Homeಕರೋನಾ ತಲ್ಲಣಸರ್ಕಾರ ಕೊರೊನಾ ಸೊಂಕಿತರ ಹೆಣದ ಮೇಲೆ ಹಣ ಮಾಡುತ್ತಿದೆ: ಡಿಕೆಶಿ

ಸರ್ಕಾರ ಕೊರೊನಾ ಸೊಂಕಿತರ ಹೆಣದ ಮೇಲೆ ಹಣ ಮಾಡುತ್ತಿದೆ: ಡಿಕೆಶಿ

ರಾಜ್ಯದಲ್ಲಿ ಕೊರೊನಾ ಜೊತೆಗೆ ಭ್ರಷ್ಟಾಚಾರವನ್ನು ಬಿಜೆಪಿ ಸರ್ಕಾರ ಹಂಚಿದೆ, ಕೊರೊನಾಕ್ಕಿಂತ ಬಿಜೆಪಿಯ ಭ್ರಷ್ಟಾಚಾರವೇ ದೊಡ್ಡ ರೋಗ.

- Advertisement -
- Advertisement -

ಕೊರೊನಾ ಸೋಂಕನ್ನು ನಿಭಾಯಿಸಲು ರಾಜ್ಯ ಸರ್ಕಾರ ವಿಫಲವಾಗಿದ್ದು, ಕೊರೊನಾ ಸೋಂಕಿತರ ಹೆಣದ ಮೇಲೆ ಹಣ ಮಾಡುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಡಿ. ಕೆ. ಶಿವಕುಮಾರ್‌ ಸರ್ಕಾರದ ವಿರುದ್ದ ಹರಿಹಾಯ್ದಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಜಂಟಿ ಪತ್ರಿಕಾಗೋಷ್ಠಿಯನ್ನು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆಸಿದರು.

ಸರ್ಕಾರ ಜನರಿಗಾಗಿ ಮಾಡಿರುವ ಖರ್ಚಿನ ಲೆಕ್ಕ ಕೇಳಿದ್ದೇವೆ. ಈಗಾಗಲೇ ಸರ್ಕಾರ 4 ಸಾವಿರ ಕೋಟಿ ರೂ. ಖರ್ಚು ಮಾಡಿದ್ದು, ಅದರಲ್ಲಿ 2 ಸಾವಿರ ಕೋಟಿಯಷ್ಟು ಅವ್ಯವಹಾರ ನಡೆದಿದೆ ಎಂದು ಅವರು ಹೇಳಿದ್ದಾರೆ.

ಮುಖ್ಯಂತ್ರಿಯ ಕರೆಗೆ ಪಕ್ಷಭೇದ ಮರೆತು ಜನರ ಜೀವನ, ಜನರ ಬದುಕಿಗಾಗಿ ಎಲ್ಲ ಹಂತದಲ್ಲೂ ಸಹಕಾರ ನೀಡಿದ್ದೇವೆ. ಕೇವಲ ನಾಲ್ಕು ಗಂಟೆ ಅಂತರದಲ್ಲಿ ಲಾಕ್ ಡೌನ್ ಮಾಡಿದಿರಿ. ನಾವು 120 ದಿನ ಅದಕ್ಕೆ ಸಹಕಾರ ಕೊಟ್ಟಿದ್ದೇವೆ. ಆದರೆ ನೀವು ಕೊರೋನ ಪರಿಸ್ಥಿತಿಯಲ್ಲಿ ಹೆಣದ ಮೇಲೆ ಹಣ ಮಾಡಲು ಹೊರಟಿದ್ದೀರಲ್ಲಾ, ಇದನ್ನು ನೋಡಿಕೊಂಡು ನಾವು ಸುಮ್ಮನಿರಬೇಕೇ ಎಂದು ಶಿವಕುಮಾರ್ ಮುಖ್ಯಮಂತ್ರಿಗೆ ಪ್ರಶ್ನೆ ಹಾಕಿದ್ದಾರೆ.

8 ಸಚಿವರುಗಳು ಒಟ್ಟು ಒಂಬತ್ತು ಜನ ಸೇರಿ ಬೆಂಗಳೂರನ್ನು ಏನು ಮಾಡುತ್ತಿದ್ದಾರೆ? ಒಬ್ಬ ಮಂತ್ರಿಯೂ ಆಸ್ಪತ್ರೆಗೆ ಹೋಗಿ ರೋಗಿಯ ಜತೆ ಮಾತನಾಡಿ ಧೈರ್ಯ ತುಂಬಲಿಲ್ಲ. ವೈದ್ಯರಿಗೆ ಆತ್ಮಸ್ಥೈರ್ಯ ತುಂಬಲಿಲ್ಲ ಎಂದು ಅವರು ಆರೋಪಿದ್ದಾರೆ.

