Homeಮುಖಪುಟಸರ್ಕಾರಿ ಬಂಗಲೆ ತೆರವು: ಪ್ರಿಯಾಂಕಾ ಗಾಂಧಿ ಮತ್ತು ಕೇಂದ್ರ ಸಚಿವರ ಜಟಾಪಟಿ

ಸರ್ಕಾರಿ ಬಂಗಲೆ ತೆರವು: ಪ್ರಿಯಾಂಕಾ ಗಾಂಧಿ ಮತ್ತು ಕೇಂದ್ರ ಸಚಿವರ ಜಟಾಪಟಿ

ಪ್ರಿಯಾಂಕಾ ಗಾಂಧಿಗೆ 1997 ರಲ್ಲಿ ಮಂಜೂರು ಮಾಡಿರುವ #35, ಲೋಧಿ ಎಸ್ಟೇಟ್ ಬಂಗಲೆಗೆಯನ್ನು ಖಾಲಿ ಮಾಡುವಂತೆ ಜುಲೈ 1 ರಂದು ಸರ್ಕಾರವು  ನೋಟೀಸ್ ನೀಡಿತ್ತು.

- Advertisement -
- Advertisement -

ಪ್ರಿಯಾಂಕಾ ಗಾಂಧಿಗೆ ನೀಡಿದ್ದ ಸರ್ಕಾರಿ ಬಂಗಲೆಯನ್ನು ತೆರವುಗೊಳಿಸಬೇಕೆಂದು ಸರ್ಕಾರ ಆದೇಶ ಹೊರಡಿಸಿದ ನಂತರ ವಿವಾದ ದೊಡ್ಡದಾಗಿದೆ. ಈ ವಿಷಯವಾಗಿ ಪ್ರಿಯಾಂಕ ಗಾಂಧಿ ಪರವಾಗಿ ಹಿರಿಯ ಕಾಂಗ್ರೆಸ್ ನಾಯಕರು ವಕಾಲತ್ತು ವಹಿಸಿದ್ದಾರೆ ಎಂದು ಕೇಂದ್ರ ಸಚಿವ ಹರ್ದೀಪ್ ಪುರಿ ಆರೋಪಿಸಿದರೆ, ಅದನ್ನು ಪ್ರಿಯಾಂಕ ಗಾಂಧಿ ಅಲ್ಲಗಳೆದಿದ್ದು ಅದು ಫೇಕ್ ನ್ಯೂಸ್ ಎಂದು ಟ್ವೀಟ್‌ ಮಾಡಿದ್ದಾರೆ.

“ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಉಳಿದುಕೊಂಡಿರುವ ಸರ್ಕಾರದ ಬಂಗಲೆಯನ್ನು ಕಾಂಗ್ರೆಸ್ ಸಂಸದರಿಗೆ ಬಿಟ್ಟುಕೊಡಬೇಕೆಂದು ಪ್ರಬಲ ಕಾಂಗ್ರೆಸ್ ಮುಖಂಡರು ವಿನಂತಿಸಿದ್ದಾರೆ. ಆದರೆ ಪ್ರಿಯಾಂಕಗಾಂಧಿ ಅಲ್ಲಿಯೇ ಉಳಿಯುವ ಸಾಧ್ಯವಿದೆ” ಎಂದು ಕೇಂದ್ರ ಸಚಿವ ಹರ್ದೀಪ್ ಪುರಿ ಇಂದು ಟ್ವೀಟ್ ನಲ್ಲಿ ಆರೋಪಿಸಿದ್ದಾರೆ.

