Homeಮುಖಪುಟಒಕ್ಕೂಟ ಸರ್ಕಾರ ತನ್ನ ’ಸೂಟ್-ಬೂಟ್’‌ ಗೆಳೆಯರ ಬಗ್ಗೆ ಅನುಭೂತಿ ಹೊಂದಿದೆ: ಕಾಂಗ್ರೆಸ್

ಒಕ್ಕೂಟ ಸರ್ಕಾರ ತನ್ನ ’ಸೂಟ್-ಬೂಟ್’‌ ಗೆಳೆಯರ ಬಗ್ಗೆ ಅನುಭೂತಿ ಹೊಂದಿದೆ: ಕಾಂಗ್ರೆಸ್

ಭಾನುವಾರ ಟ್ವೀಟ್ ಮಾಡಿರುವ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ, ಚಂಪಾರನ್ ಹೋರಾಟದಂತಹ ಪರಿಸ್ಥಿತಿಯನ್ನು ಭಾರತವು ಎದುರಿಸುತ್ತಿದೆ ಎಂದು ಬರೆದಿದ್ದಾರೆ.

- Advertisement -
- Advertisement -

ಒಕ್ಕೂಟ ಸರ್ಕಾರವು ರೈತರ ಬಗ್ಗೆ ನಿರಾಸಕ್ತಿ ತೋರುತ್ತಿದೆ ಮತ್ತು ತನ್ನ “ಸೂಟ್-ಬೂಟ್ ಗೆಳೆಯರ” ಬಗ್ಗೆ ಅನುಭೂತಿ ಹೊಂದಿದೆ ಎಂದು ಕಾಂಗ್ರೆಸ್ ಪಕ್ಷ ಆರೋಪಿಸಿದೆ. ಭಾನುವಾರ ಟ್ವೀಟ್ ಮಾಡಿರುವ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ, ಚಂಪಾರನ್ ಹೋರಾಟದಂತಹ ಪರಿಸ್ಥಿತಿಯನ್ನು ಭಾರತವು ಎದುರಿಸುತ್ತಿದೆ ಎಂದು ಬರೆದಿದ್ದಾರೆ.

ರಾಹುಲ್ ಗಾಂಧಿ ತಮ್ಮ ಟ್ವೀಟ್‌ನಲ್ಲಿ, “ದೇಶವು ಮತ್ತೊಮ್ಮೆ ಚಂಪಾರನ್ ನಂತಹ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಆಗ, ಬ್ರಿಟಿಷ್ ಕಂಪನಿ ಬಲಶಾಲಿಯಾಗಿದ್ದು, ಈಗ ಮೋದಿ ಮತ್ತು ಸ್ನೇಹಿತರ ಕಂಪೆನಿಗಳು ಬಲಶಾಲಿಗಳಾಗಿದ್ದಾರೆ. ಆದರೆ ಪ್ರತಿ ಆಂದೋಲನ ಮಾಡುತ್ತಿರುವ ಪ್ರತಿಯೊಬ್ಬ ರೈತ ಹಾಗೂ ಕಾರ್ಮಿಕರು ಸತ್ಯಾಗ್ರಹಿಯಾಗಿದ್ದು, ಅವರು ತಮ್ಮ ಹಕ್ಕುಗಳನ್ನು ಪಡೆದೇ ತೀರುತ್ತಾರೆ” ಎಂದು ಬರೆದಿದ್ದಾರೆ.

ಇದನ್ನೂ ಓದಿ: ಅಕ್ಷರದವ್ವ ಸಾವಿತ್ರಿ ಬಾಯಿ ಫುಲೆಯ 190ನೇ ಜನ್ಮದಿನ: ಗಣ್ಯರ ಶುಭಾಶಯ

 

ಒಕ್ಕೂಟ ಸರ್ಕಾರದ ಸಚಿವರು ಬುಧವಾರ ಪ್ರತಿಭಟನಾ ನಿರತ ರೈತ ಮುಖಂಡರೊಂದಿಗೆ ಆರನೇ ಸುತ್ತಿನ ಮಾತುಕತೆ ನಡೆಸಿದ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿಯವರ ಅಭಿಪ್ರಾಯಗಳು ವ್ಯಕ್ತವಾಗಿದೆ.

ನವದೆಹಲಿಯ ಪಕ್ಷದ ಪ್ರಧಾನ ಕಚೇರಿಯಲ್ಲಿ ಮಾತನಾಡಿದ ಕಾಂಗ್ರೆಸ್ ವಕ್ತಾರ ಗೌರಭ್ ವಲ್ಲಭ್, ಗಡಿಯಲ್ಲಿ ರೈತರು ಹುತಾತ್ಮರಾಗುತ್ತಿದ್ದಾರೆ. ಕೊರೆಯುವ ಚಳಿಯ ಬಗ್ಗೆ ತಿಳಿದು, ರೈತರ ಬೇಡಿಕೆಗಳನ್ನು ತುರ್ತಾಗಿ ಪರಿಹರಿಸಬೇಕು ಮತ್ತು ಕಾನೂನುಗಳನ್ನು ರದ್ದುಪಡಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.