ಸೋಂಕಿತರು ತಾವೇ ಕಾಯಿಲೆ ತಂದುಕೊಂಳ್ಳಲಿಲ್ಲ, ಸರ್ಕಾರ ಅವರಿಗೆ ಕೊಟ್ಟಿದೆ. ಹೆಣಗಳನ್ನು ಯಾವ ರೀತಿ ಸಂಸ್ಕಾರ ಮಾಡಿದಿರಿ? ಇದುವೆ ದೇಶದ ಸಂಸ್ಕೃತಿ. ಇದೇನಾ ನಿಮ್ಮ ಸಂಸ್ಕೃತಿ? ಎಂದು ಅವರು ಕೇಳಿದ್ದಾರೆ.

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಜನರಿಗೆ ಸೋಂಕು ಹಂಚಿದ್ದಲ್ಲದೇ ಭ್ರಷ್ಟಾಚಾರವನ್ನು ಹಂಚಿದೆ. ಸರ್ಕಾರಕ್ಕೆ ಪರಿಸ್ಥಿತಿ ಹೇಗೆ ನಿಭಾಯಿಸಬೇಕು, ರಾಜ್ಯವನ್ನು ಹೇಗೆ ಮುಂದೆ ತೆಗೆದುಕೊಂಡು ಹೋಗಬೇಕು ಎಂಬುದರ ಬಗ್ಗೆ ಒಂದು ಸ್ಪಷ್ಟ ದೂರದೃಷ್ಟಿ ಇಲ್ಲ. ಈ ಸರ್ಕಾರಕ್ಕೆ ದೂರದೃಷ್ಟಿ ಇಲ್ಲ, ಇರುವುದೆಲ್ಲ ಬರೀ ಭ್ರಷ್ಟಾಚಾರದ ದೃಷ್ಟಿ ಎಂದು ಕಿಡಿಕಾರಿದ್ದಾರೆ.

ಬಾಣಂತಿಯರು, ಮಕ್ಕಳ ಆಹಾರದ ಪ್ಯಾಕ್ ಮೇಲೆ ನಿಮ್ಮ ನಾಯಕರ ಫೋಟೋ ಹಾಕಿ ಅಕ್ರಮ ಮಾಡಿವರ ವಿರುದ್ಧ ಕೇಸ್ ಹಾಕಿದ್ದೀರಾ? ಒಬ್ಬರನ್ನಾದರೂ ಬಂಧಿಸಿದ್ದೀರಾ? ಆದರೂ ನಮ್ಮ ಸಹಕಾರ ಕೇಳುತ್ತಿದ್ದೀರಿ, ನಿಮಗೆ ನಾಚಿಕೆಯಾಗುವುದಿಲ್ಲವೇ? ಎಂದು ಕೇಳಿದರು.

ಕಾರ್ಮಿಕರಿಗೆ 1,200 ರೂಪಾಯಿಯ ಊಟ ಕೊಟ್ಟಿರುವುದಾಗಿ ಹೇಳುತ್ತೀರಲ್ಲಾ, ಯಾವ ಪಂಚತಾರಾ ಹೋಟೆಲ್ ನಿಂದ ತಂದು ಊಟ ಕೊಟ್ಟಿದ್ದೀರಿ ? ಎಷ್ಟು ಜನಕ್ಕೆ ಊಟ, ಮಾಸ್ಕ್, ಆಹಾರ ಕಿಟ್ ಕೊಟ್ಟಿದ್ದೀರಾ ಎಂದು ನೀವು ಲೆಕ್ಕ ಇಟ್ಟಿದ್ದೀರಾ? ಬರೀ ಲೂಟಿ ಮಾಡುವುದು ಬಿಟ್ಟರೆ ಬೇರೆ ಏನನ್ನೂ ಮಾಡಿಲ್ಲ. ಕಾರ್ಮಿಕರನ್ನು ನೀವು ನಡೆಸಿಕೊಂಡ ರೀತಿ ಹೇಗಿತ್ತು? ಅವರಿಗೆ ಧೈರ್ಯ ತುಂಬುವ ಕೆಲಸ ಮಾಡಿದ್ದೀರಾ ಎಂದು ಪ್ರಶ್ನಿಸಿದರು.