ಪ್ರಿಯಾಂಕಾ ಗಾಂಧಿಗೆ 1997ರಲ್ಲಿ ಮಂಜೂರು ಮಾಡಿರುವ #35, ಲೋಧಿ ಎಸ್ಟೇಟ್ ಬಂಗಲೆಯನ್ನು ಖಾಲಿ ಮಾಡುವಂತೆ ಜುಲೈ 1 ರಂದು ಸರ್ಕಾರವು  ನೋಟೀಸ್ ನೀಡಿತ್ತು. ಕಳೆದ ವರ್ಷ ಪ್ರಿಯಾಂಕಾಗೆ ನೀಡಿದ್ದ ವಿಶೇಷ ರಕ್ಷಣೆ ಭದ್ರತಾ ಪಡೆಯನ್ನು ಹಿಂತೆಗೆದುಕೊಂಡ ನಂತರ ಬಂಗಲೆಯನ್ನು ಆಗಸ್ಟ್ 1 ರೊಳಗೆ ಖಾಲಿ ಎಂದು ಕೇಂದ್ರ ನೋಟಿಸ್ ನೀಡಿದೆ.

ಪ್ರಿಯಾಂಕಾ ಗಾಂಧಿ ಕೋರಿಕೆಯ ಮೇರೆಗೆ ಆಕೆಗೆ ವಿಸ್ತರಣೆ ನೀಡಲಾಗಿದೆ ಎಂದು ಪತ್ರಿಕೆಯೊಂದು ವರದಿ ಮಾಡಿದೆ.

“ಇದು ನಕಲಿ ಸುದ್ದಿ. ನಾನು ಸರ್ಕಾರಕ್ಕೆ ಅಂತಹ ಯಾವುದೇ ವಿನಂತಿಯನ್ನು ಮಾಡಿಲ್ಲ. ಜುಲೈ 1 ರಂದು ನನಗೆ ಹಸ್ತಾಂತರಿಸಿದ ಪತ್ರದ ಪ್ರಕಾರ, ಆಗಸ್ಟ್ 1 ರೊಳಗೆ ನಾನು #35, ಲೋಧಿ ಎಸ್ಟೇಟ್ ಬಂಗಲೆಗೆಯನ್ನು ಖಾಲಿ ಮಾಡುತ್ತೇನೆ” ಎಂದು ಅವರು ಟ್ವೀಟ್ ನಲ್ಲಿ ಹೇಳಿದ್ದಾರೆ.

ವಸತಿ ಸಚಿವರಾದ ಹರ್ದೀಪ್ ಪುರಿ ಅವರು, “ಸತ್ಯಗಳು ತಮ್ಮಷ್ಟಕ್ಕೆ ತಾನೇ ಮಾತನಾಡುತ್ತವೆ! ಪಕ್ಷದಲ್ಲಿ ಹೆಚ್ಚಿನ ಪ್ರಭಾವವನ್ನು ಹೊಂದಿರುವ ಪ್ರಬಲ ಕಾಂಗ್ರೆಸ್ ಮುಖಂಡರು 4 ಜುಲೈ 2020 ರಂದು ಮಧ್ಯಾಹ್ನ 12:05 ಕ್ಕೆ ನನಗೆ ಕರೆ ಮಾಡಿದ್ದರು. #35, ಲೋಧಿ ಎಸ್ಟೇಟ್ ಬಂಗಲೆಗೆಯನ್ನು ಇನ್ನೊಬ್ಬ ಕಾಂಗ್ರೆಸ್‌ ಸಂಸದರಿಗೆ ಮಂಜೂರು ಮಾಡಬೇಕೆಂದು ವಿನಂತಿಸಿದರು” ಎಂದು ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯೆಯಾಗಿ ಪ್ರಿಯಾಂಕಾ ಗಾಂಧಿ, “ಅವರಿಗೆ ಮತ್ತು ನಿಮ್ಮ ಪರಿಗಣನೆಗೆ ಧನ್ಯವಾದಗಳು. ಆದರೆ ವಾಸ್ತವದಲ್ಲಿ ಏನೂ ಬದಲಾವಣೆಯಿಲ್ಲ. ನಾನು ಸರ್ಕಾರಕ್ಕೆ ಅಂತಹ ಯಾವುದೇ ವಿನಂತಿಯನ್ನು ಮಾಡಿಲ್ಲ. ಮಾಡುವುದೂ ಇಲ್ಲ. ನಾನು ಹೇಳಿದಂತೆ, ಆಗಸ್ಟ್ 1 ರೊಳಗೆ ಮನೆ ಖಾಲಿ ಮಾಡುತ್ತೇನೆ” ಎಂದರು.

