Homeಕರೋನಾ ತಲ್ಲಣಸರ್ಕಾರ ಕೊರೊನಾ ಸೊಂಕಿತರ ಹೆಣದ ಮೇಲೆ ಹಣ ಮಾಡುತ್ತಿದೆ: ಡಿಕೆಶಿ

ಸರ್ಕಾರ ಕೊರೊನಾ ಸೊಂಕಿತರ ಹೆಣದ ಮೇಲೆ ಹಣ ಮಾಡುತ್ತಿದೆ: ಡಿಕೆಶಿ

ರಾಜ್ಯದಲ್ಲಿ ಕೊರೊನಾ ಜೊತೆಗೆ ಭ್ರಷ್ಟಾಚಾರವನ್ನು ಬಿಜೆಪಿ ಸರ್ಕಾರ ಹಂಚಿದೆ, ಕೊರೊನಾಕ್ಕಿಂತ ಬಿಜೆಪಿಯ ಭ್ರಷ್ಟಾಚಾರವೇ ದೊಡ್ಡ ರೋಗ.

- Advertisement -
- Advertisement -

ಕೊರೊನಾ ಸೋಂಕನ್ನು ನಿಭಾಯಿಸಲು ರಾಜ್ಯ ಸರ್ಕಾರ ವಿಫಲವಾಗಿದ್ದು, ಕೊರೊನಾ ಸೋಂಕಿತರ ಹೆಣದ ಮೇಲೆ ಹಣ ಮಾಡುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಡಿ. ಕೆ. ಶಿವಕುಮಾರ್‌ ಸರ್ಕಾರದ ವಿರುದ್ದ ಹರಿಹಾಯ್ದಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಜಂಟಿ ಪತ್ರಿಕಾಗೋಷ್ಠಿಯನ್ನು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆಸಿದರು.

ಸರ್ಕಾರ ಜನರಿಗಾಗಿ ಮಾಡಿರುವ ಖರ್ಚಿನ ಲೆಕ್ಕ ಕೇಳಿದ್ದೇವೆ. ಈಗಾಗಲೇ ಸರ್ಕಾರ 4 ಸಾವಿರ ಕೋಟಿ ರೂ. ಖರ್ಚು ಮಾಡಿದ್ದು, ಅದರಲ್ಲಿ 2 ಸಾವಿರ ಕೋಟಿಯಷ್ಟು ಅವ್ಯವಹಾರ ನಡೆದಿದೆ ಎಂದು ಅವರು ಹೇಳಿದ್ದಾರೆ.

ಮುಖ್ಯಂತ್ರಿಯ ಕರೆಗೆ ಪಕ್ಷಭೇದ ಮರೆತು ಜನರ ಜೀವನ, ಜನರ ಬದುಕಿಗಾಗಿ ಎಲ್ಲ ಹಂತದಲ್ಲೂ ಸಹಕಾರ ನೀಡಿದ್ದೇವೆ. ಕೇವಲ ನಾಲ್ಕು ಗಂಟೆ ಅಂತರದಲ್ಲಿ ಲಾಕ್ ಡೌನ್ ಮಾಡಿದಿರಿ. ನಾವು 120 ದಿನ ಅದಕ್ಕೆ ಸಹಕಾರ ಕೊಟ್ಟಿದ್ದೇವೆ. ಆದರೆ ನೀವು ಕೊರೋನ ಪರಿಸ್ಥಿತಿಯಲ್ಲಿ ಹೆಣದ ಮೇಲೆ ಹಣ ಮಾಡಲು ಹೊರಟಿದ್ದೀರಲ್ಲಾ, ಇದನ್ನು ನೋಡಿಕೊಂಡು ನಾವು ಸುಮ್ಮನಿರಬೇಕೇ ಎಂದು ಶಿವಕುಮಾರ್ ಮುಖ್ಯಮಂತ್ರಿಗೆ ಪ್ರಶ್ನೆ ಹಾಕಿದ್ದಾರೆ.

8 ಸಚಿವರುಗಳು ಒಟ್ಟು ಒಂಬತ್ತು ಜನ ಸೇರಿ ಬೆಂಗಳೂರನ್ನು ಏನು ಮಾಡುತ್ತಿದ್ದಾರೆ? ಒಬ್ಬ ಮಂತ್ರಿಯೂ ಆಸ್ಪತ್ರೆಗೆ ಹೋಗಿ ರೋಗಿಯ ಜತೆ ಮಾತನಾಡಿ ಧೈರ್ಯ ತುಂಬಲಿಲ್ಲ. ವೈದ್ಯರಿಗೆ ಆತ್ಮಸ್ಥೈರ್ಯ ತುಂಬಲಿಲ್ಲ ಎಂದು ಅವರು ಆರೋಪಿದ್ದಾರೆ.

