Homeರಾಷ್ಟ್ರೀಯನವೆಂಬರ್‌ 26ರ ಸಂವಿಧಾನ ದಿನವನ್ನು ‘ಜಾತಿ ಪದ್ದತಿ ಸಮರ್ಥನೆ & ವೈಭವೀಕರಣ’ ದಿನವಾಗಿ ಆಚರಿಸಲು ಬಿಜೆಪಿ...

ನವೆಂಬರ್‌ 26ರ ಸಂವಿಧಾನ ದಿನವನ್ನು ‘ಜಾತಿ ಪದ್ದತಿ ಸಮರ್ಥನೆ & ವೈಭವೀಕರಣ’ ದಿನವಾಗಿ ಆಚರಿಸಲು ಬಿಜೆಪಿ ಸರ್ಕಾರದಿಂದ ತಯಾರಿ!

- Advertisement -
- Advertisement -

ಬಿಜೆಪಿಯ ನರೇಂದ್ರ ಮೋದಿ ನೇತೃತ್ವದ ಒಕ್ಕೂಟ ಸರ್ಕಾರ ನವೆಂಬರ್‌ 26ರ ಸಂವಿಧಾನ ದಿನವನ್ನು ‘‘ಸಂವಿಧಾನ ಸಮರ್ಪಣಾ ದಿನ”ವೆಂದು ಕರೆದಿದ್ದು, ಈ ವರ್ಷದ ಆಚರಣೆಯನ್ನು “ಭಾರತ – ಪ್ರಜಾತಂತ್ರದ ಜನನಿ” ಎಂಬ ಹೆಸರಿನಲ್ಲಿ ಆಚರಿಸುವಂತೆ ಸೂಚಿಸಿದೆ. ಪ್ರಜಾಪ್ರಭುತ್ವದ ಮಹತ್ವದ ಬಗ್ಗೆ ಜಾಗೃತಿ ಮೂಡಿಸಬೇಕಾಗಿದ್ದ ದಿನದಂದು ಒಕ್ಕೂಟ ಸರ್ಕಾರವು ಸುಳ್ಳು ನಿರೂಪಣೆ ಮೂಲಕ “ಭಾರತದ ಜಾತಿ ಪದ್ದತಿಯ ಸಮರ್ಥನೆ ಮತ್ತು ವೈಭವೀಕರಣ’’ ನಡೆಸುತ್ತಿದೆ ಎಂಬ ಅರೋಪ ವ್ಯಕ್ತವಾಗಿದೆ.

ನವಂಬರ್ 9ರಂದು ಬಿಜೆಪಿ ಸರ್ಕಾರದ ಕ್ಯಾಬಿನೆಟ್‌ ಸೆಕ್ರೆಟರಿ ಅವರು ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಎಲ್ಲಾ ಕಚೇರಿ ಹಾಗೂ ವಿಶ್ವವಿದ್ಯಾಲಯಗಳಿಗೆ ಪತ್ರ ಬರೆದು, ಈ ಬಾರಿಯ ನವೆಂಬರ್‌ 26ರ ಸಂವಿಧಾನ ಸಮರ್ಪಣಾ ದಿನವನ್ನು “ಭಾರತ – ಪ್ರಜಾತಂತ್ರದ ಜನನಿ” ಎಂಬ ಹೆಸರಿನಲ್ಲಿ “ಜಗತ್ತಿನಲ್ಲಿರುವ ಪ್ರಜಾಪ್ರಭುತ್ವ ಹುಟ್ಟಿದ್ದು ಭಾರತದಲ್ಲಾಗಿದೆ” ಎಂಬ ವಿಷಯವನ್ನು ಸಮರ್ಥಿಸಿಕೊಂಡು ದೇಶಾದ್ಯಂತ ಆಚರಿಸಬೇಕೆಂದು ಸೂಚಿಸಿದೆ. ಇಷ್ಟೆ ಅಲ್ಲದೆ ಈ ಆಚರಣೆಯನ್ನು ಹೇಗೆ ಆಚರಿಸಬೇಕು ಎಂದು ಇಂಡಿಯನ್ ಕೌನ್ಸಿಲ್ ಫಾರ್ ಹಿಸ್ಟಾರಿಕಲ್ ರಿಸರ್ಚ್ (ICHR) ತಯಾರಿಸಿರುವ ಟಿಪ್ಪಣಿಯನ್ನು ನೀಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ICHR ತಯಾರಿಸಿರುವ ಈ ಟಿಪ್ಪಣಿಯೆ ಇದೀಗ ವಿವಾದದ ಕೇಂದ್ರ ಬಿಂದುವಾಗಿದ್ದು, ದೇಶವು ಶತಮಾನಗಳ ಕಾಲದಿಂದಲೂ ನರಳುತ್ತಿರುವ ಜಾತಿ ಪದ್ದತಿಯನ್ನು ಇತಿಹಾಸದ ಸುಳ್ಳು ನಿರೂಪಣೆಯೊಂದಿಗೆ ಇದರಲ್ಲಿ ಹೇಳಲಾಗಿದೆ.

