Homeಕರೋನಾ ತಲ್ಲಣಸರ್ಕಾರ ಕೊರೊನಾ ಸೊಂಕಿತರ ಹೆಣದ ಮೇಲೆ ಹಣ ಮಾಡುತ್ತಿದೆ: ಡಿಕೆಶಿ

ಸರ್ಕಾರ ಕೊರೊನಾ ಸೊಂಕಿತರ ಹೆಣದ ಮೇಲೆ ಹಣ ಮಾಡುತ್ತಿದೆ: ಡಿಕೆಶಿ

ರಾಜ್ಯದಲ್ಲಿ ಕೊರೊನಾ ಜೊತೆಗೆ ಭ್ರಷ್ಟಾಚಾರವನ್ನು ಬಿಜೆಪಿ ಸರ್ಕಾರ ಹಂಚಿದೆ, ಕೊರೊನಾಕ್ಕಿಂತ ಬಿಜೆಪಿಯ ಭ್ರಷ್ಟಾಚಾರವೇ ದೊಡ್ಡ ರೋಗ.

- Advertisement -
- Advertisement -

ಕೊರೊನಾ ಸೋಂಕನ್ನು ನಿಭಾಯಿಸಲು ರಾಜ್ಯ ಸರ್ಕಾರ ವಿಫಲವಾಗಿದ್ದು, ಕೊರೊನಾ ಸೋಂಕಿತರ ಹೆಣದ ಮೇಲೆ ಹಣ ಮಾಡುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಡಿ. ಕೆ. ಶಿವಕುಮಾರ್‌ ಸರ್ಕಾರದ ವಿರುದ್ದ ಹರಿಹಾಯ್ದಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಜಂಟಿ ಪತ್ರಿಕಾಗೋಷ್ಠಿಯನ್ನು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆಸಿದರು.

ಸರ್ಕಾರ ಜನರಿಗಾಗಿ ಮಾಡಿರುವ ಖರ್ಚಿನ ಲೆಕ್ಕ ಕೇಳಿದ್ದೇವೆ. ಈಗಾಗಲೇ ಸರ್ಕಾರ 4 ಸಾವಿರ ಕೋಟಿ ರೂ. ಖರ್ಚು ಮಾಡಿದ್ದು, ಅದರಲ್ಲಿ 2 ಸಾವಿರ ಕೋಟಿಯಷ್ಟು ಅವ್ಯವಹಾರ ನಡೆದಿದೆ ಎಂದು ಅವರು ಹೇಳಿದ್ದಾರೆ.

ಮುಖ್ಯಂತ್ರಿಯ ಕರೆಗೆ ಪಕ್ಷಭೇದ ಮರೆತು ಜನರ ಜೀವನ, ಜನರ ಬದುಕಿಗಾಗಿ ಎಲ್ಲ ಹಂತದಲ್ಲೂ ಸಹಕಾರ ನೀಡಿದ್ದೇವೆ. ಕೇವಲ ನಾಲ್ಕು ಗಂಟೆ ಅಂತರದಲ್ಲಿ ಲಾಕ್ ಡೌನ್ ಮಾಡಿದಿರಿ. ನಾವು 120 ದಿನ ಅದಕ್ಕೆ ಸಹಕಾರ ಕೊಟ್ಟಿದ್ದೇವೆ. ಆದರೆ ನೀವು ಕೊರೋನ ಪರಿಸ್ಥಿತಿಯಲ್ಲಿ ಹೆಣದ ಮೇಲೆ ಹಣ ಮಾಡಲು ಹೊರಟಿದ್ದೀರಲ್ಲಾ, ಇದನ್ನು ನೋಡಿಕೊಂಡು ನಾವು ಸುಮ್ಮನಿರಬೇಕೇ ಎಂದು ಶಿವಕುಮಾರ್ ಮುಖ್ಯಮಂತ್ರಿಗೆ ಪ್ರಶ್ನೆ ಹಾಕಿದ್ದಾರೆ.

8 ಸಚಿವರುಗಳು ಒಟ್ಟು ಒಂಬತ್ತು ಜನ ಸೇರಿ ಬೆಂಗಳೂರನ್ನು ಏನು ಮಾಡುತ್ತಿದ್ದಾರೆ? ಒಬ್ಬ ಮಂತ್ರಿಯೂ ಆಸ್ಪತ್ರೆಗೆ ಹೋಗಿ ರೋಗಿಯ ಜತೆ ಮಾತನಾಡಿ ಧೈರ್ಯ ತುಂಬಲಿಲ್ಲ. ವೈದ್ಯರಿಗೆ ಆತ್ಮಸ್ಥೈರ್ಯ ತುಂಬಲಿಲ್ಲ ಎಂದು ಅವರು ಆರೋಪಿದ್ದಾರೆ.