ಸೋಂಕಿತರು ತಾವೇ ಕಾಯಿಲೆ ತಂದುಕೊಂಳ್ಳಲಿಲ್ಲ, ಸರ್ಕಾರ ಅವರಿಗೆ ಕೊಟ್ಟಿದೆ. ಹೆಣಗಳನ್ನು ಯಾವ ರೀತಿ ಸಂಸ್ಕಾರ ಮಾಡಿದಿರಿ? ಇದುವೆ ದೇಶದ ಸಂಸ್ಕೃತಿ. ಇದೇನಾ ನಿಮ್ಮ ಸಂಸ್ಕೃತಿ? ಎಂದು ಅವರು ಕೇಳಿದ್ದಾರೆ.

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಜನರಿಗೆ ಸೋಂಕು ಹಂಚಿದ್ದಲ್ಲದೇ ಭ್ರಷ್ಟಾಚಾರವನ್ನು ಹಂಚಿದೆ. ಸರ್ಕಾರಕ್ಕೆ ಪರಿಸ್ಥಿತಿ ಹೇಗೆ ನಿಭಾಯಿಸಬೇಕು, ರಾಜ್ಯವನ್ನು ಹೇಗೆ ಮುಂದೆ ತೆಗೆದುಕೊಂಡು ಹೋಗಬೇಕು ಎಂಬುದರ ಬಗ್ಗೆ ಒಂದು ಸ್ಪಷ್ಟ ದೂರದೃಷ್ಟಿ ಇಲ್ಲ. ಈ ಸರ್ಕಾರಕ್ಕೆ ದೂರದೃಷ್ಟಿ ಇಲ್ಲ, ಇರುವುದೆಲ್ಲ ಬರೀ ಭ್ರಷ್ಟಾಚಾರದ ದೃಷ್ಟಿ ಎಂದು ಕಿಡಿಕಾರಿದ್ದಾರೆ.

ಬಾಣಂತಿಯರು, ಮಕ್ಕಳ ಆಹಾರದ ಪ್ಯಾಕ್ ಮೇಲೆ ನಿಮ್ಮ ನಾಯಕರ ಫೋಟೋ ಹಾಕಿ ಅಕ್ರಮ ಮಾಡಿವರ ವಿರುದ್ಧ ಕೇಸ್ ಹಾಕಿದ್ದೀರಾ? ಒಬ್ಬರನ್ನಾದರೂ ಬಂಧಿಸಿದ್ದೀರಾ? ಆದರೂ ನಮ್ಮ ಸಹಕಾರ ಕೇಳುತ್ತಿದ್ದೀರಿ, ನಿಮಗೆ ನಾಚಿಕೆಯಾಗುವುದಿಲ್ಲವೇ? ಎಂದು ಕೇಳಿದರು.

ಕಾರ್ಮಿಕರಿಗೆ 1,200 ರೂಪಾಯಿಯ ಊಟ ಕೊಟ್ಟಿರುವುದಾಗಿ ಹೇಳುತ್ತೀರಲ್ಲಾ, ಯಾವ ಪಂಚತಾರಾ ಹೋಟೆಲ್ ನಿಂದ ತಂದು ಊಟ ಕೊಟ್ಟಿದ್ದೀರಿ ? ಎಷ್ಟು ಜನಕ್ಕೆ ಊಟ, ಮಾಸ್ಕ್, ಆಹಾರ ಕಿಟ್ ಕೊಟ್ಟಿದ್ದೀರಾ ಎಂದು ನೀವು ಲೆಕ್ಕ ಇಟ್ಟಿದ್ದೀರಾ? ಬರೀ ಲೂಟಿ ಮಾಡುವುದು ಬಿಟ್ಟರೆ ಬೇರೆ ಏನನ್ನೂ ಮಾಡಿಲ್ಲ. ಕಾರ್ಮಿಕರನ್ನು ನೀವು ನಡೆಸಿಕೊಂಡ ರೀತಿ ಹೇಗಿತ್ತು? ಅವರಿಗೆ ಧೈರ್ಯ ತುಂಬುವ ಕೆಲಸ ಮಾಡಿದ್ದೀರಾ ಎಂದು ಪ್ರಶ್ನಿಸಿದರು.