ಆರೋಗ್ಯ ಕ್ಷೇತ್ರದಲ್ಲಿ ರಾಜ್ಯ ಮುಂಚೂಣಿಯಲ್ಲಿದೆ. ಆರಂಭದ ಮೂರು ತಿಂಗಳುಗಳ ಒಂದು ಖಾಸಗಿ ಆಸ್ಪತ್ರೆಯವರನ್ನು ಕರೆದು ಮಾತನಾಡಲಿಲ್ಲ. ಪ್ರಕರಣ ಹೆಚ್ಚಾದ ಮೇಲೆ ಅವರನ್ನು ಕರೆದು ಮಾತನಾಡುತ್ತಿದ್ದೀರಿ. ಈಗ ನಿಮಗೆ ಕಾನೂನಿನ ಅರಿವಾಗಿ ಅವರನ್ನು ಬೆದರಿಸುತ್ತಿದ್ದೀರಿ. ಸರ್ವಪಕ್ಷ ಸಭೆಯಲ್ಲೇ ಖಾಸಗಿ ಆಸ್ಪತ್ರೆಗಳ ಜತೆ ಮಾತನಾಡಿ ಎಂದು ನಾವು ಹೇಳಿರಲಿಲ್ಲವೇ? ಎಂದು ರಾಜ್ಯ ಸರ್ಕಾರವನ್ನು ನೆನಪಿಸಿದ್ದಾರೆ.

ಕೊರೋನ ರೋಗಕ್ಕಿಂತ ರಾಜ್ಯಕ್ಕೆ ಬಿಜೆಪಿ ಭ್ರಷ್ಟಾಚಾರವೇ ದೊಡ್ಡ ರೋಗವಾಗಿದೆ. ರಾಜ್ಯದ ಪಾಲಿಗೆ ಬಿಜೆಪಿ ಸರ್ಕಾರ ದೊಡ್ಡ ಶಾಪವಾಗಿದೆ. ಮುಖ್ಯಮಂತ್ರಿಗಳು ಲಾಕ್‌ಡೌನ್ ಬೇಕಾಗಿಲ್ಲ ಎಂದು ಹೇಳುತ್ತಿದ್ದಾರೆ. ಮತ್ತೆ ಯಾಕೆ ಲಾಕ್ ಡೌನ್ ಮಾಡಿದ್ದೀರಿ? ಲಾಕ್‌ಡೌನ್ ಮಾಡಿ ಯಾವ ತಯಾರಿ ಮಾಡಿಕೊಂಡಿರಿ? ನಿಮ್ಮ ಕಾರ್ಯಯೋಜನೆ ಏನು? ಈ ಪರಿಸ್ಥಿತಿಯನ್ನು ನಿಭಾಯಿಸಲು ಯಾವ ಕಾರ್ಯತಂತ್ರ ಮಾಡುತ್ತೀರಿ ಎಂದು ಇಂದಿನವರೆಗೂ ಹೇಳಿಲ್ಲ. ಸರ್ಕಾರದ ನೀತಿಗಳು ನಿಶ್ಯಕ್ತವಾಗಿವೆ ಎಂದು ಹೇಳಿದರು.

ಕೋಟ್ಯಂತರ ರೂಪಾಯಿ ಸಾಲ ಪಡೆದಿದ್ದೇರಿ. ಕೇಂದ್ರ ಸರ್ಕಾರ ಘೋಷಿಸಿದ 20 ಲಕ್ಷ ಕೋಟಿ ರೂ. ಪ್ಯಾಕೇಜ್, ನೀವು ಘೋಷಿಸಿದ 1600 ಕೋಟಿ ಪ್ಯಾಕೇಜ್ ಎಲ್ಲವನ್ನೂ ಲೆಕ್ಕ ಕೊಡಿ. ಕೇಳುತ್ತಿರುವ ಪ್ರಶ್ನೆಗಳಿಗೆ ಸರ್ಕಾರ ಮಾಧ್ಯಮಗಳಿಗೆ, ರಾಜ್ಯದ ಜನರಿಗೆ, ಕಾರ್ಮಿಕರಿಗೆ ಉತ್ತರ ನೀಡಲಿ ಎಂದು ಅವರು ಆಗ್ರಹಿಸಿದರು.

