Homeಕರ್ನಾಟಕಸರ್ಕಾರ ಸಾರಿಗೆ ನೌಕರರ ಸಮಸ್ಯೆ ಬಗೆಹರಿಸಬೇಕಾದುದ್ದು ಹೀಗೆ..: ಬಸ್ ಪ್ರಯಾಣಿಕರ ವೇದಿಕೆಯ ಸಲಹೆಗಳು

ಸರ್ಕಾರ ಸಾರಿಗೆ ನೌಕರರ ಸಮಸ್ಯೆ ಬಗೆಹರಿಸಬೇಕಾದುದ್ದು ಹೀಗೆ..: ಬಸ್ ಪ್ರಯಾಣಿಕರ ವೇದಿಕೆಯ ಸಲಹೆಗಳು

ಬಡ ವರ್ಗದ ಪ್ರಯಾಣಿಕರಿಗೆ ತೊಂದರೆಯಾಗದಂತೆ ಪ್ರತಿಭಟನೆ ಮುಂದುವರೆಸಲು “ಬಸ್ ಓಡಿಸಲಿ, ಆದರೆ ಪ್ರತಿಭಟನೆಯ ಅಂಗವಾಗಿ ಟಿಕೆಟ್ ಹಣ ಸಂಗ್ರಹ ಮಾಡುವುದು ಬೇಡ” ಎಂಬ ಸಲಹೆಗಳು ಬಂದಿವೆ.

- Advertisement -
- Advertisement -

ಸಾರಿಗೆ ನೌಕರರನ್ನು ಸರ್ಕಾರಿ ನೌಕರರೆಂದು ಘೋಷಿಸಬೇಕು, ಸರ್ಕಾರಿ ನೌಕರರಿಗೆ ಸಿಗುವ ಎಲ್ಲಾ ಸೌಲಭ್ಯಗಳನ್ನು ಸಾರಿಗೆ ನೌಕರರಿಗೂ ನೀಡಬೇಕು ಎಂಬ ಹಕ್ಕೊತ್ತಾಯಗಳನ್ನಿಟ್ಟುಕೊಂಡು ಬಿಎಂಟಿಸಿ ಮತ್ತು ಕೆಎಸ್‌ಆರ್‌ಟಿಸಿ ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರ ಮೂರನೇ ದಿನಕ್ಕೆ ಕಾಲಿಟ್ಟಿದೆ. ಸರ್ಕಾರ ಮತ್ತು ಸಾರಿಗೆ ನೌಕರರ ಸಂಘದೊಂದಿಗೆ ಮಾತುಕತೆ ವಿಫಲವಾಗಿದ್ದು ಮುಷ್ಕರದಿಂದಾಗಿ ಕಳೆದೆರಡು ದಿನಗಳಿಂದ ಬಸ್‌ಗಳು ರಸ್ತೆಗಿಳಿಯದೆ ಪ್ರಯಾಣಿಕರಿಗೆ ತುಸು ಸಮಸ್ಯೆಯಾಗಿದೆ.

ಈ ಸಮಸ್ಯೆಯನ್ನು ಹೇಗೆ ಬಗೆಹರಿಸಬೇಕೆಂದು ಬೆಂಗಳೂರು ಬಸ್ ಪ್ರಯಾಣಿಕರ ವೇದಿಕೆಯ ಪರವಾಗಿ ವಿನಯ್ ಶ್ರೀನಿವಾಸ ಮತ್ತು ಶಹೀನ್ ಶಸಾ ಪತ್ರಿಕಾಹೇಳಿಕೆಯ ಮೂಲಕ ಕೆಲವು ಸಲಹೆಗಳನ್ನು ನೀಡಿದ್ದಾರೆ. ಸಾರಿಗೆ ನೌಕರರು ಮತ್ತು ಸರ್ಕಾರ ಎರಡಕ್ಕೂ ಮನವಿ ಮಾಡುವ ಮೂಲಕ ಸಮಸ್ಯೆಗೆ ಇತಿಶ್ರಿ ಹಾಡಬೇಕೆಂದು ಕೋರಿದ್ದಾರೆ.

ರಸ್ತೆ ಸಾರಿಗೆ ನಿಗಮದಲ್ಲಿರುವ ರಾಚನಿಕ ಸಮಸ್ಯೆಗಳು, ರಸ್ತೆ ಸಾರಿಗೆ ನಿಗಮಕ್ಕೆ ಸರ್ಕಾರದ ಬೆಂಬಲದ ಕೊರತೆ, ನೌಕರರ ಹಕ್ಕುಗಳನ್ನು ಗೌರವಿಸದಿರುವುದು, ಸಂಘಟನೆಗಳನ್ನು ಮಾನ್ಯ ಮಾಡದಿರುವುದು ಮುಂತಾದ ಕಾರಣಗಳು ಇಂದಿನ ಮುಷ್ಕರಕ್ಕೆ ಕಾರಣವಾಗಿದೆ. ಆದರೆ ರಸ್ತೆ ಸಾರಿಗೆ ಸಂಸ್ಥೆಗೆ ನೌಕರರೇ ಜೀವಾಳ, ನಾವು ಅವರೊಂದಿಗೆ ನಿಲ್ಲುತ್ತೇವೆ. ಮುಷ್ಕರ ನಿರತ ನೌಕರರ ಮೇಲೆ ಸರ್ಕಾರವು ಯಾವುದೇ ಕ್ರಮ ಕೈಗೊಳ್ಳಬಾರದು. ತಕ್ಷಣವೇ ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅವರ ಬೇಡಿಕೆಗಳನ್ನು ಈಡೇರಿಸಲು ಕ್ರಮ ಕೈಗೊಳ್ಳಬೇಕು ಎಂದು ವೇದಿಕೆ ತಿಳಿಸಿದೆ.