ಸೋಂಕಿತರು ತಾವೇ ಕಾಯಿಲೆ ತಂದುಕೊಂಳ್ಳಲಿಲ್ಲ, ಸರ್ಕಾರ ಅವರಿಗೆ ಕೊಟ್ಟಿದೆ. ಹೆಣಗಳನ್ನು ಯಾವ ರೀತಿ ಸಂಸ್ಕಾರ ಮಾಡಿದಿರಿ? ಇದುವೆ ದೇಶದ ಸಂಸ್ಕೃತಿ. ಇದೇನಾ ನಿಮ್ಮ ಸಂಸ್ಕೃತಿ? ಎಂದು ಅವರು ಕೇಳಿದ್ದಾರೆ.

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಜನರಿಗೆ ಸೋಂಕು ಹಂಚಿದ್ದಲ್ಲದೇ ಭ್ರಷ್ಟಾಚಾರವನ್ನು ಹಂಚಿದೆ. ಸರ್ಕಾರಕ್ಕೆ ಪರಿಸ್ಥಿತಿ ಹೇಗೆ ನಿಭಾಯಿಸಬೇಕು, ರಾಜ್ಯವನ್ನು ಹೇಗೆ ಮುಂದೆ ತೆಗೆದುಕೊಂಡು ಹೋಗಬೇಕು ಎಂಬುದರ ಬಗ್ಗೆ ಒಂದು ಸ್ಪಷ್ಟ ದೂರದೃಷ್ಟಿ ಇಲ್ಲ. ಈ ಸರ್ಕಾರಕ್ಕೆ ದೂರದೃಷ್ಟಿ ಇಲ್ಲ, ಇರುವುದೆಲ್ಲ ಬರೀ ಭ್ರಷ್ಟಾಚಾರದ ದೃಷ್ಟಿ ಎಂದು ಕಿಡಿಕಾರಿದ್ದಾರೆ.

ಬಾಣಂತಿಯರು, ಮಕ್ಕಳ ಆಹಾರದ ಪ್ಯಾಕ್ ಮೇಲೆ ನಿಮ್ಮ ನಾಯಕರ ಫೋಟೋ ಹಾಕಿ ಅಕ್ರಮ ಮಾಡಿವರ ವಿರುದ್ಧ ಕೇಸ್ ಹಾಕಿದ್ದೀರಾ? ಒಬ್ಬರನ್ನಾದರೂ ಬಂಧಿಸಿದ್ದೀರಾ? ಆದರೂ ನಮ್ಮ ಸಹಕಾರ ಕೇಳುತ್ತಿದ್ದೀರಿ, ನಿಮಗೆ ನಾಚಿಕೆಯಾಗುವುದಿಲ್ಲವೇ? ಎಂದು ಕೇಳಿದರು.

ಕಾರ್ಮಿಕರಿಗೆ 1,200 ರೂಪಾಯಿಯ ಊಟ ಕೊಟ್ಟಿರುವುದಾಗಿ ಹೇಳುತ್ತೀರಲ್ಲಾ, ಯಾವ ಪಂಚತಾರಾ ಹೋಟೆಲ್ ನಿಂದ ತಂದು ಊಟ ಕೊಟ್ಟಿದ್ದೀರಿ ? ಎಷ್ಟು ಜನಕ್ಕೆ ಊಟ, ಮಾಸ್ಕ್, ಆಹಾರ ಕಿಟ್ ಕೊಟ್ಟಿದ್ದೀರಾ ಎಂದು ನೀವು ಲೆಕ್ಕ ಇಟ್ಟಿದ್ದೀರಾ? ಬರೀ ಲೂಟಿ ಮಾಡುವುದು ಬಿಟ್ಟರೆ ಬೇರೆ ಏನನ್ನೂ ಮಾಡಿಲ್ಲ. ಕಾರ್ಮಿಕರನ್ನು ನೀವು ನಡೆಸಿಕೊಂಡ ರೀತಿ ಹೇಗಿತ್ತು? ಅವರಿಗೆ ಧೈರ್ಯ ತುಂಬುವ ಕೆಲಸ ಮಾಡಿದ್ದೀರಾ ಎಂದು ಪ್ರಶ್ನಿಸಿದರು.

