Homeಮುಖಪುಟಸೆನ್ಸೋಡೈನ್‌‌ನ ತಪ್ಪು ದಾರಿಗೆಳೆಯುವ ಜಾಹೀರಾತು ನಿಷೇಧಿಸಿ 10 ಲಕ್ಷ ದಂಡವನ್ನು ವಿಧಿಸಿದ ಸರ್ಕಾರ

ಸೆನ್ಸೋಡೈನ್‌‌ನ ತಪ್ಪು ದಾರಿಗೆಳೆಯುವ ಜಾಹೀರಾತು ನಿಷೇಧಿಸಿ 10 ಲಕ್ಷ ದಂಡವನ್ನು ವಿಧಿಸಿದ ಸರ್ಕಾರ

- Advertisement -
- Advertisement -

ಟೂತ್‌ಪೇಸ್ಟ್‌ ಬ್ರಾಂಡ್‌ ಆಗಿರುವ ಸೆನ್ಸೋಡೈನ್‌‌ ತನ್ನ ತಪ್ಪು ದಾರಿಗೆಳೆಯುವ ಜಾಹೀರಾತುಗಳನ್ನು ಏಳು ದಿನಗಳಲ್ಲಿ ನಿಲ್ಲುಸುವಂತೆ ಕೇಂದ್ರ ಗ್ರಾಹಕ ಸಂರಕ್ಷಣಾ ಪ್ರಾಧಿಕಾರ (CCPA) ಆದೇಶಿಸಿದ್ದು, ಬ್ರಾಂಡ್‌ಗೆ 10 ಲಕ್ಷ ದಂಡ ವಿಧಿಸಿದೆ ಎಂದು ಒಕ್ಕೂಟ ಸರ್ಕಾರ ಮಂಗಳವಾರ ಹೇಳಿಕೆಯಲ್ಲಿ ತಿಳಿಸಿದೆ.

‘ವಿಶ್ವದಾದ್ಯಂತ ದಂತವೈದ್ಯರಿಂದ ಶಿಫಾರಸು ಮಾಡಲ್ಪಟ್ಟಿದೆ’ ಮತ್ತು ‘ವಿಶ್ವದ ನಂ.1 ಸೂಕ್ಷ್ಮತೆಯ ಟೂತ್‌ಪೇಸ್ಟ್’ ಎಂದು ಹೇಳಿಕೊಳ್ಳುವ ಸೆನ್ಸೋಡೈನ್ ಉತ್ಪನ್ನಗಳ ಜಾಹೀರಾತುಗಳನ್ನು ಏಳು ದಿನಗಳೊಳಗೆ ಸ್ಥಗಿತಗೊಳಿಸುವಂತೆ ಆದೇಶಿಸಲಾಗಿದೆ ಎಂದು ಮಂಗಳವಾರ ಅಧಿಕೃತ ಪ್ರಕಟಣೆ ತಿಳಿಸಿದೆ. ಜೊತೆಗೆ 10 ಲಕ್ಷ ರೂ. ದಂಡ ಪಾವತಿಸುವಂತೆಯೂ ಪ್ರಾಧಿಕಾರ ಸೂಚಿಸಿದೆ.

CCPA ಅಂಗೀಕರಿಸಿದ ಹಿಂದಿನ ಆದೇಶದ ಪ್ರಕಾರ ವಿದೇಶಿ ದಂತವೈದ್ಯರ ಅನುಮೋದನೆಗಳನ್ನು ತೋರಿಸುವ ಜಾಹೀರಾತುಗಳನ್ನು ನಿಲ್ಲಿಸಲು ಆದೇಶಿಸಲಾಗಿದೆ.

ಇದನ್ನೂ ಓದಿ: ಮಂಗಳಸೂತ್ರ ಜಾಹಿರಾತು ವಾಪಾಸು ಪಡೆಯುವಂತೆ BJPಯಿಂದ ಬೆದರಿಕೆ

CCPA ಮುಖ್ಯಸ್ಥೆ ನಿಧಿ ಖರೆ ಅವರು, “ಇತ್ತೀಚೆಗೆ ಸೆನ್ಸೋಡೈನ್ ಉತ್ಪನ್ನಗಳ ತಪ್ಪುದಾರಿಗೆಳೆಯುವ ಜಾಹೀರಾತುಗಳ ವಿರುದ್ಧ ಆದೇಶವನ್ನು ಜಾರಿಗೊಳಿಸಿದೆ. ಇದು ‘ವಿಶ್ವದಾದ್ಯಂತ ದಂತವೈದ್ಯರಿಂದ ಶಿಫಾರಸು ಮಾಡಲಾಗಿದೆ’ ಮತ್ತು ‘ವಿಶ್ವದ ನಂ 1 ಸೂಕ್ಷ್ಮತೆಯ ಟೂತ್‌ಪೇಸ್ಟ್’ ಎಂದು ಹೇಳುತ್ತದೆ” ಎಂದು ಹೇಳಿದ್ದಾರೆ.

