Homeಕರ್ನಾಟಕಕೆಲವೇ ಜನರ ಹಿತಾಸಕ್ತಿಯ ಇ-ಬೈಕ್‌‌‌‌ ಯೋಜನೆಯಿಂದ ಲಕ್ಷಾಂತರ ಚಾಲಕರ ಜೀವನಕ್ಕೆ ಧಕ್ಕೆ: NCTU ಆಕ್ರೋಶ

ಕೆಲವೇ ಜನರ ಹಿತಾಸಕ್ತಿಯ ಇ-ಬೈಕ್‌‌‌‌ ಯೋಜನೆಯಿಂದ ಲಕ್ಷಾಂತರ ಚಾಲಕರ ಜೀವನಕ್ಕೆ ಧಕ್ಕೆ: NCTU ಆಕ್ರೋಶ

- Advertisement -
- Advertisement -

ರಾಜ್ಯದಲ್ಲಿ ಶೀಘ್ರವೇ ಎಲೆಕ್ಟ್ರಿಕ್‌ ಬೈಕ್ (ಇ-ಬೈಕ್) ಟ್ಯಾಕ್ಸಿ ಸೇವೆಗಳು ಪ್ರಾರಂಭವಾಗಿಲಿದ್ದು, ಸಾರಿಗೆ ಇಲಾಖೆಯು ಅದರ ಕಾರ್ಯಾಚರಣೆಗೆ ಅನುಮೋದನೆ ನೀಡಲಿದೆ. ಆದರೆ ಇದಕ್ಕೆ ‘ನಮ್ಮ ಚಾಲಕರ ಟ್ರೇಡ್ ಯುನಿಯನ್(NCTU)’ ಆಕ್ಷೇಪ ವ್ಯಕ್ತಪಡಿಸಿದ್ದು, ಸರ್ಕಾರವು ಒಂದು ಅಥವಾ ಎರಡು ಸಂಸ್ಥೆಗಳ ಅನುಕೂಲಕ್ಕಾಗಿ ಇ-ಬೈಕ್‌ ಟ್ಯಾಕ್ಸಿ ಜಾರಿಗೆ ತರುವ ಮೂಲಕ ಲಕ್ಷಾಂತರ ಚಾಲಕರ ಜೀವನಕ್ಕೆ ಕೊಳ್ಳಿ ಇಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದೆ. ಅಷ್ಟೇ ಅಲ್ಲದೆ ಬೈಕ್ ಟ್ಯಾಕ್ಸಿ ಚಾಲನೆಗೆ ಬಂದರೆ ಆಟೋ ಕ್ಯಾಬ್ ಹಾಗೂ ಬಿಎಂಟಿಸಿಗೆ ಹೊಡೆತ ಬೀಳುತ್ತದೆ ಎಂದು ಅದು ಹೇಳಿದೆ.

ಇ-ಬೈಕ್ ಟ್ಯಾಕ್ಸಿ ಪ್ರಾರಂಭವಾದರೆ ಚಾಲಕ ವೃತ್ತಿಯನ್ನೇ ನಂಬಿ ಸುಮಾರು ನಲವತ್ತು ವರ್ಷಗಳಿಂದ ದುಡಿಯುತ್ತಿರುವ ಹಿರಿಯ ಆಟೋ ಚಾಲಕರ ಪರಿಸ್ಥಿತಿ ಹೀನಾಯವಾಗುತ್ತದೆ. ಈಗಾಗಲೆ ಹಳ್ಳಿಗಳಲ್ಲಿ ಅಲ್ಪಸ್ವಲ್ಪ ಉಳಿದಂತಹ ಜಮಿನುಗಳನ್ನು, ಮನೆಗಳನ್ನು, ಮನೆಯ ಆಭರಣಗಳನ್ನು ಮಾರಿ ಅಥವಾ ಅಡ ಇಟ್ಟು ಸಾಲ ಮಾಡಿ ಕ್ಯಾಬ್‌ ಆಟೋ ಖರೀದಿ ಮಾಡಿ ಜೀವನ ನಡೆಸುತ್ತಿರುವವರ ಪರಿಸ್ಥಿತಿ ಏನಾಗಬಹುದು ಎಂದು ಯುನಿಯನ್ ಪ್ರಶ್ನಿಸಿದೆ.

ಇದನ್ನೂ ಓದಿ: ರಾಜ್ಯದಲ್ಲಿ ಶೀಘ್ರದಲ್ಲೇ ‘ಇ-ಬೈಕ್ ಟ್ಯಾಕ್ಸಿ’ ಸೇವೆ ಪ್ರಾರಂಭ!

“ಚಾಲಕರು ಸುಮಾರು ಒಂದೂವರೆ ವರ್ಷಗಳಿಂದ ದುಡಿಮೆಯಿಲ್ಲದೆ EMI, ಇನ್ಶೂರೆನ್ಸ್ ,ಟ್ಯಾಕ್ಸ್‌ ಅನ್ನು ಕಟ್ಟಿದ್ದಾರೆ. ಕೋವಿಡ್ 1ನೇ ಅಲೆಯ ಸಮಯದಲ್ಲಿ ಮಾತ್ರ ಕೇವಲ 3 ತಿಂಗಳ EMI ಅನ್ನು ಮುಂದೂಡಲಾಗಿತ್ತು. ಆದರೆ ಅದರ ಬಡ್ಡಿಯನ್ನು ಸಹ ಕಡಿಮೆ ಮಾಡಿರಲಿಲ್ಲ. ಚಾಲಕರು ಕೊರೊನಾದಿಂದಾಗಿ ಕಂಗೆಟ್ಟು ಸುಮಾರು 2 ವರ್ಷಗಳಿಂದ ಸರಿಯಾದ ದುಡಿಮೆಯಿಲ್ಲದೆ ಸಾಲ ಮಾಡಿ ಜೀವನ ನಿರ್ವಹಣೆ ಮಾಡುತ್ತಿದ್ದಾರೆ. ಇದೀಗ ಇ-ಬೈಕ್‌‌ ಟ್ಯಾಕ್ಸಿಯಿಂದ ಅವರ ಜೀವನ ಮತ್ತಷ್ಟು ಹದಗೆಡುತ್ತದೆ” ಎಂದು ಯುನಿಯನ್ ಆತಂಕ ವ್ಯಕ್ತಪಡಿಸಿದೆ.