ಆರೋಗ್ಯ ಕ್ಷೇತ್ರದಲ್ಲಿ ರಾಜ್ಯ ಮುಂಚೂಣಿಯಲ್ಲಿದೆ. ಆರಂಭದ ಮೂರು ತಿಂಗಳುಗಳ ಒಂದು ಖಾಸಗಿ ಆಸ್ಪತ್ರೆಯವರನ್ನು ಕರೆದು ಮಾತನಾಡಲಿಲ್ಲ. ಪ್ರಕರಣ ಹೆಚ್ಚಾದ ಮೇಲೆ ಅವರನ್ನು ಕರೆದು ಮಾತನಾಡುತ್ತಿದ್ದೀರಿ. ಈಗ ನಿಮಗೆ ಕಾನೂನಿನ ಅರಿವಾಗಿ ಅವರನ್ನು ಬೆದರಿಸುತ್ತಿದ್ದೀರಿ. ಸರ್ವಪಕ್ಷ ಸಭೆಯಲ್ಲೇ ಖಾಸಗಿ ಆಸ್ಪತ್ರೆಗಳ ಜತೆ ಮಾತನಾಡಿ ಎಂದು ನಾವು ಹೇಳಿರಲಿಲ್ಲವೇ? ಎಂದು ರಾಜ್ಯ ಸರ್ಕಾರವನ್ನು ನೆನಪಿಸಿದ್ದಾರೆ.

ಕೊರೋನ ರೋಗಕ್ಕಿಂತ ರಾಜ್ಯಕ್ಕೆ ಬಿಜೆಪಿ ಭ್ರಷ್ಟಾಚಾರವೇ ದೊಡ್ಡ ರೋಗವಾಗಿದೆ. ರಾಜ್ಯದ ಪಾಲಿಗೆ ಬಿಜೆಪಿ ಸರ್ಕಾರ ದೊಡ್ಡ ಶಾಪವಾಗಿದೆ. ಮುಖ್ಯಮಂತ್ರಿಗಳು ಲಾಕ್‌ಡೌನ್ ಬೇಕಾಗಿಲ್ಲ ಎಂದು ಹೇಳುತ್ತಿದ್ದಾರೆ. ಮತ್ತೆ ಯಾಕೆ ಲಾಕ್ ಡೌನ್ ಮಾಡಿದ್ದೀರಿ? ಲಾಕ್‌ಡೌನ್ ಮಾಡಿ ಯಾವ ತಯಾರಿ ಮಾಡಿಕೊಂಡಿರಿ? ನಿಮ್ಮ ಕಾರ್ಯಯೋಜನೆ ಏನು? ಈ ಪರಿಸ್ಥಿತಿಯನ್ನು ನಿಭಾಯಿಸಲು ಯಾವ ಕಾರ್ಯತಂತ್ರ ಮಾಡುತ್ತೀರಿ ಎಂದು ಇಂದಿನವರೆಗೂ ಹೇಳಿಲ್ಲ. ಸರ್ಕಾರದ ನೀತಿಗಳು ನಿಶ್ಯಕ್ತವಾಗಿವೆ ಎಂದು ಹೇಳಿದರು.

ಕೋಟ್ಯಂತರ ರೂಪಾಯಿ ಸಾಲ ಪಡೆದಿದ್ದೇರಿ. ಕೇಂದ್ರ ಸರ್ಕಾರ ಘೋಷಿಸಿದ 20 ಲಕ್ಷ ಕೋಟಿ ರೂ. ಪ್ಯಾಕೇಜ್, ನೀವು ಘೋಷಿಸಿದ 1600 ಕೋಟಿ ಪ್ಯಾಕೇಜ್ ಎಲ್ಲವನ್ನೂ ಲೆಕ್ಕ ಕೊಡಿ. ಕೇಳುತ್ತಿರುವ ಪ್ರಶ್ನೆಗಳಿಗೆ ಸರ್ಕಾರ ಮಾಧ್ಯಮಗಳಿಗೆ, ರಾಜ್ಯದ ಜನರಿಗೆ, ಕಾರ್ಮಿಕರಿಗೆ ಉತ್ತರ ನೀಡಲಿ ಎಂದು ಅವರು ಆಗ್ರಹಿಸಿದರು.

