Homeಕರ್ನಾಟಕಕೆಲವೇ ಜನರ ಹಿತಾಸಕ್ತಿಯ ಇ-ಬೈಕ್‌‌‌‌ ಯೋಜನೆಯಿಂದ ಲಕ್ಷಾಂತರ ಚಾಲಕರ ಜೀವನಕ್ಕೆ ಧಕ್ಕೆ: NCTU ಆಕ್ರೋಶ

ಕೆಲವೇ ಜನರ ಹಿತಾಸಕ್ತಿಯ ಇ-ಬೈಕ್‌‌‌‌ ಯೋಜನೆಯಿಂದ ಲಕ್ಷಾಂತರ ಚಾಲಕರ ಜೀವನಕ್ಕೆ ಧಕ್ಕೆ: NCTU ಆಕ್ರೋಶ

- Advertisement -
- Advertisement -

ರಾಜ್ಯದಲ್ಲಿ ಶೀಘ್ರವೇ ಎಲೆಕ್ಟ್ರಿಕ್‌ ಬೈಕ್ (ಇ-ಬೈಕ್) ಟ್ಯಾಕ್ಸಿ ಸೇವೆಗಳು ಪ್ರಾರಂಭವಾಗಿಲಿದ್ದು, ಸಾರಿಗೆ ಇಲಾಖೆಯು ಅದರ ಕಾರ್ಯಾಚರಣೆಗೆ ಅನುಮೋದನೆ ನೀಡಲಿದೆ. ಆದರೆ ಇದಕ್ಕೆ ‘ನಮ್ಮ ಚಾಲಕರ ಟ್ರೇಡ್ ಯುನಿಯನ್(NCTU)’ ಆಕ್ಷೇಪ ವ್ಯಕ್ತಪಡಿಸಿದ್ದು, ಸರ್ಕಾರವು ಒಂದು ಅಥವಾ ಎರಡು ಸಂಸ್ಥೆಗಳ ಅನುಕೂಲಕ್ಕಾಗಿ ಇ-ಬೈಕ್‌ ಟ್ಯಾಕ್ಸಿ ಜಾರಿಗೆ ತರುವ ಮೂಲಕ ಲಕ್ಷಾಂತರ ಚಾಲಕರ ಜೀವನಕ್ಕೆ ಕೊಳ್ಳಿ ಇಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದೆ. ಅಷ್ಟೇ ಅಲ್ಲದೆ ಬೈಕ್ ಟ್ಯಾಕ್ಸಿ ಚಾಲನೆಗೆ ಬಂದರೆ ಆಟೋ ಕ್ಯಾಬ್ ಹಾಗೂ ಬಿಎಂಟಿಸಿಗೆ ಹೊಡೆತ ಬೀಳುತ್ತದೆ ಎಂದು ಅದು ಹೇಳಿದೆ.

ಇ-ಬೈಕ್ ಟ್ಯಾಕ್ಸಿ ಪ್ರಾರಂಭವಾದರೆ ಚಾಲಕ ವೃತ್ತಿಯನ್ನೇ ನಂಬಿ ಸುಮಾರು ನಲವತ್ತು ವರ್ಷಗಳಿಂದ ದುಡಿಯುತ್ತಿರುವ ಹಿರಿಯ ಆಟೋ ಚಾಲಕರ ಪರಿಸ್ಥಿತಿ ಹೀನಾಯವಾಗುತ್ತದೆ. ಈಗಾಗಲೆ ಹಳ್ಳಿಗಳಲ್ಲಿ ಅಲ್ಪಸ್ವಲ್ಪ ಉಳಿದಂತಹ ಜಮಿನುಗಳನ್ನು, ಮನೆಗಳನ್ನು, ಮನೆಯ ಆಭರಣಗಳನ್ನು ಮಾರಿ ಅಥವಾ ಅಡ ಇಟ್ಟು ಸಾಲ ಮಾಡಿ ಕ್ಯಾಬ್‌ ಆಟೋ ಖರೀದಿ ಮಾಡಿ ಜೀವನ ನಡೆಸುತ್ತಿರುವವರ ಪರಿಸ್ಥಿತಿ ಏನಾಗಬಹುದು ಎಂದು ಯುನಿಯನ್ ಪ್ರಶ್ನಿಸಿದೆ.

ಇದನ್ನೂ ಓದಿ: ರಾಜ್ಯದಲ್ಲಿ ಶೀಘ್ರದಲ್ಲೇ ‘ಇ-ಬೈಕ್ ಟ್ಯಾಕ್ಸಿ’ ಸೇವೆ ಪ್ರಾರಂಭ!

“ಚಾಲಕರು ಸುಮಾರು ಒಂದೂವರೆ ವರ್ಷಗಳಿಂದ ದುಡಿಮೆಯಿಲ್ಲದೆ EMI, ಇನ್ಶೂರೆನ್ಸ್ ,ಟ್ಯಾಕ್ಸ್‌ ಅನ್ನು ಕಟ್ಟಿದ್ದಾರೆ. ಕೋವಿಡ್ 1ನೇ ಅಲೆಯ ಸಮಯದಲ್ಲಿ ಮಾತ್ರ ಕೇವಲ 3 ತಿಂಗಳ EMI ಅನ್ನು ಮುಂದೂಡಲಾಗಿತ್ತು. ಆದರೆ ಅದರ ಬಡ್ಡಿಯನ್ನು ಸಹ ಕಡಿಮೆ ಮಾಡಿರಲಿಲ್ಲ. ಚಾಲಕರು ಕೊರೊನಾದಿಂದಾಗಿ ಕಂಗೆಟ್ಟು ಸುಮಾರು 2 ವರ್ಷಗಳಿಂದ ಸರಿಯಾದ ದುಡಿಮೆಯಿಲ್ಲದೆ ಸಾಲ ಮಾಡಿ ಜೀವನ ನಿರ್ವಹಣೆ ಮಾಡುತ್ತಿದ್ದಾರೆ. ಇದೀಗ ಇ-ಬೈಕ್‌‌ ಟ್ಯಾಕ್ಸಿಯಿಂದ ಅವರ ಜೀವನ ಮತ್ತಷ್ಟು ಹದಗೆಡುತ್ತದೆ” ಎಂದು ಯುನಿಯನ್ ಆತಂಕ ವ್ಯಕ್ತಪಡಿಸಿದೆ.

