Homeಕರ್ನಾಟಕಕೆಲವೇ ಜನರ ಹಿತಾಸಕ್ತಿಯ ಇ-ಬೈಕ್‌‌‌‌ ಯೋಜನೆಯಿಂದ ಲಕ್ಷಾಂತರ ಚಾಲಕರ ಜೀವನಕ್ಕೆ ಧಕ್ಕೆ: NCTU ಆಕ್ರೋಶ

ಕೆಲವೇ ಜನರ ಹಿತಾಸಕ್ತಿಯ ಇ-ಬೈಕ್‌‌‌‌ ಯೋಜನೆಯಿಂದ ಲಕ್ಷಾಂತರ ಚಾಲಕರ ಜೀವನಕ್ಕೆ ಧಕ್ಕೆ: NCTU ಆಕ್ರೋಶ

- Advertisement -
- Advertisement -

ರಾಜ್ಯದಲ್ಲಿ ಶೀಘ್ರವೇ ಎಲೆಕ್ಟ್ರಿಕ್‌ ಬೈಕ್ (ಇ-ಬೈಕ್) ಟ್ಯಾಕ್ಸಿ ಸೇವೆಗಳು ಪ್ರಾರಂಭವಾಗಿಲಿದ್ದು, ಸಾರಿಗೆ ಇಲಾಖೆಯು ಅದರ ಕಾರ್ಯಾಚರಣೆಗೆ ಅನುಮೋದನೆ ನೀಡಲಿದೆ. ಆದರೆ ಇದಕ್ಕೆ ‘ನಮ್ಮ ಚಾಲಕರ ಟ್ರೇಡ್ ಯುನಿಯನ್(NCTU)’ ಆಕ್ಷೇಪ ವ್ಯಕ್ತಪಡಿಸಿದ್ದು, ಸರ್ಕಾರವು ಒಂದು ಅಥವಾ ಎರಡು ಸಂಸ್ಥೆಗಳ ಅನುಕೂಲಕ್ಕಾಗಿ ಇ-ಬೈಕ್‌ ಟ್ಯಾಕ್ಸಿ ಜಾರಿಗೆ ತರುವ ಮೂಲಕ ಲಕ್ಷಾಂತರ ಚಾಲಕರ ಜೀವನಕ್ಕೆ ಕೊಳ್ಳಿ ಇಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದೆ. ಅಷ್ಟೇ ಅಲ್ಲದೆ ಬೈಕ್ ಟ್ಯಾಕ್ಸಿ ಚಾಲನೆಗೆ ಬಂದರೆ ಆಟೋ ಕ್ಯಾಬ್ ಹಾಗೂ ಬಿಎಂಟಿಸಿಗೆ ಹೊಡೆತ ಬೀಳುತ್ತದೆ ಎಂದು ಅದು ಹೇಳಿದೆ.

ಇ-ಬೈಕ್ ಟ್ಯಾಕ್ಸಿ ಪ್ರಾರಂಭವಾದರೆ ಚಾಲಕ ವೃತ್ತಿಯನ್ನೇ ನಂಬಿ ಸುಮಾರು ನಲವತ್ತು ವರ್ಷಗಳಿಂದ ದುಡಿಯುತ್ತಿರುವ ಹಿರಿಯ ಆಟೋ ಚಾಲಕರ ಪರಿಸ್ಥಿತಿ ಹೀನಾಯವಾಗುತ್ತದೆ. ಈಗಾಗಲೆ ಹಳ್ಳಿಗಳಲ್ಲಿ ಅಲ್ಪಸ್ವಲ್ಪ ಉಳಿದಂತಹ ಜಮಿನುಗಳನ್ನು, ಮನೆಗಳನ್ನು, ಮನೆಯ ಆಭರಣಗಳನ್ನು ಮಾರಿ ಅಥವಾ ಅಡ ಇಟ್ಟು ಸಾಲ ಮಾಡಿ ಕ್ಯಾಬ್‌ ಆಟೋ ಖರೀದಿ ಮಾಡಿ ಜೀವನ ನಡೆಸುತ್ತಿರುವವರ ಪರಿಸ್ಥಿತಿ ಏನಾಗಬಹುದು ಎಂದು ಯುನಿಯನ್ ಪ್ರಶ್ನಿಸಿದೆ.

ಇದನ್ನೂ ಓದಿ: ರಾಜ್ಯದಲ್ಲಿ ಶೀಘ್ರದಲ್ಲೇ ‘ಇ-ಬೈಕ್ ಟ್ಯಾಕ್ಸಿ’ ಸೇವೆ ಪ್ರಾರಂಭ!

“ಚಾಲಕರು ಸುಮಾರು ಒಂದೂವರೆ ವರ್ಷಗಳಿಂದ ದುಡಿಮೆಯಿಲ್ಲದೆ EMI, ಇನ್ಶೂರೆನ್ಸ್ ,ಟ್ಯಾಕ್ಸ್‌ ಅನ್ನು ಕಟ್ಟಿದ್ದಾರೆ. ಕೋವಿಡ್ 1ನೇ ಅಲೆಯ ಸಮಯದಲ್ಲಿ ಮಾತ್ರ ಕೇವಲ 3 ತಿಂಗಳ EMI ಅನ್ನು ಮುಂದೂಡಲಾಗಿತ್ತು. ಆದರೆ ಅದರ ಬಡ್ಡಿಯನ್ನು ಸಹ ಕಡಿಮೆ ಮಾಡಿರಲಿಲ್ಲ. ಚಾಲಕರು ಕೊರೊನಾದಿಂದಾಗಿ ಕಂಗೆಟ್ಟು ಸುಮಾರು 2 ವರ್ಷಗಳಿಂದ ಸರಿಯಾದ ದುಡಿಮೆಯಿಲ್ಲದೆ ಸಾಲ ಮಾಡಿ ಜೀವನ ನಿರ್ವಹಣೆ ಮಾಡುತ್ತಿದ್ದಾರೆ. ಇದೀಗ ಇ-ಬೈಕ್‌‌ ಟ್ಯಾಕ್ಸಿಯಿಂದ ಅವರ ಜೀವನ ಮತ್ತಷ್ಟು ಹದಗೆಡುತ್ತದೆ” ಎಂದು ಯುನಿಯನ್ ಆತಂಕ ವ್ಯಕ್ತಪಡಿಸಿದೆ.

