Homeಕರ್ನಾಟಕಕೊಲ್ಲೂರು ಮೂಕಾಂಬಿಕೆ ‘ಸಲಾಂ ಮಂಗಳಾರತಿ’ ಹೆಸರು ಬದಲಾವಣೆಗೆ ಸರ್ಕಾರ ನಿರ್ಧಾರ!

ಕೊಲ್ಲೂರು ಮೂಕಾಂಬಿಕೆ ‘ಸಲಾಂ ಮಂಗಳಾರತಿ’ ಹೆಸರು ಬದಲಾವಣೆಗೆ ಸರ್ಕಾರ ನಿರ್ಧಾರ!

- Advertisement -
- Advertisement -

ಬಿಜೆಪಿ ಬೆಂಬಲಿತ ಬಲಪಂಥೀಯ ಸಂಘಟನೆಗಳ ಒತ್ತಡಕ್ಕೆ ಕೊನೆಗೂ ಮಣಿದಿರುವ ರಾಜ್ಯ ಸರ್ಕಾರ, ಕೊಲ್ಲೂರು ಮೂಕಾಂಬಿಕೆ ದೇವಸ್ಥಾನದ ‘ಸಲಾಂ ಮಂಗಳಾರತಿ ಪೂಜೆ’ಯ ಹೆಸರನ್ನು ಬದಲಾಯಿಸಲು ಒಪ್ಪಿಕೊಂಡಿದೆ. ಸುಮಾರು 250 ವರ್ಷಕ್ಕೂ ಹೆಚ್ಚಿನ ಇತಿಹಾಸ ಹೊಂದಿರುವ ಮಂಗಳಾರತಿ ಪೂಜೆಯನ್ನು ‘ದೀವಟಿಗೆ ಮಂಗಳಾರತಿ ಪೂಜೆ’ ಎಂದು ಮರುನಾಮಕರಣ ಮಾಡಲು ಸರ್ಕಾರ ನಿರ್ಧರಿಸಿದೆ.

ಸ್ವಾತಂತ್ಯ್ರ ಹೋರಾಟಗಾರ ಟಿಪ್ಪುಸುಲ್ತಾನ್ 1763 ರಲ್ಲಿ ದೇವಸ್ಥಾನಕ್ಕೆ ಭೇಟಿ ನೀಡಿದ ನೆನಪಿಗಾಗಿ ಉಡುಪಿ ಜಿಲ್ಲೆಯ ಕೊಲ್ಲೂರಿನಲ್ಲಿ ಇರುವ ಮೂಕಾಂಬಿಕೆ ದೇವಸ್ಥಾನದಲ್ಲಿ ‘ಸಲಾಂ ಮಂಗಳಾರತಿ ಪೂಜೆ’ಯ ಆಚರಣೆಯ ಸಂಪ್ರದಾಯವನ್ನು ಪ್ರಾರಂಭಿಸಲಾಗಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸರ್ಕಾರ ನಿರ್ಧಾರದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಇತಿಹಾಸ ತಜ್ಞ ಪ್ರೊ.ನಂಜೇರಾಜ ಅರಸ್, ಓಟ್‌ ಬ್ಯಾಂಕಿಗಾಗಿ ಧರ್ಮ ದ್ವೇಷವನ್ನು ಮುಂದಿಟ್ಟು ಆರತಿಯ ಹೆಸರನ್ನು ಬದಲಾಯಿಸಿದ ಕೂಡಲೇ ದೇವರು ಮೆಚ್ಚುತ್ತಾನೆಯೆ ಎಂದು ಪ್ರಶ್ನಿಸಿದರು.

ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಅವರು,“ತನ್ನ ರಾಜ್ಯದ ಒಳಗಡೆಯಿದ್ದ ಎಲ್ಲಾ ದೇವಸ್ಥಾನಗಳಿಗೆ ಟಿಪ್ಪು ದತ್ತಿಗಳನ್ನು ನೀಡಿದ್ದ. ಅದರಲ್ಲೂ ಕೊಲ್ಲೂರಿನ ಮೂಕಾಂಬಿಕ ದೇವಸ್ಥಾನಕ್ಕೆ ಜಮೀನು, ಪೂಜಾ ಸಾಮಾಗ್ರಿಗಳ ಕೊಡುಗೆ ನೀಡಿದ್ದ. ಹೀಗಾಗಿ ತಮ್ಮ ದೇವಸ್ಥಾನಕ್ಕೆ ರಕ್ಷಣೆ ಮತ್ತು ದತ್ತಿಗಳನ್ನು ನೀಡಿದ ರಾಜನಿಗೆ ಧನ್ಯವಾದ ಸಮರ್ಪಿಸುವ ಸಲುವಾಗಿ ಅವುಗಳನ್ನು ಪ್ರಾರಂಭಿಸಲಾಗಿತ್ತು” ಎಂದು ಹೇಳಿದರು.

ಇದನ್ನೂ ಓದಿ: ನಾನು ದಲಿತ ಎಂಬ ಕಾರಣಕ್ಕೆ ದೇವಾಯಲದ ಹೊರಗೆ ನಿಲ್ಲಿಸಿ ಮಂಗಳಾರತಿ ತರುತ್ತಾರೆ: ಡಾ.ಜಿ. ಪರಮೇಶ್ವರ್‌ ಆಕ್ರೋಶ

“ಟಿಪ್ಪು ಸುಲ್ತಾನ್‌ ಅರ್ಜಿ ಹಾಕಿ ನನ್ನ ಹೆಸರಿನಲ್ಲಿ ಆರತಿ ಮಾಡಿ ಎಂದು ಒತ್ತಾಯ ಮಾಡಿಲ್ಲ. ಜನರಿಗೆ ಒಳ್ಳೆಯ ಮನಸ್ಸಿತ್ತು ಹಾಗಾಗಿ ಮುಸ್ಲಿಂ ರಾಜ ಎಂದು ನೋಡದೆ ತಮಗೆ ರಕ್ಷಣೆ ಒದಗಿಸಿದವರಿಗೆ ಧನ್ಯವಾದ ಸಮರ್ಪಿಸಿದ್ದಾರೆ. ಇದನ್ನು ನಿಲ್ಲಿಸಿದ ಕೂಡಲೆ ಇತಿಹಾಸ ಅಳಿಸಿಹೋಗುವುದಿಲ್ಲ” ಎಂದು ಅವರು ಹೇಳಿದರು.

“ಈ ಸರ್ಕಾರಕ್ಕೆ ಕಡಿದು ಕಟ್ಟೆ ಹಾಕಿದ್ದೇವೆ ಎಂದು ಹೇಳಿಕೊಳ್ಳುವ ಯಾವುದೆ ಸಾಧನೆಯ ಕೆಲಸವನ್ನು ಮಾಡಿಲ್ಲ. ಇದು ಹಿಂದೂ ಓಟ್‌ಗಳನ್ನು ಕ್ರೂಡೀಕರಿಸಿ ಚುನಾವಣೆ ಗೆಲ್ಲುವ ತಂತ್ರ ಬಿಟ್ಟರೆ ಇನ್ನೇನಿಲ್ಲ. ಧರ್ಮ ದ್ವೇಷದ ಬೆಂಕಿ ಹಾಕಿಯೆ ಹಿಂದೂ ಓಟ್‌ಗಳನ್ನು ಪಡೆದುಕೊಳ್ಳಲು ಹೊರಟಿದ್ದಾರೆ” ಎಂದು ಪ್ರೊ. ನಂಜರಾಜೆ ಅರಸ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮಬ್ಬಕ್ತರಿಗೆ ಗೊತ್ತಿಲ್ಲ ಅನ್ಸುತ್ತೆ ಈ ದೇಶಕ್ಕೆ ಮುಸ್ಲಿಂರು ಬರದಿದ್ರೆ, ಮುಸ್ಲಿಂರ ಕೊಡುಗೆಗಳು ಇಲ್ದಿದ್ರೆ ಈ ದೇಶ ಎಷ್ಟು ಹಿಂದುಳಿದ ದೇಶ ಆಗಿರ್ತಿತ್ತು ಅಂತ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...