Homeಕರ್ನಾಟಕಸರ್ಕಾರ ಸಾರಿಗೆ ನೌಕರರ ಸಮಸ್ಯೆ ಬಗೆಹರಿಸಬೇಕಾದುದ್ದು ಹೀಗೆ..: ಬಸ್ ಪ್ರಯಾಣಿಕರ ವೇದಿಕೆಯ ಸಲಹೆಗಳು

ಸರ್ಕಾರ ಸಾರಿಗೆ ನೌಕರರ ಸಮಸ್ಯೆ ಬಗೆಹರಿಸಬೇಕಾದುದ್ದು ಹೀಗೆ..: ಬಸ್ ಪ್ರಯಾಣಿಕರ ವೇದಿಕೆಯ ಸಲಹೆಗಳು

ಬಡ ವರ್ಗದ ಪ್ರಯಾಣಿಕರಿಗೆ ತೊಂದರೆಯಾಗದಂತೆ ಪ್ರತಿಭಟನೆ ಮುಂದುವರೆಸಲು “ಬಸ್ ಓಡಿಸಲಿ, ಆದರೆ ಪ್ರತಿಭಟನೆಯ ಅಂಗವಾಗಿ ಟಿಕೆಟ್ ಹಣ ಸಂಗ್ರಹ ಮಾಡುವುದು ಬೇಡ” ಎಂಬ ಸಲಹೆಗಳು ಬಂದಿವೆ.

- Advertisement -
- Advertisement -

ಸಾರಿಗೆ ನೌಕರರನ್ನು ಸರ್ಕಾರಿ ನೌಕರರೆಂದು ಘೋಷಿಸಬೇಕು, ಸರ್ಕಾರಿ ನೌಕರರಿಗೆ ಸಿಗುವ ಎಲ್ಲಾ ಸೌಲಭ್ಯಗಳನ್ನು ಸಾರಿಗೆ ನೌಕರರಿಗೂ ನೀಡಬೇಕು ಎಂಬ ಹಕ್ಕೊತ್ತಾಯಗಳನ್ನಿಟ್ಟುಕೊಂಡು ಬಿಎಂಟಿಸಿ ಮತ್ತು ಕೆಎಸ್‌ಆರ್‌ಟಿಸಿ ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರ ಮೂರನೇ ದಿನಕ್ಕೆ ಕಾಲಿಟ್ಟಿದೆ. ಸರ್ಕಾರ ಮತ್ತು ಸಾರಿಗೆ ನೌಕರರ ಸಂಘದೊಂದಿಗೆ ಮಾತುಕತೆ ವಿಫಲವಾಗಿದ್ದು ಮುಷ್ಕರದಿಂದಾಗಿ ಕಳೆದೆರಡು ದಿನಗಳಿಂದ ಬಸ್‌ಗಳು ರಸ್ತೆಗಿಳಿಯದೆ ಪ್ರಯಾಣಿಕರಿಗೆ ತುಸು ಸಮಸ್ಯೆಯಾಗಿದೆ.

ಈ ಸಮಸ್ಯೆಯನ್ನು ಹೇಗೆ ಬಗೆಹರಿಸಬೇಕೆಂದು ಬೆಂಗಳೂರು ಬಸ್ ಪ್ರಯಾಣಿಕರ ವೇದಿಕೆಯ ಪರವಾಗಿ ವಿನಯ್ ಶ್ರೀನಿವಾಸ ಮತ್ತು ಶಹೀನ್ ಶಸಾ ಪತ್ರಿಕಾಹೇಳಿಕೆಯ ಮೂಲಕ ಕೆಲವು ಸಲಹೆಗಳನ್ನು ನೀಡಿದ್ದಾರೆ. ಸಾರಿಗೆ ನೌಕರರು ಮತ್ತು ಸರ್ಕಾರ ಎರಡಕ್ಕೂ ಮನವಿ ಮಾಡುವ ಮೂಲಕ ಸಮಸ್ಯೆಗೆ ಇತಿಶ್ರಿ ಹಾಡಬೇಕೆಂದು ಕೋರಿದ್ದಾರೆ.

ರಸ್ತೆ ಸಾರಿಗೆ ನಿಗಮದಲ್ಲಿರುವ ರಾಚನಿಕ ಸಮಸ್ಯೆಗಳು, ರಸ್ತೆ ಸಾರಿಗೆ ನಿಗಮಕ್ಕೆ ಸರ್ಕಾರದ ಬೆಂಬಲದ ಕೊರತೆ, ನೌಕರರ ಹಕ್ಕುಗಳನ್ನು ಗೌರವಿಸದಿರುವುದು, ಸಂಘಟನೆಗಳನ್ನು ಮಾನ್ಯ ಮಾಡದಿರುವುದು ಮುಂತಾದ ಕಾರಣಗಳು ಇಂದಿನ ಮುಷ್ಕರಕ್ಕೆ ಕಾರಣವಾಗಿದೆ. ಆದರೆ ರಸ್ತೆ ಸಾರಿಗೆ ಸಂಸ್ಥೆಗೆ ನೌಕರರೇ ಜೀವಾಳ, ನಾವು ಅವರೊಂದಿಗೆ ನಿಲ್ಲುತ್ತೇವೆ. ಮುಷ್ಕರ ನಿರತ ನೌಕರರ ಮೇಲೆ ಸರ್ಕಾರವು ಯಾವುದೇ ಕ್ರಮ ಕೈಗೊಳ್ಳಬಾರದು. ತಕ್ಷಣವೇ ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅವರ ಬೇಡಿಕೆಗಳನ್ನು ಈಡೇರಿಸಲು ಕ್ರಮ ಕೈಗೊಳ್ಳಬೇಕು ಎಂದು ವೇದಿಕೆ ತಿಳಿಸಿದೆ.

