Homeಮುಖಪುಟಸರ್ಕಾರಿ ಬಂಗಲೆ ತೆರವು: ಪ್ರಿಯಾಂಕಾ ಗಾಂಧಿ ಮತ್ತು ಕೇಂದ್ರ ಸಚಿವರ ಜಟಾಪಟಿ

ಸರ್ಕಾರಿ ಬಂಗಲೆ ತೆರವು: ಪ್ರಿಯಾಂಕಾ ಗಾಂಧಿ ಮತ್ತು ಕೇಂದ್ರ ಸಚಿವರ ಜಟಾಪಟಿ

ಪ್ರಿಯಾಂಕಾ ಗಾಂಧಿಗೆ 1997 ರಲ್ಲಿ ಮಂಜೂರು ಮಾಡಿರುವ #35, ಲೋಧಿ ಎಸ್ಟೇಟ್ ಬಂಗಲೆಗೆಯನ್ನು ಖಾಲಿ ಮಾಡುವಂತೆ ಜುಲೈ 1 ರಂದು ಸರ್ಕಾರವು  ನೋಟೀಸ್ ನೀಡಿತ್ತು.

- Advertisement -
- Advertisement -

ಪ್ರಿಯಾಂಕಾ ಗಾಂಧಿಗೆ ನೀಡಿದ್ದ ಸರ್ಕಾರಿ ಬಂಗಲೆಯನ್ನು ತೆರವುಗೊಳಿಸಬೇಕೆಂದು ಸರ್ಕಾರ ಆದೇಶ ಹೊರಡಿಸಿದ ನಂತರ ವಿವಾದ ದೊಡ್ಡದಾಗಿದೆ. ಈ ವಿಷಯವಾಗಿ ಪ್ರಿಯಾಂಕ ಗಾಂಧಿ ಪರವಾಗಿ ಹಿರಿಯ ಕಾಂಗ್ರೆಸ್ ನಾಯಕರು ವಕಾಲತ್ತು ವಹಿಸಿದ್ದಾರೆ ಎಂದು ಕೇಂದ್ರ ಸಚಿವ ಹರ್ದೀಪ್ ಪುರಿ ಆರೋಪಿಸಿದರೆ, ಅದನ್ನು ಪ್ರಿಯಾಂಕ ಗಾಂಧಿ ಅಲ್ಲಗಳೆದಿದ್ದು ಅದು ಫೇಕ್ ನ್ಯೂಸ್ ಎಂದು ಟ್ವೀಟ್‌ ಮಾಡಿದ್ದಾರೆ.

“ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಉಳಿದುಕೊಂಡಿರುವ ಸರ್ಕಾರದ ಬಂಗಲೆಯನ್ನು ಕಾಂಗ್ರೆಸ್ ಸಂಸದರಿಗೆ ಬಿಟ್ಟುಕೊಡಬೇಕೆಂದು ಪ್ರಬಲ ಕಾಂಗ್ರೆಸ್ ಮುಖಂಡರು ವಿನಂತಿಸಿದ್ದಾರೆ. ಆದರೆ ಪ್ರಿಯಾಂಕಗಾಂಧಿ ಅಲ್ಲಿಯೇ ಉಳಿಯುವ ಸಾಧ್ಯವಿದೆ” ಎಂದು ಕೇಂದ್ರ ಸಚಿವ ಹರ್ದೀಪ್ ಪುರಿ ಇಂದು ಟ್ವೀಟ್ ನಲ್ಲಿ ಆರೋಪಿಸಿದ್ದಾರೆ.

ಪ್ರಿಯಾಂಕಾ ಗಾಂಧಿಗೆ 1997ರಲ್ಲಿ ಮಂಜೂರು ಮಾಡಿರುವ #35, ಲೋಧಿ ಎಸ್ಟೇಟ್ ಬಂಗಲೆಯನ್ನು ಖಾಲಿ ಮಾಡುವಂತೆ ಜುಲೈ 1 ರಂದು ಸರ್ಕಾರವು  ನೋಟೀಸ್ ನೀಡಿತ್ತು. ಕಳೆದ ವರ್ಷ ಪ್ರಿಯಾಂಕಾಗೆ ನೀಡಿದ್ದ ವಿಶೇಷ ರಕ್ಷಣೆ ಭದ್ರತಾ ಪಡೆಯನ್ನು ಹಿಂತೆಗೆದುಕೊಂಡ ನಂತರ ಬಂಗಲೆಯನ್ನು ಆಗಸ್ಟ್ 1 ರೊಳಗೆ ಖಾಲಿ ಎಂದು ಕೇಂದ್ರ ನೋಟಿಸ್ ನೀಡಿದೆ.

ಪ್ರಿಯಾಂಕಾ ಗಾಂಧಿ ಕೋರಿಕೆಯ ಮೇರೆಗೆ ಆಕೆಗೆ ವಿಸ್ತರಣೆ ನೀಡಲಾಗಿದೆ ಎಂದು ಪತ್ರಿಕೆಯೊಂದು ವರದಿ ಮಾಡಿದೆ.

