Homeಮುಖಪುಟಸರ್ಕಾರಿ ಬಂಗಲೆ ತೆರವು: ಪ್ರಿಯಾಂಕಾ ಗಾಂಧಿ ಮತ್ತು ಕೇಂದ್ರ ಸಚಿವರ ಜಟಾಪಟಿ

ಸರ್ಕಾರಿ ಬಂಗಲೆ ತೆರವು: ಪ್ರಿಯಾಂಕಾ ಗಾಂಧಿ ಮತ್ತು ಕೇಂದ್ರ ಸಚಿವರ ಜಟಾಪಟಿ

ಪ್ರಿಯಾಂಕಾ ಗಾಂಧಿಗೆ 1997 ರಲ್ಲಿ ಮಂಜೂರು ಮಾಡಿರುವ #35, ಲೋಧಿ ಎಸ್ಟೇಟ್ ಬಂಗಲೆಗೆಯನ್ನು ಖಾಲಿ ಮಾಡುವಂತೆ ಜುಲೈ 1 ರಂದು ಸರ್ಕಾರವು  ನೋಟೀಸ್ ನೀಡಿತ್ತು.

- Advertisement -
- Advertisement -

ಪ್ರಿಯಾಂಕಾ ಗಾಂಧಿಗೆ ನೀಡಿದ್ದ ಸರ್ಕಾರಿ ಬಂಗಲೆಯನ್ನು ತೆರವುಗೊಳಿಸಬೇಕೆಂದು ಸರ್ಕಾರ ಆದೇಶ ಹೊರಡಿಸಿದ ನಂತರ ವಿವಾದ ದೊಡ್ಡದಾಗಿದೆ. ಈ ವಿಷಯವಾಗಿ ಪ್ರಿಯಾಂಕ ಗಾಂಧಿ ಪರವಾಗಿ ಹಿರಿಯ ಕಾಂಗ್ರೆಸ್ ನಾಯಕರು ವಕಾಲತ್ತು ವಹಿಸಿದ್ದಾರೆ ಎಂದು ಕೇಂದ್ರ ಸಚಿವ ಹರ್ದೀಪ್ ಪುರಿ ಆರೋಪಿಸಿದರೆ, ಅದನ್ನು ಪ್ರಿಯಾಂಕ ಗಾಂಧಿ ಅಲ್ಲಗಳೆದಿದ್ದು ಅದು ಫೇಕ್ ನ್ಯೂಸ್ ಎಂದು ಟ್ವೀಟ್‌ ಮಾಡಿದ್ದಾರೆ.

“ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಉಳಿದುಕೊಂಡಿರುವ ಸರ್ಕಾರದ ಬಂಗಲೆಯನ್ನು ಕಾಂಗ್ರೆಸ್ ಸಂಸದರಿಗೆ ಬಿಟ್ಟುಕೊಡಬೇಕೆಂದು ಪ್ರಬಲ ಕಾಂಗ್ರೆಸ್ ಮುಖಂಡರು ವಿನಂತಿಸಿದ್ದಾರೆ. ಆದರೆ ಪ್ರಿಯಾಂಕಗಾಂಧಿ ಅಲ್ಲಿಯೇ ಉಳಿಯುವ ಸಾಧ್ಯವಿದೆ” ಎಂದು ಕೇಂದ್ರ ಸಚಿವ ಹರ್ದೀಪ್ ಪುರಿ ಇಂದು ಟ್ವೀಟ್ ನಲ್ಲಿ ಆರೋಪಿಸಿದ್ದಾರೆ.

ಪ್ರಿಯಾಂಕಾ ಗಾಂಧಿಗೆ 1997ರಲ್ಲಿ ಮಂಜೂರು ಮಾಡಿರುವ #35, ಲೋಧಿ ಎಸ್ಟೇಟ್ ಬಂಗಲೆಯನ್ನು ಖಾಲಿ ಮಾಡುವಂತೆ ಜುಲೈ 1 ರಂದು ಸರ್ಕಾರವು  ನೋಟೀಸ್ ನೀಡಿತ್ತು. ಕಳೆದ ವರ್ಷ ಪ್ರಿಯಾಂಕಾಗೆ ನೀಡಿದ್ದ ವಿಶೇಷ ರಕ್ಷಣೆ ಭದ್ರತಾ ಪಡೆಯನ್ನು ಹಿಂತೆಗೆದುಕೊಂಡ ನಂತರ ಬಂಗಲೆಯನ್ನು ಆಗಸ್ಟ್ 1 ರೊಳಗೆ ಖಾಲಿ ಎಂದು ಕೇಂದ್ರ ನೋಟಿಸ್ ನೀಡಿದೆ.

ಪ್ರಿಯಾಂಕಾ ಗಾಂಧಿ ಕೋರಿಕೆಯ ಮೇರೆಗೆ ಆಕೆಗೆ ವಿಸ್ತರಣೆ ನೀಡಲಾಗಿದೆ ಎಂದು ಪತ್ರಿಕೆಯೊಂದು ವರದಿ ಮಾಡಿದೆ.