“ಖಾಸಗಿ ಫೈನಾನ್ಸ್‌ನವರು ಚಾಲಕರಿಗೆ ಹಿಂಸೆ ನೀಡುತ್ತಾ ದಬ್ಬಾಳಿಕೆ ಮಾಡಿ EMI ವಸೂಲಿ ಮಾಡುತ್ತಿರುವುದನ್ನು ಅನೇಕ ಬಾರಿ ಸರಕಾರದ ಗಮನಕ್ಕೆ ತಂದಿದ್ದೆವು. ಆದರೂ ಸಹ ಅವರ ವಿರುದ್ಧ ಕ್ರಮ ಜರುಗಿಸದೇ ಇದ್ದುದರಿಂದ ಅನೇಕ ಚಾಲಕರು ಆತ್ಮಹತ್ಯೆಯ ದಾರಿ ಹಿಡಿದು ಅವರ ಕುಟುಂಬ ಸದಸ್ಯರು ಬೀದಿ ಪಾಲಾಗುವಂತಾಗಿದೆ. ಇದಕ್ಕೆಲ್ಲಾ ಈ ಸರ್ಕಾರವೇ ಹೊಣೆ. ಇದೀಗ ಒಂದು ಅಥವಾ ಎರಡು ಸಂಸ್ಥೆಗಳ ಅನುಕೂಲಕ್ಕಾಗಿ ಇ-ಬೈಕ್‌ ಟ್ಯಾಕ್ಸಿ ತರುವ ಮೂಲಕ ಲಕ್ಷಾಂತರ ಚಾಲಕರ ಜೀವನಕ್ಕೆ ಕೊಳ್ಳಿ ಇಡುವಂತಾಗಿದೆ” ಎಂದು ಯುನಿಯನ್ ಆಕ್ರೋಶ ವ್ಯಕ್ತಪಡಿಸಿದೆ.

ಇದನ್ನೂ ಓದಿ: ಸುದ್ದಿಯೇನೇ ಮನೋಲ್ಲಾಸಿನಿ; ಮಾಧ್ಯಮ ನಲ್ಲರು – ರಾಜಧಾನಿ ಎಂಬ ಮಾಯಾಮೋಹಿನಿ

ರಾಜ್ಯದಲ್ಲಿ ಶೀಘ್ರವೇ ಎಲೆಕ್ಟ್ರಿಕ್‌ ಬೈಕ್ (ಇ-ಬೈಕ್) ಟ್ಯಾಕ್ಸಿ ಸೇವೆಗಳು ಪ್ರಾರಂಭವಾಗಿಲಿದ್ದು, ಸಾರಿಗೆ ಇಲಾಖೆಯು ಅದರ ಕಾರ್ಯಾಚರಣೆಗೆ ಅನುಮೋದನೆ ನೀಡಲಿದೆ. ಅಧಿಕಾರಿಗಳ ಪ್ರಕಾರ, ಇ-ಬೈಕನ್ನು ಟ್ಯಾಕ್ಸಿಯಾಗಿ ನೋಂದಾಯಿಸಲು ವ್ಯಕ್ತಿಗಳಿಗೆ ಅವಕಾಶ ನೀಡಲು ಸರ್ಕಾರ ನಿರ್ಧರಿಸಿದೆ. ಇದರಂತೆ ವೈಯಕ್ತಿಕವಾಗಿ ಅಥವಾ ಒಂದು ಸಂಸ್ಥೆಯಾಗಿ ರಿಜಿಸ್ಟರ್‌ ಮಾಡಿ ಈ ಸೇವೆಯನ್ನು ನೀಡಬಹುದಾಗಿದೆ.

ಇ-ಬೈಕ್ ಟ್ಯಾಕ್ಸಿಗಳು ಆರಂಭದಲ್ಲಿ ಬೆಂಗಳೂರಿನಲ್ಲಿ ಕಾರ್ಯಾಚರಣೆಯನ್ನು ಪ್ರಾರಂಭಿಸುತ್ತವೆ ಮತ್ತು ನಂತರ ರಾಜ್ಯದಾದ್ಯಂತ ಇತರ ನಗರ ಕೇಂದ್ರಗಳಿಗೆ ವಿಸ್ತರಿಸಲಾಗುವುದು ಎಂದು ಸಾರಿಗೆ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆಂದು ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿತ್ತು.

ಇದನ್ನೂ ಓದಿ: ಟಿಎಸ್‌ಆರ್‌ಟಿಸಿ: ಸಂಜೆ 7: 30 ರ ನಂತರ ಮಹಿಳೆಯರು ಎಲ್ಲಾದರೂ ಬಸ್ಸು ಏರಬಹುದು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...