Homeಮುಖಪುಟಸೆನ್ಸೋಡೈನ್‌‌ನ ತಪ್ಪು ದಾರಿಗೆಳೆಯುವ ಜಾಹೀರಾತು ನಿಷೇಧಿಸಿ 10 ಲಕ್ಷ ದಂಡವನ್ನು ವಿಧಿಸಿದ ಸರ್ಕಾರ

ಸೆನ್ಸೋಡೈನ್‌‌ನ ತಪ್ಪು ದಾರಿಗೆಳೆಯುವ ಜಾಹೀರಾತು ನಿಷೇಧಿಸಿ 10 ಲಕ್ಷ ದಂಡವನ್ನು ವಿಧಿಸಿದ ಸರ್ಕಾರ

- Advertisement -
- Advertisement -

ಟೂತ್‌ಪೇಸ್ಟ್‌ ಬ್ರಾಂಡ್‌ ಆಗಿರುವ ಸೆನ್ಸೋಡೈನ್‌‌ ತನ್ನ ತಪ್ಪು ದಾರಿಗೆಳೆಯುವ ಜಾಹೀರಾತುಗಳನ್ನು ಏಳು ದಿನಗಳಲ್ಲಿ ನಿಲ್ಲುಸುವಂತೆ ಕೇಂದ್ರ ಗ್ರಾಹಕ ಸಂರಕ್ಷಣಾ ಪ್ರಾಧಿಕಾರ (CCPA) ಆದೇಶಿಸಿದ್ದು, ಬ್ರಾಂಡ್‌ಗೆ 10 ಲಕ್ಷ ದಂಡ ವಿಧಿಸಿದೆ ಎಂದು ಒಕ್ಕೂಟ ಸರ್ಕಾರ ಮಂಗಳವಾರ ಹೇಳಿಕೆಯಲ್ಲಿ ತಿಳಿಸಿದೆ.

‘ವಿಶ್ವದಾದ್ಯಂತ ದಂತವೈದ್ಯರಿಂದ ಶಿಫಾರಸು ಮಾಡಲ್ಪಟ್ಟಿದೆ’ ಮತ್ತು ‘ವಿಶ್ವದ ನಂ.1 ಸೂಕ್ಷ್ಮತೆಯ ಟೂತ್‌ಪೇಸ್ಟ್’ ಎಂದು ಹೇಳಿಕೊಳ್ಳುವ ಸೆನ್ಸೋಡೈನ್ ಉತ್ಪನ್ನಗಳ ಜಾಹೀರಾತುಗಳನ್ನು ಏಳು ದಿನಗಳೊಳಗೆ ಸ್ಥಗಿತಗೊಳಿಸುವಂತೆ ಆದೇಶಿಸಲಾಗಿದೆ ಎಂದು ಮಂಗಳವಾರ ಅಧಿಕೃತ ಪ್ರಕಟಣೆ ತಿಳಿಸಿದೆ. ಜೊತೆಗೆ 10 ಲಕ್ಷ ರೂ. ದಂಡ ಪಾವತಿಸುವಂತೆಯೂ ಪ್ರಾಧಿಕಾರ ಸೂಚಿಸಿದೆ.

CCPA ಅಂಗೀಕರಿಸಿದ ಹಿಂದಿನ ಆದೇಶದ ಪ್ರಕಾರ ವಿದೇಶಿ ದಂತವೈದ್ಯರ ಅನುಮೋದನೆಗಳನ್ನು ತೋರಿಸುವ ಜಾಹೀರಾತುಗಳನ್ನು ನಿಲ್ಲಿಸಲು ಆದೇಶಿಸಲಾಗಿದೆ.

ಇದನ್ನೂ ಓದಿ: ಮಂಗಳಸೂತ್ರ ಜಾಹಿರಾತು ವಾಪಾಸು ಪಡೆಯುವಂತೆ BJPಯಿಂದ ಬೆದರಿಕೆ

CCPA ಮುಖ್ಯಸ್ಥೆ ನಿಧಿ ಖರೆ ಅವರು, “ಇತ್ತೀಚೆಗೆ ಸೆನ್ಸೋಡೈನ್ ಉತ್ಪನ್ನಗಳ ತಪ್ಪುದಾರಿಗೆಳೆಯುವ ಜಾಹೀರಾತುಗಳ ವಿರುದ್ಧ ಆದೇಶವನ್ನು ಜಾರಿಗೊಳಿಸಿದೆ. ಇದು ‘ವಿಶ್ವದಾದ್ಯಂತ ದಂತವೈದ್ಯರಿಂದ ಶಿಫಾರಸು ಮಾಡಲಾಗಿದೆ’ ಮತ್ತು ‘ವಿಶ್ವದ ನಂ 1 ಸೂಕ್ಷ್ಮತೆಯ ಟೂತ್‌ಪೇಸ್ಟ್’ ಎಂದು ಹೇಳುತ್ತದೆ” ಎಂದು ಹೇಳಿದ್ದಾರೆ.

