Homeಕರ್ನಾಟಕಕೆಲವೇ ಜನರ ಹಿತಾಸಕ್ತಿಯ ಇ-ಬೈಕ್‌‌‌‌ ಯೋಜನೆಯಿಂದ ಲಕ್ಷಾಂತರ ಚಾಲಕರ ಜೀವನಕ್ಕೆ ಧಕ್ಕೆ: NCTU ಆಕ್ರೋಶ

ಕೆಲವೇ ಜನರ ಹಿತಾಸಕ್ತಿಯ ಇ-ಬೈಕ್‌‌‌‌ ಯೋಜನೆಯಿಂದ ಲಕ್ಷಾಂತರ ಚಾಲಕರ ಜೀವನಕ್ಕೆ ಧಕ್ಕೆ: NCTU ಆಕ್ರೋಶ

- Advertisement -
- Advertisement -

ರಾಜ್ಯದಲ್ಲಿ ಶೀಘ್ರವೇ ಎಲೆಕ್ಟ್ರಿಕ್‌ ಬೈಕ್ (ಇ-ಬೈಕ್) ಟ್ಯಾಕ್ಸಿ ಸೇವೆಗಳು ಪ್ರಾರಂಭವಾಗಿಲಿದ್ದು, ಸಾರಿಗೆ ಇಲಾಖೆಯು ಅದರ ಕಾರ್ಯಾಚರಣೆಗೆ ಅನುಮೋದನೆ ನೀಡಲಿದೆ. ಆದರೆ ಇದಕ್ಕೆ ‘ನಮ್ಮ ಚಾಲಕರ ಟ್ರೇಡ್ ಯುನಿಯನ್(NCTU)’ ಆಕ್ಷೇಪ ವ್ಯಕ್ತಪಡಿಸಿದ್ದು, ಸರ್ಕಾರವು ಒಂದು ಅಥವಾ ಎರಡು ಸಂಸ್ಥೆಗಳ ಅನುಕೂಲಕ್ಕಾಗಿ ಇ-ಬೈಕ್‌ ಟ್ಯಾಕ್ಸಿ ಜಾರಿಗೆ ತರುವ ಮೂಲಕ ಲಕ್ಷಾಂತರ ಚಾಲಕರ ಜೀವನಕ್ಕೆ ಕೊಳ್ಳಿ ಇಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದೆ. ಅಷ್ಟೇ ಅಲ್ಲದೆ ಬೈಕ್ ಟ್ಯಾಕ್ಸಿ ಚಾಲನೆಗೆ ಬಂದರೆ ಆಟೋ ಕ್ಯಾಬ್ ಹಾಗೂ ಬಿಎಂಟಿಸಿಗೆ ಹೊಡೆತ ಬೀಳುತ್ತದೆ ಎಂದು ಅದು ಹೇಳಿದೆ.

ಇ-ಬೈಕ್ ಟ್ಯಾಕ್ಸಿ ಪ್ರಾರಂಭವಾದರೆ ಚಾಲಕ ವೃತ್ತಿಯನ್ನೇ ನಂಬಿ ಸುಮಾರು ನಲವತ್ತು ವರ್ಷಗಳಿಂದ ದುಡಿಯುತ್ತಿರುವ ಹಿರಿಯ ಆಟೋ ಚಾಲಕರ ಪರಿಸ್ಥಿತಿ ಹೀನಾಯವಾಗುತ್ತದೆ. ಈಗಾಗಲೆ ಹಳ್ಳಿಗಳಲ್ಲಿ ಅಲ್ಪಸ್ವಲ್ಪ ಉಳಿದಂತಹ ಜಮಿನುಗಳನ್ನು, ಮನೆಗಳನ್ನು, ಮನೆಯ ಆಭರಣಗಳನ್ನು ಮಾರಿ ಅಥವಾ ಅಡ ಇಟ್ಟು ಸಾಲ ಮಾಡಿ ಕ್ಯಾಬ್‌ ಆಟೋ ಖರೀದಿ ಮಾಡಿ ಜೀವನ ನಡೆಸುತ್ತಿರುವವರ ಪರಿಸ್ಥಿತಿ ಏನಾಗಬಹುದು ಎಂದು ಯುನಿಯನ್ ಪ್ರಶ್ನಿಸಿದೆ.

ಇದನ್ನೂ ಓದಿ: ರಾಜ್ಯದಲ್ಲಿ ಶೀಘ್ರದಲ್ಲೇ ‘ಇ-ಬೈಕ್ ಟ್ಯಾಕ್ಸಿ’ ಸೇವೆ ಪ್ರಾರಂಭ!

“ಚಾಲಕರು ಸುಮಾರು ಒಂದೂವರೆ ವರ್ಷಗಳಿಂದ ದುಡಿಮೆಯಿಲ್ಲದೆ EMI, ಇನ್ಶೂರೆನ್ಸ್ ,ಟ್ಯಾಕ್ಸ್‌ ಅನ್ನು ಕಟ್ಟಿದ್ದಾರೆ. ಕೋವಿಡ್ 1ನೇ ಅಲೆಯ ಸಮಯದಲ್ಲಿ ಮಾತ್ರ ಕೇವಲ 3 ತಿಂಗಳ EMI ಅನ್ನು ಮುಂದೂಡಲಾಗಿತ್ತು. ಆದರೆ ಅದರ ಬಡ್ಡಿಯನ್ನು ಸಹ ಕಡಿಮೆ ಮಾಡಿರಲಿಲ್ಲ. ಚಾಲಕರು ಕೊರೊನಾದಿಂದಾಗಿ ಕಂಗೆಟ್ಟು ಸುಮಾರು 2 ವರ್ಷಗಳಿಂದ ಸರಿಯಾದ ದುಡಿಮೆಯಿಲ್ಲದೆ ಸಾಲ ಮಾಡಿ ಜೀವನ ನಿರ್ವಹಣೆ ಮಾಡುತ್ತಿದ್ದಾರೆ. ಇದೀಗ ಇ-ಬೈಕ್‌‌ ಟ್ಯಾಕ್ಸಿಯಿಂದ ಅವರ ಜೀವನ ಮತ್ತಷ್ಟು ಹದಗೆಡುತ್ತದೆ” ಎಂದು ಯುನಿಯನ್ ಆತಂಕ ವ್ಯಕ್ತಪಡಿಸಿದೆ.