ICHR ಟಿಪ್ಪಣಿಯಲ್ಲಿ ಏನಿದೆ?

ವೇದ, ಪುರಾಣ, ಉಪನಿಷತ್‌, ಭಗವದ್ಗೀತೆ ಕಾಲದಲ್ಲೆ ಭಾರತದಲ್ಲಿ ಪ್ರಜಾಪ್ರಭುತ್ವ ಇತ್ತು. 2 ಸಾವಿರ ವರ್ಷಗಳಿಂದ ನಡೆಯುತ್ತಿರುವ ವಿದೇಶಿ ದಾಳಿಗಳ ನಡುವೆಯು ಪಂಚಾಯತಿ ಕಟ್ಟೆ, ಖಾಪ್ ಪಂಚಾಯತ್‌‌‌ ಈ ಪ್ರಜಾಪ್ರಭುತ್ವನ್ನು ಹಿಂದೂ ಸಂಸ್ಕೃತಿ ಉಳಿಸಿಕೊಂಡು ಬಂದಿದೆ ಎಂದು ICHR ಟಿಪ್ಪಣಿಯಲ್ಲಿ ಹೇಳಿದೆ.

ಅದಾಗ್ಯೂ, ಖಾಪ್‌ ಪಂಚಾಯತ್‌ಗಳು ಜಾತಿ ಶ್ರೇಣೀಕೃತ ವ್ಯವಸ್ಥೆಯ ಭಾಗವಾಗಿದ್ದು ಇಂದಿಗೂ ಅವು ಭಾರತದಲ್ಲಿ ಜಾತಿ ಪದ್ದತಿಯನ್ನು ಉಳಿಯುವ ನಿಟ್ಟಿನಲ್ಲಿ ಕೆಲಸ ಮಾಡುತ್ತಲೆ, ಜಾತಿ ದೌರ್ಜನ್ಯ ಎಸಗುತ್ತಲೆ ಇವೆ ಸಾಬೀತಾಗಿದೆ. ಇತ್ತೀಚೆಗೆ ರಾಜಸ್ಥಾನದಲ್ಲಿ ಕೂಡಾ ಇವುಗಳು ಹೆಣ್ಣು ಮಕ್ಕಳನ್ನು ಮತ್ತು ಮಹಿಳೆಯವನ್ನು ಹಣಕ್ಕಾಗಿ ಮಾರಾಟ ಮಾಡಿರುವ ಬಗ್ಗೆ ಕೂಡಾ ವರದಿಯಾಗಿತ್ತು. ಇದನ್ನೂ ಓದಿ: ರಾಜಸ್ಥಾನ: ಸಾಲ ತೀರಿಸಲು ಹುಡುಗಿಯರ ಮಾರಾಟ; ನಿರಾಕರಿಸಿದರೆ ಜಾತಿ ಮಂಡಳಿಗಳ ಆದೇಶದ ಮೇರೆಗೆ ಅವರ ತಾಯಿಯ ಮೇಲೆ ಅತ್ಯಾಚಾರ!

