Homeಕರೋನಾ ತಲ್ಲಣಸರ್ಕಾರ ಕೊರೊನಾ ಸೊಂಕಿತರ ಹೆಣದ ಮೇಲೆ ಹಣ ಮಾಡುತ್ತಿದೆ: ಡಿಕೆಶಿ

ಸರ್ಕಾರ ಕೊರೊನಾ ಸೊಂಕಿತರ ಹೆಣದ ಮೇಲೆ ಹಣ ಮಾಡುತ್ತಿದೆ: ಡಿಕೆಶಿ

ರಾಜ್ಯದಲ್ಲಿ ಕೊರೊನಾ ಜೊತೆಗೆ ಭ್ರಷ್ಟಾಚಾರವನ್ನು ಬಿಜೆಪಿ ಸರ್ಕಾರ ಹಂಚಿದೆ, ಕೊರೊನಾಕ್ಕಿಂತ ಬಿಜೆಪಿಯ ಭ್ರಷ್ಟಾಚಾರವೇ ದೊಡ್ಡ ರೋಗ.

- Advertisement -
- Advertisement -

ಕೊರೊನಾ ಸೋಂಕನ್ನು ನಿಭಾಯಿಸಲು ರಾಜ್ಯ ಸರ್ಕಾರ ವಿಫಲವಾಗಿದ್ದು, ಕೊರೊನಾ ಸೋಂಕಿತರ ಹೆಣದ ಮೇಲೆ ಹಣ ಮಾಡುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಡಿ. ಕೆ. ಶಿವಕುಮಾರ್‌ ಸರ್ಕಾರದ ವಿರುದ್ದ ಹರಿಹಾಯ್ದಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಜಂಟಿ ಪತ್ರಿಕಾಗೋಷ್ಠಿಯನ್ನು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆಸಿದರು.

ಸರ್ಕಾರ ಜನರಿಗಾಗಿ ಮಾಡಿರುವ ಖರ್ಚಿನ ಲೆಕ್ಕ ಕೇಳಿದ್ದೇವೆ. ಈಗಾಗಲೇ ಸರ್ಕಾರ 4 ಸಾವಿರ ಕೋಟಿ ರೂ. ಖರ್ಚು ಮಾಡಿದ್ದು, ಅದರಲ್ಲಿ 2 ಸಾವಿರ ಕೋಟಿಯಷ್ಟು ಅವ್ಯವಹಾರ ನಡೆದಿದೆ ಎಂದು ಅವರು ಹೇಳಿದ್ದಾರೆ.

ಮುಖ್ಯಂತ್ರಿಯ ಕರೆಗೆ ಪಕ್ಷಭೇದ ಮರೆತು ಜನರ ಜೀವನ, ಜನರ ಬದುಕಿಗಾಗಿ ಎಲ್ಲ ಹಂತದಲ್ಲೂ ಸಹಕಾರ ನೀಡಿದ್ದೇವೆ. ಕೇವಲ ನಾಲ್ಕು ಗಂಟೆ ಅಂತರದಲ್ಲಿ ಲಾಕ್ ಡೌನ್ ಮಾಡಿದಿರಿ. ನಾವು 120 ದಿನ ಅದಕ್ಕೆ ಸಹಕಾರ ಕೊಟ್ಟಿದ್ದೇವೆ. ಆದರೆ ನೀವು ಕೊರೋನ ಪರಿಸ್ಥಿತಿಯಲ್ಲಿ ಹೆಣದ ಮೇಲೆ ಹಣ ಮಾಡಲು ಹೊರಟಿದ್ದೀರಲ್ಲಾ, ಇದನ್ನು ನೋಡಿಕೊಂಡು ನಾವು ಸುಮ್ಮನಿರಬೇಕೇ ಎಂದು ಶಿವಕುಮಾರ್ ಮುಖ್ಯಮಂತ್ರಿಗೆ ಪ್ರಶ್ನೆ ಹಾಕಿದ್ದಾರೆ.

8 ಸಚಿವರುಗಳು ಒಟ್ಟು ಒಂಬತ್ತು ಜನ ಸೇರಿ ಬೆಂಗಳೂರನ್ನು ಏನು ಮಾಡುತ್ತಿದ್ದಾರೆ? ಒಬ್ಬ ಮಂತ್ರಿಯೂ ಆಸ್ಪತ್ರೆಗೆ ಹೋಗಿ ರೋಗಿಯ ಜತೆ ಮಾತನಾಡಿ ಧೈರ್ಯ ತುಂಬಲಿಲ್ಲ. ವೈದ್ಯರಿಗೆ ಆತ್ಮಸ್ಥೈರ್ಯ ತುಂಬಲಿಲ್ಲ ಎಂದು ಅವರು ಆರೋಪಿದ್ದಾರೆ.