“ಖಾಸಗಿ ಫೈನಾನ್ಸ್‌ನವರು ಚಾಲಕರಿಗೆ ಹಿಂಸೆ ನೀಡುತ್ತಾ ದಬ್ಬಾಳಿಕೆ ಮಾಡಿ EMI ವಸೂಲಿ ಮಾಡುತ್ತಿರುವುದನ್ನು ಅನೇಕ ಬಾರಿ ಸರಕಾರದ ಗಮನಕ್ಕೆ ತಂದಿದ್ದೆವು. ಆದರೂ ಸಹ ಅವರ ವಿರುದ್ಧ ಕ್ರಮ ಜರುಗಿಸದೇ ಇದ್ದುದರಿಂದ ಅನೇಕ ಚಾಲಕರು ಆತ್ಮಹತ್ಯೆಯ ದಾರಿ ಹಿಡಿದು ಅವರ ಕುಟುಂಬ ಸದಸ್ಯರು ಬೀದಿ ಪಾಲಾಗುವಂತಾಗಿದೆ. ಇದಕ್ಕೆಲ್ಲಾ ಈ ಸರ್ಕಾರವೇ ಹೊಣೆ. ಇದೀಗ ಒಂದು ಅಥವಾ ಎರಡು ಸಂಸ್ಥೆಗಳ ಅನುಕೂಲಕ್ಕಾಗಿ ಇ-ಬೈಕ್‌ ಟ್ಯಾಕ್ಸಿ ತರುವ ಮೂಲಕ ಲಕ್ಷಾಂತರ ಚಾಲಕರ ಜೀವನಕ್ಕೆ ಕೊಳ್ಳಿ ಇಡುವಂತಾಗಿದೆ” ಎಂದು ಯುನಿಯನ್ ಆಕ್ರೋಶ ವ್ಯಕ್ತಪಡಿಸಿದೆ.

ಇದನ್ನೂ ಓದಿ: ಸುದ್ದಿಯೇನೇ ಮನೋಲ್ಲಾಸಿನಿ; ಮಾಧ್ಯಮ ನಲ್ಲರು – ರಾಜಧಾನಿ ಎಂಬ ಮಾಯಾಮೋಹಿನಿ

ರಾಜ್ಯದಲ್ಲಿ ಶೀಘ್ರವೇ ಎಲೆಕ್ಟ್ರಿಕ್‌ ಬೈಕ್ (ಇ-ಬೈಕ್) ಟ್ಯಾಕ್ಸಿ ಸೇವೆಗಳು ಪ್ರಾರಂಭವಾಗಿಲಿದ್ದು, ಸಾರಿಗೆ ಇಲಾಖೆಯು ಅದರ ಕಾರ್ಯಾಚರಣೆಗೆ ಅನುಮೋದನೆ ನೀಡಲಿದೆ. ಅಧಿಕಾರಿಗಳ ಪ್ರಕಾರ, ಇ-ಬೈಕನ್ನು ಟ್ಯಾಕ್ಸಿಯಾಗಿ ನೋಂದಾಯಿಸಲು ವ್ಯಕ್ತಿಗಳಿಗೆ ಅವಕಾಶ ನೀಡಲು ಸರ್ಕಾರ ನಿರ್ಧರಿಸಿದೆ. ಇದರಂತೆ ವೈಯಕ್ತಿಕವಾಗಿ ಅಥವಾ ಒಂದು ಸಂಸ್ಥೆಯಾಗಿ ರಿಜಿಸ್ಟರ್‌ ಮಾಡಿ ಈ ಸೇವೆಯನ್ನು ನೀಡಬಹುದಾಗಿದೆ.

ಇ-ಬೈಕ್ ಟ್ಯಾಕ್ಸಿಗಳು ಆರಂಭದಲ್ಲಿ ಬೆಂಗಳೂರಿನಲ್ಲಿ ಕಾರ್ಯಾಚರಣೆಯನ್ನು ಪ್ರಾರಂಭಿಸುತ್ತವೆ ಮತ್ತು ನಂತರ ರಾಜ್ಯದಾದ್ಯಂತ ಇತರ ನಗರ ಕೇಂದ್ರಗಳಿಗೆ ವಿಸ್ತರಿಸಲಾಗುವುದು ಎಂದು ಸಾರಿಗೆ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆಂದು ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿತ್ತು.

ಇದನ್ನೂ ಓದಿ: ಟಿಎಸ್‌ಆರ್‌ಟಿಸಿ: ಸಂಜೆ 7: 30 ರ ನಂತರ ಮಹಿಳೆಯರು ಎಲ್ಲಾದರೂ ಬಸ್ಸು ಏರಬಹುದು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...