Homeಕರೋನಾ ತಲ್ಲಣಸರ್ಕಾರ ಕೊರೊನಾ ಸೊಂಕಿತರ ಹೆಣದ ಮೇಲೆ ಹಣ ಮಾಡುತ್ತಿದೆ: ಡಿಕೆಶಿ

ಸರ್ಕಾರ ಕೊರೊನಾ ಸೊಂಕಿತರ ಹೆಣದ ಮೇಲೆ ಹಣ ಮಾಡುತ್ತಿದೆ: ಡಿಕೆಶಿ

ರಾಜ್ಯದಲ್ಲಿ ಕೊರೊನಾ ಜೊತೆಗೆ ಭ್ರಷ್ಟಾಚಾರವನ್ನು ಬಿಜೆಪಿ ಸರ್ಕಾರ ಹಂಚಿದೆ, ಕೊರೊನಾಕ್ಕಿಂತ ಬಿಜೆಪಿಯ ಭ್ರಷ್ಟಾಚಾರವೇ ದೊಡ್ಡ ರೋಗ.

- Advertisement -
- Advertisement -

ಕೊರೊನಾ ಸೋಂಕನ್ನು ನಿಭಾಯಿಸಲು ರಾಜ್ಯ ಸರ್ಕಾರ ವಿಫಲವಾಗಿದ್ದು, ಕೊರೊನಾ ಸೋಂಕಿತರ ಹೆಣದ ಮೇಲೆ ಹಣ ಮಾಡುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಡಿ. ಕೆ. ಶಿವಕುಮಾರ್‌ ಸರ್ಕಾರದ ವಿರುದ್ದ ಹರಿಹಾಯ್ದಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಜಂಟಿ ಪತ್ರಿಕಾಗೋಷ್ಠಿಯನ್ನು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆಸಿದರು.

ಸರ್ಕಾರ ಜನರಿಗಾಗಿ ಮಾಡಿರುವ ಖರ್ಚಿನ ಲೆಕ್ಕ ಕೇಳಿದ್ದೇವೆ. ಈಗಾಗಲೇ ಸರ್ಕಾರ 4 ಸಾವಿರ ಕೋಟಿ ರೂ. ಖರ್ಚು ಮಾಡಿದ್ದು, ಅದರಲ್ಲಿ 2 ಸಾವಿರ ಕೋಟಿಯಷ್ಟು ಅವ್ಯವಹಾರ ನಡೆದಿದೆ ಎಂದು ಅವರು ಹೇಳಿದ್ದಾರೆ.

ಮುಖ್ಯಂತ್ರಿಯ ಕರೆಗೆ ಪಕ್ಷಭೇದ ಮರೆತು ಜನರ ಜೀವನ, ಜನರ ಬದುಕಿಗಾಗಿ ಎಲ್ಲ ಹಂತದಲ್ಲೂ ಸಹಕಾರ ನೀಡಿದ್ದೇವೆ. ಕೇವಲ ನಾಲ್ಕು ಗಂಟೆ ಅಂತರದಲ್ಲಿ ಲಾಕ್ ಡೌನ್ ಮಾಡಿದಿರಿ. ನಾವು 120 ದಿನ ಅದಕ್ಕೆ ಸಹಕಾರ ಕೊಟ್ಟಿದ್ದೇವೆ. ಆದರೆ ನೀವು ಕೊರೋನ ಪರಿಸ್ಥಿತಿಯಲ್ಲಿ ಹೆಣದ ಮೇಲೆ ಹಣ ಮಾಡಲು ಹೊರಟಿದ್ದೀರಲ್ಲಾ, ಇದನ್ನು ನೋಡಿಕೊಂಡು ನಾವು ಸುಮ್ಮನಿರಬೇಕೇ ಎಂದು ಶಿವಕುಮಾರ್ ಮುಖ್ಯಮಂತ್ರಿಗೆ ಪ್ರಶ್ನೆ ಹಾಕಿದ್ದಾರೆ.

8 ಸಚಿವರುಗಳು ಒಟ್ಟು ಒಂಬತ್ತು ಜನ ಸೇರಿ ಬೆಂಗಳೂರನ್ನು ಏನು ಮಾಡುತ್ತಿದ್ದಾರೆ? ಒಬ್ಬ ಮಂತ್ರಿಯೂ ಆಸ್ಪತ್ರೆಗೆ ಹೋಗಿ ರೋಗಿಯ ಜತೆ ಮಾತನಾಡಿ ಧೈರ್ಯ ತುಂಬಲಿಲ್ಲ. ವೈದ್ಯರಿಗೆ ಆತ್ಮಸ್ಥೈರ್ಯ ತುಂಬಲಿಲ್ಲ ಎಂದು ಅವರು ಆರೋಪಿದ್ದಾರೆ.

