Homeಕರ್ನಾಟಕಸರ್ಕಾರ ಸಾರಿಗೆ ನೌಕರರ ಸಮಸ್ಯೆ ಬಗೆಹರಿಸಬೇಕಾದುದ್ದು ಹೀಗೆ..: ಬಸ್ ಪ್ರಯಾಣಿಕರ ವೇದಿಕೆಯ ಸಲಹೆಗಳು

ಸರ್ಕಾರ ಸಾರಿಗೆ ನೌಕರರ ಸಮಸ್ಯೆ ಬಗೆಹರಿಸಬೇಕಾದುದ್ದು ಹೀಗೆ..: ಬಸ್ ಪ್ರಯಾಣಿಕರ ವೇದಿಕೆಯ ಸಲಹೆಗಳು

ಬಡ ವರ್ಗದ ಪ್ರಯಾಣಿಕರಿಗೆ ತೊಂದರೆಯಾಗದಂತೆ ಪ್ರತಿಭಟನೆ ಮುಂದುವರೆಸಲು “ಬಸ್ ಓಡಿಸಲಿ, ಆದರೆ ಪ್ರತಿಭಟನೆಯ ಅಂಗವಾಗಿ ಟಿಕೆಟ್ ಹಣ ಸಂಗ್ರಹ ಮಾಡುವುದು ಬೇಡ” ಎಂಬ ಸಲಹೆಗಳು ಬಂದಿವೆ.

- Advertisement -
- Advertisement -

ಸಾರಿಗೆ ನೌಕರರನ್ನು ಸರ್ಕಾರಿ ನೌಕರರೆಂದು ಘೋಷಿಸಬೇಕು, ಸರ್ಕಾರಿ ನೌಕರರಿಗೆ ಸಿಗುವ ಎಲ್ಲಾ ಸೌಲಭ್ಯಗಳನ್ನು ಸಾರಿಗೆ ನೌಕರರಿಗೂ ನೀಡಬೇಕು ಎಂಬ ಹಕ್ಕೊತ್ತಾಯಗಳನ್ನಿಟ್ಟುಕೊಂಡು ಬಿಎಂಟಿಸಿ ಮತ್ತು ಕೆಎಸ್‌ಆರ್‌ಟಿಸಿ ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರ ಮೂರನೇ ದಿನಕ್ಕೆ ಕಾಲಿಟ್ಟಿದೆ. ಸರ್ಕಾರ ಮತ್ತು ಸಾರಿಗೆ ನೌಕರರ ಸಂಘದೊಂದಿಗೆ ಮಾತುಕತೆ ವಿಫಲವಾಗಿದ್ದು ಮುಷ್ಕರದಿಂದಾಗಿ ಕಳೆದೆರಡು ದಿನಗಳಿಂದ ಬಸ್‌ಗಳು ರಸ್ತೆಗಿಳಿಯದೆ ಪ್ರಯಾಣಿಕರಿಗೆ ತುಸು ಸಮಸ್ಯೆಯಾಗಿದೆ.

ಈ ಸಮಸ್ಯೆಯನ್ನು ಹೇಗೆ ಬಗೆಹರಿಸಬೇಕೆಂದು ಬೆಂಗಳೂರು ಬಸ್ ಪ್ರಯಾಣಿಕರ ವೇದಿಕೆಯ ಪರವಾಗಿ ವಿನಯ್ ಶ್ರೀನಿವಾಸ ಮತ್ತು ಶಹೀನ್ ಶಸಾ ಪತ್ರಿಕಾಹೇಳಿಕೆಯ ಮೂಲಕ ಕೆಲವು ಸಲಹೆಗಳನ್ನು ನೀಡಿದ್ದಾರೆ. ಸಾರಿಗೆ ನೌಕರರು ಮತ್ತು ಸರ್ಕಾರ ಎರಡಕ್ಕೂ ಮನವಿ ಮಾಡುವ ಮೂಲಕ ಸಮಸ್ಯೆಗೆ ಇತಿಶ್ರಿ ಹಾಡಬೇಕೆಂದು ಕೋರಿದ್ದಾರೆ.

ರಸ್ತೆ ಸಾರಿಗೆ ನಿಗಮದಲ್ಲಿರುವ ರಾಚನಿಕ ಸಮಸ್ಯೆಗಳು, ರಸ್ತೆ ಸಾರಿಗೆ ನಿಗಮಕ್ಕೆ ಸರ್ಕಾರದ ಬೆಂಬಲದ ಕೊರತೆ, ನೌಕರರ ಹಕ್ಕುಗಳನ್ನು ಗೌರವಿಸದಿರುವುದು, ಸಂಘಟನೆಗಳನ್ನು ಮಾನ್ಯ ಮಾಡದಿರುವುದು ಮುಂತಾದ ಕಾರಣಗಳು ಇಂದಿನ ಮುಷ್ಕರಕ್ಕೆ ಕಾರಣವಾಗಿದೆ. ಆದರೆ ರಸ್ತೆ ಸಾರಿಗೆ ಸಂಸ್ಥೆಗೆ ನೌಕರರೇ ಜೀವಾಳ, ನಾವು ಅವರೊಂದಿಗೆ ನಿಲ್ಲುತ್ತೇವೆ. ಮುಷ್ಕರ ನಿರತ ನೌಕರರ ಮೇಲೆ ಸರ್ಕಾರವು ಯಾವುದೇ ಕ್ರಮ ಕೈಗೊಳ್ಳಬಾರದು. ತಕ್ಷಣವೇ ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅವರ ಬೇಡಿಕೆಗಳನ್ನು ಈಡೇರಿಸಲು ಕ್ರಮ ಕೈಗೊಳ್ಳಬೇಕು ಎಂದು ವೇದಿಕೆ ತಿಳಿಸಿದೆ.

