Homeಕರ್ನಾಟಕಕೆಲವೇ ಜನರ ಹಿತಾಸಕ್ತಿಯ ಇ-ಬೈಕ್‌‌‌‌ ಯೋಜನೆಯಿಂದ ಲಕ್ಷಾಂತರ ಚಾಲಕರ ಜೀವನಕ್ಕೆ ಧಕ್ಕೆ: NCTU ಆಕ್ರೋಶ

ಕೆಲವೇ ಜನರ ಹಿತಾಸಕ್ತಿಯ ಇ-ಬೈಕ್‌‌‌‌ ಯೋಜನೆಯಿಂದ ಲಕ್ಷಾಂತರ ಚಾಲಕರ ಜೀವನಕ್ಕೆ ಧಕ್ಕೆ: NCTU ಆಕ್ರೋಶ

- Advertisement -
- Advertisement -

ರಾಜ್ಯದಲ್ಲಿ ಶೀಘ್ರವೇ ಎಲೆಕ್ಟ್ರಿಕ್‌ ಬೈಕ್ (ಇ-ಬೈಕ್) ಟ್ಯಾಕ್ಸಿ ಸೇವೆಗಳು ಪ್ರಾರಂಭವಾಗಿಲಿದ್ದು, ಸಾರಿಗೆ ಇಲಾಖೆಯು ಅದರ ಕಾರ್ಯಾಚರಣೆಗೆ ಅನುಮೋದನೆ ನೀಡಲಿದೆ. ಆದರೆ ಇದಕ್ಕೆ ‘ನಮ್ಮ ಚಾಲಕರ ಟ್ರೇಡ್ ಯುನಿಯನ್(NCTU)’ ಆಕ್ಷೇಪ ವ್ಯಕ್ತಪಡಿಸಿದ್ದು, ಸರ್ಕಾರವು ಒಂದು ಅಥವಾ ಎರಡು ಸಂಸ್ಥೆಗಳ ಅನುಕೂಲಕ್ಕಾಗಿ ಇ-ಬೈಕ್‌ ಟ್ಯಾಕ್ಸಿ ಜಾರಿಗೆ ತರುವ ಮೂಲಕ ಲಕ್ಷಾಂತರ ಚಾಲಕರ ಜೀವನಕ್ಕೆ ಕೊಳ್ಳಿ ಇಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದೆ. ಅಷ್ಟೇ ಅಲ್ಲದೆ ಬೈಕ್ ಟ್ಯಾಕ್ಸಿ ಚಾಲನೆಗೆ ಬಂದರೆ ಆಟೋ ಕ್ಯಾಬ್ ಹಾಗೂ ಬಿಎಂಟಿಸಿಗೆ ಹೊಡೆತ ಬೀಳುತ್ತದೆ ಎಂದು ಅದು ಹೇಳಿದೆ.

ಇ-ಬೈಕ್ ಟ್ಯಾಕ್ಸಿ ಪ್ರಾರಂಭವಾದರೆ ಚಾಲಕ ವೃತ್ತಿಯನ್ನೇ ನಂಬಿ ಸುಮಾರು ನಲವತ್ತು ವರ್ಷಗಳಿಂದ ದುಡಿಯುತ್ತಿರುವ ಹಿರಿಯ ಆಟೋ ಚಾಲಕರ ಪರಿಸ್ಥಿತಿ ಹೀನಾಯವಾಗುತ್ತದೆ. ಈಗಾಗಲೆ ಹಳ್ಳಿಗಳಲ್ಲಿ ಅಲ್ಪಸ್ವಲ್ಪ ಉಳಿದಂತಹ ಜಮಿನುಗಳನ್ನು, ಮನೆಗಳನ್ನು, ಮನೆಯ ಆಭರಣಗಳನ್ನು ಮಾರಿ ಅಥವಾ ಅಡ ಇಟ್ಟು ಸಾಲ ಮಾಡಿ ಕ್ಯಾಬ್‌ ಆಟೋ ಖರೀದಿ ಮಾಡಿ ಜೀವನ ನಡೆಸುತ್ತಿರುವವರ ಪರಿಸ್ಥಿತಿ ಏನಾಗಬಹುದು ಎಂದು ಯುನಿಯನ್ ಪ್ರಶ್ನಿಸಿದೆ.

ಇದನ್ನೂ ಓದಿ: ರಾಜ್ಯದಲ್ಲಿ ಶೀಘ್ರದಲ್ಲೇ ‘ಇ-ಬೈಕ್ ಟ್ಯಾಕ್ಸಿ’ ಸೇವೆ ಪ್ರಾರಂಭ!

“ಚಾಲಕರು ಸುಮಾರು ಒಂದೂವರೆ ವರ್ಷಗಳಿಂದ ದುಡಿಮೆಯಿಲ್ಲದೆ EMI, ಇನ್ಶೂರೆನ್ಸ್ ,ಟ್ಯಾಕ್ಸ್‌ ಅನ್ನು ಕಟ್ಟಿದ್ದಾರೆ. ಕೋವಿಡ್ 1ನೇ ಅಲೆಯ ಸಮಯದಲ್ಲಿ ಮಾತ್ರ ಕೇವಲ 3 ತಿಂಗಳ EMI ಅನ್ನು ಮುಂದೂಡಲಾಗಿತ್ತು. ಆದರೆ ಅದರ ಬಡ್ಡಿಯನ್ನು ಸಹ ಕಡಿಮೆ ಮಾಡಿರಲಿಲ್ಲ. ಚಾಲಕರು ಕೊರೊನಾದಿಂದಾಗಿ ಕಂಗೆಟ್ಟು ಸುಮಾರು 2 ವರ್ಷಗಳಿಂದ ಸರಿಯಾದ ದುಡಿಮೆಯಿಲ್ಲದೆ ಸಾಲ ಮಾಡಿ ಜೀವನ ನಿರ್ವಹಣೆ ಮಾಡುತ್ತಿದ್ದಾರೆ. ಇದೀಗ ಇ-ಬೈಕ್‌‌ ಟ್ಯಾಕ್ಸಿಯಿಂದ ಅವರ ಜೀವನ ಮತ್ತಷ್ಟು ಹದಗೆಡುತ್ತದೆ” ಎಂದು ಯುನಿಯನ್ ಆತಂಕ ವ್ಯಕ್ತಪಡಿಸಿದೆ.