“ಇದು ನಕಲಿ ಸುದ್ದಿ. ನಾನು ಸರ್ಕಾರಕ್ಕೆ ಅಂತಹ ಯಾವುದೇ ವಿನಂತಿಯನ್ನು ಮಾಡಿಲ್ಲ. ಜುಲೈ 1 ರಂದು ನನಗೆ ಹಸ್ತಾಂತರಿಸಿದ ಪತ್ರದ ಪ್ರಕಾರ, ಆಗಸ್ಟ್ 1 ರೊಳಗೆ ನಾನು #35, ಲೋಧಿ ಎಸ್ಟೇಟ್ ಬಂಗಲೆಗೆಯನ್ನು ಖಾಲಿ ಮಾಡುತ್ತೇನೆ” ಎಂದು ಅವರು ಟ್ವೀಟ್ ನಲ್ಲಿ ಹೇಳಿದ್ದಾರೆ.

ವಸತಿ ಸಚಿವರಾದ ಹರ್ದೀಪ್ ಪುರಿ ಅವರು, “ಸತ್ಯಗಳು ತಮ್ಮಷ್ಟಕ್ಕೆ ತಾನೇ ಮಾತನಾಡುತ್ತವೆ! ಪಕ್ಷದಲ್ಲಿ ಹೆಚ್ಚಿನ ಪ್ರಭಾವವನ್ನು ಹೊಂದಿರುವ ಪ್ರಬಲ ಕಾಂಗ್ರೆಸ್ ಮುಖಂಡರು 4 ಜುಲೈ 2020 ರಂದು ಮಧ್ಯಾಹ್ನ 12:05 ಕ್ಕೆ ನನಗೆ ಕರೆ ಮಾಡಿದ್ದರು. #35, ಲೋಧಿ ಎಸ್ಟೇಟ್ ಬಂಗಲೆಗೆಯನ್ನು ಇನ್ನೊಬ್ಬ ಕಾಂಗ್ರೆಸ್‌ ಸಂಸದರಿಗೆ ಮಂಜೂರು ಮಾಡಬೇಕೆಂದು ವಿನಂತಿಸಿದರು” ಎಂದು ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯೆಯಾಗಿ ಪ್ರಿಯಾಂಕಾ ಗಾಂಧಿ, “ಅವರಿಗೆ ಮತ್ತು ನಿಮ್ಮ ಪರಿಗಣನೆಗೆ ಧನ್ಯವಾದಗಳು. ಆದರೆ ವಾಸ್ತವದಲ್ಲಿ ಏನೂ ಬದಲಾವಣೆಯಿಲ್ಲ. ನಾನು ಸರ್ಕಾರಕ್ಕೆ ಅಂತಹ ಯಾವುದೇ ವಿನಂತಿಯನ್ನು ಮಾಡಿಲ್ಲ. ಮಾಡುವುದೂ ಇಲ್ಲ. ನಾನು ಹೇಳಿದಂತೆ, ಆಗಸ್ಟ್ 1 ರೊಳಗೆ ಮನೆ ಖಾಲಿ ಮಾಡುತ್ತೇನೆ” ಎಂದರು.

ಸಚಿವರ ಟ್ವೀಟ್‌ಗೆ ಕಾಂಗ್ರೆಸ್ ಮುಖಂಡ ರಂದೀಪ್ ಸುರ್ಜೆವಾಲಾ ಕೂಡ ಪ್ರತಿಕ್ರಿಯಿಸಿದ್ದರು. ಪ್ರಿಯಾಂಕಾ ಜನರಿಗಾಗಿ ಹೋರಾಡುವವರು. ಅವರಿಗೆ ನಿಮ್ಮ ಸಹಾನುಭೂತಿ ಬೇಕಾಗಿಲ್ಲ. ಹಾಗಾಗಿ ನಿಮ್ಮ ಬಡಿವಾರವನ್ನು ನಿಲ್ಲಿಸಿ. ಆ ಬಂಗಲೆಯನ್ನು ನೀವು ಕಾಂಗ್ರೆಸ್ ಸಂಸದರಿಗೆ ಕೊಡುತ್ತೀರೋ ಅಥವಾ ಬಿಜೆಪಿ ವಕ್ತಾರರಿಗೆ ಕೊಡುತ್ತೀರೋ? ಎಂದು ಪ್ರಶ್ನಿಸಿದ್ದಾರೆ.

ಪ್ರಿಯಾಂಕಾ ಗಾಂಧಿ ಅವರ ಪತಿ ರಾಬರ್ಟ್ ವಾದ್ರಾ ಕೂಡ ಫೇಸ್‌ಬುಕ್‌ನಲ್ಲಿ ಪ್ರತಿಕ್ರಿಯಿಸಿ ಪೋಸ್ಟ್ ಮಾಡಿದ್ದು, ಗಡುವಿಗೆ ಒಂದು ವಾರ ಮೊದಲು ಹೊರಡುವುದಾಗಿ ಹೇಳಿದ್ದಾರೆ.


ಇದನ್ನೂ ಓದಿ: ಉತ್ತರ ಪ್ರದೇಶವನ್ನು ಬಿಜೆಪಿ ’ಅಪರಾಧ ಪ್ರದೇಶ’ವನ್ನಾಗಿ ಮಾಡಿದೆ: ಪ್ರಿಯಾಂಕ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...