ನೌಕರರಿಗೆ ಮತ್ತು ನೌಕರ ಸಂಘಟನೆಗಳಿಗೆ ಮನವಿ

ಪ್ರಯಾಣಿಕರಾಗಿ ನಾವು ಈ ನೌಕರರು ದಿನನಿತ್ಯ ನಿರ್ವಹಿಸುವ ಶ್ರಮದ ದುಡಿಮೆಯನ್ನು ಗೌರವಿಸುತ್ತೇವೆ. ಅವರ ಹೋರಾಟಕ್ಕೆ ನಾವು ಹೆಗಲಾಗುತ್ತೇವೆ. ಆದರೆ, ಇಂದು ಈ ಸಮಸ್ಯೆ ಇತ್ಯರ್ಥವಾಗದಿದ್ದರೆ, ಪ್ರಯಾಣಿಕರಿಗೆ ತೊಂದರೆಯಾಗದಂತೆ ಹೋರಾಟ ಮುಂದುವರೆಸುವ ದಾರಿಗಳನ್ನು ಕಂಡುಕೊಳ್ಳಬೇಕೆಂದು ನಾವು ಮನವಿ ಮಾಡುತ್ತಿದ್ದೇವೆ, ಏಕೆಂದರೆ ಬಹುತೇಕ ಪ್ರಯಾಣಿಕರು ಬಡವರು, ಅಂಚಿಗೆ ಸರಿಸಲ್ಪಟ್ಟವರು. ದುಡಿಮೆಗಾಗಿ ಮತ್ತು ದಿನನಿತ್ಯದ ಅಗತ್ಯಗಳಿಗಾಗಿ, ಪ್ರಯಾಣಿಸಲು ಬಸ್ ಅನ್ನೇ ಆಧರಿಸಿರುವವರು. ಆದ್ದರಿಂದ ಬಡ ವರ್ಗದ ಪ್ರಯಾಣಿಕರಿಗೆ ತೊಂದರೆಯಾಗದಂತೆ ಪ್ರತಿಭಟನೆ ನಡೆಸಬೇಕೆಂಬುದು ನಮ್ಮ ಮನವಿ. ಉದಾಹರಣೆಗೆ ಕೆಲವು ಪ್ರಯಾಣಿಕರು, “ಬಸ್ ಓಡಿಸಲಿ, ಆದರೆ ಪ್ರತಿಭಟನೆಯ ಅಂಗವಾಗಿ ಟಿಕೆಟ್ ಹಣ ಸಂಗ್ರಹ ಮಾಡುವುದು ಬೇಡ” ಎಂಬ ಸಲಹೆಯನ್ನೂ ನೀಡಿದ್ದಾರೆ, ಇದನ್ನು ಪರೀಶೀಲಿಸಬೇಕೆಂದು ವೇದಿಕೆ ಮನವಿ ಮಾಡಿದೆ.

ಈ ಪರಿಸ್ಥಿತಿಯ ನಿರ್ವಹಣೆಗಾಗಿ ಸರ್ಕಾರಕ್ಕೆ ಮನವಿ

ಈ ಮುಷ್ಕರವು ಸಂಸ್ಥೆಯೊಳಗೆ ಇದ್ದ ರಾಚನಿಕ ಸಮಸ್ಯೆ, ಕೋವಿಡ್ ಸಂದರ್ಭದ ಬಿಕ್ಕಟ್ಟು, ಹಲವಾರು ಸಮಸ್ಯೆಗಳನ್ನು ಇತ್ಯರ್ಥಗೊಳಿಸದೇ ಇದ್ದದ್ದು, ಈ ಎಲ್ಲದರ ಒಟ್ಟು ಫಲಿತವಾಗಿದೆ. ಮುಷ್ಕರಕ್ಕೆ ಕರೆಕೊಟ್ಟವರನ್ನೂ ಸೇರಿದಂತೆ ಸರ್ಕಾರವು ನೌಕರರ ಪ್ರತಿನಿಧಿಗಳ ವಿಶ್ವಾಸವನ್ನು ಗಳಿಸಿ ಅವರೊಂದಿಗೆ ಮಾತುಕತೆ ನಡೆಸಬೇಕು. ಎಸ್ಮಾ ಜಾರಿಗೊಳಿಸುವಂತಹ ಕ್ರಮಗಳು ಪರಿಸ್ಥಿತಿಯನ್ನು ಇನ್ನಷ್ಟು ಹದಗೆಡಿಸುತ್ತವೆ. ನೌಕರರ ಮತ್ತು ಪ್ರಯಾಣಿಕರ ಹಿತಾಸಕ್ತಿಗಾಗಿ ಸರ್ಕಾರವು ಈ ಬಿಕ್ಕಟ್ಟನ್ನು ಅನುನಯದಿಂದ ಬಗೆಹರಿಸಬೇಕಾಗಿದೆ ಎಂದು ವೇದಿಕೆ ಅಭಿಪ್ರಾಯಪಟ್ಟಿದೆ.