ಸಿದ್ದರಾಮಯ್ಯ ಅವರಿಗೆ ಬಂದು ಲೆಕ್ಕ ನೋಡಿ ಅಂತಿರಲ್ಲಾ, ಸಾರ್ವಜನಿಕ ಲೆಕ್ಕ ಸಮಿತಿಯಲ್ಲಿ ಎಲ್ಲ ಪಕ್ಷದವರೂ ಇದ್ದಾರೆ. ಅವರಿಗೆ ಪರಿಶೀಲಿಸಲು ಅವಕಾಶ ನೀಡಿ. ನೀವು ಪ್ರಾಮಾಣಿಕ ಹಾಗೂ ಪಾರದರ್ಶಕವಾಗಿದ್ದರೆ ಇವರಿಗೆ ತನಿಖೆಗೆ ಅವಕಾಶ ನೀಡಿ ಎಂದು ಒತ್ತಾಯಿಸಿದರು.

ಆಶಾ ಕಾರ್ಯಕರ್ತೆಯರು 16 ದಿನಗಳಿಂದ ಪ್ರತಿಭಟನೆ ಮಾಡುತ್ತಿದ್ದಾರೆ. ಇವರಿಗೆ 3 ಸಾವಿರ ರೂ. ಪ್ರೋತ್ಸಾಹ ಧನ ನೀಡುವುದಾಗಿ ಹೇಳಿದ್ದೀರಿ. 42 ಸಾವಿರ ಆಶಾ ಕಾರ್ಯಕರ್ತರಲ್ಲಿ ಶೇ.10 ರಷ್ಟು ಮಂದಿಗೆ ಪರಿಹಾರ ಕೊಟ್ಟಿಲ್ಲ. ಮೂರು ತಿಂಗಳು ಇವರು ತಮ್ಮ ಪ್ರಾಣ ಪಣಕ್ಕಿಟ್ಟು ಮನೆ ಮನೆಗೆ ಹೋಗಿ ನಿಮಗೆ ಮಾಹಿತಿ ಸಂಗ್ರಹಿಸಿಕೊಟ್ಟಿದ್ದರಲ್ಲ. ಅವರಿಗೆ ಚೆಕ್ ಬರೆದು ಕೊಡಲು ಏನು ಸಮಸ್ಯೆ? ಪೌರ ಕಾರ್ಮಿಕರಿಗೆ ವಿಮೆ ಕೊಟ್ಟಿದ್ದೀರಾ? ರೈತರಿಗೆ ಯಾವ ಮಾರುಕಟ್ಟೆ ಒದಗಿಸಿಕೊಟ್ಟಿರಿ? ಎಷ್ಟು ಬೆಳೆ ಖರೀದಿಸಿದಿರಿ? ಯಾರಿಗೆ ಕೊಟ್ಟಿದ್ದೀರಿ? ಎಂದು ಪ್ರಶ್ನೆ ಮಾಡಿದರು.

ಸರ್ಕಾರ 21 ದಿನಗಳಲ್ಲಿ ಕೊರೋನ ವಿರುದ್ಧ ಗೆಲ್ಲುತ್ತೇವೆ ಎಂದಿತ್ತು. ನಾವು ಕೂಡ ಅವರಿಗೆ ಸಹಕಾರ ಕೊಟ್ಟಿದ್ದೇವೆ. 121 ದಿನವಾಗಿದೆ, ಆದರೆ ಪರಿಹಾರ ಸಿಕ್ಕಿದೆಯೇ? ಪಿಪಿಇ ಕಿಟ್, ವೆಂಟಲೇಟರ್ ಸೇರಿ ಎಲ್ಲದರಲ್ಲೂ ಹಣ ಮಾಡಿದ ಸರ್ಕಾರ, ಈಗ ಹೆಣದ ಹೆಸರಲ್ಲೂ ಹಣ ಮಾಡಲು ನಿಂತಿದೆ. ದೇಶದಲ್ಲೇ ಕರ್ನಾಟಕವನ್ನು ಕಪ್ಪು ಚುಕ್ಕೆಯನ್ನಾಗಿ ಮಾಡಿದ್ದಾರೆ ಎಂದು ಡಿ. ಕೆ. ಶಿವಕುಮಾರ್‌ ತಿಳಿಸಿದ್ದಾರೆ.


ಓದಿ: ಕೊರೊನಾದಿಂದ ದೇವರೆ ಕಾಪಾಡುವುದಾದರೆ ನೀವು ಯಾಕೆ ? ರಾಜಿನಾಮೆ ಕೊಟ್ಟು ಹೋಗಿ: ಡಿ. ಕೆ. ಶಿವಕುಮಾರ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...