ಆರೋಗ್ಯ ಕ್ಷೇತ್ರದಲ್ಲಿ ರಾಜ್ಯ ಮುಂಚೂಣಿಯಲ್ಲಿದೆ. ಆರಂಭದ ಮೂರು ತಿಂಗಳುಗಳ ಒಂದು ಖಾಸಗಿ ಆಸ್ಪತ್ರೆಯವರನ್ನು ಕರೆದು ಮಾತನಾಡಲಿಲ್ಲ. ಪ್ರಕರಣ ಹೆಚ್ಚಾದ ಮೇಲೆ ಅವರನ್ನು ಕರೆದು ಮಾತನಾಡುತ್ತಿದ್ದೀರಿ. ಈಗ ನಿಮಗೆ ಕಾನೂನಿನ ಅರಿವಾಗಿ ಅವರನ್ನು ಬೆದರಿಸುತ್ತಿದ್ದೀರಿ. ಸರ್ವಪಕ್ಷ ಸಭೆಯಲ್ಲೇ ಖಾಸಗಿ ಆಸ್ಪತ್ರೆಗಳ ಜತೆ ಮಾತನಾಡಿ ಎಂದು ನಾವು ಹೇಳಿರಲಿಲ್ಲವೇ? ಎಂದು ರಾಜ್ಯ ಸರ್ಕಾರವನ್ನು ನೆನಪಿಸಿದ್ದಾರೆ.

ಕೊರೋನ ರೋಗಕ್ಕಿಂತ ರಾಜ್ಯಕ್ಕೆ ಬಿಜೆಪಿ ಭ್ರಷ್ಟಾಚಾರವೇ ದೊಡ್ಡ ರೋಗವಾಗಿದೆ. ರಾಜ್ಯದ ಪಾಲಿಗೆ ಬಿಜೆಪಿ ಸರ್ಕಾರ ದೊಡ್ಡ ಶಾಪವಾಗಿದೆ. ಮುಖ್ಯಮಂತ್ರಿಗಳು ಲಾಕ್‌ಡೌನ್ ಬೇಕಾಗಿಲ್ಲ ಎಂದು ಹೇಳುತ್ತಿದ್ದಾರೆ. ಮತ್ತೆ ಯಾಕೆ ಲಾಕ್ ಡೌನ್ ಮಾಡಿದ್ದೀರಿ? ಲಾಕ್‌ಡೌನ್ ಮಾಡಿ ಯಾವ ತಯಾರಿ ಮಾಡಿಕೊಂಡಿರಿ? ನಿಮ್ಮ ಕಾರ್ಯಯೋಜನೆ ಏನು? ಈ ಪರಿಸ್ಥಿತಿಯನ್ನು ನಿಭಾಯಿಸಲು ಯಾವ ಕಾರ್ಯತಂತ್ರ ಮಾಡುತ್ತೀರಿ ಎಂದು ಇಂದಿನವರೆಗೂ ಹೇಳಿಲ್ಲ. ಸರ್ಕಾರದ ನೀತಿಗಳು ನಿಶ್ಯಕ್ತವಾಗಿವೆ ಎಂದು ಹೇಳಿದರು.

ಕೋಟ್ಯಂತರ ರೂಪಾಯಿ ಸಾಲ ಪಡೆದಿದ್ದೇರಿ. ಕೇಂದ್ರ ಸರ್ಕಾರ ಘೋಷಿಸಿದ 20 ಲಕ್ಷ ಕೋಟಿ ರೂ. ಪ್ಯಾಕೇಜ್, ನೀವು ಘೋಷಿಸಿದ 1600 ಕೋಟಿ ಪ್ಯಾಕೇಜ್ ಎಲ್ಲವನ್ನೂ ಲೆಕ್ಕ ಕೊಡಿ. ಕೇಳುತ್ತಿರುವ ಪ್ರಶ್ನೆಗಳಿಗೆ ಸರ್ಕಾರ ಮಾಧ್ಯಮಗಳಿಗೆ, ರಾಜ್ಯದ ಜನರಿಗೆ, ಕಾರ್ಮಿಕರಿಗೆ ಉತ್ತರ ನೀಡಲಿ ಎಂದು ಅವರು ಆಗ್ರಹಿಸಿದರು.