ಸಚಿವರ ಟ್ವೀಟ್‌ಗೆ ಕಾಂಗ್ರೆಸ್ ಮುಖಂಡ ರಂದೀಪ್ ಸುರ್ಜೆವಾಲಾ ಕೂಡ ಪ್ರತಿಕ್ರಿಯಿಸಿದ್ದರು. ಪ್ರಿಯಾಂಕಾ ಜನರಿಗಾಗಿ ಹೋರಾಡುವವರು. ಅವರಿಗೆ ನಿಮ್ಮ ಸಹಾನುಭೂತಿ ಬೇಕಾಗಿಲ್ಲ. ಹಾಗಾಗಿ ನಿಮ್ಮ ಬಡಿವಾರವನ್ನು ನಿಲ್ಲಿಸಿ. ಆ ಬಂಗಲೆಯನ್ನು ನೀವು ಕಾಂಗ್ರೆಸ್ ಸಂಸದರಿಗೆ ಕೊಡುತ್ತೀರೋ ಅಥವಾ ಬಿಜೆಪಿ ವಕ್ತಾರರಿಗೆ ಕೊಡುತ್ತೀರೋ? ಎಂದು ಪ್ರಶ್ನಿಸಿದ್ದಾರೆ.

ಪ್ರಿಯಾಂಕಾ ಗಾಂಧಿ ಅವರ ಪತಿ ರಾಬರ್ಟ್ ವಾದ್ರಾ ಕೂಡ ಫೇಸ್‌ಬುಕ್‌ನಲ್ಲಿ ಪ್ರತಿಕ್ರಿಯಿಸಿ ಪೋಸ್ಟ್ ಮಾಡಿದ್ದು, ಗಡುವಿಗೆ ಒಂದು ವಾರ ಮೊದಲು ಹೊರಡುವುದಾಗಿ ಹೇಳಿದ್ದಾರೆ.


ಇದನ್ನೂ ಓದಿ: ಉತ್ತರ ಪ್ರದೇಶವನ್ನು ಬಿಜೆಪಿ ’ಅಪರಾಧ ಪ್ರದೇಶ’ವನ್ನಾಗಿ ಮಾಡಿದೆ: ಪ್ರಿಯಾಂಕ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ...

ಬೆಂಗಳೂರು| ಕೆ.ಆರ್. ವೃತ್ತದ ಬಳಿ ಬಿಎಂಟಿಸಿ ಬಸ್‌ಗಳ ನಡುವೆ ಅಪಘಾತ; ಹಲವರಿಗೆ ಗಾಯ

ಇಂದು ಬೆಳಿಗ್ಗೆ ವಿಧಾನಸೌಧದಿಂದ ಸ್ವಲ್ಪ ದೂರದಲ್ಲಿರುವ ಜನನಿಬಿಡ ಕೆ.ಆರ್. ವೃತ್ತ ಜಂಕ್ಷನ್ ಬಳಿ ಎರಡು ಬಿಎಂಟಿಸಿ ಬಸ್‌ಗಳು ಡಿಕ್ಕಿ ಹೊಡೆದ ಪರಿಣಾಮ ಹಲವಾರು ಪ್ರಯಾಣಿಕರು ಗಾಯಗೊಂಡರು. ಡಿಕ್ಕಿಯ ಪರಿಣಾಮ ಬಸ್ಸಿನೊಳಗೆ ಹಲವಾರು ಪ್ರಯಾಣಿಕರು...

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...