ನೌಕರರಿಗೆ ಮತ್ತು ನೌಕರ ಸಂಘಟನೆಗಳಿಗೆ ಮನವಿ

ಪ್ರಯಾಣಿಕರಾಗಿ ನಾವು ಈ ನೌಕರರು ದಿನನಿತ್ಯ ನಿರ್ವಹಿಸುವ ಶ್ರಮದ ದುಡಿಮೆಯನ್ನು ಗೌರವಿಸುತ್ತೇವೆ. ಅವರ ಹೋರಾಟಕ್ಕೆ ನಾವು ಹೆಗಲಾಗುತ್ತೇವೆ. ಆದರೆ, ಇಂದು ಈ ಸಮಸ್ಯೆ ಇತ್ಯರ್ಥವಾಗದಿದ್ದರೆ, ಪ್ರಯಾಣಿಕರಿಗೆ ತೊಂದರೆಯಾಗದಂತೆ ಹೋರಾಟ ಮುಂದುವರೆಸುವ ದಾರಿಗಳನ್ನು ಕಂಡುಕೊಳ್ಳಬೇಕೆಂದು ನಾವು ಮನವಿ ಮಾಡುತ್ತಿದ್ದೇವೆ, ಏಕೆಂದರೆ ಬಹುತೇಕ ಪ್ರಯಾಣಿಕರು ಬಡವರು, ಅಂಚಿಗೆ ಸರಿಸಲ್ಪಟ್ಟವರು. ದುಡಿಮೆಗಾಗಿ ಮತ್ತು ದಿನನಿತ್ಯದ ಅಗತ್ಯಗಳಿಗಾಗಿ, ಪ್ರಯಾಣಿಸಲು ಬಸ್ ಅನ್ನೇ ಆಧರಿಸಿರುವವರು. ಆದ್ದರಿಂದ ಬಡ ವರ್ಗದ ಪ್ರಯಾಣಿಕರಿಗೆ ತೊಂದರೆಯಾಗದಂತೆ ಪ್ರತಿಭಟನೆ ನಡೆಸಬೇಕೆಂಬುದು ನಮ್ಮ ಮನವಿ. ಉದಾಹರಣೆಗೆ ಕೆಲವು ಪ್ರಯಾಣಿಕರು, “ಬಸ್ ಓಡಿಸಲಿ, ಆದರೆ ಪ್ರತಿಭಟನೆಯ ಅಂಗವಾಗಿ ಟಿಕೆಟ್ ಹಣ ಸಂಗ್ರಹ ಮಾಡುವುದು ಬೇಡ” ಎಂಬ ಸಲಹೆಯನ್ನೂ ನೀಡಿದ್ದಾರೆ, ಇದನ್ನು ಪರೀಶೀಲಿಸಬೇಕೆಂದು ವೇದಿಕೆ ಮನವಿ ಮಾಡಿದೆ.

ಈ ಪರಿಸ್ಥಿತಿಯ ನಿರ್ವಹಣೆಗಾಗಿ ಸರ್ಕಾರಕ್ಕೆ ಮನವಿ

ಈ ಮುಷ್ಕರವು ಸಂಸ್ಥೆಯೊಳಗೆ ಇದ್ದ ರಾಚನಿಕ ಸಮಸ್ಯೆ, ಕೋವಿಡ್ ಸಂದರ್ಭದ ಬಿಕ್ಕಟ್ಟು, ಹಲವಾರು ಸಮಸ್ಯೆಗಳನ್ನು ಇತ್ಯರ್ಥಗೊಳಿಸದೇ ಇದ್ದದ್ದು, ಈ ಎಲ್ಲದರ ಒಟ್ಟು ಫಲಿತವಾಗಿದೆ. ಮುಷ್ಕರಕ್ಕೆ ಕರೆಕೊಟ್ಟವರನ್ನೂ ಸೇರಿದಂತೆ ಸರ್ಕಾರವು ನೌಕರರ ಪ್ರತಿನಿಧಿಗಳ ವಿಶ್ವಾಸವನ್ನು ಗಳಿಸಿ ಅವರೊಂದಿಗೆ ಮಾತುಕತೆ ನಡೆಸಬೇಕು. ಎಸ್ಮಾ ಜಾರಿಗೊಳಿಸುವಂತಹ ಕ್ರಮಗಳು ಪರಿಸ್ಥಿತಿಯನ್ನು ಇನ್ನಷ್ಟು ಹದಗೆಡಿಸುತ್ತವೆ. ನೌಕರರ ಮತ್ತು ಪ್ರಯಾಣಿಕರ ಹಿತಾಸಕ್ತಿಗಾಗಿ ಸರ್ಕಾರವು ಈ ಬಿಕ್ಕಟ್ಟನ್ನು ಅನುನಯದಿಂದ ಬಗೆಹರಿಸಬೇಕಾಗಿದೆ ಎಂದು ವೇದಿಕೆ ಅಭಿಪ್ರಾಯಪಟ್ಟಿದೆ.