ಚಿಂತಕ ಶಿವಸುಂದರ್‌ ಅವರು, “ಇದು ಆರೆಸ್ಸೆಸ್ ಸರಸಂಘಚಾಲಕ ಗೋಲ್ವಾಲ್ಕರ್ ಪ್ರತಿಪಾದನೆಯಾಗಿದೆ. ಅವರು, ‘ಜಾತಿ ವ್ಯವಸ್ಥೆಯೇ ಈ ದೇಶದ ಅಸ್ಮಿತೆ. ಅದು ಸಡಿಲವಾಗಿದ್ದರಿಂದಲೇ ಭಾರತದ ಈಶಾನ್ಯ ಮತ್ತು ವಾಯುವ್ಯ ಪ್ರಾಂತ್ಯಗಳಲ್ಲಿ ಪರದೇಸಿ ಧರ್ಮಗಳು ನೆಲಸುವಂತಾಯಿತು’ ಎಂದು ಅವರ ಬಂಚ್ ಆಫ್‌ ಥಾಟ್ಸ್‌‌ನಲ್ಲಿ ಬರೆದುಕೊಂಡಿದ್ದಾರೆ. ಈಗ ಮೋದಿ ಸರ್ಕಾರ ಯಥಾವತ್ ಅದೇ ಮಾತನ್ನು ಸಂವಿಧಾನ ದಿನದಂದು ಪ್ರಚಾರ ಮಾಡುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಷ್ಟೆ ಅಲ್ಲದೆ, ಇತಿಹಾಸದ ಬಗ್ಗೆ ಸಂಶೋಧನೆ ನಡೆಸುವ ಸಂಸ್ಥೆಯಾಗಿರುವ ICHR ಬಿಹಾರದ ರಾಖಿಗರಿಯಲ್ಲಿ ಇತ್ತೀಚೆಗೆ ನಡೆದ ಸಂಶೋಧನೆಯ ಬಗ್ಗೆ ತನ್ನ ಟಿಪ್ಪಣಿಯಲ್ಲಿ ಸುಳ್ಳು ಬರೆದುಕೊಂಡಿದೆ. ICHR ತನ್ನ ಟಿಪ್ಪಣಿಯಲ್ಲಿ, “ಇತ್ತೀಚಿಗೆ ರಾಖಿಗರಿ ಸಂಶೋಧನೆಯಲ್ಲೂ ಭಾರತದ ವೈದಿಕ ನಾಗರೀಕತೆ 5 ಸಾವಿರ ವರ್ಷಗಳಷ್ಟು ಹಿಂದಿನದ್ದೆಂದೂ, ಆ ಕಾಲದಲ್ಲೂ ಪ್ರಜಾತಾಂತ್ರಿಕ ವ್ಯವಸ್ಥೆ ಇತ್ತೆಂದು ಸಾಬೀತಾಗಿದೆ” ಎಂದು ಉಲ್ಲೇಖಿಸಿದೆ.

ಆದರೆ ವಾಸ್ತವದಲ್ಲಿ, ರಾಖಿಗರಿ ಸಂಶೋಧನೆಯು ಹರಪ್ಪಾ ನಾಗರಿಕತೆಗೂ ವೇದ ನಾಗರಿಕತೆಯ ಆರ್ಯರಿಗೂ ಸಂಬಂಧವಿಲ್ಲ ಎಂದು ಸಾಬೀತಾಗಿದೆ. ರಾಖಿಗರಿ ನಾಗರಿಕರೆ ದ್ರಾವಿಡ ನಾಗರೀಕತೆಯೆ ಹೊರತು ವೇದ ನಾಗರಿಕತೆಯಲ್ಲ ಎಂದು ಸಂಶೋಧನೆ ಸಾಬೀತು ಮಾಡಿದೆ. ರಾಖಿಗರಿಯಲ್ಲಿ ಪತ್ತೆಯಾದ ಅಸ್ಥಿಪಂಜರದ DNA ಇದನ್ನ ಪುಷ್ಠಿಕರಿಸಿದ್ದು, ಸಿಂಧೂ ಕಣಿವೆ ನಾಗರಿಕತೆಯನ್ನು ಕಟ್ಟಿರುವವರು ‘ಋಗ್ವೇದ ಕಾಲದ ಆರ್ಯ’ರಲ್ಲ ಎಂಬುದನ್ನು ಈ ಸಂಶೋಧನೆ ಹೇಳಿದೆ. ಇದನ್ನೂ ಓದಿ: ಸಿಂಧೂ ನದಿ ನಾಗರಿಕತೆ ನಿರ್ಮಾಣದಲ್ಲಿ ಸ್ಟೆಪ್ ಮೂಲದ ಆರ್ಯ ವೈದಿಕರ ಪಾತ್ರವಿಲ್ಲ: ಅದನ್ನು ಕಟ್ಟಿದವರು ದಕ್ಷಿಣ ಏಷಿಯನ್ನರು