ನೌಕರರಿಗೆ ಮತ್ತು ನೌಕರ ಸಂಘಟನೆಗಳಿಗೆ ಮನವಿ

ಪ್ರಯಾಣಿಕರಾಗಿ ನಾವು ಈ ನೌಕರರು ದಿನನಿತ್ಯ ನಿರ್ವಹಿಸುವ ಶ್ರಮದ ದುಡಿಮೆಯನ್ನು ಗೌರವಿಸುತ್ತೇವೆ. ಅವರ ಹೋರಾಟಕ್ಕೆ ನಾವು ಹೆಗಲಾಗುತ್ತೇವೆ. ಆದರೆ, ಇಂದು ಈ ಸಮಸ್ಯೆ ಇತ್ಯರ್ಥವಾಗದಿದ್ದರೆ, ಪ್ರಯಾಣಿಕರಿಗೆ ತೊಂದರೆಯಾಗದಂತೆ ಹೋರಾಟ ಮುಂದುವರೆಸುವ ದಾರಿಗಳನ್ನು ಕಂಡುಕೊಳ್ಳಬೇಕೆಂದು ನಾವು ಮನವಿ ಮಾಡುತ್ತಿದ್ದೇವೆ, ಏಕೆಂದರೆ ಬಹುತೇಕ ಪ್ರಯಾಣಿಕರು ಬಡವರು, ಅಂಚಿಗೆ ಸರಿಸಲ್ಪಟ್ಟವರು. ದುಡಿಮೆಗಾಗಿ ಮತ್ತು ದಿನನಿತ್ಯದ ಅಗತ್ಯಗಳಿಗಾಗಿ, ಪ್ರಯಾಣಿಸಲು ಬಸ್ ಅನ್ನೇ ಆಧರಿಸಿರುವವರು. ಆದ್ದರಿಂದ ಬಡ ವರ್ಗದ ಪ್ರಯಾಣಿಕರಿಗೆ ತೊಂದರೆಯಾಗದಂತೆ ಪ್ರತಿಭಟನೆ ನಡೆಸಬೇಕೆಂಬುದು ನಮ್ಮ ಮನವಿ. ಉದಾಹರಣೆಗೆ ಕೆಲವು ಪ್ರಯಾಣಿಕರು, “ಬಸ್ ಓಡಿಸಲಿ, ಆದರೆ ಪ್ರತಿಭಟನೆಯ ಅಂಗವಾಗಿ ಟಿಕೆಟ್ ಹಣ ಸಂಗ್ರಹ ಮಾಡುವುದು ಬೇಡ” ಎಂಬ ಸಲಹೆಯನ್ನೂ ನೀಡಿದ್ದಾರೆ, ಇದನ್ನು ಪರೀಶೀಲಿಸಬೇಕೆಂದು ವೇದಿಕೆ ಮನವಿ ಮಾಡಿದೆ.

ಈ ಪರಿಸ್ಥಿತಿಯ ನಿರ್ವಹಣೆಗಾಗಿ ಸರ್ಕಾರಕ್ಕೆ ಮನವಿ

ಈ ಮುಷ್ಕರವು ಸಂಸ್ಥೆಯೊಳಗೆ ಇದ್ದ ರಾಚನಿಕ ಸಮಸ್ಯೆ, ಕೋವಿಡ್ ಸಂದರ್ಭದ ಬಿಕ್ಕಟ್ಟು, ಹಲವಾರು ಸಮಸ್ಯೆಗಳನ್ನು ಇತ್ಯರ್ಥಗೊಳಿಸದೇ ಇದ್ದದ್ದು, ಈ ಎಲ್ಲದರ ಒಟ್ಟು ಫಲಿತವಾಗಿದೆ. ಮುಷ್ಕರಕ್ಕೆ ಕರೆಕೊಟ್ಟವರನ್ನೂ ಸೇರಿದಂತೆ ಸರ್ಕಾರವು ನೌಕರರ ಪ್ರತಿನಿಧಿಗಳ ವಿಶ್ವಾಸವನ್ನು ಗಳಿಸಿ ಅವರೊಂದಿಗೆ ಮಾತುಕತೆ ನಡೆಸಬೇಕು. ಎಸ್ಮಾ ಜಾರಿಗೊಳಿಸುವಂತಹ ಕ್ರಮಗಳು ಪರಿಸ್ಥಿತಿಯನ್ನು ಇನ್ನಷ್ಟು ಹದಗೆಡಿಸುತ್ತವೆ. ನೌಕರರ ಮತ್ತು ಪ್ರಯಾಣಿಕರ ಹಿತಾಸಕ್ತಿಗಾಗಿ ಸರ್ಕಾರವು ಈ ಬಿಕ್ಕಟ್ಟನ್ನು ಅನುನಯದಿಂದ ಬಗೆಹರಿಸಬೇಕಾಗಿದೆ ಎಂದು ವೇದಿಕೆ ಅಭಿಪ್ರಾಯಪಟ್ಟಿದೆ.

