Homeಕರ್ನಾಟಕಕೆಲವೇ ಜನರ ಹಿತಾಸಕ್ತಿಯ ಇ-ಬೈಕ್‌‌‌‌ ಯೋಜನೆಯಿಂದ ಲಕ್ಷಾಂತರ ಚಾಲಕರ ಜೀವನಕ್ಕೆ ಧಕ್ಕೆ: NCTU ಆಕ್ರೋಶ

ಕೆಲವೇ ಜನರ ಹಿತಾಸಕ್ತಿಯ ಇ-ಬೈಕ್‌‌‌‌ ಯೋಜನೆಯಿಂದ ಲಕ್ಷಾಂತರ ಚಾಲಕರ ಜೀವನಕ್ಕೆ ಧಕ್ಕೆ: NCTU ಆಕ್ರೋಶ

- Advertisement -
- Advertisement -

ರಾಜ್ಯದಲ್ಲಿ ಶೀಘ್ರವೇ ಎಲೆಕ್ಟ್ರಿಕ್‌ ಬೈಕ್ (ಇ-ಬೈಕ್) ಟ್ಯಾಕ್ಸಿ ಸೇವೆಗಳು ಪ್ರಾರಂಭವಾಗಿಲಿದ್ದು, ಸಾರಿಗೆ ಇಲಾಖೆಯು ಅದರ ಕಾರ್ಯಾಚರಣೆಗೆ ಅನುಮೋದನೆ ನೀಡಲಿದೆ. ಆದರೆ ಇದಕ್ಕೆ ‘ನಮ್ಮ ಚಾಲಕರ ಟ್ರೇಡ್ ಯುನಿಯನ್(NCTU)’ ಆಕ್ಷೇಪ ವ್ಯಕ್ತಪಡಿಸಿದ್ದು, ಸರ್ಕಾರವು ಒಂದು ಅಥವಾ ಎರಡು ಸಂಸ್ಥೆಗಳ ಅನುಕೂಲಕ್ಕಾಗಿ ಇ-ಬೈಕ್‌ ಟ್ಯಾಕ್ಸಿ ಜಾರಿಗೆ ತರುವ ಮೂಲಕ ಲಕ್ಷಾಂತರ ಚಾಲಕರ ಜೀವನಕ್ಕೆ ಕೊಳ್ಳಿ ಇಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದೆ. ಅಷ್ಟೇ ಅಲ್ಲದೆ ಬೈಕ್ ಟ್ಯಾಕ್ಸಿ ಚಾಲನೆಗೆ ಬಂದರೆ ಆಟೋ ಕ್ಯಾಬ್ ಹಾಗೂ ಬಿಎಂಟಿಸಿಗೆ ಹೊಡೆತ ಬೀಳುತ್ತದೆ ಎಂದು ಅದು ಹೇಳಿದೆ.

ಇ-ಬೈಕ್ ಟ್ಯಾಕ್ಸಿ ಪ್ರಾರಂಭವಾದರೆ ಚಾಲಕ ವೃತ್ತಿಯನ್ನೇ ನಂಬಿ ಸುಮಾರು ನಲವತ್ತು ವರ್ಷಗಳಿಂದ ದುಡಿಯುತ್ತಿರುವ ಹಿರಿಯ ಆಟೋ ಚಾಲಕರ ಪರಿಸ್ಥಿತಿ ಹೀನಾಯವಾಗುತ್ತದೆ. ಈಗಾಗಲೆ ಹಳ್ಳಿಗಳಲ್ಲಿ ಅಲ್ಪಸ್ವಲ್ಪ ಉಳಿದಂತಹ ಜಮಿನುಗಳನ್ನು, ಮನೆಗಳನ್ನು, ಮನೆಯ ಆಭರಣಗಳನ್ನು ಮಾರಿ ಅಥವಾ ಅಡ ಇಟ್ಟು ಸಾಲ ಮಾಡಿ ಕ್ಯಾಬ್‌ ಆಟೋ ಖರೀದಿ ಮಾಡಿ ಜೀವನ ನಡೆಸುತ್ತಿರುವವರ ಪರಿಸ್ಥಿತಿ ಏನಾಗಬಹುದು ಎಂದು ಯುನಿಯನ್ ಪ್ರಶ್ನಿಸಿದೆ.

ಇದನ್ನೂ ಓದಿ: ರಾಜ್ಯದಲ್ಲಿ ಶೀಘ್ರದಲ್ಲೇ ‘ಇ-ಬೈಕ್ ಟ್ಯಾಕ್ಸಿ’ ಸೇವೆ ಪ್ರಾರಂಭ!

“ಚಾಲಕರು ಸುಮಾರು ಒಂದೂವರೆ ವರ್ಷಗಳಿಂದ ದುಡಿಮೆಯಿಲ್ಲದೆ EMI, ಇನ್ಶೂರೆನ್ಸ್ ,ಟ್ಯಾಕ್ಸ್‌ ಅನ್ನು ಕಟ್ಟಿದ್ದಾರೆ. ಕೋವಿಡ್ 1ನೇ ಅಲೆಯ ಸಮಯದಲ್ಲಿ ಮಾತ್ರ ಕೇವಲ 3 ತಿಂಗಳ EMI ಅನ್ನು ಮುಂದೂಡಲಾಗಿತ್ತು. ಆದರೆ ಅದರ ಬಡ್ಡಿಯನ್ನು ಸಹ ಕಡಿಮೆ ಮಾಡಿರಲಿಲ್ಲ. ಚಾಲಕರು ಕೊರೊನಾದಿಂದಾಗಿ ಕಂಗೆಟ್ಟು ಸುಮಾರು 2 ವರ್ಷಗಳಿಂದ ಸರಿಯಾದ ದುಡಿಮೆಯಿಲ್ಲದೆ ಸಾಲ ಮಾಡಿ ಜೀವನ ನಿರ್ವಹಣೆ ಮಾಡುತ್ತಿದ್ದಾರೆ. ಇದೀಗ ಇ-ಬೈಕ್‌‌ ಟ್ಯಾಕ್ಸಿಯಿಂದ ಅವರ ಜೀವನ ಮತ್ತಷ್ಟು ಹದಗೆಡುತ್ತದೆ” ಎಂದು ಯುನಿಯನ್ ಆತಂಕ ವ್ಯಕ್ತಪಡಿಸಿದೆ.

