Homeಕರ್ನಾಟಕಕೊಲ್ಲೂರು ಮೂಕಾಂಬಿಕೆ ‘ಸಲಾಂ ಮಂಗಳಾರತಿ’ ಹೆಸರು ಬದಲಾವಣೆಗೆ ಸರ್ಕಾರ ನಿರ್ಧಾರ!

ಕೊಲ್ಲೂರು ಮೂಕಾಂಬಿಕೆ ‘ಸಲಾಂ ಮಂಗಳಾರತಿ’ ಹೆಸರು ಬದಲಾವಣೆಗೆ ಸರ್ಕಾರ ನಿರ್ಧಾರ!

- Advertisement -
- Advertisement -

ಬಿಜೆಪಿ ಬೆಂಬಲಿತ ಬಲಪಂಥೀಯ ಸಂಘಟನೆಗಳ ಒತ್ತಡಕ್ಕೆ ಕೊನೆಗೂ ಮಣಿದಿರುವ ರಾಜ್ಯ ಸರ್ಕಾರ, ಕೊಲ್ಲೂರು ಮೂಕಾಂಬಿಕೆ ದೇವಸ್ಥಾನದ ‘ಸಲಾಂ ಮಂಗಳಾರತಿ ಪೂಜೆ’ಯ ಹೆಸರನ್ನು ಬದಲಾಯಿಸಲು ಒಪ್ಪಿಕೊಂಡಿದೆ. ಸುಮಾರು 250 ವರ್ಷಕ್ಕೂ ಹೆಚ್ಚಿನ ಇತಿಹಾಸ ಹೊಂದಿರುವ ಮಂಗಳಾರತಿ ಪೂಜೆಯನ್ನು ‘ದೀವಟಿಗೆ ಮಂಗಳಾರತಿ ಪೂಜೆ’ ಎಂದು ಮರುನಾಮಕರಣ ಮಾಡಲು ಸರ್ಕಾರ ನಿರ್ಧರಿಸಿದೆ.

ಸ್ವಾತಂತ್ಯ್ರ ಹೋರಾಟಗಾರ ಟಿಪ್ಪುಸುಲ್ತಾನ್ 1763 ರಲ್ಲಿ ದೇವಸ್ಥಾನಕ್ಕೆ ಭೇಟಿ ನೀಡಿದ ನೆನಪಿಗಾಗಿ ಉಡುಪಿ ಜಿಲ್ಲೆಯ ಕೊಲ್ಲೂರಿನಲ್ಲಿ ಇರುವ ಮೂಕಾಂಬಿಕೆ ದೇವಸ್ಥಾನದಲ್ಲಿ ‘ಸಲಾಂ ಮಂಗಳಾರತಿ ಪೂಜೆ’ಯ ಆಚರಣೆಯ ಸಂಪ್ರದಾಯವನ್ನು ಪ್ರಾರಂಭಿಸಲಾಗಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸರ್ಕಾರ ನಿರ್ಧಾರದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಇತಿಹಾಸ ತಜ್ಞ ಪ್ರೊ.ನಂಜೇರಾಜ ಅರಸ್, ಓಟ್‌ ಬ್ಯಾಂಕಿಗಾಗಿ ಧರ್ಮ ದ್ವೇಷವನ್ನು ಮುಂದಿಟ್ಟು ಆರತಿಯ ಹೆಸರನ್ನು ಬದಲಾಯಿಸಿದ ಕೂಡಲೇ ದೇವರು ಮೆಚ್ಚುತ್ತಾನೆಯೆ ಎಂದು ಪ್ರಶ್ನಿಸಿದರು.

ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಅವರು,“ತನ್ನ ರಾಜ್ಯದ ಒಳಗಡೆಯಿದ್ದ ಎಲ್ಲಾ ದೇವಸ್ಥಾನಗಳಿಗೆ ಟಿಪ್ಪು ದತ್ತಿಗಳನ್ನು ನೀಡಿದ್ದ. ಅದರಲ್ಲೂ ಕೊಲ್ಲೂರಿನ ಮೂಕಾಂಬಿಕ ದೇವಸ್ಥಾನಕ್ಕೆ ಜಮೀನು, ಪೂಜಾ ಸಾಮಾಗ್ರಿಗಳ ಕೊಡುಗೆ ನೀಡಿದ್ದ. ಹೀಗಾಗಿ ತಮ್ಮ ದೇವಸ್ಥಾನಕ್ಕೆ ರಕ್ಷಣೆ ಮತ್ತು ದತ್ತಿಗಳನ್ನು ನೀಡಿದ ರಾಜನಿಗೆ ಧನ್ಯವಾದ ಸಮರ್ಪಿಸುವ ಸಲುವಾಗಿ ಅವುಗಳನ್ನು ಪ್ರಾರಂಭಿಸಲಾಗಿತ್ತು” ಎಂದು ಹೇಳಿದರು.

ಇದನ್ನೂ ಓದಿ: ನಾನು ದಲಿತ ಎಂಬ ಕಾರಣಕ್ಕೆ ದೇವಾಯಲದ ಹೊರಗೆ ನಿಲ್ಲಿಸಿ ಮಂಗಳಾರತಿ ತರುತ್ತಾರೆ: ಡಾ.ಜಿ. ಪರಮೇಶ್ವರ್‌ ಆಕ್ರೋಶ

“ಟಿಪ್ಪು ಸುಲ್ತಾನ್‌ ಅರ್ಜಿ ಹಾಕಿ ನನ್ನ ಹೆಸರಿನಲ್ಲಿ ಆರತಿ ಮಾಡಿ ಎಂದು ಒತ್ತಾಯ ಮಾಡಿಲ್ಲ. ಜನರಿಗೆ ಒಳ್ಳೆಯ ಮನಸ್ಸಿತ್ತು ಹಾಗಾಗಿ ಮುಸ್ಲಿಂ ರಾಜ ಎಂದು ನೋಡದೆ ತಮಗೆ ರಕ್ಷಣೆ ಒದಗಿಸಿದವರಿಗೆ ಧನ್ಯವಾದ ಸಮರ್ಪಿಸಿದ್ದಾರೆ. ಇದನ್ನು ನಿಲ್ಲಿಸಿದ ಕೂಡಲೆ ಇತಿಹಾಸ ಅಳಿಸಿಹೋಗುವುದಿಲ್ಲ” ಎಂದು ಅವರು ಹೇಳಿದರು.

“ಈ ಸರ್ಕಾರಕ್ಕೆ ಕಡಿದು ಕಟ್ಟೆ ಹಾಕಿದ್ದೇವೆ ಎಂದು ಹೇಳಿಕೊಳ್ಳುವ ಯಾವುದೆ ಸಾಧನೆಯ ಕೆಲಸವನ್ನು ಮಾಡಿಲ್ಲ. ಇದು ಹಿಂದೂ ಓಟ್‌ಗಳನ್ನು ಕ್ರೂಡೀಕರಿಸಿ ಚುನಾವಣೆ ಗೆಲ್ಲುವ ತಂತ್ರ ಬಿಟ್ಟರೆ ಇನ್ನೇನಿಲ್ಲ. ಧರ್ಮ ದ್ವೇಷದ ಬೆಂಕಿ ಹಾಕಿಯೆ ಹಿಂದೂ ಓಟ್‌ಗಳನ್ನು ಪಡೆದುಕೊಳ್ಳಲು ಹೊರಟಿದ್ದಾರೆ” ಎಂದು ಪ್ರೊ. ನಂಜರಾಜೆ ಅರಸ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮಬ್ಬಕ್ತರಿಗೆ ಗೊತ್ತಿಲ್ಲ ಅನ್ಸುತ್ತೆ ಈ ದೇಶಕ್ಕೆ ಮುಸ್ಲಿಂರು ಬರದಿದ್ರೆ, ಮುಸ್ಲಿಂರ ಕೊಡುಗೆಗಳು ಇಲ್ದಿದ್ರೆ ಈ ದೇಶ ಎಷ್ಟು ಹಿಂದುಳಿದ ದೇಶ ಆಗಿರ್ತಿತ್ತು ಅಂತ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...