ಸೋಂಕಿತರು ತಾವೇ ಕಾಯಿಲೆ ತಂದುಕೊಂಳ್ಳಲಿಲ್ಲ, ಸರ್ಕಾರ ಅವರಿಗೆ ಕೊಟ್ಟಿದೆ. ಹೆಣಗಳನ್ನು ಯಾವ ರೀತಿ ಸಂಸ್ಕಾರ ಮಾಡಿದಿರಿ? ಇದುವೆ ದೇಶದ ಸಂಸ್ಕೃತಿ. ಇದೇನಾ ನಿಮ್ಮ ಸಂಸ್ಕೃತಿ? ಎಂದು ಅವರು ಕೇಳಿದ್ದಾರೆ.

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಜನರಿಗೆ ಸೋಂಕು ಹಂಚಿದ್ದಲ್ಲದೇ ಭ್ರಷ್ಟಾಚಾರವನ್ನು ಹಂಚಿದೆ. ಸರ್ಕಾರಕ್ಕೆ ಪರಿಸ್ಥಿತಿ ಹೇಗೆ ನಿಭಾಯಿಸಬೇಕು, ರಾಜ್ಯವನ್ನು ಹೇಗೆ ಮುಂದೆ ತೆಗೆದುಕೊಂಡು ಹೋಗಬೇಕು ಎಂಬುದರ ಬಗ್ಗೆ ಒಂದು ಸ್ಪಷ್ಟ ದೂರದೃಷ್ಟಿ ಇಲ್ಲ. ಈ ಸರ್ಕಾರಕ್ಕೆ ದೂರದೃಷ್ಟಿ ಇಲ್ಲ, ಇರುವುದೆಲ್ಲ ಬರೀ ಭ್ರಷ್ಟಾಚಾರದ ದೃಷ್ಟಿ ಎಂದು ಕಿಡಿಕಾರಿದ್ದಾರೆ.

ಬಾಣಂತಿಯರು, ಮಕ್ಕಳ ಆಹಾರದ ಪ್ಯಾಕ್ ಮೇಲೆ ನಿಮ್ಮ ನಾಯಕರ ಫೋಟೋ ಹಾಕಿ ಅಕ್ರಮ ಮಾಡಿವರ ವಿರುದ್ಧ ಕೇಸ್ ಹಾಕಿದ್ದೀರಾ? ಒಬ್ಬರನ್ನಾದರೂ ಬಂಧಿಸಿದ್ದೀರಾ? ಆದರೂ ನಮ್ಮ ಸಹಕಾರ ಕೇಳುತ್ತಿದ್ದೀರಿ, ನಿಮಗೆ ನಾಚಿಕೆಯಾಗುವುದಿಲ್ಲವೇ? ಎಂದು ಕೇಳಿದರು.

ಕಾರ್ಮಿಕರಿಗೆ 1,200 ರೂಪಾಯಿಯ ಊಟ ಕೊಟ್ಟಿರುವುದಾಗಿ ಹೇಳುತ್ತೀರಲ್ಲಾ, ಯಾವ ಪಂಚತಾರಾ ಹೋಟೆಲ್ ನಿಂದ ತಂದು ಊಟ ಕೊಟ್ಟಿದ್ದೀರಿ ? ಎಷ್ಟು ಜನಕ್ಕೆ ಊಟ, ಮಾಸ್ಕ್, ಆಹಾರ ಕಿಟ್ ಕೊಟ್ಟಿದ್ದೀರಾ ಎಂದು ನೀವು ಲೆಕ್ಕ ಇಟ್ಟಿದ್ದೀರಾ? ಬರೀ ಲೂಟಿ ಮಾಡುವುದು ಬಿಟ್ಟರೆ ಬೇರೆ ಏನನ್ನೂ ಮಾಡಿಲ್ಲ. ಕಾರ್ಮಿಕರನ್ನು ನೀವು ನಡೆಸಿಕೊಂಡ ರೀತಿ ಹೇಗಿತ್ತು? ಅವರಿಗೆ ಧೈರ್ಯ ತುಂಬುವ ಕೆಲಸ ಮಾಡಿದ್ದೀರಾ ಎಂದು ಪ್ರಶ್ನಿಸಿದರು.

