Homeರಾಷ್ಟ್ರೀಯನವೆಂಬರ್‌ 26ರ ಸಂವಿಧಾನ ದಿನವನ್ನು ‘ಜಾತಿ ಪದ್ದತಿ ಸಮರ್ಥನೆ & ವೈಭವೀಕರಣ’ ದಿನವಾಗಿ ಆಚರಿಸಲು ಬಿಜೆಪಿ...

ನವೆಂಬರ್‌ 26ರ ಸಂವಿಧಾನ ದಿನವನ್ನು ‘ಜಾತಿ ಪದ್ದತಿ ಸಮರ್ಥನೆ & ವೈಭವೀಕರಣ’ ದಿನವಾಗಿ ಆಚರಿಸಲು ಬಿಜೆಪಿ ಸರ್ಕಾರದಿಂದ ತಯಾರಿ!

- Advertisement -
- Advertisement -

ಬಿಜೆಪಿಯ ನರೇಂದ್ರ ಮೋದಿ ನೇತೃತ್ವದ ಒಕ್ಕೂಟ ಸರ್ಕಾರ ನವೆಂಬರ್‌ 26ರ ಸಂವಿಧಾನ ದಿನವನ್ನು ‘‘ಸಂವಿಧಾನ ಸಮರ್ಪಣಾ ದಿನ”ವೆಂದು ಕರೆದಿದ್ದು, ಈ ವರ್ಷದ ಆಚರಣೆಯನ್ನು “ಭಾರತ – ಪ್ರಜಾತಂತ್ರದ ಜನನಿ” ಎಂಬ ಹೆಸರಿನಲ್ಲಿ ಆಚರಿಸುವಂತೆ ಸೂಚಿಸಿದೆ. ಪ್ರಜಾಪ್ರಭುತ್ವದ ಮಹತ್ವದ ಬಗ್ಗೆ ಜಾಗೃತಿ ಮೂಡಿಸಬೇಕಾಗಿದ್ದ ದಿನದಂದು ಒಕ್ಕೂಟ ಸರ್ಕಾರವು ಸುಳ್ಳು ನಿರೂಪಣೆ ಮೂಲಕ “ಭಾರತದ ಜಾತಿ ಪದ್ದತಿಯ ಸಮರ್ಥನೆ ಮತ್ತು ವೈಭವೀಕರಣ’’ ನಡೆಸುತ್ತಿದೆ ಎಂಬ ಅರೋಪ ವ್ಯಕ್ತವಾಗಿದೆ.

ನವಂಬರ್ 9ರಂದು ಬಿಜೆಪಿ ಸರ್ಕಾರದ ಕ್ಯಾಬಿನೆಟ್‌ ಸೆಕ್ರೆಟರಿ ಅವರು ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಎಲ್ಲಾ ಕಚೇರಿ ಹಾಗೂ ವಿಶ್ವವಿದ್ಯಾಲಯಗಳಿಗೆ ಪತ್ರ ಬರೆದು, ಈ ಬಾರಿಯ ನವೆಂಬರ್‌ 26ರ ಸಂವಿಧಾನ ಸಮರ್ಪಣಾ ದಿನವನ್ನು “ಭಾರತ – ಪ್ರಜಾತಂತ್ರದ ಜನನಿ” ಎಂಬ ಹೆಸರಿನಲ್ಲಿ “ಜಗತ್ತಿನಲ್ಲಿರುವ ಪ್ರಜಾಪ್ರಭುತ್ವ ಹುಟ್ಟಿದ್ದು ಭಾರತದಲ್ಲಾಗಿದೆ” ಎಂಬ ವಿಷಯವನ್ನು ಸಮರ್ಥಿಸಿಕೊಂಡು ದೇಶಾದ್ಯಂತ ಆಚರಿಸಬೇಕೆಂದು ಸೂಚಿಸಿದೆ. ಇಷ್ಟೆ ಅಲ್ಲದೆ ಈ ಆಚರಣೆಯನ್ನು ಹೇಗೆ ಆಚರಿಸಬೇಕು ಎಂದು ಇಂಡಿಯನ್ ಕೌನ್ಸಿಲ್ ಫಾರ್ ಹಿಸ್ಟಾರಿಕಲ್ ರಿಸರ್ಚ್ (ICHR) ತಯಾರಿಸಿರುವ ಟಿಪ್ಪಣಿಯನ್ನು ನೀಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ICHR ತಯಾರಿಸಿರುವ ಈ ಟಿಪ್ಪಣಿಯೆ ಇದೀಗ ವಿವಾದದ ಕೇಂದ್ರ ಬಿಂದುವಾಗಿದ್ದು, ದೇಶವು ಶತಮಾನಗಳ ಕಾಲದಿಂದಲೂ ನರಳುತ್ತಿರುವ ಜಾತಿ ಪದ್ದತಿಯನ್ನು ಇತಿಹಾಸದ ಸುಳ್ಳು ನಿರೂಪಣೆಯೊಂದಿಗೆ ಇದರಲ್ಲಿ ಹೇಳಲಾಗಿದೆ.