“ಖಾಸಗಿ ಫೈನಾನ್ಸ್‌ನವರು ಚಾಲಕರಿಗೆ ಹಿಂಸೆ ನೀಡುತ್ತಾ ದಬ್ಬಾಳಿಕೆ ಮಾಡಿ EMI ವಸೂಲಿ ಮಾಡುತ್ತಿರುವುದನ್ನು ಅನೇಕ ಬಾರಿ ಸರಕಾರದ ಗಮನಕ್ಕೆ ತಂದಿದ್ದೆವು. ಆದರೂ ಸಹ ಅವರ ವಿರುದ್ಧ ಕ್ರಮ ಜರುಗಿಸದೇ ಇದ್ದುದರಿಂದ ಅನೇಕ ಚಾಲಕರು ಆತ್ಮಹತ್ಯೆಯ ದಾರಿ ಹಿಡಿದು ಅವರ ಕುಟುಂಬ ಸದಸ್ಯರು ಬೀದಿ ಪಾಲಾಗುವಂತಾಗಿದೆ. ಇದಕ್ಕೆಲ್ಲಾ ಈ ಸರ್ಕಾರವೇ ಹೊಣೆ. ಇದೀಗ ಒಂದು ಅಥವಾ ಎರಡು ಸಂಸ್ಥೆಗಳ ಅನುಕೂಲಕ್ಕಾಗಿ ಇ-ಬೈಕ್‌ ಟ್ಯಾಕ್ಸಿ ತರುವ ಮೂಲಕ ಲಕ್ಷಾಂತರ ಚಾಲಕರ ಜೀವನಕ್ಕೆ ಕೊಳ್ಳಿ ಇಡುವಂತಾಗಿದೆ” ಎಂದು ಯುನಿಯನ್ ಆಕ್ರೋಶ ವ್ಯಕ್ತಪಡಿಸಿದೆ.

ಇದನ್ನೂ ಓದಿ: ಸುದ್ದಿಯೇನೇ ಮನೋಲ್ಲಾಸಿನಿ; ಮಾಧ್ಯಮ ನಲ್ಲರು – ರಾಜಧಾನಿ ಎಂಬ ಮಾಯಾಮೋಹಿನಿ

ರಾಜ್ಯದಲ್ಲಿ ಶೀಘ್ರವೇ ಎಲೆಕ್ಟ್ರಿಕ್‌ ಬೈಕ್ (ಇ-ಬೈಕ್) ಟ್ಯಾಕ್ಸಿ ಸೇವೆಗಳು ಪ್ರಾರಂಭವಾಗಿಲಿದ್ದು, ಸಾರಿಗೆ ಇಲಾಖೆಯು ಅದರ ಕಾರ್ಯಾಚರಣೆಗೆ ಅನುಮೋದನೆ ನೀಡಲಿದೆ. ಅಧಿಕಾರಿಗಳ ಪ್ರಕಾರ, ಇ-ಬೈಕನ್ನು ಟ್ಯಾಕ್ಸಿಯಾಗಿ ನೋಂದಾಯಿಸಲು ವ್ಯಕ್ತಿಗಳಿಗೆ ಅವಕಾಶ ನೀಡಲು ಸರ್ಕಾರ ನಿರ್ಧರಿಸಿದೆ. ಇದರಂತೆ ವೈಯಕ್ತಿಕವಾಗಿ ಅಥವಾ ಒಂದು ಸಂಸ್ಥೆಯಾಗಿ ರಿಜಿಸ್ಟರ್‌ ಮಾಡಿ ಈ ಸೇವೆಯನ್ನು ನೀಡಬಹುದಾಗಿದೆ.

ಇ-ಬೈಕ್ ಟ್ಯಾಕ್ಸಿಗಳು ಆರಂಭದಲ್ಲಿ ಬೆಂಗಳೂರಿನಲ್ಲಿ ಕಾರ್ಯಾಚರಣೆಯನ್ನು ಪ್ರಾರಂಭಿಸುತ್ತವೆ ಮತ್ತು ನಂತರ ರಾಜ್ಯದಾದ್ಯಂತ ಇತರ ನಗರ ಕೇಂದ್ರಗಳಿಗೆ ವಿಸ್ತರಿಸಲಾಗುವುದು ಎಂದು ಸಾರಿಗೆ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆಂದು ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿತ್ತು.

ಇದನ್ನೂ ಓದಿ: ಟಿಎಸ್‌ಆರ್‌ಟಿಸಿ: ಸಂಜೆ 7: 30 ರ ನಂತರ ಮಹಿಳೆಯರು ಎಲ್ಲಾದರೂ ಬಸ್ಸು ಏರಬಹುದು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...