Homeಕರ್ನಾಟಕಸರ್ಕಾರ ಸಾರಿಗೆ ನೌಕರರ ಸಮಸ್ಯೆ ಬಗೆಹರಿಸಬೇಕಾದುದ್ದು ಹೀಗೆ..: ಬಸ್ ಪ್ರಯಾಣಿಕರ ವೇದಿಕೆಯ ಸಲಹೆಗಳು

ಸರ್ಕಾರ ಸಾರಿಗೆ ನೌಕರರ ಸಮಸ್ಯೆ ಬಗೆಹರಿಸಬೇಕಾದುದ್ದು ಹೀಗೆ..: ಬಸ್ ಪ್ರಯಾಣಿಕರ ವೇದಿಕೆಯ ಸಲಹೆಗಳು

ಬಡ ವರ್ಗದ ಪ್ರಯಾಣಿಕರಿಗೆ ತೊಂದರೆಯಾಗದಂತೆ ಪ್ರತಿಭಟನೆ ಮುಂದುವರೆಸಲು “ಬಸ್ ಓಡಿಸಲಿ, ಆದರೆ ಪ್ರತಿಭಟನೆಯ ಅಂಗವಾಗಿ ಟಿಕೆಟ್ ಹಣ ಸಂಗ್ರಹ ಮಾಡುವುದು ಬೇಡ” ಎಂಬ ಸಲಹೆಗಳು ಬಂದಿವೆ.

- Advertisement -
- Advertisement -

ಸಾರಿಗೆ ನೌಕರರನ್ನು ಸರ್ಕಾರಿ ನೌಕರರೆಂದು ಘೋಷಿಸಬೇಕು, ಸರ್ಕಾರಿ ನೌಕರರಿಗೆ ಸಿಗುವ ಎಲ್ಲಾ ಸೌಲಭ್ಯಗಳನ್ನು ಸಾರಿಗೆ ನೌಕರರಿಗೂ ನೀಡಬೇಕು ಎಂಬ ಹಕ್ಕೊತ್ತಾಯಗಳನ್ನಿಟ್ಟುಕೊಂಡು ಬಿಎಂಟಿಸಿ ಮತ್ತು ಕೆಎಸ್‌ಆರ್‌ಟಿಸಿ ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರ ಮೂರನೇ ದಿನಕ್ಕೆ ಕಾಲಿಟ್ಟಿದೆ. ಸರ್ಕಾರ ಮತ್ತು ಸಾರಿಗೆ ನೌಕರರ ಸಂಘದೊಂದಿಗೆ ಮಾತುಕತೆ ವಿಫಲವಾಗಿದ್ದು ಮುಷ್ಕರದಿಂದಾಗಿ ಕಳೆದೆರಡು ದಿನಗಳಿಂದ ಬಸ್‌ಗಳು ರಸ್ತೆಗಿಳಿಯದೆ ಪ್ರಯಾಣಿಕರಿಗೆ ತುಸು ಸಮಸ್ಯೆಯಾಗಿದೆ.

ಈ ಸಮಸ್ಯೆಯನ್ನು ಹೇಗೆ ಬಗೆಹರಿಸಬೇಕೆಂದು ಬೆಂಗಳೂರು ಬಸ್ ಪ್ರಯಾಣಿಕರ ವೇದಿಕೆಯ ಪರವಾಗಿ ವಿನಯ್ ಶ್ರೀನಿವಾಸ ಮತ್ತು ಶಹೀನ್ ಶಸಾ ಪತ್ರಿಕಾಹೇಳಿಕೆಯ ಮೂಲಕ ಕೆಲವು ಸಲಹೆಗಳನ್ನು ನೀಡಿದ್ದಾರೆ. ಸಾರಿಗೆ ನೌಕರರು ಮತ್ತು ಸರ್ಕಾರ ಎರಡಕ್ಕೂ ಮನವಿ ಮಾಡುವ ಮೂಲಕ ಸಮಸ್ಯೆಗೆ ಇತಿಶ್ರಿ ಹಾಡಬೇಕೆಂದು ಕೋರಿದ್ದಾರೆ.

ರಸ್ತೆ ಸಾರಿಗೆ ನಿಗಮದಲ್ಲಿರುವ ರಾಚನಿಕ ಸಮಸ್ಯೆಗಳು, ರಸ್ತೆ ಸಾರಿಗೆ ನಿಗಮಕ್ಕೆ ಸರ್ಕಾರದ ಬೆಂಬಲದ ಕೊರತೆ, ನೌಕರರ ಹಕ್ಕುಗಳನ್ನು ಗೌರವಿಸದಿರುವುದು, ಸಂಘಟನೆಗಳನ್ನು ಮಾನ್ಯ ಮಾಡದಿರುವುದು ಮುಂತಾದ ಕಾರಣಗಳು ಇಂದಿನ ಮುಷ್ಕರಕ್ಕೆ ಕಾರಣವಾಗಿದೆ. ಆದರೆ ರಸ್ತೆ ಸಾರಿಗೆ ಸಂಸ್ಥೆಗೆ ನೌಕರರೇ ಜೀವಾಳ, ನಾವು ಅವರೊಂದಿಗೆ ನಿಲ್ಲುತ್ತೇವೆ. ಮುಷ್ಕರ ನಿರತ ನೌಕರರ ಮೇಲೆ ಸರ್ಕಾರವು ಯಾವುದೇ ಕ್ರಮ ಕೈಗೊಳ್ಳಬಾರದು. ತಕ್ಷಣವೇ ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅವರ ಬೇಡಿಕೆಗಳನ್ನು ಈಡೇರಿಸಲು ಕ್ರಮ ಕೈಗೊಳ್ಳಬೇಕು ಎಂದು ವೇದಿಕೆ ತಿಳಿಸಿದೆ.