ಸಿದ್ದರಾಮಯ್ಯ ಅವರಿಗೆ ಬಂದು ಲೆಕ್ಕ ನೋಡಿ ಅಂತಿರಲ್ಲಾ, ಸಾರ್ವಜನಿಕ ಲೆಕ್ಕ ಸಮಿತಿಯಲ್ಲಿ ಎಲ್ಲ ಪಕ್ಷದವರೂ ಇದ್ದಾರೆ. ಅವರಿಗೆ ಪರಿಶೀಲಿಸಲು ಅವಕಾಶ ನೀಡಿ. ನೀವು ಪ್ರಾಮಾಣಿಕ ಹಾಗೂ ಪಾರದರ್ಶಕವಾಗಿದ್ದರೆ ಇವರಿಗೆ ತನಿಖೆಗೆ ಅವಕಾಶ ನೀಡಿ ಎಂದು ಒತ್ತಾಯಿಸಿದರು.

ಆಶಾ ಕಾರ್ಯಕರ್ತೆಯರು 16 ದಿನಗಳಿಂದ ಪ್ರತಿಭಟನೆ ಮಾಡುತ್ತಿದ್ದಾರೆ. ಇವರಿಗೆ 3 ಸಾವಿರ ರೂ. ಪ್ರೋತ್ಸಾಹ ಧನ ನೀಡುವುದಾಗಿ ಹೇಳಿದ್ದೀರಿ. 42 ಸಾವಿರ ಆಶಾ ಕಾರ್ಯಕರ್ತರಲ್ಲಿ ಶೇ.10 ರಷ್ಟು ಮಂದಿಗೆ ಪರಿಹಾರ ಕೊಟ್ಟಿಲ್ಲ. ಮೂರು ತಿಂಗಳು ಇವರು ತಮ್ಮ ಪ್ರಾಣ ಪಣಕ್ಕಿಟ್ಟು ಮನೆ ಮನೆಗೆ ಹೋಗಿ ನಿಮಗೆ ಮಾಹಿತಿ ಸಂಗ್ರಹಿಸಿಕೊಟ್ಟಿದ್ದರಲ್ಲ. ಅವರಿಗೆ ಚೆಕ್ ಬರೆದು ಕೊಡಲು ಏನು ಸಮಸ್ಯೆ? ಪೌರ ಕಾರ್ಮಿಕರಿಗೆ ವಿಮೆ ಕೊಟ್ಟಿದ್ದೀರಾ? ರೈತರಿಗೆ ಯಾವ ಮಾರುಕಟ್ಟೆ ಒದಗಿಸಿಕೊಟ್ಟಿರಿ? ಎಷ್ಟು ಬೆಳೆ ಖರೀದಿಸಿದಿರಿ? ಯಾರಿಗೆ ಕೊಟ್ಟಿದ್ದೀರಿ? ಎಂದು ಪ್ರಶ್ನೆ ಮಾಡಿದರು.

ಸರ್ಕಾರ 21 ದಿನಗಳಲ್ಲಿ ಕೊರೋನ ವಿರುದ್ಧ ಗೆಲ್ಲುತ್ತೇವೆ ಎಂದಿತ್ತು. ನಾವು ಕೂಡ ಅವರಿಗೆ ಸಹಕಾರ ಕೊಟ್ಟಿದ್ದೇವೆ. 121 ದಿನವಾಗಿದೆ, ಆದರೆ ಪರಿಹಾರ ಸಿಕ್ಕಿದೆಯೇ? ಪಿಪಿಇ ಕಿಟ್, ವೆಂಟಲೇಟರ್ ಸೇರಿ ಎಲ್ಲದರಲ್ಲೂ ಹಣ ಮಾಡಿದ ಸರ್ಕಾರ, ಈಗ ಹೆಣದ ಹೆಸರಲ್ಲೂ ಹಣ ಮಾಡಲು ನಿಂತಿದೆ. ದೇಶದಲ್ಲೇ ಕರ್ನಾಟಕವನ್ನು ಕಪ್ಪು ಚುಕ್ಕೆಯನ್ನಾಗಿ ಮಾಡಿದ್ದಾರೆ ಎಂದು ಡಿ. ಕೆ. ಶಿವಕುಮಾರ್‌ ತಿಳಿಸಿದ್ದಾರೆ.


ಓದಿ: ಕೊರೊನಾದಿಂದ ದೇವರೆ ಕಾಪಾಡುವುದಾದರೆ ನೀವು ಯಾಕೆ ? ರಾಜಿನಾಮೆ ಕೊಟ್ಟು ಹೋಗಿ: ಡಿ. ಕೆ. ಶಿವಕುಮಾರ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...