ಸೋಂಕಿತರು ತಾವೇ ಕಾಯಿಲೆ ತಂದುಕೊಂಳ್ಳಲಿಲ್ಲ, ಸರ್ಕಾರ ಅವರಿಗೆ ಕೊಟ್ಟಿದೆ. ಹೆಣಗಳನ್ನು ಯಾವ ರೀತಿ ಸಂಸ್ಕಾರ ಮಾಡಿದಿರಿ? ಇದುವೆ ದೇಶದ ಸಂಸ್ಕೃತಿ. ಇದೇನಾ ನಿಮ್ಮ ಸಂಸ್ಕೃತಿ? ಎಂದು ಅವರು ಕೇಳಿದ್ದಾರೆ.

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಜನರಿಗೆ ಸೋಂಕು ಹಂಚಿದ್ದಲ್ಲದೇ ಭ್ರಷ್ಟಾಚಾರವನ್ನು ಹಂಚಿದೆ. ಸರ್ಕಾರಕ್ಕೆ ಪರಿಸ್ಥಿತಿ ಹೇಗೆ ನಿಭಾಯಿಸಬೇಕು, ರಾಜ್ಯವನ್ನು ಹೇಗೆ ಮುಂದೆ ತೆಗೆದುಕೊಂಡು ಹೋಗಬೇಕು ಎಂಬುದರ ಬಗ್ಗೆ ಒಂದು ಸ್ಪಷ್ಟ ದೂರದೃಷ್ಟಿ ಇಲ್ಲ. ಈ ಸರ್ಕಾರಕ್ಕೆ ದೂರದೃಷ್ಟಿ ಇಲ್ಲ, ಇರುವುದೆಲ್ಲ ಬರೀ ಭ್ರಷ್ಟಾಚಾರದ ದೃಷ್ಟಿ ಎಂದು ಕಿಡಿಕಾರಿದ್ದಾರೆ.

ಬಾಣಂತಿಯರು, ಮಕ್ಕಳ ಆಹಾರದ ಪ್ಯಾಕ್ ಮೇಲೆ ನಿಮ್ಮ ನಾಯಕರ ಫೋಟೋ ಹಾಕಿ ಅಕ್ರಮ ಮಾಡಿವರ ವಿರುದ್ಧ ಕೇಸ್ ಹಾಕಿದ್ದೀರಾ? ಒಬ್ಬರನ್ನಾದರೂ ಬಂಧಿಸಿದ್ದೀರಾ? ಆದರೂ ನಮ್ಮ ಸಹಕಾರ ಕೇಳುತ್ತಿದ್ದೀರಿ, ನಿಮಗೆ ನಾಚಿಕೆಯಾಗುವುದಿಲ್ಲವೇ? ಎಂದು ಕೇಳಿದರು.

ಕಾರ್ಮಿಕರಿಗೆ 1,200 ರೂಪಾಯಿಯ ಊಟ ಕೊಟ್ಟಿರುವುದಾಗಿ ಹೇಳುತ್ತೀರಲ್ಲಾ, ಯಾವ ಪಂಚತಾರಾ ಹೋಟೆಲ್ ನಿಂದ ತಂದು ಊಟ ಕೊಟ್ಟಿದ್ದೀರಿ ? ಎಷ್ಟು ಜನಕ್ಕೆ ಊಟ, ಮಾಸ್ಕ್, ಆಹಾರ ಕಿಟ್ ಕೊಟ್ಟಿದ್ದೀರಾ ಎಂದು ನೀವು ಲೆಕ್ಕ ಇಟ್ಟಿದ್ದೀರಾ? ಬರೀ ಲೂಟಿ ಮಾಡುವುದು ಬಿಟ್ಟರೆ ಬೇರೆ ಏನನ್ನೂ ಮಾಡಿಲ್ಲ. ಕಾರ್ಮಿಕರನ್ನು ನೀವು ನಡೆಸಿಕೊಂಡ ರೀತಿ ಹೇಗಿತ್ತು? ಅವರಿಗೆ ಧೈರ್ಯ ತುಂಬುವ ಕೆಲಸ ಮಾಡಿದ್ದೀರಾ ಎಂದು ಪ್ರಶ್ನಿಸಿದರು.

