Homeರಾಷ್ಟ್ರೀಯನವೆಂಬರ್‌ 26ರ ಸಂವಿಧಾನ ದಿನವನ್ನು ‘ಜಾತಿ ಪದ್ದತಿ ಸಮರ್ಥನೆ & ವೈಭವೀಕರಣ’ ದಿನವಾಗಿ ಆಚರಿಸಲು ಬಿಜೆಪಿ...

ನವೆಂಬರ್‌ 26ರ ಸಂವಿಧಾನ ದಿನವನ್ನು ‘ಜಾತಿ ಪದ್ದತಿ ಸಮರ್ಥನೆ & ವೈಭವೀಕರಣ’ ದಿನವಾಗಿ ಆಚರಿಸಲು ಬಿಜೆಪಿ ಸರ್ಕಾರದಿಂದ ತಯಾರಿ!

- Advertisement -
- Advertisement -

ಬಿಜೆಪಿಯ ನರೇಂದ್ರ ಮೋದಿ ನೇತೃತ್ವದ ಒಕ್ಕೂಟ ಸರ್ಕಾರ ನವೆಂಬರ್‌ 26ರ ಸಂವಿಧಾನ ದಿನವನ್ನು ‘‘ಸಂವಿಧಾನ ಸಮರ್ಪಣಾ ದಿನ”ವೆಂದು ಕರೆದಿದ್ದು, ಈ ವರ್ಷದ ಆಚರಣೆಯನ್ನು “ಭಾರತ – ಪ್ರಜಾತಂತ್ರದ ಜನನಿ” ಎಂಬ ಹೆಸರಿನಲ್ಲಿ ಆಚರಿಸುವಂತೆ ಸೂಚಿಸಿದೆ. ಪ್ರಜಾಪ್ರಭುತ್ವದ ಮಹತ್ವದ ಬಗ್ಗೆ ಜಾಗೃತಿ ಮೂಡಿಸಬೇಕಾಗಿದ್ದ ದಿನದಂದು ಒಕ್ಕೂಟ ಸರ್ಕಾರವು ಸುಳ್ಳು ನಿರೂಪಣೆ ಮೂಲಕ “ಭಾರತದ ಜಾತಿ ಪದ್ದತಿಯ ಸಮರ್ಥನೆ ಮತ್ತು ವೈಭವೀಕರಣ’’ ನಡೆಸುತ್ತಿದೆ ಎಂಬ ಅರೋಪ ವ್ಯಕ್ತವಾಗಿದೆ.

ನವಂಬರ್ 9ರಂದು ಬಿಜೆಪಿ ಸರ್ಕಾರದ ಕ್ಯಾಬಿನೆಟ್‌ ಸೆಕ್ರೆಟರಿ ಅವರು ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಎಲ್ಲಾ ಕಚೇರಿ ಹಾಗೂ ವಿಶ್ವವಿದ್ಯಾಲಯಗಳಿಗೆ ಪತ್ರ ಬರೆದು, ಈ ಬಾರಿಯ ನವೆಂಬರ್‌ 26ರ ಸಂವಿಧಾನ ಸಮರ್ಪಣಾ ದಿನವನ್ನು “ಭಾರತ – ಪ್ರಜಾತಂತ್ರದ ಜನನಿ” ಎಂಬ ಹೆಸರಿನಲ್ಲಿ “ಜಗತ್ತಿನಲ್ಲಿರುವ ಪ್ರಜಾಪ್ರಭುತ್ವ ಹುಟ್ಟಿದ್ದು ಭಾರತದಲ್ಲಾಗಿದೆ” ಎಂಬ ವಿಷಯವನ್ನು ಸಮರ್ಥಿಸಿಕೊಂಡು ದೇಶಾದ್ಯಂತ ಆಚರಿಸಬೇಕೆಂದು ಸೂಚಿಸಿದೆ. ಇಷ್ಟೆ ಅಲ್ಲದೆ ಈ ಆಚರಣೆಯನ್ನು ಹೇಗೆ ಆಚರಿಸಬೇಕು ಎಂದು ಇಂಡಿಯನ್ ಕೌನ್ಸಿಲ್ ಫಾರ್ ಹಿಸ್ಟಾರಿಕಲ್ ರಿಸರ್ಚ್ (ICHR) ತಯಾರಿಸಿರುವ ಟಿಪ್ಪಣಿಯನ್ನು ನೀಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ICHR ತಯಾರಿಸಿರುವ ಈ ಟಿಪ್ಪಣಿಯೆ ಇದೀಗ ವಿವಾದದ ಕೇಂದ್ರ ಬಿಂದುವಾಗಿದ್ದು, ದೇಶವು ಶತಮಾನಗಳ ಕಾಲದಿಂದಲೂ ನರಳುತ್ತಿರುವ ಜಾತಿ ಪದ್ದತಿಯನ್ನು ಇತಿಹಾಸದ ಸುಳ್ಳು ನಿರೂಪಣೆಯೊಂದಿಗೆ ಇದರಲ್ಲಿ ಹೇಳಲಾಗಿದೆ.