“ಖಾಸಗಿ ಫೈನಾನ್ಸ್‌ನವರು ಚಾಲಕರಿಗೆ ಹಿಂಸೆ ನೀಡುತ್ತಾ ದಬ್ಬಾಳಿಕೆ ಮಾಡಿ EMI ವಸೂಲಿ ಮಾಡುತ್ತಿರುವುದನ್ನು ಅನೇಕ ಬಾರಿ ಸರಕಾರದ ಗಮನಕ್ಕೆ ತಂದಿದ್ದೆವು. ಆದರೂ ಸಹ ಅವರ ವಿರುದ್ಧ ಕ್ರಮ ಜರುಗಿಸದೇ ಇದ್ದುದರಿಂದ ಅನೇಕ ಚಾಲಕರು ಆತ್ಮಹತ್ಯೆಯ ದಾರಿ ಹಿಡಿದು ಅವರ ಕುಟುಂಬ ಸದಸ್ಯರು ಬೀದಿ ಪಾಲಾಗುವಂತಾಗಿದೆ. ಇದಕ್ಕೆಲ್ಲಾ ಈ ಸರ್ಕಾರವೇ ಹೊಣೆ. ಇದೀಗ ಒಂದು ಅಥವಾ ಎರಡು ಸಂಸ್ಥೆಗಳ ಅನುಕೂಲಕ್ಕಾಗಿ ಇ-ಬೈಕ್‌ ಟ್ಯಾಕ್ಸಿ ತರುವ ಮೂಲಕ ಲಕ್ಷಾಂತರ ಚಾಲಕರ ಜೀವನಕ್ಕೆ ಕೊಳ್ಳಿ ಇಡುವಂತಾಗಿದೆ” ಎಂದು ಯುನಿಯನ್ ಆಕ್ರೋಶ ವ್ಯಕ್ತಪಡಿಸಿದೆ.

ಇದನ್ನೂ ಓದಿ: ಸುದ್ದಿಯೇನೇ ಮನೋಲ್ಲಾಸಿನಿ; ಮಾಧ್ಯಮ ನಲ್ಲರು – ರಾಜಧಾನಿ ಎಂಬ ಮಾಯಾಮೋಹಿನಿ

ರಾಜ್ಯದಲ್ಲಿ ಶೀಘ್ರವೇ ಎಲೆಕ್ಟ್ರಿಕ್‌ ಬೈಕ್ (ಇ-ಬೈಕ್) ಟ್ಯಾಕ್ಸಿ ಸೇವೆಗಳು ಪ್ರಾರಂಭವಾಗಿಲಿದ್ದು, ಸಾರಿಗೆ ಇಲಾಖೆಯು ಅದರ ಕಾರ್ಯಾಚರಣೆಗೆ ಅನುಮೋದನೆ ನೀಡಲಿದೆ. ಅಧಿಕಾರಿಗಳ ಪ್ರಕಾರ, ಇ-ಬೈಕನ್ನು ಟ್ಯಾಕ್ಸಿಯಾಗಿ ನೋಂದಾಯಿಸಲು ವ್ಯಕ್ತಿಗಳಿಗೆ ಅವಕಾಶ ನೀಡಲು ಸರ್ಕಾರ ನಿರ್ಧರಿಸಿದೆ. ಇದರಂತೆ ವೈಯಕ್ತಿಕವಾಗಿ ಅಥವಾ ಒಂದು ಸಂಸ್ಥೆಯಾಗಿ ರಿಜಿಸ್ಟರ್‌ ಮಾಡಿ ಈ ಸೇವೆಯನ್ನು ನೀಡಬಹುದಾಗಿದೆ.

ಇ-ಬೈಕ್ ಟ್ಯಾಕ್ಸಿಗಳು ಆರಂಭದಲ್ಲಿ ಬೆಂಗಳೂರಿನಲ್ಲಿ ಕಾರ್ಯಾಚರಣೆಯನ್ನು ಪ್ರಾರಂಭಿಸುತ್ತವೆ ಮತ್ತು ನಂತರ ರಾಜ್ಯದಾದ್ಯಂತ ಇತರ ನಗರ ಕೇಂದ್ರಗಳಿಗೆ ವಿಸ್ತರಿಸಲಾಗುವುದು ಎಂದು ಸಾರಿಗೆ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆಂದು ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿತ್ತು.

ಇದನ್ನೂ ಓದಿ: ಟಿಎಸ್‌ಆರ್‌ಟಿಸಿ: ಸಂಜೆ 7: 30 ರ ನಂತರ ಮಹಿಳೆಯರು ಎಲ್ಲಾದರೂ ಬಸ್ಸು ಏರಬಹುದು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...