Homeಮುಖಪುಟಒಕ್ಕೂಟ ಸರ್ಕಾರ ತನ್ನ ’ಸೂಟ್-ಬೂಟ್’‌ ಗೆಳೆಯರ ಬಗ್ಗೆ ಅನುಭೂತಿ ಹೊಂದಿದೆ: ಕಾಂಗ್ರೆಸ್

ಒಕ್ಕೂಟ ಸರ್ಕಾರ ತನ್ನ ’ಸೂಟ್-ಬೂಟ್’‌ ಗೆಳೆಯರ ಬಗ್ಗೆ ಅನುಭೂತಿ ಹೊಂದಿದೆ: ಕಾಂಗ್ರೆಸ್

ಭಾನುವಾರ ಟ್ವೀಟ್ ಮಾಡಿರುವ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ, ಚಂಪಾರನ್ ಹೋರಾಟದಂತಹ ಪರಿಸ್ಥಿತಿಯನ್ನು ಭಾರತವು ಎದುರಿಸುತ್ತಿದೆ ಎಂದು ಬರೆದಿದ್ದಾರೆ.

- Advertisement -
- Advertisement -

ಒಕ್ಕೂಟ ಸರ್ಕಾರವು ರೈತರ ಬಗ್ಗೆ ನಿರಾಸಕ್ತಿ ತೋರುತ್ತಿದೆ ಮತ್ತು ತನ್ನ “ಸೂಟ್-ಬೂಟ್ ಗೆಳೆಯರ” ಬಗ್ಗೆ ಅನುಭೂತಿ ಹೊಂದಿದೆ ಎಂದು ಕಾಂಗ್ರೆಸ್ ಪಕ್ಷ ಆರೋಪಿಸಿದೆ. ಭಾನುವಾರ ಟ್ವೀಟ್ ಮಾಡಿರುವ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ, ಚಂಪಾರನ್ ಹೋರಾಟದಂತಹ ಪರಿಸ್ಥಿತಿಯನ್ನು ಭಾರತವು ಎದುರಿಸುತ್ತಿದೆ ಎಂದು ಬರೆದಿದ್ದಾರೆ.

ರಾಹುಲ್ ಗಾಂಧಿ ತಮ್ಮ ಟ್ವೀಟ್‌ನಲ್ಲಿ, “ದೇಶವು ಮತ್ತೊಮ್ಮೆ ಚಂಪಾರನ್ ನಂತಹ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಆಗ, ಬ್ರಿಟಿಷ್ ಕಂಪನಿ ಬಲಶಾಲಿಯಾಗಿದ್ದು, ಈಗ ಮೋದಿ ಮತ್ತು ಸ್ನೇಹಿತರ ಕಂಪೆನಿಗಳು ಬಲಶಾಲಿಗಳಾಗಿದ್ದಾರೆ. ಆದರೆ ಪ್ರತಿ ಆಂದೋಲನ ಮಾಡುತ್ತಿರುವ ಪ್ರತಿಯೊಬ್ಬ ರೈತ ಹಾಗೂ ಕಾರ್ಮಿಕರು ಸತ್ಯಾಗ್ರಹಿಯಾಗಿದ್ದು, ಅವರು ತಮ್ಮ ಹಕ್ಕುಗಳನ್ನು ಪಡೆದೇ ತೀರುತ್ತಾರೆ” ಎಂದು ಬರೆದಿದ್ದಾರೆ.

ಇದನ್ನೂ ಓದಿ: ಅಕ್ಷರದವ್ವ ಸಾವಿತ್ರಿ ಬಾಯಿ ಫುಲೆಯ 190ನೇ ಜನ್ಮದಿನ: ಗಣ್ಯರ ಶುಭಾಶಯ

 

ಒಕ್ಕೂಟ ಸರ್ಕಾರದ ಸಚಿವರು ಬುಧವಾರ ಪ್ರತಿಭಟನಾ ನಿರತ ರೈತ ಮುಖಂಡರೊಂದಿಗೆ ಆರನೇ ಸುತ್ತಿನ ಮಾತುಕತೆ ನಡೆಸಿದ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿಯವರ ಅಭಿಪ್ರಾಯಗಳು ವ್ಯಕ್ತವಾಗಿದೆ.

ನವದೆಹಲಿಯ ಪಕ್ಷದ ಪ್ರಧಾನ ಕಚೇರಿಯಲ್ಲಿ ಮಾತನಾಡಿದ ಕಾಂಗ್ರೆಸ್ ವಕ್ತಾರ ಗೌರಭ್ ವಲ್ಲಭ್, ಗಡಿಯಲ್ಲಿ ರೈತರು ಹುತಾತ್ಮರಾಗುತ್ತಿದ್ದಾರೆ. ಕೊರೆಯುವ ಚಳಿಯ ಬಗ್ಗೆ ತಿಳಿದು, ರೈತರ ಬೇಡಿಕೆಗಳನ್ನು ತುರ್ತಾಗಿ ಪರಿಹರಿಸಬೇಕು ಮತ್ತು ಕಾನೂನುಗಳನ್ನು ರದ್ದುಪಡಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.