ICHR ಟಿಪ್ಪಣಿಯಲ್ಲಿ ಏನಿದೆ?

ವೇದ, ಪುರಾಣ, ಉಪನಿಷತ್‌, ಭಗವದ್ಗೀತೆ ಕಾಲದಲ್ಲೆ ಭಾರತದಲ್ಲಿ ಪ್ರಜಾಪ್ರಭುತ್ವ ಇತ್ತು. 2 ಸಾವಿರ ವರ್ಷಗಳಿಂದ ನಡೆಯುತ್ತಿರುವ ವಿದೇಶಿ ದಾಳಿಗಳ ನಡುವೆಯು ಪಂಚಾಯತಿ ಕಟ್ಟೆ, ಖಾಪ್ ಪಂಚಾಯತ್‌‌‌ ಈ ಪ್ರಜಾಪ್ರಭುತ್ವನ್ನು ಹಿಂದೂ ಸಂಸ್ಕೃತಿ ಉಳಿಸಿಕೊಂಡು ಬಂದಿದೆ ಎಂದು ICHR ಟಿಪ್ಪಣಿಯಲ್ಲಿ ಹೇಳಿದೆ.

ಅದಾಗ್ಯೂ, ಖಾಪ್‌ ಪಂಚಾಯತ್‌ಗಳು ಜಾತಿ ಶ್ರೇಣೀಕೃತ ವ್ಯವಸ್ಥೆಯ ಭಾಗವಾಗಿದ್ದು ಇಂದಿಗೂ ಅವು ಭಾರತದಲ್ಲಿ ಜಾತಿ ಪದ್ದತಿಯನ್ನು ಉಳಿಯುವ ನಿಟ್ಟಿನಲ್ಲಿ ಕೆಲಸ ಮಾಡುತ್ತಲೆ, ಜಾತಿ ದೌರ್ಜನ್ಯ ಎಸಗುತ್ತಲೆ ಇವೆ ಸಾಬೀತಾಗಿದೆ. ಇತ್ತೀಚೆಗೆ ರಾಜಸ್ಥಾನದಲ್ಲಿ ಕೂಡಾ ಇವುಗಳು ಹೆಣ್ಣು ಮಕ್ಕಳನ್ನು ಮತ್ತು ಮಹಿಳೆಯವನ್ನು ಹಣಕ್ಕಾಗಿ ಮಾರಾಟ ಮಾಡಿರುವ ಬಗ್ಗೆ ಕೂಡಾ ವರದಿಯಾಗಿತ್ತು. ಇದನ್ನೂ ಓದಿ: ರಾಜಸ್ಥಾನ: ಸಾಲ ತೀರಿಸಲು ಹುಡುಗಿಯರ ಮಾರಾಟ; ನಿರಾಕರಿಸಿದರೆ ಜಾತಿ ಮಂಡಳಿಗಳ ಆದೇಶದ ಮೇರೆಗೆ ಅವರ ತಾಯಿಯ ಮೇಲೆ ಅತ್ಯಾಚಾರ!