“ಇದು ನಕಲಿ ಸುದ್ದಿ. ನಾನು ಸರ್ಕಾರಕ್ಕೆ ಅಂತಹ ಯಾವುದೇ ವಿನಂತಿಯನ್ನು ಮಾಡಿಲ್ಲ. ಜುಲೈ 1 ರಂದು ನನಗೆ ಹಸ್ತಾಂತರಿಸಿದ ಪತ್ರದ ಪ್ರಕಾರ, ಆಗಸ್ಟ್ 1 ರೊಳಗೆ ನಾನು #35, ಲೋಧಿ ಎಸ್ಟೇಟ್ ಬಂಗಲೆಗೆಯನ್ನು ಖಾಲಿ ಮಾಡುತ್ತೇನೆ” ಎಂದು ಅವರು ಟ್ವೀಟ್ ನಲ್ಲಿ ಹೇಳಿದ್ದಾರೆ.

ವಸತಿ ಸಚಿವರಾದ ಹರ್ದೀಪ್ ಪುರಿ ಅವರು, “ಸತ್ಯಗಳು ತಮ್ಮಷ್ಟಕ್ಕೆ ತಾನೇ ಮಾತನಾಡುತ್ತವೆ! ಪಕ್ಷದಲ್ಲಿ ಹೆಚ್ಚಿನ ಪ್ರಭಾವವನ್ನು ಹೊಂದಿರುವ ಪ್ರಬಲ ಕಾಂಗ್ರೆಸ್ ಮುಖಂಡರು 4 ಜುಲೈ 2020 ರಂದು ಮಧ್ಯಾಹ್ನ 12:05 ಕ್ಕೆ ನನಗೆ ಕರೆ ಮಾಡಿದ್ದರು. #35, ಲೋಧಿ ಎಸ್ಟೇಟ್ ಬಂಗಲೆಗೆಯನ್ನು ಇನ್ನೊಬ್ಬ ಕಾಂಗ್ರೆಸ್‌ ಸಂಸದರಿಗೆ ಮಂಜೂರು ಮಾಡಬೇಕೆಂದು ವಿನಂತಿಸಿದರು” ಎಂದು ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯೆಯಾಗಿ ಪ್ರಿಯಾಂಕಾ ಗಾಂಧಿ, “ಅವರಿಗೆ ಮತ್ತು ನಿಮ್ಮ ಪರಿಗಣನೆಗೆ ಧನ್ಯವಾದಗಳು. ಆದರೆ ವಾಸ್ತವದಲ್ಲಿ ಏನೂ ಬದಲಾವಣೆಯಿಲ್ಲ. ನಾನು ಸರ್ಕಾರಕ್ಕೆ ಅಂತಹ ಯಾವುದೇ ವಿನಂತಿಯನ್ನು ಮಾಡಿಲ್ಲ. ಮಾಡುವುದೂ ಇಲ್ಲ. ನಾನು ಹೇಳಿದಂತೆ, ಆಗಸ್ಟ್ 1 ರೊಳಗೆ ಮನೆ ಖಾಲಿ ಮಾಡುತ್ತೇನೆ” ಎಂದರು.

ಸಚಿವರ ಟ್ವೀಟ್‌ಗೆ ಕಾಂಗ್ರೆಸ್ ಮುಖಂಡ ರಂದೀಪ್ ಸುರ್ಜೆವಾಲಾ ಕೂಡ ಪ್ರತಿಕ್ರಿಯಿಸಿದ್ದರು. ಪ್ರಿಯಾಂಕಾ ಜನರಿಗಾಗಿ ಹೋರಾಡುವವರು. ಅವರಿಗೆ ನಿಮ್ಮ ಸಹಾನುಭೂತಿ ಬೇಕಾಗಿಲ್ಲ. ಹಾಗಾಗಿ ನಿಮ್ಮ ಬಡಿವಾರವನ್ನು ನಿಲ್ಲಿಸಿ. ಆ ಬಂಗಲೆಯನ್ನು ನೀವು ಕಾಂಗ್ರೆಸ್ ಸಂಸದರಿಗೆ ಕೊಡುತ್ತೀರೋ ಅಥವಾ ಬಿಜೆಪಿ ವಕ್ತಾರರಿಗೆ ಕೊಡುತ್ತೀರೋ? ಎಂದು ಪ್ರಶ್ನಿಸಿದ್ದಾರೆ.

ಪ್ರಿಯಾಂಕಾ ಗಾಂಧಿ ಅವರ ಪತಿ ರಾಬರ್ಟ್ ವಾದ್ರಾ ಕೂಡ ಫೇಸ್‌ಬುಕ್‌ನಲ್ಲಿ ಪ್ರತಿಕ್ರಿಯಿಸಿ ಪೋಸ್ಟ್ ಮಾಡಿದ್ದು, ಗಡುವಿಗೆ ಒಂದು ವಾರ ಮೊದಲು ಹೊರಡುವುದಾಗಿ ಹೇಳಿದ್ದಾರೆ.


ಇದನ್ನೂ ಓದಿ: ಉತ್ತರ ಪ್ರದೇಶವನ್ನು ಬಿಜೆಪಿ ’ಅಪರಾಧ ಪ್ರದೇಶ’ವನ್ನಾಗಿ ಮಾಡಿದೆ: ಪ್ರಿಯಾಂಕ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...