“ಒಂದು ಕಡೆ, ಪ್ರತಿಭಟನಾ ನಿರತ ರೈತರ ಅವಸ್ಥೆ ಮತ್ತು ಅವರ ಬೇಡಿಕೆಗಳ ಬಗ್ಗೆ ಸಂಪೂರ್ಣ ಅಸೂಕ್ಷ್ಮತೆ ಮತ್ತೊಂದೆಡೆ ಬಿಜೆಪಿ ಸರ್ಕಾರದ ಆಪ್ತ ಸ್ನೇಹಿತರು ತಮ್ಮ ವ್ಯವಹಾರದ ಎಲ್ಲಾ ಕ್ಷೇತ್ರಗಳಲ್ಲಿ ಪ್ರಾಬಲ್ಯವನ್ನು ವಿಸ್ತರಿಸಲು ಸಂಪೂರ್ಣ ಅನುಭೂತಿ ಮತ್ತು ಆಶೀರ್ವಾದಗಳನ್ನು ಪಡೆಯುತ್ತಿದ್ದಾರೆ” ವಲ್ಲಭ್ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ರಾಜ್ಯ ಬಿಜೆಪಿಯಲ್ಲಿ ಬಿರುಕು: ಯತ್ನಾಳ್ ವಿರುದ್ಧ ರಾಷ್ಟ್ರ ನಾಯಕರಿಗೆ ದೂರು ನೀಡಿದ ಸಿಎಂ ಬೆಂಬಲಿಗರು!

“ರೈತರು ತಮ್ಮ ಪ್ರತಿಭಟನೆಗೆ ಪ್ರತಿಯಾಗಿ ಸುಳ್ಳು ಭರವಸೆಗಳನ್ನು ಮಾತ್ರ ಪಡೆಯುತ್ತಿದ್ದಾರೆ, ಆದರೆ ಸರ್ಕಾರದ ಸ್ನೇಹಿತರು ತಮ್ಮ ಜೇಬುಗಳನ್ನು ತುಂಬಲು ಒಪ್ಪಂದಗಳ ಮೇಲೆ ಒಪ್ಪಂದಗಳನ್ನು ಪಡೆಯುತ್ತಿದ್ದಾರೆ. ರೈತರು ಪ್ರತಿಭಟನೆ ಮುಂದುವರಿಸುತ್ತಿರುವುದರ ಹೊರತಾಗಿಯೂ, ಇದೆಲ್ಲ ನಡೆಯುತ್ತಿದೆ. ಇದು ಗಂಭೀರ ಕಳವಳಕಾರಿ ಸಂಗತಿಯಾಗಿದೆ. ಸರ್ಕಾರವು ದೇಶವನ್ನು ಮರುಳು ಮಾಡುತ್ತಿದೆ” ಎಂದು ಅವರು ಹೇಳಿದರು.

ಆಹಾರ ಧಾನ್ಯವನ್ನು ಶೇಖರಿಸಿಡಲು ಅದಾನಿ ಆಗ್ರೋ ಲಾಜಿಸ್ಟಿಕ್ಸ್ ಲಿಮಿಟೆಡ್‌ಗೆ 30 ವರ್ಷಗಳ ಅವಧಿಯ ಒಪ್ಪಂದವನ್ನು ನೀಡಲಾಗಿದೆ. ಈ ಮೂಲಕ ಅವರ ಸೇವೆಗಳನ್ನು ಪಡೆಯುತ್ತೇವೆಂದು ಅವರಿಗೆ ಭರವಸೆ ನೀಡಲಾಗಿದೆ. ಆದರೆ ರೈತರಿಗೆ ಕನಿಷ್ಠ ಬೆಂಬಲ ಬೆಲೆಯ ಭರವಸೆಯನ್ನು ಸರ್ಕಾರ ನೀಡುತ್ತಿಲ್ಲ ಎಂದು ಅವರು ಸೂಚಿಸಿದ್ದಾರೆ.

ರೈತರ ಹೋರಾಟ 37 ನೇ ದಿನಕ್ಕೆ ಕಾಲಿಟ್ಟಿದೆ. ಆರನೇ ಸುತ್ತಿನ ಮಾತುಕತೆಯಲ್ಲಿ ವಿದ್ಯುತ್ ತಿದ್ದುಪಡಿ ಕಾಯ್ದೆ ಮತ್ತು ವಾಯುಮಾಲಿನ್ಯ ಕಾಯ್ದೆಯನ್ನು ಪರಿಶೀಲನೆ ನಡೆಸಲಿದೆ ಎಂದು ಒಕ್ಕೂಟ ಸರ್ಕಾರ ಹೇಳಿದೆ. ಆದರೆ ರೈತರ ಪ್ರಮುಖ ಬೇಡಿಕೆಯಾದ ಕನಿಷ್ಠ ಬೆಂಬಲ ಬೆಲೆ ಮತ್ತು ಮೂರು ಕೃಷಿ ಕಾಯ್ದೆಗಳ ಬಗ್ಗೆ ತನ್ನ ಹಠಮಾರಿ ಧೋರಣೆಯಿಂದ ಒಕ್ಕೂಟ ಸರ್ಕಾರ ಹಿಂದೆ ಸರಿದಿಲ್ಲ. ರೈತರು ತಮ್ಮ ಪಟ್ಟನ್ನು ಬಿಗಿಗೊಳಿಸಿದ್ದು, ಕೃಷಿಕಾನೂನನ್ನು ರದ್ದುಪಡಿಸದೆ ಯಾವುದೇ ಕಾರಣಕ್ಕೆ ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ಘೋಷಿಸಿದ್ದಾರೆ. ಒಕ್ಕೂಟ ಸರ್ಕಾರ ಏಳನೇ ಸುತ್ತಿನ ಮಾತುಕತೆಗೆ ರೈತರನ್ನು ಸೋಮವಾರ ಆಹ್ವಾನಿಸಿದೆ.

ಇದನ್ನೂ ಓದಿ: ಬಿಜೆಪಿ ಮೇಲೆ ನಂಬಿಕೆಯಿಲ್ಲ, ಕೊರೊನಾ ಲಸಿಕೆ ತೆಗೆದುಕೊಳ್ಳುವುದಿಲ್ಲ: ಅಖಿಲೇಶ್ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...