ಸಿದ್ದರಾಮಯ್ಯ ಅವರಿಗೆ ಬಂದು ಲೆಕ್ಕ ನೋಡಿ ಅಂತಿರಲ್ಲಾ, ಸಾರ್ವಜನಿಕ ಲೆಕ್ಕ ಸಮಿತಿಯಲ್ಲಿ ಎಲ್ಲ ಪಕ್ಷದವರೂ ಇದ್ದಾರೆ. ಅವರಿಗೆ ಪರಿಶೀಲಿಸಲು ಅವಕಾಶ ನೀಡಿ. ನೀವು ಪ್ರಾಮಾಣಿಕ ಹಾಗೂ ಪಾರದರ್ಶಕವಾಗಿದ್ದರೆ ಇವರಿಗೆ ತನಿಖೆಗೆ ಅವಕಾಶ ನೀಡಿ ಎಂದು ಒತ್ತಾಯಿಸಿದರು.

ಆಶಾ ಕಾರ್ಯಕರ್ತೆಯರು 16 ದಿನಗಳಿಂದ ಪ್ರತಿಭಟನೆ ಮಾಡುತ್ತಿದ್ದಾರೆ. ಇವರಿಗೆ 3 ಸಾವಿರ ರೂ. ಪ್ರೋತ್ಸಾಹ ಧನ ನೀಡುವುದಾಗಿ ಹೇಳಿದ್ದೀರಿ. 42 ಸಾವಿರ ಆಶಾ ಕಾರ್ಯಕರ್ತರಲ್ಲಿ ಶೇ.10 ರಷ್ಟು ಮಂದಿಗೆ ಪರಿಹಾರ ಕೊಟ್ಟಿಲ್ಲ. ಮೂರು ತಿಂಗಳು ಇವರು ತಮ್ಮ ಪ್ರಾಣ ಪಣಕ್ಕಿಟ್ಟು ಮನೆ ಮನೆಗೆ ಹೋಗಿ ನಿಮಗೆ ಮಾಹಿತಿ ಸಂಗ್ರಹಿಸಿಕೊಟ್ಟಿದ್ದರಲ್ಲ. ಅವರಿಗೆ ಚೆಕ್ ಬರೆದು ಕೊಡಲು ಏನು ಸಮಸ್ಯೆ? ಪೌರ ಕಾರ್ಮಿಕರಿಗೆ ವಿಮೆ ಕೊಟ್ಟಿದ್ದೀರಾ? ರೈತರಿಗೆ ಯಾವ ಮಾರುಕಟ್ಟೆ ಒದಗಿಸಿಕೊಟ್ಟಿರಿ? ಎಷ್ಟು ಬೆಳೆ ಖರೀದಿಸಿದಿರಿ? ಯಾರಿಗೆ ಕೊಟ್ಟಿದ್ದೀರಿ? ಎಂದು ಪ್ರಶ್ನೆ ಮಾಡಿದರು.

ಸರ್ಕಾರ 21 ದಿನಗಳಲ್ಲಿ ಕೊರೋನ ವಿರುದ್ಧ ಗೆಲ್ಲುತ್ತೇವೆ ಎಂದಿತ್ತು. ನಾವು ಕೂಡ ಅವರಿಗೆ ಸಹಕಾರ ಕೊಟ್ಟಿದ್ದೇವೆ. 121 ದಿನವಾಗಿದೆ, ಆದರೆ ಪರಿಹಾರ ಸಿಕ್ಕಿದೆಯೇ? ಪಿಪಿಇ ಕಿಟ್, ವೆಂಟಲೇಟರ್ ಸೇರಿ ಎಲ್ಲದರಲ್ಲೂ ಹಣ ಮಾಡಿದ ಸರ್ಕಾರ, ಈಗ ಹೆಣದ ಹೆಸರಲ್ಲೂ ಹಣ ಮಾಡಲು ನಿಂತಿದೆ. ದೇಶದಲ್ಲೇ ಕರ್ನಾಟಕವನ್ನು ಕಪ್ಪು ಚುಕ್ಕೆಯನ್ನಾಗಿ ಮಾಡಿದ್ದಾರೆ ಎಂದು ಡಿ. ಕೆ. ಶಿವಕುಮಾರ್‌ ತಿಳಿಸಿದ್ದಾರೆ.


ಓದಿ: ಕೊರೊನಾದಿಂದ ದೇವರೆ ಕಾಪಾಡುವುದಾದರೆ ನೀವು ಯಾಕೆ ? ರಾಜಿನಾಮೆ ಕೊಟ್ಟು ಹೋಗಿ: ಡಿ. ಕೆ. ಶಿವಕುಮಾರ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...