ICHR ಟಿಪ್ಪಣಿಯಲ್ಲಿ ಏನಿದೆ?

ವೇದ, ಪುರಾಣ, ಉಪನಿಷತ್‌, ಭಗವದ್ಗೀತೆ ಕಾಲದಲ್ಲೆ ಭಾರತದಲ್ಲಿ ಪ್ರಜಾಪ್ರಭುತ್ವ ಇತ್ತು. 2 ಸಾವಿರ ವರ್ಷಗಳಿಂದ ನಡೆಯುತ್ತಿರುವ ವಿದೇಶಿ ದಾಳಿಗಳ ನಡುವೆಯು ಪಂಚಾಯತಿ ಕಟ್ಟೆ, ಖಾಪ್ ಪಂಚಾಯತ್‌‌‌ ಈ ಪ್ರಜಾಪ್ರಭುತ್ವನ್ನು ಹಿಂದೂ ಸಂಸ್ಕೃತಿ ಉಳಿಸಿಕೊಂಡು ಬಂದಿದೆ ಎಂದು ICHR ಟಿಪ್ಪಣಿಯಲ್ಲಿ ಹೇಳಿದೆ.

ಅದಾಗ್ಯೂ, ಖಾಪ್‌ ಪಂಚಾಯತ್‌ಗಳು ಜಾತಿ ಶ್ರೇಣೀಕೃತ ವ್ಯವಸ್ಥೆಯ ಭಾಗವಾಗಿದ್ದು ಇಂದಿಗೂ ಅವು ಭಾರತದಲ್ಲಿ ಜಾತಿ ಪದ್ದತಿಯನ್ನು ಉಳಿಯುವ ನಿಟ್ಟಿನಲ್ಲಿ ಕೆಲಸ ಮಾಡುತ್ತಲೆ, ಜಾತಿ ದೌರ್ಜನ್ಯ ಎಸಗುತ್ತಲೆ ಇವೆ ಸಾಬೀತಾಗಿದೆ. ಇತ್ತೀಚೆಗೆ ರಾಜಸ್ಥಾನದಲ್ಲಿ ಕೂಡಾ ಇವುಗಳು ಹೆಣ್ಣು ಮಕ್ಕಳನ್ನು ಮತ್ತು ಮಹಿಳೆಯವನ್ನು ಹಣಕ್ಕಾಗಿ ಮಾರಾಟ ಮಾಡಿರುವ ಬಗ್ಗೆ ಕೂಡಾ ವರದಿಯಾಗಿತ್ತು. ಇದನ್ನೂ ಓದಿ: ರಾಜಸ್ಥಾನ: ಸಾಲ ತೀರಿಸಲು ಹುಡುಗಿಯರ ಮಾರಾಟ; ನಿರಾಕರಿಸಿದರೆ ಜಾತಿ ಮಂಡಳಿಗಳ ಆದೇಶದ ಮೇರೆಗೆ ಅವರ ತಾಯಿಯ ಮೇಲೆ ಅತ್ಯಾಚಾರ!