“ಒಂದು ಕಡೆ, ಪ್ರತಿಭಟನಾ ನಿರತ ರೈತರ ಅವಸ್ಥೆ ಮತ್ತು ಅವರ ಬೇಡಿಕೆಗಳ ಬಗ್ಗೆ ಸಂಪೂರ್ಣ ಅಸೂಕ್ಷ್ಮತೆ ಮತ್ತೊಂದೆಡೆ ಬಿಜೆಪಿ ಸರ್ಕಾರದ ಆಪ್ತ ಸ್ನೇಹಿತರು ತಮ್ಮ ವ್ಯವಹಾರದ ಎಲ್ಲಾ ಕ್ಷೇತ್ರಗಳಲ್ಲಿ ಪ್ರಾಬಲ್ಯವನ್ನು ವಿಸ್ತರಿಸಲು ಸಂಪೂರ್ಣ ಅನುಭೂತಿ ಮತ್ತು ಆಶೀರ್ವಾದಗಳನ್ನು ಪಡೆಯುತ್ತಿದ್ದಾರೆ” ವಲ್ಲಭ್ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ರಾಜ್ಯ ಬಿಜೆಪಿಯಲ್ಲಿ ಬಿರುಕು: ಯತ್ನಾಳ್ ವಿರುದ್ಧ ರಾಷ್ಟ್ರ ನಾಯಕರಿಗೆ ದೂರು ನೀಡಿದ ಸಿಎಂ ಬೆಂಬಲಿಗರು!

“ರೈತರು ತಮ್ಮ ಪ್ರತಿಭಟನೆಗೆ ಪ್ರತಿಯಾಗಿ ಸುಳ್ಳು ಭರವಸೆಗಳನ್ನು ಮಾತ್ರ ಪಡೆಯುತ್ತಿದ್ದಾರೆ, ಆದರೆ ಸರ್ಕಾರದ ಸ್ನೇಹಿತರು ತಮ್ಮ ಜೇಬುಗಳನ್ನು ತುಂಬಲು ಒಪ್ಪಂದಗಳ ಮೇಲೆ ಒಪ್ಪಂದಗಳನ್ನು ಪಡೆಯುತ್ತಿದ್ದಾರೆ. ರೈತರು ಪ್ರತಿಭಟನೆ ಮುಂದುವರಿಸುತ್ತಿರುವುದರ ಹೊರತಾಗಿಯೂ, ಇದೆಲ್ಲ ನಡೆಯುತ್ತಿದೆ. ಇದು ಗಂಭೀರ ಕಳವಳಕಾರಿ ಸಂಗತಿಯಾಗಿದೆ. ಸರ್ಕಾರವು ದೇಶವನ್ನು ಮರುಳು ಮಾಡುತ್ತಿದೆ” ಎಂದು ಅವರು ಹೇಳಿದರು.

ಆಹಾರ ಧಾನ್ಯವನ್ನು ಶೇಖರಿಸಿಡಲು ಅದಾನಿ ಆಗ್ರೋ ಲಾಜಿಸ್ಟಿಕ್ಸ್ ಲಿಮಿಟೆಡ್‌ಗೆ 30 ವರ್ಷಗಳ ಅವಧಿಯ ಒಪ್ಪಂದವನ್ನು ನೀಡಲಾಗಿದೆ. ಈ ಮೂಲಕ ಅವರ ಸೇವೆಗಳನ್ನು ಪಡೆಯುತ್ತೇವೆಂದು ಅವರಿಗೆ ಭರವಸೆ ನೀಡಲಾಗಿದೆ. ಆದರೆ ರೈತರಿಗೆ ಕನಿಷ್ಠ ಬೆಂಬಲ ಬೆಲೆಯ ಭರವಸೆಯನ್ನು ಸರ್ಕಾರ ನೀಡುತ್ತಿಲ್ಲ ಎಂದು ಅವರು ಸೂಚಿಸಿದ್ದಾರೆ.

ರೈತರ ಹೋರಾಟ 37 ನೇ ದಿನಕ್ಕೆ ಕಾಲಿಟ್ಟಿದೆ. ಆರನೇ ಸುತ್ತಿನ ಮಾತುಕತೆಯಲ್ಲಿ ವಿದ್ಯುತ್ ತಿದ್ದುಪಡಿ ಕಾಯ್ದೆ ಮತ್ತು ವಾಯುಮಾಲಿನ್ಯ ಕಾಯ್ದೆಯನ್ನು ಪರಿಶೀಲನೆ ನಡೆಸಲಿದೆ ಎಂದು ಒಕ್ಕೂಟ ಸರ್ಕಾರ ಹೇಳಿದೆ. ಆದರೆ ರೈತರ ಪ್ರಮುಖ ಬೇಡಿಕೆಯಾದ ಕನಿಷ್ಠ ಬೆಂಬಲ ಬೆಲೆ ಮತ್ತು ಮೂರು ಕೃಷಿ ಕಾಯ್ದೆಗಳ ಬಗ್ಗೆ ತನ್ನ ಹಠಮಾರಿ ಧೋರಣೆಯಿಂದ ಒಕ್ಕೂಟ ಸರ್ಕಾರ ಹಿಂದೆ ಸರಿದಿಲ್ಲ. ರೈತರು ತಮ್ಮ ಪಟ್ಟನ್ನು ಬಿಗಿಗೊಳಿಸಿದ್ದು, ಕೃಷಿಕಾನೂನನ್ನು ರದ್ದುಪಡಿಸದೆ ಯಾವುದೇ ಕಾರಣಕ್ಕೆ ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ಘೋಷಿಸಿದ್ದಾರೆ. ಒಕ್ಕೂಟ ಸರ್ಕಾರ ಏಳನೇ ಸುತ್ತಿನ ಮಾತುಕತೆಗೆ ರೈತರನ್ನು ಸೋಮವಾರ ಆಹ್ವಾನಿಸಿದೆ.

ಇದನ್ನೂ ಓದಿ: ಬಿಜೆಪಿ ಮೇಲೆ ನಂಬಿಕೆಯಿಲ್ಲ, ಕೊರೊನಾ ಲಸಿಕೆ ತೆಗೆದುಕೊಳ್ಳುವುದಿಲ್ಲ: ಅಖಿಲೇಶ್ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...