ಆರೋಗ್ಯ ಕ್ಷೇತ್ರದಲ್ಲಿ ರಾಜ್ಯ ಮುಂಚೂಣಿಯಲ್ಲಿದೆ. ಆರಂಭದ ಮೂರು ತಿಂಗಳುಗಳ ಒಂದು ಖಾಸಗಿ ಆಸ್ಪತ್ರೆಯವರನ್ನು ಕರೆದು ಮಾತನಾಡಲಿಲ್ಲ. ಪ್ರಕರಣ ಹೆಚ್ಚಾದ ಮೇಲೆ ಅವರನ್ನು ಕರೆದು ಮಾತನಾಡುತ್ತಿದ್ದೀರಿ. ಈಗ ನಿಮಗೆ ಕಾನೂನಿನ ಅರಿವಾಗಿ ಅವರನ್ನು ಬೆದರಿಸುತ್ತಿದ್ದೀರಿ. ಸರ್ವಪಕ್ಷ ಸಭೆಯಲ್ಲೇ ಖಾಸಗಿ ಆಸ್ಪತ್ರೆಗಳ ಜತೆ ಮಾತನಾಡಿ ಎಂದು ನಾವು ಹೇಳಿರಲಿಲ್ಲವೇ? ಎಂದು ರಾಜ್ಯ ಸರ್ಕಾರವನ್ನು ನೆನಪಿಸಿದ್ದಾರೆ.

ಕೊರೋನ ರೋಗಕ್ಕಿಂತ ರಾಜ್ಯಕ್ಕೆ ಬಿಜೆಪಿ ಭ್ರಷ್ಟಾಚಾರವೇ ದೊಡ್ಡ ರೋಗವಾಗಿದೆ. ರಾಜ್ಯದ ಪಾಲಿಗೆ ಬಿಜೆಪಿ ಸರ್ಕಾರ ದೊಡ್ಡ ಶಾಪವಾಗಿದೆ. ಮುಖ್ಯಮಂತ್ರಿಗಳು ಲಾಕ್‌ಡೌನ್ ಬೇಕಾಗಿಲ್ಲ ಎಂದು ಹೇಳುತ್ತಿದ್ದಾರೆ. ಮತ್ತೆ ಯಾಕೆ ಲಾಕ್ ಡೌನ್ ಮಾಡಿದ್ದೀರಿ? ಲಾಕ್‌ಡೌನ್ ಮಾಡಿ ಯಾವ ತಯಾರಿ ಮಾಡಿಕೊಂಡಿರಿ? ನಿಮ್ಮ ಕಾರ್ಯಯೋಜನೆ ಏನು? ಈ ಪರಿಸ್ಥಿತಿಯನ್ನು ನಿಭಾಯಿಸಲು ಯಾವ ಕಾರ್ಯತಂತ್ರ ಮಾಡುತ್ತೀರಿ ಎಂದು ಇಂದಿನವರೆಗೂ ಹೇಳಿಲ್ಲ. ಸರ್ಕಾರದ ನೀತಿಗಳು ನಿಶ್ಯಕ್ತವಾಗಿವೆ ಎಂದು ಹೇಳಿದರು.

ಕೋಟ್ಯಂತರ ರೂಪಾಯಿ ಸಾಲ ಪಡೆದಿದ್ದೇರಿ. ಕೇಂದ್ರ ಸರ್ಕಾರ ಘೋಷಿಸಿದ 20 ಲಕ್ಷ ಕೋಟಿ ರೂ. ಪ್ಯಾಕೇಜ್, ನೀವು ಘೋಷಿಸಿದ 1600 ಕೋಟಿ ಪ್ಯಾಕೇಜ್ ಎಲ್ಲವನ್ನೂ ಲೆಕ್ಕ ಕೊಡಿ. ಕೇಳುತ್ತಿರುವ ಪ್ರಶ್ನೆಗಳಿಗೆ ಸರ್ಕಾರ ಮಾಧ್ಯಮಗಳಿಗೆ, ರಾಜ್ಯದ ಜನರಿಗೆ, ಕಾರ್ಮಿಕರಿಗೆ ಉತ್ತರ ನೀಡಲಿ ಎಂದು ಅವರು ಆಗ್ರಹಿಸಿದರು.