ಸರ್ಕಾರವು ಸಾರಿಗೆ ಸಂಸ್ಥೆಗಳಿಗೆ ಗಣನೀಯವಾಗಿ ಸಾರ್ವಜನಿಕ ಹೂಡಿಕೆಯನ್ನು ಹೆಚ್ಚಿಸಿ ಅವುಗಳ ಆರ್ಥಿಕ ಪುನಶ್ಚೇತನಕ್ಕಾಗಿ ಯೋಚಿಸಲು ಈ ಸಮಯವು ಸುಸಂದರ್ಭವಾಗಿದೆ. ಇದರಿಂದ ಸಂಸ್ಥೆಗಳು ತಮ್ಮ ನೌಕರರಿಗೆ ಸೌಲಭ್ಯಗಳನ್ನು ಒದಗಿಸಲು ಮಾತ್ರವಲ್ಲ, ಪ್ರಯಾಣಿಕರಿಗೆ ಉತ್ತಮ ಸೇವೆ ಒದಗಿಸಲು ಸಾಧ್ಯವಾಗುತ್ತದೆ. ಸಾಮಾನ್ಯ ಜನರ ಹಿತಾಸಕ್ತಿಗಾಗಿ, ಅವರಿಗೆ ಕೈಗೆಟುವಂತಹ ಸೇವೆ ಒದಗಿಸುವ ದೃಷ್ಟಿಯಿಂದ ಸಾರಿಗೆ ಸಂಸ್ಥೆಗಳನ್ನು ಬಲಗೊಳಿಸಬೇಕಿದೆ. ನೌಕರರ ಬೇಡಿಕೆಗಳ ಬಗ್ಗೆ ಮತ್ತು ಅವರ ಕಲ್ಯಾಣದ ಬಗ್ಗೆ ಚರ್ಚಿಸಲು, ಜಂಟಿ ಸದನ ಸಮಿತಿ ಅಥವಾ ನೌಕರರು, ಸಂಸ್ಥೆಯ ಪ್ರತಿನಿಧಿಗಳು ಮತ್ತು ಸರ್ಕಾರದ ಪ್ರತಿನಿಧಿಗಳನ್ನೊಳಗೊಂಡ ತ್ರಿಪಕ್ಷೀಯ ಸಮಿತಿಯೊಂದನ್ನು ರಚಿಸಬೇಕು ಎಂದು ವೇದಿಕೆ ಒತ್ತಾಯಿಸಿದೆ.

ಬಸ್ ಮತ್ತು ಪ್ರಯಾಣಿಕರು ಇಬ್ಬರೂ ಈ ನಗರದ ಕೇಂದ್ರಬಿಂದು. ನಮ್ಮನ್ನು ನಿರ್ಲಕ್ಷಿಸಬೇಡಿ, ಬಸ್ ಸೇವೆಯನ್ನು ಉತ್ತೇಜಿಸಿ, ಈ ಸೇವೆಯಲ್ಲಿ ನೌಕರರು ಪ್ರಮುಖ ಭಾಗೀದಾರರು, ಮತ್ತು ಅವರು ನಮ್ಮ ಜೊತೆಗಾರರು. ಅವರ ಕಾಳಜಿಯನ್ನು ನಿರ್ಲಕ್ಷಿಸಬೇಡಿ, ಪ್ರಯಾಣಿಕರ ಹಿತಾಸಕ್ತಿಗಾಗಿ ಮತ್ತು ಆರೋಗ್ಯಕರ ಬಸ್ ವ್ಯವಸ್ಥೆಗಾಗಿ, ಸರ್ಕಾರವು ಈ ಕೂಡಲೇ ಹತಾಶರಾಗಿರುವ ನೌಕರರತ್ತ ಧಾವಿಸಲಿ ಮತ್ತು ಅವರ ಅಳಲುಗಳನ್ನು ಆಲಿಸಿ, ತತ್ ಕ್ಷಣವೇ ಪರಿಹರಿಸಲಿ ಎಂದು ವೇದಿಕೆಯ ವಿನಯ್ ಶ್ರೀನಿವಾಸ, ಶಹೀನ್ ಶಸಾ ಆಶಿಸಿದ್ದಾರೆ.


ಇದನ್ನೂ ಓದಿ: ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಮಾಡಿ: ಬೆಂಗಳೂರಿನಲ್ಲಿ ಬೃಹತ್ ಹೋರಾಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...