ಇಷ್ಟೆ ಅಲ್ಲದೆ ICHR ತನ್ನ ಟಿಪ್ಪಣಿಯಲ್ಲಿ ಭಗವದ್ಗೀತೆಯನ್ನು ತಪ್ಪಾಗಿ ವೈಭವೀಕರಿಸಿದ್ದು, “ಭಗವದ್ಗೀತೆ ವೇದದ ಪ್ರಜಾತಾಂತ್ರಿಕತೆಯ ಭಾಗವಾಗಿ ಮಾನವನ ನಡತೆಯಲ್ಲಿ ಜ್ಞಾನ, ಶ್ರದ್ಧೆ , ಕ್ರಿಯೆ ಮತ್ತು ಗುಣಗಳು ವ್ಯಕ್ತವಾಗಬೇಕು ಎಂದು ಪ್ರತಿಪಾದಿಸುತ್ತದೆ” ಎಂದು ಬರೆದಿದೆ.

ಇದನ್ನು ವಿರೋಧಿಸಿರುವ ಶಿವಸುಂದರ್‌ ಅವರು, “ಅಂಬೇಡ್ಕರ್ ಅವರು ಸ್ಪಷ್ಟಪಡಿಸುವಂತೆ , ಭಗವದ್ಗೀತೆಯು ಜಾತಿ ಆಧಾರಿತ ಶ್ರೇಣೀಕರಣವನ್ನು ಪ್ರತಿಪಾದಿಸುವ ಮನುಸ್ಮೃತಿಯ ತಾತ್ವಿಕ ಸಮರ್ಥನೆಯಾಗಿದೆ. ಅದರಲ್ಲಿ ಭೋಧಿಸಲಾಗಿರುವ ಜ್ಞಾನ, ಗುಣ ಮತ್ತು ಕ್ರಿಯೆಗಳೆಲ್ಲವೂ ಹುಟ್ಟಿನಿಂದಲೇ ತೀರ್ಮಾನವಾಗಿರುತ್ತದೆ ಎಂಬ ಜಾತಿ ಶ್ರೇಣೀಕರಣದ ತಾರತಮ್ಯ ತತ್ವವನ್ನೇ ಹೇಳುತ್ತದೆ” ಎಂದು ಹೇಳಿದ್ದಾರೆ. ಮೋದಿ ಸರ್ಕಾರ ಇದನ್ನು ಭಾರತದ ಸನಾತನ ಪ್ರಜಾತಂತ್ರ ಎಂದು ಆಚರಿಸಲು ಆದೇಶಿಸುತ್ತಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇಷ್ಟೆ ಅಲ್ಲದೆ, ಭಾರತದಲ್ಲಿ ಹುಟ್ಟಿನ ಆಧಾರದಲ್ಲಿ ಸಂಪತ್ತು, ಜ್ಞಾನ ಮತ್ತು ರಾಜ್ಯಅಧಿಕಾರಗಳು ಒಂದೆಡೆ ಕೇಂದ್ರೀಕರಣಗೊಂಡಿಲ್ಲ ಎಂದು ICHR ತನ್ನ ಟಿಪ್ಪಣಿಯಲ್ಲಿ ಉಲ್ಲೇಖಿಸಿದ್ದು, “ಇದು ಜಗತ್ತಿನ ಇತರ ಪ್ರಾಚೀನ ಪ್ರಜಾತಂತ್ರಗಳಾದ ಗ್ರೀಸ್ ಮತ್ತು ರೋಮನ್ ಪ್ರಜಾತಂತ್ರಕ್ಕೂ ಭಾರತದ ವೈದಿಕ ಪ್ರಜಾತಂತ್ರಕ್ಕೂ ಇದ್ದ ದೊಡ್ಡ ವ್ಯತ್ಯಾಸವಾಗಿದೆ” ಎಂದು ಹೇಳಿದೆ.