ಸಿದ್ದರಾಮಯ್ಯ ಅವರಿಗೆ ಬಂದು ಲೆಕ್ಕ ನೋಡಿ ಅಂತಿರಲ್ಲಾ, ಸಾರ್ವಜನಿಕ ಲೆಕ್ಕ ಸಮಿತಿಯಲ್ಲಿ ಎಲ್ಲ ಪಕ್ಷದವರೂ ಇದ್ದಾರೆ. ಅವರಿಗೆ ಪರಿಶೀಲಿಸಲು ಅವಕಾಶ ನೀಡಿ. ನೀವು ಪ್ರಾಮಾಣಿಕ ಹಾಗೂ ಪಾರದರ್ಶಕವಾಗಿದ್ದರೆ ಇವರಿಗೆ ತನಿಖೆಗೆ ಅವಕಾಶ ನೀಡಿ ಎಂದು ಒತ್ತಾಯಿಸಿದರು.

ಆಶಾ ಕಾರ್ಯಕರ್ತೆಯರು 16 ದಿನಗಳಿಂದ ಪ್ರತಿಭಟನೆ ಮಾಡುತ್ತಿದ್ದಾರೆ. ಇವರಿಗೆ 3 ಸಾವಿರ ರೂ. ಪ್ರೋತ್ಸಾಹ ಧನ ನೀಡುವುದಾಗಿ ಹೇಳಿದ್ದೀರಿ. 42 ಸಾವಿರ ಆಶಾ ಕಾರ್ಯಕರ್ತರಲ್ಲಿ ಶೇ.10 ರಷ್ಟು ಮಂದಿಗೆ ಪರಿಹಾರ ಕೊಟ್ಟಿಲ್ಲ. ಮೂರು ತಿಂಗಳು ಇವರು ತಮ್ಮ ಪ್ರಾಣ ಪಣಕ್ಕಿಟ್ಟು ಮನೆ ಮನೆಗೆ ಹೋಗಿ ನಿಮಗೆ ಮಾಹಿತಿ ಸಂಗ್ರಹಿಸಿಕೊಟ್ಟಿದ್ದರಲ್ಲ. ಅವರಿಗೆ ಚೆಕ್ ಬರೆದು ಕೊಡಲು ಏನು ಸಮಸ್ಯೆ? ಪೌರ ಕಾರ್ಮಿಕರಿಗೆ ವಿಮೆ ಕೊಟ್ಟಿದ್ದೀರಾ? ರೈತರಿಗೆ ಯಾವ ಮಾರುಕಟ್ಟೆ ಒದಗಿಸಿಕೊಟ್ಟಿರಿ? ಎಷ್ಟು ಬೆಳೆ ಖರೀದಿಸಿದಿರಿ? ಯಾರಿಗೆ ಕೊಟ್ಟಿದ್ದೀರಿ? ಎಂದು ಪ್ರಶ್ನೆ ಮಾಡಿದರು.

ಸರ್ಕಾರ 21 ದಿನಗಳಲ್ಲಿ ಕೊರೋನ ವಿರುದ್ಧ ಗೆಲ್ಲುತ್ತೇವೆ ಎಂದಿತ್ತು. ನಾವು ಕೂಡ ಅವರಿಗೆ ಸಹಕಾರ ಕೊಟ್ಟಿದ್ದೇವೆ. 121 ದಿನವಾಗಿದೆ, ಆದರೆ ಪರಿಹಾರ ಸಿಕ್ಕಿದೆಯೇ? ಪಿಪಿಇ ಕಿಟ್, ವೆಂಟಲೇಟರ್ ಸೇರಿ ಎಲ್ಲದರಲ್ಲೂ ಹಣ ಮಾಡಿದ ಸರ್ಕಾರ, ಈಗ ಹೆಣದ ಹೆಸರಲ್ಲೂ ಹಣ ಮಾಡಲು ನಿಂತಿದೆ. ದೇಶದಲ್ಲೇ ಕರ್ನಾಟಕವನ್ನು ಕಪ್ಪು ಚುಕ್ಕೆಯನ್ನಾಗಿ ಮಾಡಿದ್ದಾರೆ ಎಂದು ಡಿ. ಕೆ. ಶಿವಕುಮಾರ್‌ ತಿಳಿಸಿದ್ದಾರೆ.


ಓದಿ: ಕೊರೊನಾದಿಂದ ದೇವರೆ ಕಾಪಾಡುವುದಾದರೆ ನೀವು ಯಾಕೆ ? ರಾಜಿನಾಮೆ ಕೊಟ್ಟು ಹೋಗಿ: ಡಿ. ಕೆ. ಶಿವಕುಮಾರ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...