ಸರ್ಕಾರವು ಸಾರಿಗೆ ಸಂಸ್ಥೆಗಳಿಗೆ ಗಣನೀಯವಾಗಿ ಸಾರ್ವಜನಿಕ ಹೂಡಿಕೆಯನ್ನು ಹೆಚ್ಚಿಸಿ ಅವುಗಳ ಆರ್ಥಿಕ ಪುನಶ್ಚೇತನಕ್ಕಾಗಿ ಯೋಚಿಸಲು ಈ ಸಮಯವು ಸುಸಂದರ್ಭವಾಗಿದೆ. ಇದರಿಂದ ಸಂಸ್ಥೆಗಳು ತಮ್ಮ ನೌಕರರಿಗೆ ಸೌಲಭ್ಯಗಳನ್ನು ಒದಗಿಸಲು ಮಾತ್ರವಲ್ಲ, ಪ್ರಯಾಣಿಕರಿಗೆ ಉತ್ತಮ ಸೇವೆ ಒದಗಿಸಲು ಸಾಧ್ಯವಾಗುತ್ತದೆ. ಸಾಮಾನ್ಯ ಜನರ ಹಿತಾಸಕ್ತಿಗಾಗಿ, ಅವರಿಗೆ ಕೈಗೆಟುವಂತಹ ಸೇವೆ ಒದಗಿಸುವ ದೃಷ್ಟಿಯಿಂದ ಸಾರಿಗೆ ಸಂಸ್ಥೆಗಳನ್ನು ಬಲಗೊಳಿಸಬೇಕಿದೆ. ನೌಕರರ ಬೇಡಿಕೆಗಳ ಬಗ್ಗೆ ಮತ್ತು ಅವರ ಕಲ್ಯಾಣದ ಬಗ್ಗೆ ಚರ್ಚಿಸಲು, ಜಂಟಿ ಸದನ ಸಮಿತಿ ಅಥವಾ ನೌಕರರು, ಸಂಸ್ಥೆಯ ಪ್ರತಿನಿಧಿಗಳು ಮತ್ತು ಸರ್ಕಾರದ ಪ್ರತಿನಿಧಿಗಳನ್ನೊಳಗೊಂಡ ತ್ರಿಪಕ್ಷೀಯ ಸಮಿತಿಯೊಂದನ್ನು ರಚಿಸಬೇಕು ಎಂದು ವೇದಿಕೆ ಒತ್ತಾಯಿಸಿದೆ.

ಬಸ್ ಮತ್ತು ಪ್ರಯಾಣಿಕರು ಇಬ್ಬರೂ ಈ ನಗರದ ಕೇಂದ್ರಬಿಂದು. ನಮ್ಮನ್ನು ನಿರ್ಲಕ್ಷಿಸಬೇಡಿ, ಬಸ್ ಸೇವೆಯನ್ನು ಉತ್ತೇಜಿಸಿ, ಈ ಸೇವೆಯಲ್ಲಿ ನೌಕರರು ಪ್ರಮುಖ ಭಾಗೀದಾರರು, ಮತ್ತು ಅವರು ನಮ್ಮ ಜೊತೆಗಾರರು. ಅವರ ಕಾಳಜಿಯನ್ನು ನಿರ್ಲಕ್ಷಿಸಬೇಡಿ, ಪ್ರಯಾಣಿಕರ ಹಿತಾಸಕ್ತಿಗಾಗಿ ಮತ್ತು ಆರೋಗ್ಯಕರ ಬಸ್ ವ್ಯವಸ್ಥೆಗಾಗಿ, ಸರ್ಕಾರವು ಈ ಕೂಡಲೇ ಹತಾಶರಾಗಿರುವ ನೌಕರರತ್ತ ಧಾವಿಸಲಿ ಮತ್ತು ಅವರ ಅಳಲುಗಳನ್ನು ಆಲಿಸಿ, ತತ್ ಕ್ಷಣವೇ ಪರಿಹರಿಸಲಿ ಎಂದು ವೇದಿಕೆಯ ವಿನಯ್ ಶ್ರೀನಿವಾಸ, ಶಹೀನ್ ಶಸಾ ಆಶಿಸಿದ್ದಾರೆ.


ಇದನ್ನೂ ಓದಿ: ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಮಾಡಿ: ಬೆಂಗಳೂರಿನಲ್ಲಿ ಬೃಹತ್ ಹೋರಾಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...