ಆರೋಗ್ಯ ಕ್ಷೇತ್ರದಲ್ಲಿ ರಾಜ್ಯ ಮುಂಚೂಣಿಯಲ್ಲಿದೆ. ಆರಂಭದ ಮೂರು ತಿಂಗಳುಗಳ ಒಂದು ಖಾಸಗಿ ಆಸ್ಪತ್ರೆಯವರನ್ನು ಕರೆದು ಮಾತನಾಡಲಿಲ್ಲ. ಪ್ರಕರಣ ಹೆಚ್ಚಾದ ಮೇಲೆ ಅವರನ್ನು ಕರೆದು ಮಾತನಾಡುತ್ತಿದ್ದೀರಿ. ಈಗ ನಿಮಗೆ ಕಾನೂನಿನ ಅರಿವಾಗಿ ಅವರನ್ನು ಬೆದರಿಸುತ್ತಿದ್ದೀರಿ. ಸರ್ವಪಕ್ಷ ಸಭೆಯಲ್ಲೇ ಖಾಸಗಿ ಆಸ್ಪತ್ರೆಗಳ ಜತೆ ಮಾತನಾಡಿ ಎಂದು ನಾವು ಹೇಳಿರಲಿಲ್ಲವೇ? ಎಂದು ರಾಜ್ಯ ಸರ್ಕಾರವನ್ನು ನೆನಪಿಸಿದ್ದಾರೆ.

ಕೊರೋನ ರೋಗಕ್ಕಿಂತ ರಾಜ್ಯಕ್ಕೆ ಬಿಜೆಪಿ ಭ್ರಷ್ಟಾಚಾರವೇ ದೊಡ್ಡ ರೋಗವಾಗಿದೆ. ರಾಜ್ಯದ ಪಾಲಿಗೆ ಬಿಜೆಪಿ ಸರ್ಕಾರ ದೊಡ್ಡ ಶಾಪವಾಗಿದೆ. ಮುಖ್ಯಮಂತ್ರಿಗಳು ಲಾಕ್‌ಡೌನ್ ಬೇಕಾಗಿಲ್ಲ ಎಂದು ಹೇಳುತ್ತಿದ್ದಾರೆ. ಮತ್ತೆ ಯಾಕೆ ಲಾಕ್ ಡೌನ್ ಮಾಡಿದ್ದೀರಿ? ಲಾಕ್‌ಡೌನ್ ಮಾಡಿ ಯಾವ ತಯಾರಿ ಮಾಡಿಕೊಂಡಿರಿ? ನಿಮ್ಮ ಕಾರ್ಯಯೋಜನೆ ಏನು? ಈ ಪರಿಸ್ಥಿತಿಯನ್ನು ನಿಭಾಯಿಸಲು ಯಾವ ಕಾರ್ಯತಂತ್ರ ಮಾಡುತ್ತೀರಿ ಎಂದು ಇಂದಿನವರೆಗೂ ಹೇಳಿಲ್ಲ. ಸರ್ಕಾರದ ನೀತಿಗಳು ನಿಶ್ಯಕ್ತವಾಗಿವೆ ಎಂದು ಹೇಳಿದರು.

ಕೋಟ್ಯಂತರ ರೂಪಾಯಿ ಸಾಲ ಪಡೆದಿದ್ದೇರಿ. ಕೇಂದ್ರ ಸರ್ಕಾರ ಘೋಷಿಸಿದ 20 ಲಕ್ಷ ಕೋಟಿ ರೂ. ಪ್ಯಾಕೇಜ್, ನೀವು ಘೋಷಿಸಿದ 1600 ಕೋಟಿ ಪ್ಯಾಕೇಜ್ ಎಲ್ಲವನ್ನೂ ಲೆಕ್ಕ ಕೊಡಿ. ಕೇಳುತ್ತಿರುವ ಪ್ರಶ್ನೆಗಳಿಗೆ ಸರ್ಕಾರ ಮಾಧ್ಯಮಗಳಿಗೆ, ರಾಜ್ಯದ ಜನರಿಗೆ, ಕಾರ್ಮಿಕರಿಗೆ ಉತ್ತರ ನೀಡಲಿ ಎಂದು ಅವರು ಆಗ್ರಹಿಸಿದರು.