ಚಿಂತಕ ಶಿವಸುಂದರ್‌ ಅವರು, “ಇದು ಆರೆಸ್ಸೆಸ್ ಸರಸಂಘಚಾಲಕ ಗೋಲ್ವಾಲ್ಕರ್ ಪ್ರತಿಪಾದನೆಯಾಗಿದೆ. ಅವರು, ‘ಜಾತಿ ವ್ಯವಸ್ಥೆಯೇ ಈ ದೇಶದ ಅಸ್ಮಿತೆ. ಅದು ಸಡಿಲವಾಗಿದ್ದರಿಂದಲೇ ಭಾರತದ ಈಶಾನ್ಯ ಮತ್ತು ವಾಯುವ್ಯ ಪ್ರಾಂತ್ಯಗಳಲ್ಲಿ ಪರದೇಸಿ ಧರ್ಮಗಳು ನೆಲಸುವಂತಾಯಿತು’ ಎಂದು ಅವರ ಬಂಚ್ ಆಫ್‌ ಥಾಟ್ಸ್‌‌ನಲ್ಲಿ ಬರೆದುಕೊಂಡಿದ್ದಾರೆ. ಈಗ ಮೋದಿ ಸರ್ಕಾರ ಯಥಾವತ್ ಅದೇ ಮಾತನ್ನು ಸಂವಿಧಾನ ದಿನದಂದು ಪ್ರಚಾರ ಮಾಡುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಷ್ಟೆ ಅಲ್ಲದೆ, ಇತಿಹಾಸದ ಬಗ್ಗೆ ಸಂಶೋಧನೆ ನಡೆಸುವ ಸಂಸ್ಥೆಯಾಗಿರುವ ICHR ಬಿಹಾರದ ರಾಖಿಗರಿಯಲ್ಲಿ ಇತ್ತೀಚೆಗೆ ನಡೆದ ಸಂಶೋಧನೆಯ ಬಗ್ಗೆ ತನ್ನ ಟಿಪ್ಪಣಿಯಲ್ಲಿ ಸುಳ್ಳು ಬರೆದುಕೊಂಡಿದೆ. ICHR ತನ್ನ ಟಿಪ್ಪಣಿಯಲ್ಲಿ, “ಇತ್ತೀಚಿಗೆ ರಾಖಿಗರಿ ಸಂಶೋಧನೆಯಲ್ಲೂ ಭಾರತದ ವೈದಿಕ ನಾಗರೀಕತೆ 5 ಸಾವಿರ ವರ್ಷಗಳಷ್ಟು ಹಿಂದಿನದ್ದೆಂದೂ, ಆ ಕಾಲದಲ್ಲೂ ಪ್ರಜಾತಾಂತ್ರಿಕ ವ್ಯವಸ್ಥೆ ಇತ್ತೆಂದು ಸಾಬೀತಾಗಿದೆ” ಎಂದು ಉಲ್ಲೇಖಿಸಿದೆ.

ಆದರೆ ವಾಸ್ತವದಲ್ಲಿ, ರಾಖಿಗರಿ ಸಂಶೋಧನೆಯು ಹರಪ್ಪಾ ನಾಗರಿಕತೆಗೂ ವೇದ ನಾಗರಿಕತೆಯ ಆರ್ಯರಿಗೂ ಸಂಬಂಧವಿಲ್ಲ ಎಂದು ಸಾಬೀತಾಗಿದೆ. ರಾಖಿಗರಿ ನಾಗರಿಕರೆ ದ್ರಾವಿಡ ನಾಗರೀಕತೆಯೆ ಹೊರತು ವೇದ ನಾಗರಿಕತೆಯಲ್ಲ ಎಂದು ಸಂಶೋಧನೆ ಸಾಬೀತು ಮಾಡಿದೆ. ರಾಖಿಗರಿಯಲ್ಲಿ ಪತ್ತೆಯಾದ ಅಸ್ಥಿಪಂಜರದ DNA ಇದನ್ನ ಪುಷ್ಠಿಕರಿಸಿದ್ದು, ಸಿಂಧೂ ಕಣಿವೆ ನಾಗರಿಕತೆಯನ್ನು ಕಟ್ಟಿರುವವರು ‘ಋಗ್ವೇದ ಕಾಲದ ಆರ್ಯ’ರಲ್ಲ ಎಂಬುದನ್ನು ಈ ಸಂಶೋಧನೆ ಹೇಳಿದೆ. ಇದನ್ನೂ ಓದಿ: ಸಿಂಧೂ ನದಿ ನಾಗರಿಕತೆ ನಿರ್ಮಾಣದಲ್ಲಿ ಸ್ಟೆಪ್ ಮೂಲದ ಆರ್ಯ ವೈದಿಕರ ಪಾತ್ರವಿಲ್ಲ: ಅದನ್ನು ಕಟ್ಟಿದವರು ದಕ್ಷಿಣ ಏಷಿಯನ್ನರು