“ಖಾಸಗಿ ಫೈನಾನ್ಸ್‌ನವರು ಚಾಲಕರಿಗೆ ಹಿಂಸೆ ನೀಡುತ್ತಾ ದಬ್ಬಾಳಿಕೆ ಮಾಡಿ EMI ವಸೂಲಿ ಮಾಡುತ್ತಿರುವುದನ್ನು ಅನೇಕ ಬಾರಿ ಸರಕಾರದ ಗಮನಕ್ಕೆ ತಂದಿದ್ದೆವು. ಆದರೂ ಸಹ ಅವರ ವಿರುದ್ಧ ಕ್ರಮ ಜರುಗಿಸದೇ ಇದ್ದುದರಿಂದ ಅನೇಕ ಚಾಲಕರು ಆತ್ಮಹತ್ಯೆಯ ದಾರಿ ಹಿಡಿದು ಅವರ ಕುಟುಂಬ ಸದಸ್ಯರು ಬೀದಿ ಪಾಲಾಗುವಂತಾಗಿದೆ. ಇದಕ್ಕೆಲ್ಲಾ ಈ ಸರ್ಕಾರವೇ ಹೊಣೆ. ಇದೀಗ ಒಂದು ಅಥವಾ ಎರಡು ಸಂಸ್ಥೆಗಳ ಅನುಕೂಲಕ್ಕಾಗಿ ಇ-ಬೈಕ್‌ ಟ್ಯಾಕ್ಸಿ ತರುವ ಮೂಲಕ ಲಕ್ಷಾಂತರ ಚಾಲಕರ ಜೀವನಕ್ಕೆ ಕೊಳ್ಳಿ ಇಡುವಂತಾಗಿದೆ” ಎಂದು ಯುನಿಯನ್ ಆಕ್ರೋಶ ವ್ಯಕ್ತಪಡಿಸಿದೆ.

ಇದನ್ನೂ ಓದಿ: ಸುದ್ದಿಯೇನೇ ಮನೋಲ್ಲಾಸಿನಿ; ಮಾಧ್ಯಮ ನಲ್ಲರು – ರಾಜಧಾನಿ ಎಂಬ ಮಾಯಾಮೋಹಿನಿ

ರಾಜ್ಯದಲ್ಲಿ ಶೀಘ್ರವೇ ಎಲೆಕ್ಟ್ರಿಕ್‌ ಬೈಕ್ (ಇ-ಬೈಕ್) ಟ್ಯಾಕ್ಸಿ ಸೇವೆಗಳು ಪ್ರಾರಂಭವಾಗಿಲಿದ್ದು, ಸಾರಿಗೆ ಇಲಾಖೆಯು ಅದರ ಕಾರ್ಯಾಚರಣೆಗೆ ಅನುಮೋದನೆ ನೀಡಲಿದೆ. ಅಧಿಕಾರಿಗಳ ಪ್ರಕಾರ, ಇ-ಬೈಕನ್ನು ಟ್ಯಾಕ್ಸಿಯಾಗಿ ನೋಂದಾಯಿಸಲು ವ್ಯಕ್ತಿಗಳಿಗೆ ಅವಕಾಶ ನೀಡಲು ಸರ್ಕಾರ ನಿರ್ಧರಿಸಿದೆ. ಇದರಂತೆ ವೈಯಕ್ತಿಕವಾಗಿ ಅಥವಾ ಒಂದು ಸಂಸ್ಥೆಯಾಗಿ ರಿಜಿಸ್ಟರ್‌ ಮಾಡಿ ಈ ಸೇವೆಯನ್ನು ನೀಡಬಹುದಾಗಿದೆ.

ಇ-ಬೈಕ್ ಟ್ಯಾಕ್ಸಿಗಳು ಆರಂಭದಲ್ಲಿ ಬೆಂಗಳೂರಿನಲ್ಲಿ ಕಾರ್ಯಾಚರಣೆಯನ್ನು ಪ್ರಾರಂಭಿಸುತ್ತವೆ ಮತ್ತು ನಂತರ ರಾಜ್ಯದಾದ್ಯಂತ ಇತರ ನಗರ ಕೇಂದ್ರಗಳಿಗೆ ವಿಸ್ತರಿಸಲಾಗುವುದು ಎಂದು ಸಾರಿಗೆ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆಂದು ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿತ್ತು.

ಇದನ್ನೂ ಓದಿ: ಟಿಎಸ್‌ಆರ್‌ಟಿಸಿ: ಸಂಜೆ 7: 30 ರ ನಂತರ ಮಹಿಳೆಯರು ಎಲ್ಲಾದರೂ ಬಸ್ಸು ಏರಬಹುದು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...