ವಿದೇಶಿ ದಂತವೈದ್ಯರ ಅನುಮೋದನೆಯನ್ನು ತೋರಿಸುವ ಸೆನ್ಸೋಡೈನ್ ಉತ್ಪನ್ನಗಳ ಜಾಹೀರಾತನ್ನು ಸ್ಥಗಿತಗೊಳಿಸುವಂತೆ ನಿರ್ದೇಶಿಸುವ ಆದೇಶವನ್ನು CCPA ಫೆಬ್ರವರಿ 9ರಂದು ಅಂಗೀಕರಿಸಿತ್ತು.

ದೂರದರ್ಶನ, ಯೂಟ್ಯೂಬ್, ಫೇಸ್‌ಬುಕ್ ಮತ್ತು ಟ್ವಿಟರ್ ಸೇರಿದಂತೆ ವಿವಿಧ ಪ್ಲಾಟ್‌ಫಾರ್ಮ್‌ಗಳಲ್ಲಿ ಸೆನ್ಸೋಡೈನ್ ಉತ್ಪನ್ನಗಳ ಜಾಹೀರಾತಿನ ವಿರುದ್ಧ CCPA ಸ್ವಯಂ ಪ್ರೇರಿತ ಕ್ರಮವನ್ನು ಪ್ರಾರಂಭಿಸಿದೆ. ಭಾರತದ ಹೊರಗೆ (ಯುನೈಟೆಡ್ ಕಿಂಗ್‌ಡಮ್) ಕೆಲಸ ಮಾಡುತ್ತಿರುವ ದಂತವೈದ್ಯರು ಹಲ್ಲುಗಳ ಸೂಕ್ಷ್ಮತೆಯ ವಿರುದ್ಧ ರಕ್ಷಣೆಗಾಗಿ, ‘ಸೆನ್ಸೋಡೈನ್ ರಾಪಿಡ್ ರಿಲೀಫ್’ ಮತ್ತು ‘ಸೆನ್ಸೋಡೈನ್ ಫ್ರೆಶ್ ಜೆಲ್’ ಎಂಬ ಸೆನ್‌ಸೋಡೈನ್ ಉತ್ಪನ್ನಗಳ ಬಳಕೆಯನ್ನು ಅನುಮೋದಿಸುವುದನ್ನು ಜಾಹೀರಾತುಗಳು ತೋರಿಸುತ್ತವೆ.

ಈ ಜಾಹೀರಾತುಗಳು ಸೆನ್ಸೋಡೈನ್ ಅನ್ನು ‘ವಿಶ್ವದಾದ್ಯಂತ ದಂತವೈದ್ಯರು ಶಿಫಾರಸು ಮಾಡಿದ್ದಾರೆ’, ‘ವಿಶ್ವದ ನಂ. 1 ಸೂಕ್ಷ್ಮತೆಯ ಟೂತ್‌ಪೇಸ್ಟ್’ ಮತ್ತು ‘60 ಸೆಕೆಂಡುಗಳಲ್ಲಿ ಟೂತ್‌ಪೇಸ್ಟ್‌ ಕಾರ್ಯನಿರ್ವಹಿಸುತ್ತದೆ ಎಂದು ವೈದ್ಯಕೀಯವಾಗಿ ಸಾಬೀತಾಗಿದೆ’ ಎಂದು ತೋರಿಸುತ್ತದೆ.

ಇದನ್ನೂ ಓದಿ: ‘ಸುಪ್ರೀಂಕೋರ್ಟ್‌ ಇ-ಮೇಲ್‌‌ನಲ್ಲೂ ಮೋದಿ ಜಾಹಿರಾತು!’ – ತೆಗೆದುಹಾಕಿ ಎಂದ ಸುಪ್ರೀಂ