ಚಿಂತಕ ಶಿವಸುಂದರ್‌ ಅವರು, “ಇದು ಆರೆಸ್ಸೆಸ್ ಸರಸಂಘಚಾಲಕ ಗೋಲ್ವಾಲ್ಕರ್ ಪ್ರತಿಪಾದನೆಯಾಗಿದೆ. ಅವರು, ‘ಜಾತಿ ವ್ಯವಸ್ಥೆಯೇ ಈ ದೇಶದ ಅಸ್ಮಿತೆ. ಅದು ಸಡಿಲವಾಗಿದ್ದರಿಂದಲೇ ಭಾರತದ ಈಶಾನ್ಯ ಮತ್ತು ವಾಯುವ್ಯ ಪ್ರಾಂತ್ಯಗಳಲ್ಲಿ ಪರದೇಸಿ ಧರ್ಮಗಳು ನೆಲಸುವಂತಾಯಿತು’ ಎಂದು ಅವರ ಬಂಚ್ ಆಫ್‌ ಥಾಟ್ಸ್‌‌ನಲ್ಲಿ ಬರೆದುಕೊಂಡಿದ್ದಾರೆ. ಈಗ ಮೋದಿ ಸರ್ಕಾರ ಯಥಾವತ್ ಅದೇ ಮಾತನ್ನು ಸಂವಿಧಾನ ದಿನದಂದು ಪ್ರಚಾರ ಮಾಡುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಷ್ಟೆ ಅಲ್ಲದೆ, ಇತಿಹಾಸದ ಬಗ್ಗೆ ಸಂಶೋಧನೆ ನಡೆಸುವ ಸಂಸ್ಥೆಯಾಗಿರುವ ICHR ಬಿಹಾರದ ರಾಖಿಗರಿಯಲ್ಲಿ ಇತ್ತೀಚೆಗೆ ನಡೆದ ಸಂಶೋಧನೆಯ ಬಗ್ಗೆ ತನ್ನ ಟಿಪ್ಪಣಿಯಲ್ಲಿ ಸುಳ್ಳು ಬರೆದುಕೊಂಡಿದೆ. ICHR ತನ್ನ ಟಿಪ್ಪಣಿಯಲ್ಲಿ, “ಇತ್ತೀಚಿಗೆ ರಾಖಿಗರಿ ಸಂಶೋಧನೆಯಲ್ಲೂ ಭಾರತದ ವೈದಿಕ ನಾಗರೀಕತೆ 5 ಸಾವಿರ ವರ್ಷಗಳಷ್ಟು ಹಿಂದಿನದ್ದೆಂದೂ, ಆ ಕಾಲದಲ್ಲೂ ಪ್ರಜಾತಾಂತ್ರಿಕ ವ್ಯವಸ್ಥೆ ಇತ್ತೆಂದು ಸಾಬೀತಾಗಿದೆ” ಎಂದು ಉಲ್ಲೇಖಿಸಿದೆ.

ಆದರೆ ವಾಸ್ತವದಲ್ಲಿ, ರಾಖಿಗರಿ ಸಂಶೋಧನೆಯು ಹರಪ್ಪಾ ನಾಗರಿಕತೆಗೂ ವೇದ ನಾಗರಿಕತೆಯ ಆರ್ಯರಿಗೂ ಸಂಬಂಧವಿಲ್ಲ ಎಂದು ಸಾಬೀತಾಗಿದೆ. ರಾಖಿಗರಿ ನಾಗರಿಕರೆ ದ್ರಾವಿಡ ನಾಗರೀಕತೆಯೆ ಹೊರತು ವೇದ ನಾಗರಿಕತೆಯಲ್ಲ ಎಂದು ಸಂಶೋಧನೆ ಸಾಬೀತು ಮಾಡಿದೆ. ರಾಖಿಗರಿಯಲ್ಲಿ ಪತ್ತೆಯಾದ ಅಸ್ಥಿಪಂಜರದ DNA ಇದನ್ನ ಪುಷ್ಠಿಕರಿಸಿದ್ದು, ಸಿಂಧೂ ಕಣಿವೆ ನಾಗರಿಕತೆಯನ್ನು ಕಟ್ಟಿರುವವರು ‘ಋಗ್ವೇದ ಕಾಲದ ಆರ್ಯ’ರಲ್ಲ ಎಂಬುದನ್ನು ಈ ಸಂಶೋಧನೆ ಹೇಳಿದೆ. ಇದನ್ನೂ ಓದಿ: ಸಿಂಧೂ ನದಿ ನಾಗರಿಕತೆ ನಿರ್ಮಾಣದಲ್ಲಿ ಸ್ಟೆಪ್ ಮೂಲದ ಆರ್ಯ ವೈದಿಕರ ಪಾತ್ರವಿಲ್ಲ: ಅದನ್ನು ಕಟ್ಟಿದವರು ದಕ್ಷಿಣ ಏಷಿಯನ್ನರು