ಸಿದ್ದರಾಮಯ್ಯ ಅವರಿಗೆ ಬಂದು ಲೆಕ್ಕ ನೋಡಿ ಅಂತಿರಲ್ಲಾ, ಸಾರ್ವಜನಿಕ ಲೆಕ್ಕ ಸಮಿತಿಯಲ್ಲಿ ಎಲ್ಲ ಪಕ್ಷದವರೂ ಇದ್ದಾರೆ. ಅವರಿಗೆ ಪರಿಶೀಲಿಸಲು ಅವಕಾಶ ನೀಡಿ. ನೀವು ಪ್ರಾಮಾಣಿಕ ಹಾಗೂ ಪಾರದರ್ಶಕವಾಗಿದ್ದರೆ ಇವರಿಗೆ ತನಿಖೆಗೆ ಅವಕಾಶ ನೀಡಿ ಎಂದು ಒತ್ತಾಯಿಸಿದರು.

ಆಶಾ ಕಾರ್ಯಕರ್ತೆಯರು 16 ದಿನಗಳಿಂದ ಪ್ರತಿಭಟನೆ ಮಾಡುತ್ತಿದ್ದಾರೆ. ಇವರಿಗೆ 3 ಸಾವಿರ ರೂ. ಪ್ರೋತ್ಸಾಹ ಧನ ನೀಡುವುದಾಗಿ ಹೇಳಿದ್ದೀರಿ. 42 ಸಾವಿರ ಆಶಾ ಕಾರ್ಯಕರ್ತರಲ್ಲಿ ಶೇ.10 ರಷ್ಟು ಮಂದಿಗೆ ಪರಿಹಾರ ಕೊಟ್ಟಿಲ್ಲ. ಮೂರು ತಿಂಗಳು ಇವರು ತಮ್ಮ ಪ್ರಾಣ ಪಣಕ್ಕಿಟ್ಟು ಮನೆ ಮನೆಗೆ ಹೋಗಿ ನಿಮಗೆ ಮಾಹಿತಿ ಸಂಗ್ರಹಿಸಿಕೊಟ್ಟಿದ್ದರಲ್ಲ. ಅವರಿಗೆ ಚೆಕ್ ಬರೆದು ಕೊಡಲು ಏನು ಸಮಸ್ಯೆ? ಪೌರ ಕಾರ್ಮಿಕರಿಗೆ ವಿಮೆ ಕೊಟ್ಟಿದ್ದೀರಾ? ರೈತರಿಗೆ ಯಾವ ಮಾರುಕಟ್ಟೆ ಒದಗಿಸಿಕೊಟ್ಟಿರಿ? ಎಷ್ಟು ಬೆಳೆ ಖರೀದಿಸಿದಿರಿ? ಯಾರಿಗೆ ಕೊಟ್ಟಿದ್ದೀರಿ? ಎಂದು ಪ್ರಶ್ನೆ ಮಾಡಿದರು.

ಸರ್ಕಾರ 21 ದಿನಗಳಲ್ಲಿ ಕೊರೋನ ವಿರುದ್ಧ ಗೆಲ್ಲುತ್ತೇವೆ ಎಂದಿತ್ತು. ನಾವು ಕೂಡ ಅವರಿಗೆ ಸಹಕಾರ ಕೊಟ್ಟಿದ್ದೇವೆ. 121 ದಿನವಾಗಿದೆ, ಆದರೆ ಪರಿಹಾರ ಸಿಕ್ಕಿದೆಯೇ? ಪಿಪಿಇ ಕಿಟ್, ವೆಂಟಲೇಟರ್ ಸೇರಿ ಎಲ್ಲದರಲ್ಲೂ ಹಣ ಮಾಡಿದ ಸರ್ಕಾರ, ಈಗ ಹೆಣದ ಹೆಸರಲ್ಲೂ ಹಣ ಮಾಡಲು ನಿಂತಿದೆ. ದೇಶದಲ್ಲೇ ಕರ್ನಾಟಕವನ್ನು ಕಪ್ಪು ಚುಕ್ಕೆಯನ್ನಾಗಿ ಮಾಡಿದ್ದಾರೆ ಎಂದು ಡಿ. ಕೆ. ಶಿವಕುಮಾರ್‌ ತಿಳಿಸಿದ್ದಾರೆ.


ಓದಿ: ಕೊರೊನಾದಿಂದ ದೇವರೆ ಕಾಪಾಡುವುದಾದರೆ ನೀವು ಯಾಕೆ ? ರಾಜಿನಾಮೆ ಕೊಟ್ಟು ಹೋಗಿ: ಡಿ. ಕೆ. ಶಿವಕುಮಾರ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...