ಇದರ ಬಗ್ಗೆ ಆಶ್ಚರ್ಯ ವ್ಯಕ್ತಪಡಿಸಿದ ಶಿವಸುಂದರ್‌ ಅವರು, “ಇದಕ್ಕಿಂತ ದೊಡ್ಡ ಸುಳ್ಳು ಮತ್ತೊಂದು ಇರಬಹುದೇ? ಜಗತ್ತಿನಲ್ಲಿ ಬೇರೆಲ್ಲೂ ಇಲ್ಲದ ಹುಟ್ಟಿನ ಆಧಾರದ ಜಾತಿ ವ್ಯವಸ್ಥೆ, ಜಾತಿ ತಾರತಮ್ಯ ಇರುವುದು ಭಾರತದ ಬ್ರಾಹ್ಮಣಿಯ ಸಾಮಾಜಿಕ ವ್ಯವಸ್ಥೆಯಲ್ಲಿ ಮಾತ್ರ. ಸಂಪತ್ತು, ಅಧಿಕಾರ ಮತ್ತು ಜ್ಞಾನವನ್ನು ದಲಿತರಿಂದ ಮತ್ತು ಶೂದ್ರರಿಂದ, ಮಹಿಳೆಯರಿಂದ ಕಸಿದು ಕೇವಲ ಬ್ರಾಹ್ಮಣಿಯ ಮೇಲ್ಜಾತಿಗಳ ಖಾಸಗಿ ಆಸ್ತಿಯನ್ನಾಗಿ ಮಾಡಿದ್ದು ಭಾರತದ ವೇದ-ಪುರಾಣ-ಶಾಸ್ತ್ರ-ಸ್ಮೃತಿ-ಶ್ರುತಿ ಗಳನ್ನಾಧರಿಸಿದ ಈ ದೇಶದ ಹಿಂದೂ ಬ್ರಾಹ್ಮಣಿಯ ಜಾತಿ ವ್ಯವಸ್ಥೆಯಾಗಿದೆ” ಎಂದು ಹೇಳಿದ್ದಾರೆ. ಇದನ್ನೂ ಓದಿ: ಸಿಂಧೂ ನಾಗರಿಕತೆ ಕುರಿತ ವಿಜ್ಞಾನದ ಹೊಸ ಸಂಶೋಧನೆಗಳೂ… ಸತ್ಯ ತಿರುಚುವ ಪತ್ರಿಕೆಗಳೂ… ಸುಳ್ಳು ಹೇಳಿತೇಕೆ ವಿಜಯ ಕರ್ನಾಟಕ

ಚಿಂತಕ ಶಿವಸುಂದರ್‌ ಅವರು ವೈರಲ್ ಬರಹವನ್ನು ಓದಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಭಾರತ ಪ್ರಜಾತಂತ್ರದ ಜನನಿ ನವಂಬರ್ 26 ಆಚರಣೆಗಳು ಇವೆಲ್ಲವೂ ಮುಂದಿನ ಚುನಾವಣೆಯನ್ನ ಎದುರಿಟ್ಟುಕೊಂಡು ಮಾಡುವ ಆಚರಣೆಗಳ ವಿನಹ ಭಾರತದಲ್ಲಿ ನರಳಾಡುವ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳನ್ನ ಮೇಲೆತ್ತುವ ಕೆಲಸವಾಗಲಿ ಇತರ ಅಭಿವೃದ್ಧಿ ಕೆಲಸವಾಗಲಿ, ನಗಣ್ಯ ಈ ಸರಕಾರಕ್ಕೆ ಎಲ್ಲವೂ ನಾವೆಲ್ಲ ನೋಡುವಾಗ ಇದು ಪ್ರಜಾಪ್ರಭುತ್ವ ರಾಷ್ಟ್ರವಾಗದೆ ಏಕಪ್ರಭುತ್ವ ರಾಷ್ಟ್ರವಾಗಿದೆ ಅಂತ ನನಗನಿಸುತ್ತದೆ

LEAVE A REPLY

Please enter your comment!
Please enter your name here

- Advertisment -

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...