಸ್ಸಾದಿಂದ ತನಿಖೆ ನಡೆಸಲಾಗುತ್ತಿದೆ. ಇವುಗಳು ಕಂಪೆನಿಯ ಪ್ರತಿಪಾದನೆಯನ್ನು ಮೌಲ್ಯಮಾಪನ ಮಾಡುವ ವೈಜ್ಞಾನಿಕ ಸಂಸ್ಥೆಯಾಗಿದೆ ಎಂದು CCPA ಆದೇಶವನ್ನು ಉಲ್ಲೇಖಿಸಿ ಗ್ರಾಹಕ ವ್ಯವಹಾರಗಳ ಸಚಿವಾಲಯ ಹೇಳಿದೆ.

ಸಹಾಯಕ ಔಷಧ ನಿಯಂತ್ರಕರು ಸಿಸಿಪಿಎಗೆ ಪತ್ರ ಬರೆದಿದ್ದು, ಕಂಪನಿಯು ಮಾಡಿರುವ ಪ್ರತಿಪಾದನೆಗಳು ತನಿಖೆಯಲ್ಲಿವೆ ಮತ್ತು ವಿಚಾರಣೆಯ ಪ್ರಕ್ರಿಯೆಯ ನಂತರ ಮುಂದಿನ ಕ್ರಮವನ್ನು ಪ್ರಾರಂಭಿಸಲಾಗುವುದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ರಾಮ ಮಂದಿರದ ಜಾಹಿರಾತು ಹಾಕದಂತೆ ಒತ್ತಡ ಹಾಕಿದ್ದು ಮುಸ್ಲಿಂ ಸಂಘಟನೆಗಳು ಮಾತ್ರವೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...