ಸರ್ಕಾರವು ಸಾರಿಗೆ ಸಂಸ್ಥೆಗಳಿಗೆ ಗಣನೀಯವಾಗಿ ಸಾರ್ವಜನಿಕ ಹೂಡಿಕೆಯನ್ನು ಹೆಚ್ಚಿಸಿ ಅವುಗಳ ಆರ್ಥಿಕ ಪುನಶ್ಚೇತನಕ್ಕಾಗಿ ಯೋಚಿಸಲು ಈ ಸಮಯವು ಸುಸಂದರ್ಭವಾಗಿದೆ. ಇದರಿಂದ ಸಂಸ್ಥೆಗಳು ತಮ್ಮ ನೌಕರರಿಗೆ ಸೌಲಭ್ಯಗಳನ್ನು ಒದಗಿಸಲು ಮಾತ್ರವಲ್ಲ, ಪ್ರಯಾಣಿಕರಿಗೆ ಉತ್ತಮ ಸೇವೆ ಒದಗಿಸಲು ಸಾಧ್ಯವಾಗುತ್ತದೆ. ಸಾಮಾನ್ಯ ಜನರ ಹಿತಾಸಕ್ತಿಗಾಗಿ, ಅವರಿಗೆ ಕೈಗೆಟುವಂತಹ ಸೇವೆ ಒದಗಿಸುವ ದೃಷ್ಟಿಯಿಂದ ಸಾರಿಗೆ ಸಂಸ್ಥೆಗಳನ್ನು ಬಲಗೊಳಿಸಬೇಕಿದೆ. ನೌಕರರ ಬೇಡಿಕೆಗಳ ಬಗ್ಗೆ ಮತ್ತು ಅವರ ಕಲ್ಯಾಣದ ಬಗ್ಗೆ ಚರ್ಚಿಸಲು, ಜಂಟಿ ಸದನ ಸಮಿತಿ ಅಥವಾ ನೌಕರರು, ಸಂಸ್ಥೆಯ ಪ್ರತಿನಿಧಿಗಳು ಮತ್ತು ಸರ್ಕಾರದ ಪ್ರತಿನಿಧಿಗಳನ್ನೊಳಗೊಂಡ ತ್ರಿಪಕ್ಷೀಯ ಸಮಿತಿಯೊಂದನ್ನು ರಚಿಸಬೇಕು ಎಂದು ವೇದಿಕೆ ಒತ್ತಾಯಿಸಿದೆ.

ಬಸ್ ಮತ್ತು ಪ್ರಯಾಣಿಕರು ಇಬ್ಬರೂ ಈ ನಗರದ ಕೇಂದ್ರಬಿಂದು. ನಮ್ಮನ್ನು ನಿರ್ಲಕ್ಷಿಸಬೇಡಿ, ಬಸ್ ಸೇವೆಯನ್ನು ಉತ್ತೇಜಿಸಿ, ಈ ಸೇವೆಯಲ್ಲಿ ನೌಕರರು ಪ್ರಮುಖ ಭಾಗೀದಾರರು, ಮತ್ತು ಅವರು ನಮ್ಮ ಜೊತೆಗಾರರು. ಅವರ ಕಾಳಜಿಯನ್ನು ನಿರ್ಲಕ್ಷಿಸಬೇಡಿ, ಪ್ರಯಾಣಿಕರ ಹಿತಾಸಕ್ತಿಗಾಗಿ ಮತ್ತು ಆರೋಗ್ಯಕರ ಬಸ್ ವ್ಯವಸ್ಥೆಗಾಗಿ, ಸರ್ಕಾರವು ಈ ಕೂಡಲೇ ಹತಾಶರಾಗಿರುವ ನೌಕರರತ್ತ ಧಾವಿಸಲಿ ಮತ್ತು ಅವರ ಅಳಲುಗಳನ್ನು ಆಲಿಸಿ, ತತ್ ಕ್ಷಣವೇ ಪರಿಹರಿಸಲಿ ಎಂದು ವೇದಿಕೆಯ ವಿನಯ್ ಶ್ರೀನಿವಾಸ, ಶಹೀನ್ ಶಸಾ ಆಶಿಸಿದ್ದಾರೆ.


ಇದನ್ನೂ ಓದಿ: ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಮಾಡಿ: ಬೆಂಗಳೂರಿನಲ್ಲಿ ಬೃಹತ್ ಹೋರಾಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...