Homeಮುಖಪುಟಸರ್ಕಾರಿ ಬಂಗಲೆ ತೆರವು: ಪ್ರಿಯಾಂಕಾ ಗಾಂಧಿ ಮತ್ತು ಕೇಂದ್ರ ಸಚಿವರ ಜಟಾಪಟಿ

ಸರ್ಕಾರಿ ಬಂಗಲೆ ತೆರವು: ಪ್ರಿಯಾಂಕಾ ಗಾಂಧಿ ಮತ್ತು ಕೇಂದ್ರ ಸಚಿವರ ಜಟಾಪಟಿ

ಪ್ರಿಯಾಂಕಾ ಗಾಂಧಿಗೆ 1997 ರಲ್ಲಿ ಮಂಜೂರು ಮಾಡಿರುವ #35, ಲೋಧಿ ಎಸ್ಟೇಟ್ ಬಂಗಲೆಗೆಯನ್ನು ಖಾಲಿ ಮಾಡುವಂತೆ ಜುಲೈ 1 ರಂದು ಸರ್ಕಾರವು  ನೋಟೀಸ್ ನೀಡಿತ್ತು.

- Advertisement -
- Advertisement -

ಪ್ರಿಯಾಂಕಾ ಗಾಂಧಿಗೆ ನೀಡಿದ್ದ ಸರ್ಕಾರಿ ಬಂಗಲೆಯನ್ನು ತೆರವುಗೊಳಿಸಬೇಕೆಂದು ಸರ್ಕಾರ ಆದೇಶ ಹೊರಡಿಸಿದ ನಂತರ ವಿವಾದ ದೊಡ್ಡದಾಗಿದೆ. ಈ ವಿಷಯವಾಗಿ ಪ್ರಿಯಾಂಕ ಗಾಂಧಿ ಪರವಾಗಿ ಹಿರಿಯ ಕಾಂಗ್ರೆಸ್ ನಾಯಕರು ವಕಾಲತ್ತು ವಹಿಸಿದ್ದಾರೆ ಎಂದು ಕೇಂದ್ರ ಸಚಿವ ಹರ್ದೀಪ್ ಪುರಿ ಆರೋಪಿಸಿದರೆ, ಅದನ್ನು ಪ್ರಿಯಾಂಕ ಗಾಂಧಿ ಅಲ್ಲಗಳೆದಿದ್ದು ಅದು ಫೇಕ್ ನ್ಯೂಸ್ ಎಂದು ಟ್ವೀಟ್‌ ಮಾಡಿದ್ದಾರೆ.

“ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಉಳಿದುಕೊಂಡಿರುವ ಸರ್ಕಾರದ ಬಂಗಲೆಯನ್ನು ಕಾಂಗ್ರೆಸ್ ಸಂಸದರಿಗೆ ಬಿಟ್ಟುಕೊಡಬೇಕೆಂದು ಪ್ರಬಲ ಕಾಂಗ್ರೆಸ್ ಮುಖಂಡರು ವಿನಂತಿಸಿದ್ದಾರೆ. ಆದರೆ ಪ್ರಿಯಾಂಕಗಾಂಧಿ ಅಲ್ಲಿಯೇ ಉಳಿಯುವ ಸಾಧ್ಯವಿದೆ” ಎಂದು ಕೇಂದ್ರ ಸಚಿವ ಹರ್ದೀಪ್ ಪುರಿ ಇಂದು ಟ್ವೀಟ್ ನಲ್ಲಿ ಆರೋಪಿಸಿದ್ದಾರೆ.

ಪ್ರಿಯಾಂಕಾ ಗಾಂಧಿಗೆ 1997ರಲ್ಲಿ ಮಂಜೂರು ಮಾಡಿರುವ #35, ಲೋಧಿ ಎಸ್ಟೇಟ್ ಬಂಗಲೆಯನ್ನು ಖಾಲಿ ಮಾಡುವಂತೆ ಜುಲೈ 1 ರಂದು ಸರ್ಕಾರವು  ನೋಟೀಸ್ ನೀಡಿತ್ತು. ಕಳೆದ ವರ್ಷ ಪ್ರಿಯಾಂಕಾಗೆ ನೀಡಿದ್ದ ವಿಶೇಷ ರಕ್ಷಣೆ ಭದ್ರತಾ ಪಡೆಯನ್ನು ಹಿಂತೆಗೆದುಕೊಂಡ ನಂತರ ಬಂಗಲೆಯನ್ನು ಆಗಸ್ಟ್ 1 ರೊಳಗೆ ಖಾಲಿ ಎಂದು ಕೇಂದ್ರ ನೋಟಿಸ್ ನೀಡಿದೆ.

ಪ್ರಿಯಾಂಕಾ ಗಾಂಧಿ ಕೋರಿಕೆಯ ಮೇರೆಗೆ ಆಕೆಗೆ ವಿಸ್ತರಣೆ ನೀಡಲಾಗಿದೆ ಎಂದು ಪತ್ರಿಕೆಯೊಂದು ವರದಿ ಮಾಡಿದೆ.