ಇಷ್ಟೆ ಅಲ್ಲದೆ ICHR ತನ್ನ ಟಿಪ್ಪಣಿಯಲ್ಲಿ ಭಗವದ್ಗೀತೆಯನ್ನು ತಪ್ಪಾಗಿ ವೈಭವೀಕರಿಸಿದ್ದು, “ಭಗವದ್ಗೀತೆ ವೇದದ ಪ್ರಜಾತಾಂತ್ರಿಕತೆಯ ಭಾಗವಾಗಿ ಮಾನವನ ನಡತೆಯಲ್ಲಿ ಜ್ಞಾನ, ಶ್ರದ್ಧೆ , ಕ್ರಿಯೆ ಮತ್ತು ಗುಣಗಳು ವ್ಯಕ್ತವಾಗಬೇಕು ಎಂದು ಪ್ರತಿಪಾದಿಸುತ್ತದೆ” ಎಂದು ಬರೆದಿದೆ.

ಇದನ್ನು ವಿರೋಧಿಸಿರುವ ಶಿವಸುಂದರ್‌ ಅವರು, “ಅಂಬೇಡ್ಕರ್ ಅವರು ಸ್ಪಷ್ಟಪಡಿಸುವಂತೆ , ಭಗವದ್ಗೀತೆಯು ಜಾತಿ ಆಧಾರಿತ ಶ್ರೇಣೀಕರಣವನ್ನು ಪ್ರತಿಪಾದಿಸುವ ಮನುಸ್ಮೃತಿಯ ತಾತ್ವಿಕ ಸಮರ್ಥನೆಯಾಗಿದೆ. ಅದರಲ್ಲಿ ಭೋಧಿಸಲಾಗಿರುವ ಜ್ಞಾನ, ಗುಣ ಮತ್ತು ಕ್ರಿಯೆಗಳೆಲ್ಲವೂ ಹುಟ್ಟಿನಿಂದಲೇ ತೀರ್ಮಾನವಾಗಿರುತ್ತದೆ ಎಂಬ ಜಾತಿ ಶ್ರೇಣೀಕರಣದ ತಾರತಮ್ಯ ತತ್ವವನ್ನೇ ಹೇಳುತ್ತದೆ” ಎಂದು ಹೇಳಿದ್ದಾರೆ. ಮೋದಿ ಸರ್ಕಾರ ಇದನ್ನು ಭಾರತದ ಸನಾತನ ಪ್ರಜಾತಂತ್ರ ಎಂದು ಆಚರಿಸಲು ಆದೇಶಿಸುತ್ತಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇಷ್ಟೆ ಅಲ್ಲದೆ, ಭಾರತದಲ್ಲಿ ಹುಟ್ಟಿನ ಆಧಾರದಲ್ಲಿ ಸಂಪತ್ತು, ಜ್ಞಾನ ಮತ್ತು ರಾಜ್ಯಅಧಿಕಾರಗಳು ಒಂದೆಡೆ ಕೇಂದ್ರೀಕರಣಗೊಂಡಿಲ್ಲ ಎಂದು ICHR ತನ್ನ ಟಿಪ್ಪಣಿಯಲ್ಲಿ ಉಲ್ಲೇಖಿಸಿದ್ದು, “ಇದು ಜಗತ್ತಿನ ಇತರ ಪ್ರಾಚೀನ ಪ್ರಜಾತಂತ್ರಗಳಾದ ಗ್ರೀಸ್ ಮತ್ತು ರೋಮನ್ ಪ್ರಜಾತಂತ್ರಕ್ಕೂ ಭಾರತದ ವೈದಿಕ ಪ್ರಜಾತಂತ್ರಕ್ಕೂ ಇದ್ದ ದೊಡ್ಡ ವ್ಯತ್ಯಾಸವಾಗಿದೆ” ಎಂದು ಹೇಳಿದೆ.