ಇಷ್ಟೆ ಅಲ್ಲದೆ ICHR ತನ್ನ ಟಿಪ್ಪಣಿಯಲ್ಲಿ ಭಗವದ್ಗೀತೆಯನ್ನು ತಪ್ಪಾಗಿ ವೈಭವೀಕರಿಸಿದ್ದು, “ಭಗವದ್ಗೀತೆ ವೇದದ ಪ್ರಜಾತಾಂತ್ರಿಕತೆಯ ಭಾಗವಾಗಿ ಮಾನವನ ನಡತೆಯಲ್ಲಿ ಜ್ಞಾನ, ಶ್ರದ್ಧೆ , ಕ್ರಿಯೆ ಮತ್ತು ಗುಣಗಳು ವ್ಯಕ್ತವಾಗಬೇಕು ಎಂದು ಪ್ರತಿಪಾದಿಸುತ್ತದೆ” ಎಂದು ಬರೆದಿದೆ.

ಇದನ್ನು ವಿರೋಧಿಸಿರುವ ಶಿವಸುಂದರ್‌ ಅವರು, “ಅಂಬೇಡ್ಕರ್ ಅವರು ಸ್ಪಷ್ಟಪಡಿಸುವಂತೆ , ಭಗವದ್ಗೀತೆಯು ಜಾತಿ ಆಧಾರಿತ ಶ್ರೇಣೀಕರಣವನ್ನು ಪ್ರತಿಪಾದಿಸುವ ಮನುಸ್ಮೃತಿಯ ತಾತ್ವಿಕ ಸಮರ್ಥನೆಯಾಗಿದೆ. ಅದರಲ್ಲಿ ಭೋಧಿಸಲಾಗಿರುವ ಜ್ಞಾನ, ಗುಣ ಮತ್ತು ಕ್ರಿಯೆಗಳೆಲ್ಲವೂ ಹುಟ್ಟಿನಿಂದಲೇ ತೀರ್ಮಾನವಾಗಿರುತ್ತದೆ ಎಂಬ ಜಾತಿ ಶ್ರೇಣೀಕರಣದ ತಾರತಮ್ಯ ತತ್ವವನ್ನೇ ಹೇಳುತ್ತದೆ” ಎಂದು ಹೇಳಿದ್ದಾರೆ. ಮೋದಿ ಸರ್ಕಾರ ಇದನ್ನು ಭಾರತದ ಸನಾತನ ಪ್ರಜಾತಂತ್ರ ಎಂದು ಆಚರಿಸಲು ಆದೇಶಿಸುತ್ತಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇಷ್ಟೆ ಅಲ್ಲದೆ, ಭಾರತದಲ್ಲಿ ಹುಟ್ಟಿನ ಆಧಾರದಲ್ಲಿ ಸಂಪತ್ತು, ಜ್ಞಾನ ಮತ್ತು ರಾಜ್ಯಅಧಿಕಾರಗಳು ಒಂದೆಡೆ ಕೇಂದ್ರೀಕರಣಗೊಂಡಿಲ್ಲ ಎಂದು ICHR ತನ್ನ ಟಿಪ್ಪಣಿಯಲ್ಲಿ ಉಲ್ಲೇಖಿಸಿದ್ದು, “ಇದು ಜಗತ್ತಿನ ಇತರ ಪ್ರಾಚೀನ ಪ್ರಜಾತಂತ್ರಗಳಾದ ಗ್ರೀಸ್ ಮತ್ತು ರೋಮನ್ ಪ್ರಜಾತಂತ್ರಕ್ಕೂ ಭಾರತದ ವೈದಿಕ ಪ್ರಜಾತಂತ್ರಕ್ಕೂ ಇದ್ದ ದೊಡ್ಡ ವ್ಯತ್ಯಾಸವಾಗಿದೆ” ಎಂದು ಹೇಳಿದೆ.