“ಇದು ನಕಲಿ ಸುದ್ದಿ. ನಾನು ಸರ್ಕಾರಕ್ಕೆ ಅಂತಹ ಯಾವುದೇ ವಿನಂತಿಯನ್ನು ಮಾಡಿಲ್ಲ. ಜುಲೈ 1 ರಂದು ನನಗೆ ಹಸ್ತಾಂತರಿಸಿದ ಪತ್ರದ ಪ್ರಕಾರ, ಆಗಸ್ಟ್ 1 ರೊಳಗೆ ನಾನು #35, ಲೋಧಿ ಎಸ್ಟೇಟ್ ಬಂಗಲೆಗೆಯನ್ನು ಖಾಲಿ ಮಾಡುತ್ತೇನೆ” ಎಂದು ಅವರು ಟ್ವೀಟ್ ನಲ್ಲಿ ಹೇಳಿದ್ದಾರೆ.

ವಸತಿ ಸಚಿವರಾದ ಹರ್ದೀಪ್ ಪುರಿ ಅವರು, “ಸತ್ಯಗಳು ತಮ್ಮಷ್ಟಕ್ಕೆ ತಾನೇ ಮಾತನಾಡುತ್ತವೆ! ಪಕ್ಷದಲ್ಲಿ ಹೆಚ್ಚಿನ ಪ್ರಭಾವವನ್ನು ಹೊಂದಿರುವ ಪ್ರಬಲ ಕಾಂಗ್ರೆಸ್ ಮುಖಂಡರು 4 ಜುಲೈ 2020 ರಂದು ಮಧ್ಯಾಹ್ನ 12:05 ಕ್ಕೆ ನನಗೆ ಕರೆ ಮಾಡಿದ್ದರು. #35, ಲೋಧಿ ಎಸ್ಟೇಟ್ ಬಂಗಲೆಗೆಯನ್ನು ಇನ್ನೊಬ್ಬ ಕಾಂಗ್ರೆಸ್‌ ಸಂಸದರಿಗೆ ಮಂಜೂರು ಮಾಡಬೇಕೆಂದು ವಿನಂತಿಸಿದರು” ಎಂದು ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯೆಯಾಗಿ ಪ್ರಿಯಾಂಕಾ ಗಾಂಧಿ, “ಅವರಿಗೆ ಮತ್ತು ನಿಮ್ಮ ಪರಿಗಣನೆಗೆ ಧನ್ಯವಾದಗಳು. ಆದರೆ ವಾಸ್ತವದಲ್ಲಿ ಏನೂ ಬದಲಾವಣೆಯಿಲ್ಲ. ನಾನು ಸರ್ಕಾರಕ್ಕೆ ಅಂತಹ ಯಾವುದೇ ವಿನಂತಿಯನ್ನು ಮಾಡಿಲ್ಲ. ಮಾಡುವುದೂ ಇಲ್ಲ. ನಾನು ಹೇಳಿದಂತೆ, ಆಗಸ್ಟ್ 1 ರೊಳಗೆ ಮನೆ ಖಾಲಿ ಮಾಡುತ್ತೇನೆ” ಎಂದರು.

ಸಚಿವರ ಟ್ವೀಟ್‌ಗೆ ಕಾಂಗ್ರೆಸ್ ಮುಖಂಡ ರಂದೀಪ್ ಸುರ್ಜೆವಾಲಾ ಕೂಡ ಪ್ರತಿಕ್ರಿಯಿಸಿದ್ದರು. ಪ್ರಿಯಾಂಕಾ ಜನರಿಗಾಗಿ ಹೋರಾಡುವವರು. ಅವರಿಗೆ ನಿಮ್ಮ ಸಹಾನುಭೂತಿ ಬೇಕಾಗಿಲ್ಲ. ಹಾಗಾಗಿ ನಿಮ್ಮ ಬಡಿವಾರವನ್ನು ನಿಲ್ಲಿಸಿ. ಆ ಬಂಗಲೆಯನ್ನು ನೀವು ಕಾಂಗ್ರೆಸ್ ಸಂಸದರಿಗೆ ಕೊಡುತ್ತೀರೋ ಅಥವಾ ಬಿಜೆಪಿ ವಕ್ತಾರರಿಗೆ ಕೊಡುತ್ತೀರೋ? ಎಂದು ಪ್ರಶ್ನಿಸಿದ್ದಾರೆ.

ಪ್ರಿಯಾಂಕಾ ಗಾಂಧಿ ಅವರ ಪತಿ ರಾಬರ್ಟ್ ವಾದ್ರಾ ಕೂಡ ಫೇಸ್‌ಬುಕ್‌ನಲ್ಲಿ ಪ್ರತಿಕ್ರಿಯಿಸಿ ಪೋಸ್ಟ್ ಮಾಡಿದ್ದು, ಗಡುವಿಗೆ ಒಂದು ವಾರ ಮೊದಲು ಹೊರಡುವುದಾಗಿ ಹೇಳಿದ್ದಾರೆ.


ಇದನ್ನೂ ಓದಿ: ಉತ್ತರ ಪ್ರದೇಶವನ್ನು ಬಿಜೆಪಿ ’ಅಪರಾಧ ಪ್ರದೇಶ’ವನ್ನಾಗಿ ಮಾಡಿದೆ: ಪ್ರಿಯಾಂಕ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....