ನೌಕರರಿಗೆ ಮತ್ತು ನೌಕರ ಸಂಘಟನೆಗಳಿಗೆ ಮನವಿ

ಪ್ರಯಾಣಿಕರಾಗಿ ನಾವು ಈ ನೌಕರರು ದಿನನಿತ್ಯ ನಿರ್ವಹಿಸುವ ಶ್ರಮದ ದುಡಿಮೆಯನ್ನು ಗೌರವಿಸುತ್ತೇವೆ. ಅವರ ಹೋರಾಟಕ್ಕೆ ನಾವು ಹೆಗಲಾಗುತ್ತೇವೆ. ಆದರೆ, ಇಂದು ಈ ಸಮಸ್ಯೆ ಇತ್ಯರ್ಥವಾಗದಿದ್ದರೆ, ಪ್ರಯಾಣಿಕರಿಗೆ ತೊಂದರೆಯಾಗದಂತೆ ಹೋರಾಟ ಮುಂದುವರೆಸುವ ದಾರಿಗಳನ್ನು ಕಂಡುಕೊಳ್ಳಬೇಕೆಂದು ನಾವು ಮನವಿ ಮಾಡುತ್ತಿದ್ದೇವೆ, ಏಕೆಂದರೆ ಬಹುತೇಕ ಪ್ರಯಾಣಿಕರು ಬಡವರು, ಅಂಚಿಗೆ ಸರಿಸಲ್ಪಟ್ಟವರು. ದುಡಿಮೆಗಾಗಿ ಮತ್ತು ದಿನನಿತ್ಯದ ಅಗತ್ಯಗಳಿಗಾಗಿ, ಪ್ರಯಾಣಿಸಲು ಬಸ್ ಅನ್ನೇ ಆಧರಿಸಿರುವವರು. ಆದ್ದರಿಂದ ಬಡ ವರ್ಗದ ಪ್ರಯಾಣಿಕರಿಗೆ ತೊಂದರೆಯಾಗದಂತೆ ಪ್ರತಿಭಟನೆ ನಡೆಸಬೇಕೆಂಬುದು ನಮ್ಮ ಮನವಿ. ಉದಾಹರಣೆಗೆ ಕೆಲವು ಪ್ರಯಾಣಿಕರು, “ಬಸ್ ಓಡಿಸಲಿ, ಆದರೆ ಪ್ರತಿಭಟನೆಯ ಅಂಗವಾಗಿ ಟಿಕೆಟ್ ಹಣ ಸಂಗ್ರಹ ಮಾಡುವುದು ಬೇಡ” ಎಂಬ ಸಲಹೆಯನ್ನೂ ನೀಡಿದ್ದಾರೆ, ಇದನ್ನು ಪರೀಶೀಲಿಸಬೇಕೆಂದು ವೇದಿಕೆ ಮನವಿ ಮಾಡಿದೆ.

ಈ ಪರಿಸ್ಥಿತಿಯ ನಿರ್ವಹಣೆಗಾಗಿ ಸರ್ಕಾರಕ್ಕೆ ಮನವಿ

ಈ ಮುಷ್ಕರವು ಸಂಸ್ಥೆಯೊಳಗೆ ಇದ್ದ ರಾಚನಿಕ ಸಮಸ್ಯೆ, ಕೋವಿಡ್ ಸಂದರ್ಭದ ಬಿಕ್ಕಟ್ಟು, ಹಲವಾರು ಸಮಸ್ಯೆಗಳನ್ನು ಇತ್ಯರ್ಥಗೊಳಿಸದೇ ಇದ್ದದ್ದು, ಈ ಎಲ್ಲದರ ಒಟ್ಟು ಫಲಿತವಾಗಿದೆ. ಮುಷ್ಕರಕ್ಕೆ ಕರೆಕೊಟ್ಟವರನ್ನೂ ಸೇರಿದಂತೆ ಸರ್ಕಾರವು ನೌಕರರ ಪ್ರತಿನಿಧಿಗಳ ವಿಶ್ವಾಸವನ್ನು ಗಳಿಸಿ ಅವರೊಂದಿಗೆ ಮಾತುಕತೆ ನಡೆಸಬೇಕು. ಎಸ್ಮಾ ಜಾರಿಗೊಳಿಸುವಂತಹ ಕ್ರಮಗಳು ಪರಿಸ್ಥಿತಿಯನ್ನು ಇನ್ನಷ್ಟು ಹದಗೆಡಿಸುತ್ತವೆ. ನೌಕರರ ಮತ್ತು ಪ್ರಯಾಣಿಕರ ಹಿತಾಸಕ್ತಿಗಾಗಿ ಸರ್ಕಾರವು ಈ ಬಿಕ್ಕಟ್ಟನ್ನು ಅನುನಯದಿಂದ ಬಗೆಹರಿಸಬೇಕಾಗಿದೆ ಎಂದು ವೇದಿಕೆ ಅಭಿಪ್ರಾಯಪಟ್ಟಿದೆ.