ಇದರ ಬಗ್ಗೆ ಆಶ್ಚರ್ಯ ವ್ಯಕ್ತಪಡಿಸಿದ ಶಿವಸುಂದರ್‌ ಅವರು, “ಇದಕ್ಕಿಂತ ದೊಡ್ಡ ಸುಳ್ಳು ಮತ್ತೊಂದು ಇರಬಹುದೇ? ಜಗತ್ತಿನಲ್ಲಿ ಬೇರೆಲ್ಲೂ ಇಲ್ಲದ ಹುಟ್ಟಿನ ಆಧಾರದ ಜಾತಿ ವ್ಯವಸ್ಥೆ, ಜಾತಿ ತಾರತಮ್ಯ ಇರುವುದು ಭಾರತದ ಬ್ರಾಹ್ಮಣಿಯ ಸಾಮಾಜಿಕ ವ್ಯವಸ್ಥೆಯಲ್ಲಿ ಮಾತ್ರ. ಸಂಪತ್ತು, ಅಧಿಕಾರ ಮತ್ತು ಜ್ಞಾನವನ್ನು ದಲಿತರಿಂದ ಮತ್ತು ಶೂದ್ರರಿಂದ, ಮಹಿಳೆಯರಿಂದ ಕಸಿದು ಕೇವಲ ಬ್ರಾಹ್ಮಣಿಯ ಮೇಲ್ಜಾತಿಗಳ ಖಾಸಗಿ ಆಸ್ತಿಯನ್ನಾಗಿ ಮಾಡಿದ್ದು ಭಾರತದ ವೇದ-ಪುರಾಣ-ಶಾಸ್ತ್ರ-ಸ್ಮೃತಿ-ಶ್ರುತಿ ಗಳನ್ನಾಧರಿಸಿದ ಈ ದೇಶದ ಹಿಂದೂ ಬ್ರಾಹ್ಮಣಿಯ ಜಾತಿ ವ್ಯವಸ್ಥೆಯಾಗಿದೆ” ಎಂದು ಹೇಳಿದ್ದಾರೆ. ಇದನ್ನೂ ಓದಿ: ಸಿಂಧೂ ನಾಗರಿಕತೆ ಕುರಿತ ವಿಜ್ಞಾನದ ಹೊಸ ಸಂಶೋಧನೆಗಳೂ… ಸತ್ಯ ತಿರುಚುವ ಪತ್ರಿಕೆಗಳೂ… ಸುಳ್ಳು ಹೇಳಿತೇಕೆ ವಿಜಯ ಕರ್ನಾಟಕ

ಚಿಂತಕ ಶಿವಸುಂದರ್‌ ಅವರು ವೈರಲ್ ಬರಹವನ್ನು ಓದಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಭಾರತ ಪ್ರಜಾತಂತ್ರದ ಜನನಿ ನವಂಬರ್ 26 ಆಚರಣೆಗಳು ಇವೆಲ್ಲವೂ ಮುಂದಿನ ಚುನಾವಣೆಯನ್ನ ಎದುರಿಟ್ಟುಕೊಂಡು ಮಾಡುವ ಆಚರಣೆಗಳ ವಿನಹ ಭಾರತದಲ್ಲಿ ನರಳಾಡುವ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳನ್ನ ಮೇಲೆತ್ತುವ ಕೆಲಸವಾಗಲಿ ಇತರ ಅಭಿವೃದ್ಧಿ ಕೆಲಸವಾಗಲಿ, ನಗಣ್ಯ ಈ ಸರಕಾರಕ್ಕೆ ಎಲ್ಲವೂ ನಾವೆಲ್ಲ ನೋಡುವಾಗ ಇದು ಪ್ರಜಾಪ್ರಭುತ್ವ ರಾಷ್ಟ್ರವಾಗದೆ ಏಕಪ್ರಭುತ್ವ ರಾಷ್ಟ್ರವಾಗಿದೆ ಅಂತ ನನಗನಿಸುತ್ತದೆ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...