ಇದರ ಬಗ್ಗೆ ಆಶ್ಚರ್ಯ ವ್ಯಕ್ತಪಡಿಸಿದ ಶಿವಸುಂದರ್‌ ಅವರು, “ಇದಕ್ಕಿಂತ ದೊಡ್ಡ ಸುಳ್ಳು ಮತ್ತೊಂದು ಇರಬಹುದೇ? ಜಗತ್ತಿನಲ್ಲಿ ಬೇರೆಲ್ಲೂ ಇಲ್ಲದ ಹುಟ್ಟಿನ ಆಧಾರದ ಜಾತಿ ವ್ಯವಸ್ಥೆ, ಜಾತಿ ತಾರತಮ್ಯ ಇರುವುದು ಭಾರತದ ಬ್ರಾಹ್ಮಣಿಯ ಸಾಮಾಜಿಕ ವ್ಯವಸ್ಥೆಯಲ್ಲಿ ಮಾತ್ರ. ಸಂಪತ್ತು, ಅಧಿಕಾರ ಮತ್ತು ಜ್ಞಾನವನ್ನು ದಲಿತರಿಂದ ಮತ್ತು ಶೂದ್ರರಿಂದ, ಮಹಿಳೆಯರಿಂದ ಕಸಿದು ಕೇವಲ ಬ್ರಾಹ್ಮಣಿಯ ಮೇಲ್ಜಾತಿಗಳ ಖಾಸಗಿ ಆಸ್ತಿಯನ್ನಾಗಿ ಮಾಡಿದ್ದು ಭಾರತದ ವೇದ-ಪುರಾಣ-ಶಾಸ್ತ್ರ-ಸ್ಮೃತಿ-ಶ್ರುತಿ ಗಳನ್ನಾಧರಿಸಿದ ಈ ದೇಶದ ಹಿಂದೂ ಬ್ರಾಹ್ಮಣಿಯ ಜಾತಿ ವ್ಯವಸ್ಥೆಯಾಗಿದೆ” ಎಂದು ಹೇಳಿದ್ದಾರೆ. ಇದನ್ನೂ ಓದಿ: ಸಿಂಧೂ ನಾಗರಿಕತೆ ಕುರಿತ ವಿಜ್ಞಾನದ ಹೊಸ ಸಂಶೋಧನೆಗಳೂ… ಸತ್ಯ ತಿರುಚುವ ಪತ್ರಿಕೆಗಳೂ… ಸುಳ್ಳು ಹೇಳಿತೇಕೆ ವಿಜಯ ಕರ್ನಾಟಕ

ಚಿಂತಕ ಶಿವಸುಂದರ್‌ ಅವರು ವೈರಲ್ ಬರಹವನ್ನು ಓದಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಭಾರತ ಪ್ರಜಾತಂತ್ರದ ಜನನಿ ನವಂಬರ್ 26 ಆಚರಣೆಗಳು ಇವೆಲ್ಲವೂ ಮುಂದಿನ ಚುನಾವಣೆಯನ್ನ ಎದುರಿಟ್ಟುಕೊಂಡು ಮಾಡುವ ಆಚರಣೆಗಳ ವಿನಹ ಭಾರತದಲ್ಲಿ ನರಳಾಡುವ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳನ್ನ ಮೇಲೆತ್ತುವ ಕೆಲಸವಾಗಲಿ ಇತರ ಅಭಿವೃದ್ಧಿ ಕೆಲಸವಾಗಲಿ, ನಗಣ್ಯ ಈ ಸರಕಾರಕ್ಕೆ ಎಲ್ಲವೂ ನಾವೆಲ್ಲ ನೋಡುವಾಗ ಇದು ಪ್ರಜಾಪ್ರಭುತ್ವ ರಾಷ್ಟ್ರವಾಗದೆ ಏಕಪ್ರಭುತ್ವ ರಾಷ್ಟ್ರವಾಗಿದೆ ಅಂತ ನನಗನಿಸುತ್ತದೆ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...