“ಖಾಸಗಿ ಫೈನಾನ್ಸ್‌ನವರು ಚಾಲಕರಿಗೆ ಹಿಂಸೆ ನೀಡುತ್ತಾ ದಬ್ಬಾಳಿಕೆ ಮಾಡಿ EMI ವಸೂಲಿ ಮಾಡುತ್ತಿರುವುದನ್ನು ಅನೇಕ ಬಾರಿ ಸರಕಾರದ ಗಮನಕ್ಕೆ ತಂದಿದ್ದೆವು. ಆದರೂ ಸಹ ಅವರ ವಿರುದ್ಧ ಕ್ರಮ ಜರುಗಿಸದೇ ಇದ್ದುದರಿಂದ ಅನೇಕ ಚಾಲಕರು ಆತ್ಮಹತ್ಯೆಯ ದಾರಿ ಹಿಡಿದು ಅವರ ಕುಟುಂಬ ಸದಸ್ಯರು ಬೀದಿ ಪಾಲಾಗುವಂತಾಗಿದೆ. ಇದಕ್ಕೆಲ್ಲಾ ಈ ಸರ್ಕಾರವೇ ಹೊಣೆ. ಇದೀಗ ಒಂದು ಅಥವಾ ಎರಡು ಸಂಸ್ಥೆಗಳ ಅನುಕೂಲಕ್ಕಾಗಿ ಇ-ಬೈಕ್‌ ಟ್ಯಾಕ್ಸಿ ತರುವ ಮೂಲಕ ಲಕ್ಷಾಂತರ ಚಾಲಕರ ಜೀವನಕ್ಕೆ ಕೊಳ್ಳಿ ಇಡುವಂತಾಗಿದೆ” ಎಂದು ಯುನಿಯನ್ ಆಕ್ರೋಶ ವ್ಯಕ್ತಪಡಿಸಿದೆ.

ಇದನ್ನೂ ಓದಿ: ಸುದ್ದಿಯೇನೇ ಮನೋಲ್ಲಾಸಿನಿ; ಮಾಧ್ಯಮ ನಲ್ಲರು – ರಾಜಧಾನಿ ಎಂಬ ಮಾಯಾಮೋಹಿನಿ

ರಾಜ್ಯದಲ್ಲಿ ಶೀಘ್ರವೇ ಎಲೆಕ್ಟ್ರಿಕ್‌ ಬೈಕ್ (ಇ-ಬೈಕ್) ಟ್ಯಾಕ್ಸಿ ಸೇವೆಗಳು ಪ್ರಾರಂಭವಾಗಿಲಿದ್ದು, ಸಾರಿಗೆ ಇಲಾಖೆಯು ಅದರ ಕಾರ್ಯಾಚರಣೆಗೆ ಅನುಮೋದನೆ ನೀಡಲಿದೆ. ಅಧಿಕಾರಿಗಳ ಪ್ರಕಾರ, ಇ-ಬೈಕನ್ನು ಟ್ಯಾಕ್ಸಿಯಾಗಿ ನೋಂದಾಯಿಸಲು ವ್ಯಕ್ತಿಗಳಿಗೆ ಅವಕಾಶ ನೀಡಲು ಸರ್ಕಾರ ನಿರ್ಧರಿಸಿದೆ. ಇದರಂತೆ ವೈಯಕ್ತಿಕವಾಗಿ ಅಥವಾ ಒಂದು ಸಂಸ್ಥೆಯಾಗಿ ರಿಜಿಸ್ಟರ್‌ ಮಾಡಿ ಈ ಸೇವೆಯನ್ನು ನೀಡಬಹುದಾಗಿದೆ.

ಇ-ಬೈಕ್ ಟ್ಯಾಕ್ಸಿಗಳು ಆರಂಭದಲ್ಲಿ ಬೆಂಗಳೂರಿನಲ್ಲಿ ಕಾರ್ಯಾಚರಣೆಯನ್ನು ಪ್ರಾರಂಭಿಸುತ್ತವೆ ಮತ್ತು ನಂತರ ರಾಜ್ಯದಾದ್ಯಂತ ಇತರ ನಗರ ಕೇಂದ್ರಗಳಿಗೆ ವಿಸ್ತರಿಸಲಾಗುವುದು ಎಂದು ಸಾರಿಗೆ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆಂದು ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿತ್ತು.

ಇದನ್ನೂ ಓದಿ: ಟಿಎಸ್‌ಆರ್‌ಟಿಸಿ: ಸಂಜೆ 7: 30 ರ ನಂತರ ಮಹಿಳೆಯರು ಎಲ್ಲಾದರೂ ಬಸ್ಸು ಏರಬಹುದು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...