ವಿದೇಶಿ ದಂತವೈದ್ಯರ ಅನುಮೋದನೆಯನ್ನು ತೋರಿಸುವ ಸೆನ್ಸೋಡೈನ್ ಉತ್ಪನ್ನಗಳ ಜಾಹೀರಾತನ್ನು ಸ್ಥಗಿತಗೊಳಿಸುವಂತೆ ನಿರ್ದೇಶಿಸುವ ಆದೇಶವನ್ನು CCPA ಫೆಬ್ರವರಿ 9ರಂದು ಅಂಗೀಕರಿಸಿತ್ತು.

ದೂರದರ್ಶನ, ಯೂಟ್ಯೂಬ್, ಫೇಸ್‌ಬುಕ್ ಮತ್ತು ಟ್ವಿಟರ್ ಸೇರಿದಂತೆ ವಿವಿಧ ಪ್ಲಾಟ್‌ಫಾರ್ಮ್‌ಗಳಲ್ಲಿ ಸೆನ್ಸೋಡೈನ್ ಉತ್ಪನ್ನಗಳ ಜಾಹೀರಾತಿನ ವಿರುದ್ಧ CCPA ಸ್ವಯಂ ಪ್ರೇರಿತ ಕ್ರಮವನ್ನು ಪ್ರಾರಂಭಿಸಿದೆ. ಭಾರತದ ಹೊರಗೆ (ಯುನೈಟೆಡ್ ಕಿಂಗ್‌ಡಮ್) ಕೆಲಸ ಮಾಡುತ್ತಿರುವ ದಂತವೈದ್ಯರು ಹಲ್ಲುಗಳ ಸೂಕ್ಷ್ಮತೆಯ ವಿರುದ್ಧ ರಕ್ಷಣೆಗಾಗಿ, ‘ಸೆನ್ಸೋಡೈನ್ ರಾಪಿಡ್ ರಿಲೀಫ್’ ಮತ್ತು ‘ಸೆನ್ಸೋಡೈನ್ ಫ್ರೆಶ್ ಜೆಲ್’ ಎಂಬ ಸೆನ್‌ಸೋಡೈನ್ ಉತ್ಪನ್ನಗಳ ಬಳಕೆಯನ್ನು ಅನುಮೋದಿಸುವುದನ್ನು ಜಾಹೀರಾತುಗಳು ತೋರಿಸುತ್ತವೆ.

ಈ ಜಾಹೀರಾತುಗಳು ಸೆನ್ಸೋಡೈನ್ ಅನ್ನು ‘ವಿಶ್ವದಾದ್ಯಂತ ದಂತವೈದ್ಯರು ಶಿಫಾರಸು ಮಾಡಿದ್ದಾರೆ’, ‘ವಿಶ್ವದ ನಂ. 1 ಸೂಕ್ಷ್ಮತೆಯ ಟೂತ್‌ಪೇಸ್ಟ್’ ಮತ್ತು ‘60 ಸೆಕೆಂಡುಗಳಲ್ಲಿ ಟೂತ್‌ಪೇಸ್ಟ್‌ ಕಾರ್ಯನಿರ್ವಹಿಸುತ್ತದೆ ಎಂದು ವೈದ್ಯಕೀಯವಾಗಿ ಸಾಬೀತಾಗಿದೆ’ ಎಂದು ತೋರಿಸುತ್ತದೆ.

ಇದನ್ನೂ ಓದಿ: ‘ಸುಪ್ರೀಂಕೋರ್ಟ್‌ ಇ-ಮೇಲ್‌‌ನಲ್ಲೂ ಮೋದಿ ಜಾಹಿರಾತು!’ – ತೆಗೆದುಹಾಕಿ ಎಂದ ಸುಪ್ರೀಂ