ಸರ್ಕಾರವು ಸಾರಿಗೆ ಸಂಸ್ಥೆಗಳಿಗೆ ಗಣನೀಯವಾಗಿ ಸಾರ್ವಜನಿಕ ಹೂಡಿಕೆಯನ್ನು ಹೆಚ್ಚಿಸಿ ಅವುಗಳ ಆರ್ಥಿಕ ಪುನಶ್ಚೇತನಕ್ಕಾಗಿ ಯೋಚಿಸಲು ಈ ಸಮಯವು ಸುಸಂದರ್ಭವಾಗಿದೆ. ಇದರಿಂದ ಸಂಸ್ಥೆಗಳು ತಮ್ಮ ನೌಕರರಿಗೆ ಸೌಲಭ್ಯಗಳನ್ನು ಒದಗಿಸಲು ಮಾತ್ರವಲ್ಲ, ಪ್ರಯಾಣಿಕರಿಗೆ ಉತ್ತಮ ಸೇವೆ ಒದಗಿಸಲು ಸಾಧ್ಯವಾಗುತ್ತದೆ. ಸಾಮಾನ್ಯ ಜನರ ಹಿತಾಸಕ್ತಿಗಾಗಿ, ಅವರಿಗೆ ಕೈಗೆಟುವಂತಹ ಸೇವೆ ಒದಗಿಸುವ ದೃಷ್ಟಿಯಿಂದ ಸಾರಿಗೆ ಸಂಸ್ಥೆಗಳನ್ನು ಬಲಗೊಳಿಸಬೇಕಿದೆ. ನೌಕರರ ಬೇಡಿಕೆಗಳ ಬಗ್ಗೆ ಮತ್ತು ಅವರ ಕಲ್ಯಾಣದ ಬಗ್ಗೆ ಚರ್ಚಿಸಲು, ಜಂಟಿ ಸದನ ಸಮಿತಿ ಅಥವಾ ನೌಕರರು, ಸಂಸ್ಥೆಯ ಪ್ರತಿನಿಧಿಗಳು ಮತ್ತು ಸರ್ಕಾರದ ಪ್ರತಿನಿಧಿಗಳನ್ನೊಳಗೊಂಡ ತ್ರಿಪಕ್ಷೀಯ ಸಮಿತಿಯೊಂದನ್ನು ರಚಿಸಬೇಕು ಎಂದು ವೇದಿಕೆ ಒತ್ತಾಯಿಸಿದೆ.

ಬಸ್ ಮತ್ತು ಪ್ರಯಾಣಿಕರು ಇಬ್ಬರೂ ಈ ನಗರದ ಕೇಂದ್ರಬಿಂದು. ನಮ್ಮನ್ನು ನಿರ್ಲಕ್ಷಿಸಬೇಡಿ, ಬಸ್ ಸೇವೆಯನ್ನು ಉತ್ತೇಜಿಸಿ, ಈ ಸೇವೆಯಲ್ಲಿ ನೌಕರರು ಪ್ರಮುಖ ಭಾಗೀದಾರರು, ಮತ್ತು ಅವರು ನಮ್ಮ ಜೊತೆಗಾರರು. ಅವರ ಕಾಳಜಿಯನ್ನು ನಿರ್ಲಕ್ಷಿಸಬೇಡಿ, ಪ್ರಯಾಣಿಕರ ಹಿತಾಸಕ್ತಿಗಾಗಿ ಮತ್ತು ಆರೋಗ್ಯಕರ ಬಸ್ ವ್ಯವಸ್ಥೆಗಾಗಿ, ಸರ್ಕಾರವು ಈ ಕೂಡಲೇ ಹತಾಶರಾಗಿರುವ ನೌಕರರತ್ತ ಧಾವಿಸಲಿ ಮತ್ತು ಅವರ ಅಳಲುಗಳನ್ನು ಆಲಿಸಿ, ತತ್ ಕ್ಷಣವೇ ಪರಿಹರಿಸಲಿ ಎಂದು ವೇದಿಕೆಯ ವಿನಯ್ ಶ್ರೀನಿವಾಸ, ಶಹೀನ್ ಶಸಾ ಆಶಿಸಿದ್ದಾರೆ.


ಇದನ್ನೂ ಓದಿ: ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಮಾಡಿ: ಬೆಂಗಳೂರಿನಲ್ಲಿ ಬೃಹತ್ ಹೋರಾಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...