ಕಂಪನಿಯು ಸಲ್ಲಿಸಿದ ಪ್ರತಿಕ್ರಿಯೆಯನ್ನು ಪರಿಶೀಲಿಸಿದ ನಂತರ, ‘ವಿಶ್ವದಾದ್ಯಂತ ದಂತವೈದ್ಯರು ಶಿಫಾರಸು ಮಾಡಿದ್ದಾರೆ’ ಮತ್ತು ‘ವಿಶ್ವದ ನಂ.1 ಸಂವೇದನಾಶೀಲತೆಯ ಟೂತ್‌ಪೇಸ್ಟ್’ ಎಂಬ ತನ್ನ ಪ್ರತಿಪಾದನೆಯನ್ನು ಸಾಬೀತುಪಡಿಸಲು ಕಂಪೆನಿ ಸಲ್ಲಿಸಿದ ಎರಡು ಮಾರುಕಟ್ಟೆ ಸಮೀಕ್ಷೆಗಳನ್ನು CCPA ನೋಡಿದೆ. ಆದರೆ ಜಾಹಿರಾತನ್ನು ಭಾರತದ ದಂತ ವೈದ್ಯರೊಂದಿಗೆ ಮಾತ್ರ ನಡೆಸಲಾಗಿದೆ ಎಂದು CCPA ಹೇಳಿದೆ.

“ಜಾಹೀರಾತುಗಳಲ್ಲಿ ಮಾಡಲಾದ ಪ್ರತಿಪಾದನೆಗಳನ್ನು ದೃಢೀಕರಿಸಲು ಅಥವಾ ಸೆನ್ಸೋಡೈನ್ ಉತ್ಪನ್ನಗಳನ್ನು ವಿಶ್ವದಾದ್ಯಂತ ಪ್ರಾಮುಖ್ಯತೆ ಇದೆ ಎಂದು ಸೂಚಿಸುವ ಯಾವುದೆ ಆಧಾರಗಳನ್ನು ಕಂಪೆನಿಯು ನೀಡಿಲ್ಲ. ಹೀಗಾಗಿ, ಯಾವುದೇ ಅದರ ಪ್ರತಿಪಾದನೆಯು ಸರಿಯಿಲ್ಲ” ಎಂದು ಸಚಿವಾಲಯ ಹೇಳಿದೆ.

ಟೂತ್‌ಪೇಸ್ಟ್‌ನ ಬ್ರ್ಯಾಂಡಿಂಗ್‌ನಲ್ಲಿನ ಮತ್ತೊಂದು ಪ್ರತಿಪಾದನೆ, ‘60 ಸೆಕೆಂಡುಗಳಲ್ಲಿ ಕಾರ್ಯನಿರ್ವಹಿಸುತ್ತದೆ’ ಎಂಬುವುದು. ಇದನ್ನು ಸಹಾಯಕ ಔಷಧ ನಿಯಂತ್ರಕರು, ರಾಜ್ಯ ಪರವಾನಗಿ ಪ್ರಾಧಿಕಾರ, ದಾದ್ರಾ ಮತ್ತು ನಗರ ಹವೇಲಿಯ ಸಿಲ್ವಾಸ್ಸಾದಿಂದ ತನಿಖೆ ನಡೆಸಲಾಗುತ್ತಿದೆ. ಇವುಗಳು ಕಂಪೆನಿಯ ಪ್ರತಿಪಾದನೆಯನ್ನು ಮೌಲ್ಯಮಾಪನ ಮಾಡುವ ವೈಜ್ಞಾನಿಕ ಸಂಸ್ಥೆಯಾಗಿದೆ ಎಂದು CCPA ಆದೇಶವನ್ನು ಉಲ್ಲೇಖಿಸಿ ಗ್ರಾಹಕ ವ್ಯವಹಾರಗಳ ಸಚಿವಾಲಯ ಹೇಳಿದೆ.

ಸಹಾಯಕ ಔಷಧ ನಿಯಂತ್ರಕರು ಸಿಸಿಪಿಎಗೆ ಪತ್ರ ಬರೆದಿದ್ದು, ಕಂಪನಿಯು ಮಾಡಿರುವ ಪ್ರತಿಪಾದನೆಗಳು ತನಿಖೆಯಲ್ಲಿವೆ ಮತ್ತು ವಿಚಾರಣೆಯ ಪ್ರಕ್ರಿಯೆಯ ನಂತರ ಮುಂದಿನ ಕ್ರಮವನ್ನು ಪ್ರಾರಂಭಿಸಲಾಗುವುದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ರಾಮ ಮಂದಿರದ ಜಾಹಿರಾತು ಹಾಕದಂತೆ ಒತ್ತಡ ಹಾಕಿದ್ದು ಮುಸ್ಲಿಂ ಸಂಘಟನೆಗಳು ಮಾತ್ರವೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...