ಕಂಪನಿಯು ಸಲ್ಲಿಸಿದ ಪ್ರತಿಕ್ರಿಯೆಯನ್ನು ಪರಿಶೀಲಿಸಿದ ನಂತರ, ‘ವಿಶ್ವದಾದ್ಯಂತ ದಂತವೈದ್ಯರು ಶಿಫಾರಸು ಮಾಡಿದ್ದಾರೆ’ ಮತ್ತು ‘ವಿಶ್ವದ ನಂ.1 ಸಂವೇದನಾಶೀಲತೆಯ ಟೂತ್‌ಪೇಸ್ಟ್’ ಎಂಬ ತನ್ನ ಪ್ರತಿಪಾದನೆಯನ್ನು ಸಾಬೀತುಪಡಿಸಲು ಕಂಪೆನಿ ಸಲ್ಲಿಸಿದ ಎರಡು ಮಾರುಕಟ್ಟೆ ಸಮೀಕ್ಷೆಗಳನ್ನು CCPA ನೋಡಿದೆ. ಆದರೆ ಜಾಹಿರಾತನ್ನು ಭಾರತದ ದಂತ ವೈದ್ಯರೊಂದಿಗೆ ಮಾತ್ರ ನಡೆಸಲಾಗಿದೆ ಎಂದು CCPA ಹೇಳಿದೆ.

“ಜಾಹೀರಾತುಗಳಲ್ಲಿ ಮಾಡಲಾದ ಪ್ರತಿಪಾದನೆಗಳನ್ನು ದೃಢೀಕರಿಸಲು ಅಥವಾ ಸೆನ್ಸೋಡೈನ್ ಉತ್ಪನ್ನಗಳನ್ನು ವಿಶ್ವದಾದ್ಯಂತ ಪ್ರಾಮುಖ್ಯತೆ ಇದೆ ಎಂದು ಸೂಚಿಸುವ ಯಾವುದೆ ಆಧಾರಗಳನ್ನು ಕಂಪೆನಿಯು ನೀಡಿಲ್ಲ. ಹೀಗಾಗಿ, ಯಾವುದೇ ಅದರ ಪ್ರತಿಪಾದನೆಯು ಸರಿಯಿಲ್ಲ” ಎಂದು ಸಚಿವಾಲಯ ಹೇಳಿದೆ.

ಟೂತ್‌ಪೇಸ್ಟ್‌ನ ಬ್ರ್ಯಾಂಡಿಂಗ್‌ನಲ್ಲಿನ ಮತ್ತೊಂದು ಪ್ರತಿಪಾದನೆ, ‘60 ಸೆಕೆಂಡುಗಳಲ್ಲಿ ಕಾರ್ಯನಿರ್ವಹಿಸುತ್ತದೆ’ ಎಂಬುವುದು. ಇದನ್ನು ಸಹಾಯಕ ಔಷಧ ನಿಯಂತ್ರಕರು, ರಾಜ್ಯ ಪರವಾನಗಿ ಪ್ರಾಧಿಕಾರ, ದಾದ್ರಾ ಮತ್ತು ನಗರ ಹವೇಲಿಯ ಸಿಲ್ವಾಸ್ಸಾದಿಂದ ತನಿಖೆ ನಡೆಸಲಾಗುತ್ತಿದೆ. ಇವುಗಳು ಕಂಪೆನಿಯ ಪ್ರತಿಪಾದನೆಯನ್ನು ಮೌಲ್ಯಮಾಪನ ಮಾಡುವ ವೈಜ್ಞಾನಿಕ ಸಂಸ್ಥೆಯಾಗಿದೆ ಎಂದು CCPA ಆದೇಶವನ್ನು ಉಲ್ಲೇಖಿಸಿ ಗ್ರಾಹಕ ವ್ಯವಹಾರಗಳ ಸಚಿವಾಲಯ ಹೇಳಿದೆ.

ಸಹಾಯಕ ಔಷಧ ನಿಯಂತ್ರಕರು ಸಿಸಿಪಿಎಗೆ ಪತ್ರ ಬರೆದಿದ್ದು, ಕಂಪನಿಯು ಮಾಡಿರುವ ಪ್ರತಿಪಾದನೆಗಳು ತನಿಖೆಯಲ್ಲಿವೆ ಮತ್ತು ವಿಚಾರಣೆಯ ಪ್ರಕ್ರಿಯೆಯ ನಂತರ ಮುಂದಿನ ಕ್ರಮವನ್ನು ಪ್ರಾರಂಭಿಸಲಾಗುವುದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ರಾಮ ಮಂದಿರದ ಜಾಹಿರಾತು ಹಾಕದಂತೆ ಒತ್ತಡ ಹಾಕಿದ್ದು ಮುಸ್ಲಿಂ ಸಂಘಟನೆಗಳು ಮಾತ್ರವೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...